AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕಾಲಿನ ಮೇಲೆ ಎಷ್ಟು ಸಮಯ ನಿಲ್ಲಬಹುದು?

ವಯಸ್ಸಾದಂತೆ ದೇಹದ ಬಲ ಕಡಿಮೆಯಾಗುತ್ತದೆ. ಒಂದೊಂದೇ ಕಾಯಿಲೆ ಆವರಿಸಿಕೊಳ್ಳಲು ಆರಂಭಿಸುತ್ತದೆ. ಹಾಗಾಗಿ ನಾವು ಆರೋಗ್ಯವಾಗಿ ಇರುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ಆಹಾರದಲ್ಲಿ ಪಥ್ಯ ಮಾಡುವುದರ ಜೊತೆಗೆ ಕೆಲವು ಪರೀಕ್ಷೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇದನ್ನು ನೀವು ಆಸ್ಪತ್ರೆಗೆ ಹೋಗಿ ಮಾಡಬೇಕಾಗಿಲ್ಲ ಬದಲಾಗಿ ಮನೆಯಲ್ಲಿ ಅದರಲ್ಲಿಯೂ ನಿಮ್ಮ ಬಿಡುವಿನ ವೇಳೆಯಲ್ಲಿ ನಿಮ್ಮ ದೇಹದ ಸಾಮರ್ಥ್ಯವನ್ನು ನೋಡಬಹುದು. ಅದು ಹೇಗೆ? ಯಾವ ರೀತಿ ಮಾಡಬೇಕು? ಇದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಒಂದು ಕಾಲಿನ ಮೇಲೆ ಎಷ್ಟು ಸಮಯ ನಿಲ್ಲಬಹುದು?
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 04, 2024 | 2:10 PM

Share

ಸಾಮಾನ್ಯವಾಗಿ ನಾವು ಆರೋಗ್ಯವಾಗಿರಲು ಹಲವಾರು ರೀತಿಯಲ್ಲಿ ಪ್ರಯತ್ನಿಸುತ್ತೇವೆ. ಇತ್ತೀಚಿನ ದಿನಗಳಲ್ಲಿ ರೋಗ ಮುಕ್ತವಾಗಿ ಬದುಕುವುದು ಕೂಡ ಒಂದು ಸಾಧನೆಯಾಗಿದೆ. ಹಾಗಾಗಿ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದೆ. ವಯಸ್ಸಾದಂತೆ ದೇಹದ ಬಲ ಕಡಿಮೆಯಾಗುತ್ತದೆ. ಒಂದೊಂದೇ ಕಾಯಿಲೆ ಆವರಿಸಿಕೊಳ್ಳಲು ಆರಂಭಿಸುತ್ತದೆ. ಹಾಗಾಗಿ ನಾವು ಆರೋಗ್ಯವಾಗಿ ಇರುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ಆಹಾರದಲ್ಲಿ ಪಥ್ಯ ಮಾಡುವುದರ ಜೊತೆಗೆ ಕೆಲವು ಪರೀಕ್ಷೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಇದನ್ನು ನೀವು ಆಸ್ಪತ್ರೆಗೆ ಹೋಗಿ ಮಾಡಬೇಕಾಗಿಲ್ಲ ಬದಲಾಗಿ ಮನೆಯಲ್ಲಿ ಅದರಲ್ಲಿಯೂ ನಿಮ್ಮ ಬಿಡುವಿನ ವೇಳೆಯಲ್ಲಿ ನಿಮ್ಮ ದೇಹದ ಸಾಮರ್ಥ್ಯವನ್ನು ನೋಡಬಹುದು. ಅದು ಹೇಗೆ? ಯಾವ ರೀತಿ ಮಾಡಬೇಕು? ಇದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಹೈದರಾಬಾದ್ ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ. ಸುಧೀರ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಷಯವಾಗಿ ಕೆಲವು ಮಾಹಿತಿ ಹಂಚಿಕೊಂಡಿದ್ದು ಈ ಬಗ್ಗೆ ಪ್ರತಿಯೊಬ್ಬರೂ ಕೂಡ ತಿಳಿದುಕೊಳ್ಳಬೇಕಾಗಿದೆ. ಅವರು ಹೇಳುವ ಪ್ರಕಾರ, ವಯಸ್ಸಾದಂತೆ ದೇಹದ ಸಾಮರ್ಥ್ಯ ಕಡಿಮೆಯಾಗುತ್ತದೆ. ಆದರೆ ಸ್ನಾಯುವಿನ ಶಕ್ತಿಯನ್ನು ತಿಳಿಯಲು ಚಿಕ್ಕ ಪರೀಕ್ಷೆ ಮಾಡಬಹುದು. ವೈದ್ಯರು ನಿಮ್ಮ ಕೈ ಹಿಡಿದು ನಾಡಿ ನೋಡಿ ನಿಮ್ಮ ಆರೋಗ್ಯ ಹೇಳುವಂತೆ ಇದು ಕೂಡ ಸರಳವಾಗಿದೆ.+

ಏನು ಮಾಡಬೇಕು?

ನಿಮ್ಮ ಕಣ್ಣುಗಳನ್ನು ತೆರೆದಿಟ್ಟುಕೊಂಡು, ಒಂದು ಕಾಲಿನ ಮೇಲೆ ನಿಂತುಕೊಳ್ಳಬೇಕು. ನೀವು ಈ ರೀತಿ ಎಷ್ಟು ಸಮಯ ಅಂದರೆ ನಿಮ್ಮ ಬಳಿ ಎಷ್ಟು ನಿಮಿಷ ಅಥವಾ ಸೆಕೆಂಡುಗಳ ಕಾಲ ನಿಲ್ಲಲು ಸಾಧ್ಯವಿದೆ ಎಂಬುದನ್ನು ಪರೀಕ್ಷಿಸಬೇಕು. ಇದು ನಿಮಗೆ ಅತ್ಯಂತ ಸರಳ ಎನಿಸುವುದರ ಜೊತೆಗೆ, ಇದರಲ್ಲಿ ಏನಿದೆ? ಎಂದು ಅನಿಸಬಹುದು ಆದರೆ ಒಂದು ಕಾಲಿನ ಮೇಲೆ ನಿಲ್ಲುವ ಸಾಮರ್ಥ್ಯವು ಸ್ನಾಯುವಿನ ಶಕ್ತಿ, ಸಮತೋಲನ, ದೃಷ್ಟಿ ಮತ್ತು ಶ್ರವಣ ಶಕ್ತಿಯನ್ನು ಅವಲಂಬಿಸಿರುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಇದು ಸ್ನಾಯು ಶಕ್ತಿಯನ್ನು ಪರೀಕ್ಷಿಸುವುದಕ್ಕೆ ನಿಖರವಾದ ಪರೀಕ್ಷೆಯಾಗಿದೆ ಎಂದು ಡಾ. ಸುಧೀರ್ ಕುಮಾರ್ ಹೇಳುತ್ತಾರೆ.

ಇದನ್ನೂ ಓದಿ: ರಾತ್ರಿ ನಿದ್ರೆ ಕಡಿಮೆ ಮಾಡಿದರೆ ಬೇಗನೆ ಹೃದಯಾಘಾತವಾಗುತ್ತದೆ

ಸಾಮಾನ್ಯವಾಗಿ 30 ವರ್ಷದ ವ್ಯಕ್ತಿಯು 45 ಸೆಕೆಂಡುಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ನಿಲ್ಲಲು ಸಾಧ್ಯವಾಗುತ್ತದೆ. ಈ ಸಾಮರ್ಥ್ಯವು ವಯಸ್ಸು ಕಡಿಮೆಯಾದಂತೆ ಇಳಿಕೆಯಾಗುತ್ತದೆ. ನಿಮ್ಮ 50 ರ ವಯಸ್ಸಿನಲ್ಲಿ 40 ಸೆಕೆಂಡುಗಳು ಅಥವಾ ಅದಕ್ಕಿಂತ ಹೆಚ್ಚು. ಇನ್ನು 70 ವರ್ಷಗಳಲ್ಲಿ 20 ಸೆಕೆಂಡುಗಳು ಅಥವಾ ಅದಕ್ಕಿಂತ ಹೆಚ್ಚು ಹೊತ್ತು ನಿಂತರೆ ನಿಮ್ಮ ಸ್ನಾಯುವಿನ ಶಕ್ತಿ, ಸಮತೋಲನ ಸರಿಯಾಗಿದೆ ಎಂದರ್ಥ. ಹಾಗಾಗಿ ಇದನ್ನು ನೀವು ಪ್ರಯತ್ನಿಸಿ ನೋಡಬಹುದಾಗಿದೆ.

ಸೂಚನೆ: ಯಾವುದಾದರೂ ಆರೋಗ್ಯ ಸಮಸ್ಯೆ ಇರುವವರು ಇದನ್ನು ಮಾಡಿ ನೋಡುವ ಮೊದಲು ವೈದ್ಯರ ಸಲಹೆಯನ್ನು ಪಡೆದುಕೊಳ್ಳಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನವಜಾತ ಶಿಶುವಿಗೆ ಮರುಜೀವ ನೀಡಿದ ವೈದ್ಯೆ
ನವಜಾತ ಶಿಶುವಿಗೆ ಮರುಜೀವ ನೀಡಿದ ವೈದ್ಯೆ
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ