AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಹಾ ಮತ್ತು ಬಿಸ್ಕತ್ತು ಒಟ್ಟಿಗೆ ಸೇವಿಸುತ್ತಿದ್ದೀರಾ? ಅಡ್ಡಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಸಾಮಾನ್ಯವಾಗಿ ಎಲ್ಲಾ ಬಿಸ್ಕತ್ತುಗಳು ಹೈಡ್ರೋಜನೀಕರಿಸಿದ ಕೊಬ್ಬನ್ನು ಹೊಂದಿರುತ್ತವೆ. ಚಹಾದಲ್ಲಿನ ಸಂಯೋಜನೆಯಿಂದಾಗಿ ಬಿಸ್ಕತ್ತುಗಳನ್ನು ಸಾಮಾನ್ಯವಾಗಿ ತಿಳಿಯದೆ ತಿನ್ನಲಾಗುತ್ತದೆ. ದೀರ್ಘಕಾಲದವರೆಗೆ ಬಿಸ್ಕತ್ತುಗಳನ್ನು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

ಚಹಾ ಮತ್ತು ಬಿಸ್ಕತ್ತು ಒಟ್ಟಿಗೆ ಸೇವಿಸುತ್ತಿದ್ದೀರಾ? ಅಡ್ಡಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ
ಚಹಾ ಮತ್ತು ಬಿಸ್ಕತ್ತು
TV9 Web
| Edited By: |

Updated on: Mar 30, 2022 | 7:57 AM

Share

ಟೀ ಮತ್ತು ಬಿಸ್ಕೆಟ್ ಎರಡರ ಕಾಂಬಿನೇಷನ್ ಎಂದರೆ ಹೆಚ್ಚಿನವರು ಇಷ್ಟಪಡುತ್ತಾರೆ. ಬೆಳಿಗ್ಗೆ ಮತ್ತು ಸಂಜೆ, ಬಿಸ್ಕತ್ತುಗಳನ್ನು ಚಹಾದಲ್ಲಿ(Tea) ಮುಳುಗಿಸಿ ತಿನ್ನಲಾಗುತ್ತದೆ. ನಮ್ಮಲ್ಲಿ ಹೆಚ್ಚಿನವರಿಗೆ ಈ ಅಭ್ಯಾಸವಿದೆ. ಆದರೆ, ಈ ಅಭ್ಯಾಸವನ್ನು ಅತಿಯಾಗಿ ಮಾಡುವುದು ಒಳ್ಳೆಯದಲ್ಲ, ಇದು ಯಾವುದೇ ಅನಾಹುತಕ್ಕೆ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಾರೆ. ಟೀ ಮತ್ತು ಬಿಸ್ಕತ್ತುಗಳನ್ನು(biscuits) ದೀರ್ಘಕಾಲ ಒಟ್ಟಿಗೆ ಸೇವಿಸಿದರೆ ಆರೋಗ್ಯದ ಮೇಲೆ ಹೆಚ್ಚಿನ ಅಡ್ಡಪರಿಣಾಮ (Side effects) ಬೀರುತ್ತದೆ. ಇವುಗಳಿಂದಾಗುವ ಹಾನಿ ಏನು? ಇದು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ವಿವರ ಇಲ್ಲಿದೆ ನೋಡಿ.

ಸಾಮಾನ್ಯವಾಗಿ ಎಲ್ಲಾ ಬಿಸ್ಕತ್ತುಗಳು ಹೈಡ್ರೋಜನೀಕರಿಸಿದ ಕೊಬ್ಬನ್ನು ಹೊಂದಿರುತ್ತವೆ. ಚಹಾದಲ್ಲಿನ ಸಂಯೋಜನೆಯಿಂದಾಗಿ ಬಿಸ್ಕತ್ತುಗಳನ್ನು ಸಾಮಾನ್ಯವಾಗಿ ತಿಳಿಯದೆ ತಿನ್ನಲಾಗುತ್ತದೆ. ದೀರ್ಘಕಾಲದವರೆಗೆ ಬಿಸ್ಕತ್ತುಗಳನ್ನು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ. ಚಹಾದೊಂದಿಗೆ ಸಕ್ಕರೆಯ ಬಿಸ್ಕತ್ತುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಅಲ್ಲದೆ ಬಿಸ್ಕತ್ತುಗಳನ್ನು ಹೆಚ್ಚಾಗಿ ಸಂಸ್ಕರಿಸಿದ ಹಿಟ್ಟಿನಿಂದ ತಯಾರಿಸಲಾಗುತ್ತದೆ. ಇವುಗಳಲ್ಲಿ ಫೈಬರ್ ಅಂಶ ಇರುವುದಿಲ್ಲ. ನೀವು ಬಿಸ್ಕತ್ತುಗಳನ್ನು ಅತಿಯಾಗಿ ಸೇವಿಸಿದರೆ ಇದು ಮಲಬದ್ಧತೆಗೆ ಕಾರಣವಾಗಬಹುದು. ಮೈದಾ ಹಿಟ್ಟಿನಿಂದ ತಯಾರಿಸಿದ ಬಿಸ್ಕೆಟ್ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರ ಜೊತೆಗೆ, ಬಿಸ್ಕತ್ತುಗಳು ಮತ್ತು ಚಹಾದ ಅತಿಯಾದ ಸೇವನೆಯು ಹಲ್ಲಿನ ದಂತಕವಚವನ್ನು ಹಾನಿಗೊಳಿಸುತ್ತದೆ.

ಟೀ ಮತ್ತು ಬಿಸ್ಕೆಟ್ ಅನ್ನು ಒಟ್ಟಿಗೆ ಸೇವಿಸುವುದರಿಂದ ಅಜೀರ್ಣ, ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಳ, ರೋಗನಿರೋಧಕ ಶಕ್ತಿ ಕಡಿಮೆಯಾಗಲು ಕೂಡ ಕಾರಣವಾಗುತ್ತದೆ. ಹೀಗಾಗಿ ಆದಷ್ಟು ಟೀ ಮತ್ತು ಬಿಸ್ಕತ್ತು ಸೇವನೆಯನ್ನು ನಿಯಮಿತವಾಗಿ ಸೇವಿಸುವುದು ಉತ್ತಮ.

ಇದನ್ನೂ ಓದಿ: Cumin for health: ಪ್ರತಿದಿನ ಜೀರಿಗೆ ಸೇವಿಸುವುದರಿಂದಾಗುವ ಆರೋಗ್ಯಕರ ಬದಲಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

High Cholesterol: ಕೊಲೆಸ್ಟ್ರಾಲ್​ನ್ನು ನಿಯಂತ್ರಿಸಲು ಆಹಾರದಲ್ಲಿ ಯಾವ ಎಣ್ಣೆ ಬಳಸಬೇಕು ಗೊತ್ತಾ..! ಇಲ್ಲಿದೆ ಮಾಹಿತಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ