Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಇಳಿಕೆಗೆ ಸಹಾಯಕವಾಗಲಿದೆ ಅಲೋವೆರಾ; ಈ 4 ವಿಧಾನಗಳ ಬಗ್ಗೆ ಮಾತ್ರ ಇರಲಿ ಗಮನ

ತೂಕ ನಷ್ಟಕ್ಕೆ ಮಾರುಕಟ್ಟೆಯಲ್ಲಿ ಅನೇಕ ರೀತಿಯ ಉತ್ಪನ್ನಗಳು ಲಭ್ಯವಿವೆ. ಅದನ್ನು ಸೇವಿಸುವ ಮೂಲಕ ತ್ವರಿತ ಫಲಿತಾಂಶ ಪಡೆಯಬಹುದು. ಆದರೆ ನಂತರ ಇವುಗಳ ಅಡ್ಡಪರಿಣಾಮ ಸಮಸ್ಯೆಗಳಾಗಿ ಉದ್ಭವಿಸುವ ಸಾಧ್ಯತೆ ಇದೆ. ಇದಕ್ಕಾಗಿ ಮನೆಮದ್ದುಗಳನ್ನು ಸಹ ಅಳವಡಿಸಿಕೊಳ್ಳಬಹುದು.

ತೂಕ ಇಳಿಕೆಗೆ ಸಹಾಯಕವಾಗಲಿದೆ ಅಲೋವೆರಾ; ಈ 4 ವಿಧಾನಗಳ ಬಗ್ಗೆ ಮಾತ್ರ ಇರಲಿ ಗಮನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Feb 21, 2022 | 7:34 AM

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹೆಚ್ಚಿನ ಜನರು ವಿಭಿನ್ನ ವಿಧಾನಗಳನ್ನು ಪ್ರಯತ್ನಿಸುತ್ತಾರೆ. ಅವರು ತೂಕ ಇಳಿಸುವ ಕ್ರಿಯೆ ಅಲ್ಲಿ ಫಲಿತಾಂಶವನ್ನು ಶೀಘ್ರದಲ್ಲೇ ಪಡೆಯಲು ಇಷ್ಟಪಡುತ್ತಾರೆ. ತಜ್ಞರ ಪ್ರಕಾರ, ತೂಕ ನಷ್ಟಕ್ಕೆ, ಸಮತೋಲಿತ ಆಹಾರ(Food) ಮತ್ತು ವ್ಯಾಯಾಮ ಮಾಡಬೇಕು. ಅಲ್ಲದೆ ಸರಿಯಾದ ಮಾಹಿತಿಯನ್ನು ಹೊಂದಿರುವುದು ಮುಖ್ಯ. ತೂಕ ನಷ್ಟಕ್ಕೆ(Weight Loss) ಮಾರುಕಟ್ಟೆಯಲ್ಲಿ ಅನೇಕ ರೀತಿಯ ಉತ್ಪನ್ನಗಳು ಲಭ್ಯವಿವೆ. ಅದನ್ನು ಸೇವಿಸುವ ಮೂಲಕ ತ್ವರಿತ ಫಲಿತಾಂಶ ಪಡೆಯಬಹುದು. ಆದರೆ ನಂತರ ಇವುಗಳ ಅಡ್ಡಪರಿಣಾಮ ಸಮಸ್ಯೆಗಳಾಗಿ ಉದ್ಭವಿಸುವ ಸಾಧ್ಯತೆ ಇದೆ. ಇದಕ್ಕಾಗಿ ಮನೆಮದ್ದುಗಳನ್ನು ಸಹ ಅಳವಡಿಸಿಕೊಳ್ಳಬಹುದು. ಹಾಗಿದ್ದರೆ ಯಾವ ಮನೆಮದ್ದು(Home remedies) ಬಳಸಬಹದು ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ ಇಲ್ಲಿದೆ ಪರಿಹಾರ. 

ಅಲೋವೆರಾ ಸೇವನೆಗೆ ಸಂಬಂಧಿಸಿದ ಸಲಹೆಗಳನ್ನು ನೀವು ಇಲ್ಲಿ ಪರಿಶೀಲಿಸಬಹುದು. ತೂಕ ಇಳಿಸಲು ಅಲೋವೆರಾ ಸೇವನೆಗೆ ಸಂಬಂಧಿಸಿದ ಈ ಸಲಹೆಗಳ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ. ಹೀಗಾಗಿ ಈ ವಿಧಾನಗಳ ಬಗ್ಗೆ ಗಮನಹರಿಸಿ.

ನಿಂಬೆ ಮತ್ತು ಅಲೋ ವೆರಾ

ಈ ಎರಡೂ ಪದಾರ್ಥಗಳನ್ನು ತೂಕ ನಷ್ಟಕ್ಕೆ ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ಅವುಗಳನ್ನು ಸೇವಿಸುವ ಸರಿಯಾದ ಮಾರ್ಗವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ತೂಕ ನಷ್ಟಕ್ಕೆ ನಿಂಬೆ ಸೇವನೆಯನ್ನು ವೈದ್ಯರು ಶಿಫಾರಸು ಮಾಡುತ್ತಾರೆ. ಇವೆರಡರ ಪಾನೀಯವನ್ನು ತಯಾರಿಸಲು, ಅಲೋವೆರಾ ಜೆಲ್ ಮತ್ತು ಅರ್ಧ ನಿಂಬೆ ಸೇರಿಸಿ. ವ್ಯಾಯಾಮದ ಸ್ವಲ್ಪ ಸಮಯದ ನಂತರ ಬೆಳಿಗ್ಗೆ ಈ ಪಾನೀಯವನ್ನು ಕುಡಿಯಿರಿ.

ಅಲೋ ವೆರಾ ಮತ್ತು ಬಿಸಿ ನೀರು

ಬಿಸಿ ನೀರು ಕುಡಿಯುವುದರಿಂದ ದೇಹದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಪ್ರತಿದಿನ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಹೆಚ್ಚುವರಿ ಕೊಬ್ಬನ್ನು ಸುಡಬಹುದು. ಅಲೋವೆರಾ ಜೆಲ್ ಅನ್ನು ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿದರೆ, ಅದು ದುಪ್ಪಟ್ಟು ಪ್ರಯೋಜನಗಳನ್ನು ನೀಡುತ್ತದೆ. ಬೆಚ್ಚಗಿನ ನೀರನ್ನು ತೆಗೆದುಕೊಂಡು ಅದಕ್ಕೆ ಅಲೋವೆರಾ ಜೆಲ್ ಸೇರಿಸಿ ಮತ್ತು ಜೆಲ್ ನೀರಿನಲ್ಲಿ ಚೆನ್ನಾಗಿ ಮಿಶ್ರಣವಾಗುವವರೆಗೆ ಬೆರೆಸಿ. ಈಗ ಈ ಪಾನೀಯವನ್ನು ಸ್ವಲ್ಪ ಸ್ವಲ್ಪವೇ ಕುಡಿಯಿರಿ.

ಆಹಾರ ಸೇವಿಸುವ ಮೊದಲು ಅಲೋ ವೆರಾ

ಅಲೋವೆರಾವನ್ನು ಆಹಾರ ತಿನ್ನುವ ಮೊದಲು ಸೇವಿಸುವುದರಿಂದ ತೂಕ ಕಡಿಮೆಯಾಗುವುದು ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಇದಕ್ಕಾಗಿ ತಿನ್ನುವ 20 ನಿಮಿಷಗಳ ಮೊದಲು ಅಲೋವೆರಾ ರಸವನ್ನು ಕುಡಿಯಿರಿ. ಇದರೊಂದಿಗೆ, ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಬಲವಾಗಿರುತ್ತದೆ ಮತ್ತು ದೇಹದಲ್ಲಿ ಇರುವ ಹೆಚ್ಚುವರಿ ಕೊಬ್ಬನ್ನು ಸಹ ಸುಡಬಹುದು. ಅಲೋವೆರಾದಲ್ಲಿರುವ ವಿಟಮಿನ್ ಬಿ ಕೊಬ್ಬನ್ನು ಶಕ್ತಿಯನ್ನಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತದೆ.

ತರಕಾರಿಗಳೊಂದಿಗೆ ಅಲೋ ವೆರಾ

ತರಕಾರಿಗಳ ರಸವನ್ನು ಹೊರತೆಗೆಯಿರಿ ಮತ್ತು ಅದರಲ್ಲಿ ಅಲೋವೆರಾ ಜೆಲ್ ಅನ್ನು ಮಿಶ್ರಣ ಮಾಡಿ ಮತ್ತು ನಿಯಮಿತವಾಗಿ ಕುಡಿಯಿರಿ. ಅಲೋವೆರಾ ರಸವು ರುಚಿಕರವಾಗಿರುವುದಿಲ್ಲ. ಈ ಕಾರಣಕ್ಕಾಗಿ ಅದರೊಂದಿಗೆ ತರಕಾರಿ ರಸವನ್ನು ಬೆರೆಸಿ ಕುಡಿಯುವುದು ಉತ್ತಮ. ನೀವು ಬಯಸಿದರೆ, ನೀವು ಕ್ಯಾರೆಟ್ ಜ್ಯೂಸ್​ಗೆ ಒಂದು ಚಮಚ ಅಲೋವೆರಾ ಜೆಲ್ ಅನ್ನು ಸೇರಿಸಿ ಕುಡಿಯಬಹುದು.

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ದಾಲ್ಚಿನ್ನಿ; ಇದನ್ನು ಆರೋಗ್ಯಕ್ಕೆ ಪೂರಕವಾಗಿ ಬಳಸುವ ಕ್ರಮ ಹೇಗೆ ಗೊತ್ತಾ?

ಗರ್ಭಿಣಿಯರು ಈ ಪ್ರೋಟೀನ್ ಭರಿತ ಆಹಾರಗಳನ್ನು ಸೇವನೆ ಮಾಡಬೇಕು, ಆದರೆ…..

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್