Cervical Cancer: ಗರ್ಭಕಂಠದ ಕ್ಯಾನ್ಸರ್ ಎಂದರೇನು? ಪ್ರತಿಯೊಬ್ಬ ಮಹಿಳೆಯು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು

ಗರ್ಭಕಂಠದ ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ಆದರೆ ಈ ಬಗ್ಗೆ ಮಹಿಳೆಯರಿಗೆ ಮಾಹಿತಿ ಕೊರತೆ ಇದೆ. ಇದರಿಂದಾಗಿ ಅವರು ಈ ಕ್ಯಾನ್ಸರ್ ನಿರ್ಲಕ್ಷ್ಯ ಮಾಡಿ ದೊಡ್ಡ ಅಪಾಯಕ್ಕೆ ಮುನ್ನುಡಿಯಾಗುತ್ತಾರೆ. ಹೀಗಾಗಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಪ್ಪಿಸಲು, ಅದರ ವ್ಯಾಕ್ಸಿನೇಷನ್ ಮತ್ತು ನಿಯಮಿತ ಸ್ಕ್ರೀನಿಂಗ್ ಬಗ್ಗೆ ಜನಜಾಗೃತಿ ತರುವ ಅವಶ್ಯಕತೆಯಿದೆ.

Cervical Cancer: ಗರ್ಭಕಂಠದ ಕ್ಯಾನ್ಸರ್ ಎಂದರೇನು? ಪ್ರತಿಯೊಬ್ಬ ಮಹಿಳೆಯು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು
ಸಾಂಕೇತಿಕ ಚಿತ್ರ
Follow us
| Updated By: preethi shettigar

Updated on: Feb 03, 2022 | 7:32 AM

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆಯಾಗಿದೆ. ಇದು ವಿವಿಧ ರೂಪಗಳಲ್ಲಿ ಜನರಲ್ಲಿ ಕಂಡುಬರುತ್ತದೆ. ಆದಾಗ್ಯೂ, ಸಮಯಕ್ಕೆ ಕ್ಯಾನ್ಸರ್ ಪತ್ತೆಯಾದರೆ, ಕ್ಯಾನ್ಸರ್(Cancer) ಚಿಕಿತ್ಸೆಯು ಹೆಚ್ಚಿನ ಪ್ರಮಾಣದಲ್ಲಿ ಸಾಧ್ಯ. ಇತ್ತೀಚಿನ ದಿನಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕ್ಯಾನ್ಸರ್‌ಗೆ ಒಳಗಾಗುತ್ತಿದ್ದಾರೆ ಎಂಬುದು ಹಲವು ಅಧ್ಯಯನಗಳಲ್ಲಿ ಬಹಿರಂಗವಾಗಿದೆ. ಇಷ್ಟು ಮಾತ್ರವಲ್ಲದೆ ಗರ್ಭಕಂಠದ ಕ್ಯಾನ್ಸರ್(Cervical Cancer) ರೂಪವು ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗರ್ಭಕಂಠದ ಕ್ಯಾನ್ಸರ್ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ಆದರೆ ಈ ಬಗ್ಗೆ ಮಹಿಳೆಯರಿಗೆ(Women) ಮಾಹಿತಿ ಕೊರತೆ ಇದೆ. ಇದರಿಂದಾಗಿ ಅವರು ಈ ಕ್ಯಾನ್ಸರ್ ನಿರ್ಲಕ್ಷ್ಯ ಮಾಡಿ ದೊಡ್ಡ ಅಪಾಯಕ್ಕೆ ಮುನ್ನುಡಿಯಾಗುತ್ತಾರೆ. ಹೀಗಾಗಿ ಗರ್ಭಕಂಠದ ಕ್ಯಾನ್ಸರ್ ಅನ್ನು ತಪ್ಪಿಸಲು, ಅದರ ವ್ಯಾಕ್ಸಿನೇಷನ್ ಮತ್ತು ನಿಯಮಿತ ಸ್ಕ್ರೀನಿಂಗ್ ಬಗ್ಗೆ ಜನಜಾಗೃತಿ ತರುವ ಅವಶ್ಯಕತೆಯಿದೆ.

ಗರ್ಭಕಂಠದ ಕ್ಯಾನ್ಸರ್ ಎಂದರೇನು ?

ಗರ್ಭಕಂಠದ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಕ್ಯಾನ್ಸರ್ ಗರ್ಭಕಂಠದ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ. ಈ ಗರ್ಭಕಂಠವು ಗರ್ಭಾಶಯದ ಕೆಳಗಿನ ಭಾಗವಾಗಿದ್ದು, ಅದು ಯೋನಿಯೊಂದಿಗೆ ಸಂಪರ್ಕ ಹೊಂದಿದೆ. ಗರ್ಭಕಂಠದ ಕ್ಯಾನ್ಸರ್ ಮಹಿಳೆಯರ ಗರ್ಭದಲ್ಲಿ ಜೀವಕೋಶಗಳನ್ನು ಹಾನಿಗೊಳಿಸುತ್ತದೆ. ಆದಾಗ್ಯೂ, ಅನೇಕ ವರದಿಗಳಲ್ಲಿ ಹ್ಯೂಮನ್ ಪ್ಯಾಪಿಲೋಮಾ ವೈರಸ್ (HPV)ನ ವಿವಿಧ ರೀತಿಯ ತಳಿಗಳಿಂದ ಈ ಕ್ಯಾನ್ಸರ್​ ರೂಪವು ಹೆಚ್ಚಾಗಿ ಉಂಟಾಗುತ್ತದೆ ಎಂದು ತಿಳಿಸಲಾಗಿದೆ.

ಆರಂಭಿಕ ಹಂತದಲ್ಲಿ ಈ ಕ್ಯಾನ್ಸರ್​ ಪತ್ತೆಹಚ್ಚಲು ಸಾಧ್ಯವಿದೆ

ವರದಿಯ ಪ್ರಕಾರ ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಬಹುದು. ಈ ಕ್ಯಾನ್ಸರ್‌ನ ಪೂರ್ವ ಹಂತವು 10 ರಿಂದ 15 ವರ್ಷಗಳವರೆಗೆ ಇರುತ್ತದೆ. ಇದನ್ನು ಪ್ಯಾಪ್ ಸ್ಮೀಯರ್‌ನಂತಹ ಸರಳ ಪರೀಕ್ಷೆಗಳಿಂದ ಸುಲಭವಾಗಿ ಪತ್ತೆ ಮಾಡಬಹುದು. ವರದಿಯ ಪ್ರಕಾರ ಮಹಿಳೆಯರು 30 ವರ್ಷಗಳ ನಂತರ ಎಚ್‌ಐವಿ ಪರೀಕ್ಷೆಯನ್ನು ಸಹ ಮಾಡಿಸಿಕೊಳ್ಳಬೇಕು. ಇದರಿಂದ ಈ ಕ್ಯಾನ್ಸರ್​ನ ಅಪಾಯ ಇದ್ದರೂ ಪ್ರಾರಂಭದಲ್ಲೇ ತಿಳಿಯಬಹುದು.

ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವೇನು?

ಗರ್ಭಕಂಠದ ಕ್ಯಾನ್ಸರ್​ನ ಹೆಚ್ಚಿನ ಅಪಾಯವು ಮಾನವ ಪ್ಯಾಪಿಲೋಮ ವೈರಸ್​ನ ಒಂದು ರೂಪಾಂತರವಾಗಿದೆ. ಮಹಿಳೆ ಹೆಚ್​ಪಿವಿಯೊಂದಿಗೆ ಸಂಪರ್ಕಕ್ಕೆ ಬಂದರೆ, ನಂತರ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಪರಿಣಾಮ ಬೀರುತ್ತದೆ. ಆದರೆ ಕೆಲವು ಮಹಿಳೆಯರ ಪ್ರತಿರಕ್ಷಣಾ ವ್ಯವಸ್ಥೆಯು ಆ ವೈರಸ್ ಅನ್ನು ನಿಲ್ಲಿಸಲು ಅಥವಾ ತೊಡೆದುಹಾಕಲು ಸಾಧ್ಯವಾಗುವುದಿಲ್ಲ. ದೀರ್ಘಕಾಲದವರೆಗೆ ಹೆಚ್ಚಿನ ಅಪಾಯದ ಹೆಚ್​ಪಿವಿಗೆ ಒಡ್ಡಿಕೊಂಡರೆ, ಈ ಕ್ಯಾನ್ಸರ್​ ಅಪಾಯವು ಬಹಳ ಹೆಚ್ಚಾಗುತ್ತದೆ. ಈ ಕ್ಯಾನ್ಸರ್‌ನ ಯಾವುದೇ ಆರಂಭಿಕ ಲಕ್ಷಣಗಳು ಕಂಡುಬಂದಿಲ್ಲವಾದರೂ. ಉನ್ನತ ಮಟ್ಟಕ್ಕೆ ಬಂದ ನಂತರವೇ ಇದರ ಲಕ್ಷಣಗಳು ಅರ್ಥವಾಗುತ್ತವೆ. ಆದ್ದರಿಂದ ಕಾಲಕಾಲಕ್ಕೆ ಪರೀಕ್ಷಿಸಬೇಕು. ಪಿರಿಯಡ್ಸ್​ನಲ್ಲಿ ಅನಿಯಮಿತತೆ, ಪಿರಿಯಡ್ಸ್ ಹೊರತುಪಡಿಸಿ ಬೇರೆ ರಕ್ತಸ್ರಾವ ಇತ್ಯಾದಿಗಳನ್ನು ಗರ್ಭಕಂಠದ ಕ್ಯಾನ್ಸರ್​ನ ಲಕ್ಷಣಗಳೆಂದು ಪರಿಗಣಿಸಲಾಗಿದೆ.

ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು, ಹೆಚ್​ಪಿವಿ ತಡೆಗಟ್ಟುವ ಲಸಿಕೆಯನ್ನು ನೀಡಬೇಕು. ಆದಾಗ್ಯೂ, ಲಸಿಕೆ ನಂತರವೂ ನಿಯಮಿತ ಸ್ಕ್ರೀನಿಂಗ್ ಅಗತ್ಯ. ಈ ಕ್ಯಾನ್ಸರ್ ಬಗ್ಗೆ ಮಹಿಳೆಯರು ಜಾಗೃತರಾಗಿರುವುದು ಬಹಳ ಮುಖ್ಯ.

ಇದನ್ನೂ ಓದಿ: Women health: ಮುಟ್ಟಿನ ಸಂದರ್ಭದಲ್ಲಿ ಮೂಡ್ ಸ್ವಿಂಗ್ ಆಗುತ್ತದೆಯೇ? ಕಾರಣ ತಿಳಿಯಿರಿ

ಅಂಡರ್‌ ವೈಯರ್ ಬ್ರಾ ಧರಿಸುವುದರಿಂದ ಸ್ತನ ಕ್ಯಾನ್ಸರ್ ಬರಬಹುದೇ? ವೈದ್ಯರ ಸಲಹೆ ಏನು ತಿಳಿಯಿರಿ

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ