AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಟೀ -ಕಾಫಿ ಜತೆಗೆ ಸಕ್ಕರೆ ಬೆರೆಸಿ ಕುಡಿಯುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ

ಸಕ್ಕರೆ ಸೇವನೆಯಿಂದ ದೇಹದ ತೂಕ ವೇಗವಾಗಿ ಹೆಚ್ಚಾಗುತ್ತದೆ, ಮೂಳೆಗಳು ದುರ್ಬಲವಾಗುತ್ತದೆ. ಅಲ್ಲದೆ ಮಧುಮೇಹಕ್ಕೆ ಸಕ್ಕರೆ ಪ್ರಮುಖ ಕಾರಣವಾಗಿದೆ. ಅದಕ್ಕಾಗಿಯೇ ಸಕ್ಕರೆಯ ಬಳಕೆಯನ್ನು ಕಡಿಮೆ ಮಾಡಬೇಕು ಮತ್ತು ಸದಾ ದೇಹವು ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು.

Health Tips: ಟೀ -ಕಾಫಿ ಜತೆಗೆ ಸಕ್ಕರೆ ಬೆರೆಸಿ ಕುಡಿಯುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 13, 2021 | 8:17 AM

Share

ಸಕ್ಕರೆಯನ್ನು ಪ್ರತಿ ಮನೆಯಲ್ಲಿಯೂ ಬಳಸಲಾಗುತ್ತದೆ. ನಿತ್ಯ ಕುಡಿಯುವ ಚಹಾ, ಹಾಲು, ಕಾಫಿ, ಜ್ಯೂಸ್​ ಸೇರಿದಂತೆ ಸಿಹಿತಿಂಡಿಗಳಲ್ಲೂ ಸಕ್ಕರೆಯನ್ನು ಬಳಸಲಾಗುತ್ತದೆ. ಸಿಹಿತಿಂಡಿಗಳನ್ನು ಇಷ್ಟಪಡುವವರು ಮತ್ತು ಸಿಹಿತಿಂಡಿ ಇಷ್ಟಪಡದವರು ಸಕ್ಕರೆಯನ್ನು ಸೇವಿಸುತ್ತಾರೆ. ಆದರೆ ಸಕ್ಕರೆಯಿಂದ ಅನೇಕ ಅಡ್ಡಪರಿಣಾಮಗಳಿವೆ. ಸಕ್ಕರೆ ಸೇವನೆಯಿಂದ ದೇಹದ ತೂಕ ವೇಗವಾಗಿ ಹೆಚ್ಚಾಗುತ್ತದೆ, ಮೂಳೆಗಳು ದುರ್ಬಲವಾಗುತ್ತದೆ. ಅಲ್ಲದೆ ಮಧುಮೇಹಕ್ಕೆ ಸಕ್ಕರೆ ಪ್ರಮುಖ ಕಾರಣವಾಗಿದೆ. ಅದಕ್ಕಾಗಿಯೇ ಸಕ್ಕರೆಯ ಬಳಕೆಯನ್ನು ಕಡಿಮೆ ಮಾಡಬೇಕು ಮತ್ತು ಸದಾ ದೇಹವು ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು.

1. ಅನಾರೋಗ್ಯಕ್ಕೆ ಕಾರಣವಾಗಿದೆ ಚರ್ಮದ ಕಾಂತಿ ಹಾಳಾಗಲು ಸಕ್ಕರೆ ಮುಖ್ಯ ಕಾರಣವಾಗಿದೆ. ವಾಸ್ತವವಾಗಿ ಸಿಹಿತಿಂಡಿಗಳನ್ನು ಸೇವಿಸಿದ ನಂತರ, ನಮ್ಮ ದೇಹದಲ್ಲಿನ ಸಕ್ಕರೆ ಕಾಲಜನ್ ಪ್ರೋಟೀನ್‌ಗೆ ಅಂಟಿಕೊಳ್ಳುತ್ತದೆ. ಇದು ನಮ್ಮಲ್ಲಿನ ಪ್ರೋಟೀನ್ ಅಂಶವನ್ನು ಕಡಿಮೆ ಮಾಡುತ್ತದೆ. ಅಕಾಲಿಕ ಸುಕ್ಕುಗಳು ಚರ್ಮದ ಮೇಲೆ ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗೆ ಸಕ್ಕರೆ ಕಾರಣವಾಗುತ್ತದೆ.

2. ಬೊಜ್ಜು ಹೆಚ್ಚಾಗುವಂತೆ ಮಾಡುತ್ತದೆ ಇತ್ತೀಚಿನ ದಿನಗಳಲ್ಲಿ ದೇಹದಲ್ಲಿನ ಬೊಜ್ಜು ದೊಡ್ಡ ಸಮಸ್ಯೆಯಾಗಿದೆ. ಬೊಜ್ಜು ಎಲ್ಲಾ ರೋಗಗಳಿಗೆ ಕಾರಣವಾಗಿದೆ. ಕೆಲವೊಮ್ಮೆ ನಾವು ಸಿಹಿತಿಂಡಿಗಳನ್ನು ಸೇವಿಸದಿದ್ದರೂ ಸಹ ಸಕ್ಕರೆಯುಕ್ತ ಪಾನೀಯಾ, ಚಾಕೊಲೇಟ್‌ ಇತ್ಯಾದಿಗಳನ್ನು ಇಷ್ಟಪಡುತ್ತೇವೆ. ಇದು ದೇಹದ ತೂಕವನ್ನು ಹೆಚ್ಚಿಸುತ್ತದೆ ಮತ್ತು ಬೊಜ್ಜಿನಂತಹ ಸಮಸ್ಯೆಗೆ ದಾರಿ ಮಾಡಿ ಕೊಡುತ್ತದೆ.

3. ಯಕೃತ್ತಿನ ಸಮಸ್ಯೆ ಸಕ್ಕರೆ ಸೇವಿಸಿದಾಗಲೆಲ್ಲಾ ಯಕೃತ್ತಿನ ಕಾರ್ಯ ಹೆಚ್ಚಾಗುತ್ತದೆ. ಈ ರೀತಿ ಹೆಚ್ಚಾಗುವ ಪ್ರಕ್ರಿಯೆಯಿಂದ ಯಕೃತ್ತಿನ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈ ಕಾರಣದಿಂದಾಗಿ, ದೇಹವು ಲಿಪಿಡ್​ಗಳನ್ನು ಸಂಗ್ರಹಿಸಲು ಪ್ರಾರಂಭಿಸುತ್ತದೆ. ಇದು ಯಕೃತ್ತಿನ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ.

4. ಬುದ್ಧಿಶಕ್ತಿ ಕಡಿಮೆಯಾಗುತ್ತದೆ ಹೆಚ್ಚು ಸಕ್ಕರೆ ಸೇವಿಸುವುದರಿಂದ ಬುದ್ಧಿಶಕ್ತಿ ಕಡಿಮೆಯಾಗುವ ಅಪಾಯ ಹೆಚ್ಚಿರುತ್ತದೆ. ಹೆಚ್ಚು ಸಕ್ಕರೆ ಸೇವನೆಯು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ, ಗ್ಲೂಕೋಸ್ ಮೆದುಳನ್ನು ಸಂಪೂರ್ಣವಾಗಿ ತಲುಪುವುದಿಲ್ಲ. ಅಗ ಬುದ್ಧಿ ಶಕ್ತಿ ಕಳೆದುಕೊಳ್ಳುವ ಸಾಧ್ಯತೆ ಇದೆ.

5. ಹೃದಯಾಘಾತದ ಅಪಾಯ ಹೆಚ್ಚಿನ ಸಕ್ಕರೆ ಸೇವನೆಯು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ವಾಸ್ತವವಾಗಿ, ಹೆಚ್ಚು ಸಿಹಿತಿಂಡಿಗಳನ್ನು ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಇದು ಬಿಪಿ ಸಮಸ್ಯೆಯನ್ನು ಉಂಟುಮಾಡುತ್ತದೆ. ಅಲ್ಲದೆ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಇವು ಮಧುಮೇಹಿಗಳ ಮಾವಿನಹಣ್ಣುಗಳು..; ಮೂರು ವಿಧದ ಸಕ್ಕರೆ ರಹಿತ ಮಾವು ಪರಿಚಯಿಸಿದ ಪಾಕಿಸ್ತಾನ ಕೃಷಿ ತಜ್ಞ

Health Benefits: ಗ್ಯಾಸ್ಟಿಕ್​ನಿಂದಲೇ ಎದೆ ನೋವು ಕಾಣಿಸಿಕೊಂಡಿದೆ ಎಂದು ನಿರ್ಲಕ್ಷ್ಯ ವಹಿಸುವ ಮುನ್ನ, ನೋವಿನ ಲಕ್ಷಣಗಳ ಬಗ್ಗೆ ತಿಳಿಯುವುದು ಸೂಕ್ತ

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು