AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸೊಳ್ಳೆ ಕಡಿತದ ನಂತರ ಉಂಟಾಗುವ ಕಿರಿಕಿರಿಯಿಂದ ಹೊರಬರಲು ಈ 5 ಪದಾರ್ಥಗಳನ್ನು ಬಳಸಿ

ಸೊಳ್ಳೆ ಕಚ್ಚಿ ಹೋದ ಮೇಲೆ ತುರಿಕೆ ನಮ್ಮನ್ನು ಕಿರಿಕಿರಿ ಉಂಟಾಗುವಂತೆ ಮಾಡುತ್ತದೆ. ಹೀಗಾಗಿ ಇದರಿಂದ ಹೊರಬರಲು ಹೊಗೆ, ಇನ್ನಿತರ ವಿದ್ಯುತ್​ ಉಪಕರಣಗಳನ್ನು ಬಳಸುತ್ತೇವೆ. ಸೊಳ್ಳೆ ಕಚ್ಚಿದ ಮೇಲೆ ಅದರಿಂದಾಗುವ ಅಪಾಯವನ್ನು ಕಡಿಮೆ ಮಾಡಲು, ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಳ್ಳಿ.

Health Tips: ಸೊಳ್ಳೆ ಕಡಿತದ ನಂತರ ಉಂಟಾಗುವ ಕಿರಿಕಿರಿಯಿಂದ ಹೊರಬರಲು ಈ 5 ಪದಾರ್ಥಗಳನ್ನು ಬಳಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 10, 2021 | 7:11 AM

Share

ಮಳೆಗಾಲದಲ್ಲಿ ಹೆಚ್ಚಾಗಿ ಸೊಳ್ಳೆಗಳು ಕಂಡುಬರುತ್ತದೆ. ಅದರಲ್ಲೂ ಮನೆ ಹತ್ತಿರದಲ್ಲಿ ನಿಂತ ನೀರು ಸೊಳ್ಳೆಗಳು ಹೆಚ್ಚಾಗಲು ಕಾರಣವಾಗುತ್ತದೆ. ಇದರಿಂದ ಅನೇಕ ಕಾಯಿಲೆಗಳು ಕಾಡಬಹುದು. ಕೆಲವೊಮ್ಮೆ ನೆಮ್ಮದಿಯಿಂದ ನಿದ್ರೆ ಮಾಡಲೂ ಸಾಧ್ಯವಾಗುವುದಿಲ್ಲ. ಅಲ್ಲದೆ ಸೊಳ್ಳೆ ಕಚ್ಚಿ ಹೋದ ಮೇಲೆ ತುರಿಕೆ ನಮ್ಮನ್ನು ಕಿರಿಕಿರಿ ಉಂಟಾಗುವಂತೆ ಮಾಡುತ್ತದೆ. ಹೀಗಾಗಿ ಇದರಿಂದ ಹೊರಬರಲು ಹೊಗೆ, ಇನ್ನಿತರ ವಿದ್ಯುತ್​ ಉಪಕರಣಗಳನ್ನು ಬಳಸುತ್ತೇವೆ. ಸೊಳ್ಳೆ ಕಚ್ಚಿದ ಮೇಲೆ ಅದರಿಂದಾಗುವ ಅಪಾಯವನ್ನು ಕಡಿಮೆ ಮಾಡಲು, ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಳ್ಳಿ.

ಮಳೆಗಾಲದಲ್ಲಿ ಹೆಚ್ಚಾಗಿ ಸೊಳ್ಳೆಗಳು ಕಂಡುಬರುತ್ತದೆ. ಅದರಲ್ಲೂ ಮನೆ ಹತ್ತಿರದಲ್ಲಿ ನಿಂತ ನೀರು ಸೊಳ್ಳೆಗಳು ಹೆಚ್ಚಾಗಲು ಕಾರಣವಾಗುತ್ತದೆ. ಇದರಿಂದ ಅನೇಕ ಕಾಯಿಲೆಗಳು ಕಾಡಬಹುದು. ಕೆಲವೊಮ್ಮೆ ನೆಮ್ಮದಿಯಿಂದ ನಿದ್ರೆ ಮಾಡಲೂ ಸಾಧ್ಯವಾಗುವುದಿಲ್ಲ. ಅಲ್ಲದೆ ಸೊಳ್ಳೆ ಕಚ್ಚಿ ಹೋದ ಮೇಲೆ ತುರಿಕೆ ನಮ್ಮನ್ನು ಕಿರಿಕಿರಿ ಉಂಟಾಗುವಂತೆ ಮಾಡುತ್ತದೆ. ಹೀಗಾಗಿ ಇದರಿಂದ ಹೊರಬರಲು ಹೊಗೆ, ಇನ್ನಿತರ ವಿದ್ಯುತ್​ ಉಪಕರಣಗಳನ್ನು ಬಳಸುತ್ತೇವೆ. ಸೊಳ್ಳೆ ಕಚ್ಚಿದ ಮೇಲೆ ಅದರಿಂದಾಗುವ ಅಪಾಯವನ್ನು ಕಡಿಮೆ ಮಾಡಲು, ಮನೆಯಲ್ಲಿಯೇ ಇರುವ ಕೆಲವು ಪದಾರ್ಥಗಳನ್ನು ಬಳಸಿಕೊಳ್ಳಿ.

1. ಐಸ್​ ಪೀಸ್​ ( ಐಸ್​ ಕ್ಯೂಬ್) ಐಸ್​ ಪೀಸ್​ ತಂಪಾಗಿಸುವುದರಿಂದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮರಗಟ್ಟುವಿಕೆ ಸೃಷ್ಟಿಸುತ್ತದೆ ಮತ್ತು ಸ್ವಲ್ಪ ಸಮಯದವರೆಗೆ ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ. ನೀವು ಸ್ವಲ್ಪ ಐಸ್ ಅನ್ನು ಬಟ್ಟೆಯಲ್ಲಿ ಸುತ್ತಿ ಸೊಳ್ಳೆ ಕಚ್ಚಿದ ಜಾಗದಲ್ಲಿ ಇಟ್ಟುಕೊಳ್ಳಿ. ಇದರಿಂದ ಚರ್ಮಕ್ಕೆ ಆಗುವ ಹಾನಿ ಕಡಿಮೆಯಾಗುತ್ತದೆ. ಆದರೆ ಐಸ್ ಅನ್ನು ಹೆಚ್ಚು ಹೊತ್ತು ಇಡಬೇಡಿ.

2. ಅಲೋವೆರಾ ಅಲೋವೆರಾ ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಸೊಳ್ಳೆ ಕಡಿತದಿಂದ ಉಂಟಾಗುವ ಅಸ್ವಸ್ಥತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಅಲೋವೆರಾ ಜೆಲ್ ಉರಿಯೂತದ ಗುಣಲಕ್ಷಣಗಳನ್ನು ಕಡಿಮೆ ಮಾಡುತ್ತದೆ. ಇದು ಸೊಳ್ಳೆ ಕಡಿತದ ನಂತರ ಉಂಟಾಗುವ ತುರಿಕೆಯನ್ನು ದೂರ ಮಾಡುತ್ತದೆ.

3. ಜೇನುತುಪ್ಪ ಜೇನುತುಪ್ಪವು ಚರ್ಮಕ್ಕೆ ಪ್ರಯೋಜನಕಾರಿಯಾದ ಗುಣಗಳನ್ನು ಒಳಗೊಂಡಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಗಳನ್ನು ದೂರ ಮಾಡುತ್ತದೆ. ಸೊಳ್ಳೆ ಕಚ್ಚಿದ ಪ್ರದೇಶದ ಮೇಲೆ ನೀವು ಜೇನುತುಪ್ಪ ಹಚ್ಚುವುದರಿಂದ ಕೆಂಪಾಗುವುದು, ತುರಿಕೆ ಉಂಟಾಗುವುದು ಕಡಿಮೆಯಾಗುತ್ತದೆ.

4. ತುಳಸಿ ಪ್ರತಿ ಮನೆಯಲ್ಲೂ ತುಳಸಿ ಗಿಡ ಇರುತ್ತದೆ. ಇದರಲ್ಲಿ ಸೊಳ್ಳೆ ಕಡಿತದಿಂದ ಉಂಟಾಗುವ ಅಪಾಯವನ್ನು ದೂರ ಮಾಡುವ ಶಕ್ತಿ ಇದೆ. ತುಳಸಿ ಎಲೆಗಳನ್ನು ತೆಗೆದುಕೊಳ್ಳಿ, ಇವುಗಳನ್ನು ಒಂದು ಕಪ್ ನೀರಿನಲ್ಲಿ ಕೆಲವು ನಿಮಿಷಗಳ ಕಾಲ ಕುದಿಸಿ. ಈ ನೀರನ್ನು ತಣ್ಣಗಾಗಲು ಬಿಟ್ಟು, ನಂತರ ಹತ್ತಿಯ ಸಹಾಯದಿಂದ ಇದನ್ನು ನಿಮ್ಮ ಚರ್ಮದ ಮೇಲೆ ಹಚ್ಚಿಕೊಳ್ಳಿ. ಇದರಿಂದ ತುರಿಕೆ ದೂರವಾಗುತ್ತದೆ.

5. ಈರುಳ್ಳಿ ಪ್ರತಿಯೊಬ್ಬರ ಅಡುಗೆಮನೆಯಲ್ಲೂ ಈರುಳ್ಳಿ ಇರುತ್ತದೆ. ಇದನ್ನು ಹಲವಾರು ಆಹಾರಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ನೀವು ಸೊಳ್ಳೆ ಕಚ್ಚಿದ ಭಾಗಕ್ಕೆ ಈರುಳ್ಳಿ ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ. ಈರುಳ್ಳಿ ತುಂಡುಗಳನ್ನು ಸೊಳ್ಳೆ ಕಚ್ಚಿದ ಭಾಗಕ್ಕೆ ಹಚ್ಚಿ. ನಂತರ ನೀರಿನಿಂದ ತೊಳೆಯಿರಿ. ಇದು ತುರಿಕೆಯನ್ನು ದೂರ ಮಾಡುತ್ತದೆ.

ಇದನ್ನೂ ಓದಿ: Health Tips: ಹಾಲು ಕುಡಿಯುವ ಅಭ್ಯಾಸ ಒಳ್ಳೆಯದು, ಆದರೆ ಹಾಲಿನೊಂದಿಗೆ ಈ ಐದು ಪದಾರ್ಥಗಳನ್ನು ಸೇವಿಸುವುದು ಅಪಾಯಕಾರಿ

Health Tips: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!