AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cervical Cancer: ಗರ್ಭಕಂಠದ ಕ್ಯಾನ್ಸರ್ ಎಂದರೇನು? ಪ್ರತಿಯೊಬ್ಬ ಮಹಿಳೆಯು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು

ಗರ್ಭಕಂಠದ ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ಆದರೆ ಈ ಬಗ್ಗೆ ಮಹಿಳೆಯರಿಗೆ ಮಾಹಿತಿ ಕೊರತೆ ಇದೆ. ಇದರಿಂದಾಗಿ ಅವರು ಈ ಕ್ಯಾನ್ಸರ್ ನಿರ್ಲಕ್ಷ್ಯ ಮಾಡಿ ದೊಡ್ಡ ಅಪಾಯಕ್ಕೆ ಮುನ್ನುಡಿಯಾಗುತ್ತಾರೆ. ಹೀಗಾಗಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಪ್ಪಿಸಲು, ಅದರ ವ್ಯಾಕ್ಸಿನೇಷನ್ ಮತ್ತು ನಿಯಮಿತ ಸ್ಕ್ರೀನಿಂಗ್ ಬಗ್ಗೆ ಜನಜಾಗೃತಿ ತರುವ ಅವಶ್ಯಕತೆಯಿದೆ.

Cervical Cancer: ಗರ್ಭಕಂಠದ ಕ್ಯಾನ್ಸರ್ ಎಂದರೇನು? ಪ್ರತಿಯೊಬ್ಬ ಮಹಿಳೆಯು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು
ಸಾಂಕೇತಿಕ ಚಿತ್ರ
TV9 Web
| Updated By: preethi shettigar|

Updated on: Feb 03, 2022 | 7:32 AM

Share

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆಯಾಗಿದೆ. ಇದು ವಿವಿಧ ರೂಪಗಳಲ್ಲಿ ಜನರಲ್ಲಿ ಕಂಡುಬರುತ್ತದೆ. ಆದಾಗ್ಯೂ, ಸಮಯಕ್ಕೆ ಕ್ಯಾನ್ಸರ್ ಪತ್ತೆಯಾದರೆ, ಕ್ಯಾನ್ಸರ್(Cancer) ಚಿಕಿತ್ಸೆಯು ಹೆಚ್ಚಿನ ಪ್ರಮಾಣದಲ್ಲಿ ಸಾಧ್ಯ. ಇತ್ತೀಚಿನ ದಿನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕ್ಯಾನ್ಸರ್‌ಗೆ ಒಳಗಾಗುತ್ತಿದ್ದಾರೆ ಎಂಬುದು ಹಲವು ಅಧ್ಯಯನಗಳಲ್ಲಿ ಬಹಿರಂಗವಾಗಿದೆ. ಇಷ್ಟು ಮಾತ್ರವಲ್ಲದೆ ಗರ್ಭಕಂಠದ ಕ್ಯಾನ್ಸರ್(Cervical Cancer) ರೂಪವು ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗರ್ಭಕಂಠದ ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ಆದರೆ ಈ ಬಗ್ಗೆ ಮಹಿಳೆಯರಿಗೆ(Women) ಮಾಹಿತಿ ಕೊರತೆ ಇದೆ. ಇದರಿಂದಾಗಿ ಅವರು ಈ ಕ್ಯಾನ್ಸರ್ ನಿರ್ಲಕ್ಷ್ಯ ಮಾಡಿ ದೊಡ್ಡ ಅಪಾಯಕ್ಕೆ ಮುನ್ನುಡಿಯಾಗುತ್ತಾರೆ. ಹೀಗಾಗಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಪ್ಪಿಸಲು, ಅದರ ವ್ಯಾಕ್ಸಿನೇಷನ್ ಮತ್ತು ನಿಯಮಿತ ಸ್ಕ್ರೀನಿಂಗ್ ಬಗ್ಗೆ ಜನಜಾಗೃತಿ ತರುವ ಅವಶ್ಯಕತೆಯಿದೆ.

ಗರ್ಭಕಂಠದ ಕ್ಯಾನ್ಸರ್ ಎಂದರೇನು ?

ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಕ್ಯಾನ್ಸರ್ ಗರ್ಭಕಂಠದ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ. ಈ ಗರ್ಭಕಂಠವು ಗರ್ಭಾಶಯದ ಕೆಳಗಿನ ಭಾಗವಾಗಿದ್ದು, ಅದು ಯೋನಿಯೊಂದಿಗೆ ಸಂಪರ್ಕ ಹೊಂದಿದೆ. ಗರ್ಭಕಂಠದ ಕ್ಯಾನ್ಸರ್ ಮಹಿಳೆಯರ ಗರ್ಭದಲ್ಲಿ ಜೀವಕೋಶಗಳನ್ನು ಹಾನಿಗೊಳಿಸುತ್ತದೆ. ಆದಾಗ್ಯೂ, ಅನೇಕ ವರದಿಗಳಲ್ಲಿ ಹ್ಯೂಮನ್ ಪ್ಯಾಪಿಲೋಮಾ ವೈರಸ್ (HPV)ನ ವಿವಿಧ ರೀತಿಯ ತಳಿಗಳಿಂದ ಈ ಕ್ಯಾನ್ಸರ್​ ರೂಪವು ಹೆಚ್ಚಾಗಿ ಉಂಟಾಗುತ್ತದೆ ಎಂದು ತಿಳಿಸಲಾಗಿದೆ.

ಆರಂಭಿಕ ಹಂತದಲ್ಲಿ ಈ ಕ್ಯಾನ್ಸರ್​ ಪತ್ತೆಹಚ್ಚಲು ಸಾಧ್ಯವಿದೆ

ವರದಿಯ ಪ್ರಕಾರ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಬಹುದು. ಈ ಕ್ಯಾನ್ಸರ್‌ನ ಪೂರ್ವ ಹಂತವು 10 ರಿಂದ 15 ವರ್ಷಗಳವರೆಗೆ ಇರುತ್ತದೆ. ಇದನ್ನು ಪ್ಯಾಪ್ ಸ್ಮೀಯರ್‌ನಂತಹ ಸರಳ ಪರೀಕ್ಷೆಗಳಿಂದ ಸುಲಭವಾಗಿ ಪತ್ತೆ ಮಾಡಬಹುದು. ವರದಿಯ ಪ್ರಕಾರ ಮಹಿಳೆಯರು 30 ವರ್ಷಗಳ ನಂತರ ಎಚ್‌ಐವಿ ಪರೀಕ್ಷೆಯನ್ನು ಸಹ ಮಾಡಿಸಿಕೊಳ್ಳಬೇಕು. ಇದರಿಂದ ಈ ಕ್ಯಾನ್ಸರ್​ನ ಅಪಾಯ ಇದ್ದರೂ ಪ್ರಾರಂಭದಲ್ಲೇ ತಿಳಿಯಬಹುದು.

ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವೇನು?

ಗರ್ಭಕಂಠದ ಕ್ಯಾನ್ಸರ್​ನ ಹೆಚ್ಚಿನ ಅಪಾಯವು ಮಾನವ ಪ್ಯಾಪಿಲೋಮ ವೈರಸ್​ನ ಒಂದು ರೂಪಾಂತರವಾಗಿದೆ. ಮಹಿಳೆ ಹೆಚ್​ಪಿವಿಯೊಂದಿಗೆ ಸಂಪರ್ಕಕ್ಕೆ ಬಂದರೆ, ನಂತರ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಪರಿಣಾಮ ಬೀರುತ್ತದೆ. ಆದರೆ ಕೆಲವು ಮಹಿಳೆಯರ ಪ್ರತಿರಕ್ಷಣಾ ವ್ಯವಸ್ಥೆಯು ಆ ವೈರಸ್ ಅನ್ನು ನಿಲ್ಲಿಸಲು ಅಥವಾ ತೊಡೆದುಹಾಕಲು ಸಾಧ್ಯವಾಗುವುದಿಲ್ಲ. ದೀರ್ಘಕಾಲದವರೆಗೆ ಹೆಚ್ಚಿನ ಅಪಾಯದ ಹೆಚ್​ಪಿವಿಗೆ ಒಡ್ಡಿಕೊಂಡರೆ, ಈ ಕ್ಯಾನ್ಸರ್​ ಅಪಾಯವು ಬಹಳ ಹೆಚ್ಚಾಗುತ್ತದೆ. ಈ ಕ್ಯಾನ್ಸರ್‌ನ ಯಾವುದೇ ಆರಂಭಿಕ ಲಕ್ಷಣಗಳು ಕಂಡುಬಂದಿಲ್ಲವಾದರೂ. ಉನ್ನತ ಮಟ್ಟಕ್ಕೆ ಬಂದ ನಂತರವೇ ಇದರ ಲಕ್ಷಣಗಳು ಅರ್ಥವಾಗುತ್ತವೆ. ಆದ್ದರಿಂದ ಕಾಲಕಾಲಕ್ಕೆ ಪರೀಕ್ಷಿಸಬೇಕು. ಪಿರಿಯಡ್ಸ್​ನಲ್ಲಿ ಅನಿಯಮಿತತೆ, ಪಿರಿಯಡ್ಸ್ ಹೊರತುಪಡಿಸಿ ಬೇರೆ ರಕ್ತಸ್ರಾವ ಇತ್ಯಾದಿಗಳನ್ನು ಗರ್ಭಕಂಠದ ಕ್ಯಾನ್ಸರ್​ನ ಲಕ್ಷಣಗಳೆಂದು ಪರಿಗಣಿಸಲಾಗಿದೆ.

ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು, ಹೆಚ್​ಪಿವಿ ತಡೆಗಟ್ಟುವ ಲಸಿಕೆಯನ್ನು ನೀಡಬೇಕು. ಆದಾಗ್ಯೂ, ಲಸಿಕೆ ನಂತರವೂ ನಿಯಮಿತ ಸ್ಕ್ರೀನಿಂಗ್ ಅಗತ್ಯ. ಈ ಕ್ಯಾನ್ಸರ್ ಬಗ್ಗೆ ಮಹಿಳೆಯರು ಜಾಗೃತರಾಗಿರುವುದು ಬಹಳ ಮುಖ್ಯ.

ಇದನ್ನೂ ಓದಿ: Women health: ಮುಟ್ಟಿನ ಸಂದರ್ಭದಲ್ಲಿ ಮೂಡ್ ಸ್ವಿಂಗ್ ಆಗುತ್ತದೆಯೇ? ಕಾರಣ ತಿಳಿಯಿರಿ

ಅಂಡರ್‌ ವೈಯರ್ ಬ್ರಾ ಧರಿಸುವುದರಿಂದ ಸ್ತನ ಕ್ಯಾನ್ಸರ್ ಬರಬಹುದೇ? ವೈದ್ಯರ ಸಲಹೆ ಏನು ತಿಳಿಯಿರಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್