AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ಮನಸ್ಸಿನಲ್ಲಿನ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ, ಶುಭವಾಗಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 11 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ಮನಸ್ಸಿನಲ್ಲಿನ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ, ಶುಭವಾಗಲಿದೆ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Jun 11, 2024 | 6:29 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಧ್ರುವ, ಕರಣ: ವಣಿ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:47 ರಿಂದ ಸಂಜೆ 05:24ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:18 ರಿಂದ 10:55ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:32 ರಿಂದ 02:10ರ ವರೆಗೆ.

ಮೇಷ ರಾಶಿ: ನಿಮಗೆ ಪ್ರತಿಭೆ, ಸಾಮರ್ಥ್ಯಗಳು ಇವೆ ಎಂದು ನಿಮಗೆ ಅನ್ನಿಸದೇ ಹೋಗಬಹುದು. ಎಲ್ಲವೂ ಏಕಕಾಲಕ್ಕೆ ಪ್ರಕಟವಾಗದು. ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕು. ಭವಿಷ್ಯಕ್ಕೆ ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಎಲ್ಲರಿಂದ ಒಂಟಿಯಾಗಿ ಇರಬೇಕಾಗುವುದು. ಇಂದಿನ ಸನ್ನಿವೇಶವನ್ನು ನಿಭಾಯಿಸುವ ಸಾಮರ್ಥ್ಯವು ಕಂಡು ಸಹೋದ್ಯೋಗಿಗಳು ಆಶ್ಚರ್ಯಪಡುವರು. ವಿದ್ಯಾಭ್ಯಾಸವನ್ನು ಮುಗಿಸಿದ ನಿಮಗೆ ಕೆಲಸವೂ ಶೀಘ್ರವಾಗಿ ಸಿಗಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ.

ವೃಷಭ ರಾಶಿ: ಇಂದು ವ್ಯಾವಹಾರಿಕವಾಗಿರುವ ಮನಶ್ಚಾಂಚಲ್ಯ ಅನೇಕ ವಿಧವಾಗಿ ಕಾಡಬಹುದು.‌ ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಧನಾತ್ಮಕ ಅಂಶಗಳನ್ನು ಹುಡುಕಿ ಮುನ್ನಡೆಯಿರಿ. ದಾರಿ ತಾನಾಗಿಯೇ ತೆರದುಕೊಳ್ಳುವುದು. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಮಾಡಿ, ಆದರೆ ಇನ್ನೊಬ್ಬರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಕಲಾವಿದರಿಗೆ ತಿಳಿವಳಿಕಯಿಂದ‌ ಕೂಡಿದ ನಿಮ್ಮ ಜೀವನ ಸುಗಮವಾಗಲಿದೆ. ನೀವು ಸಹಾಯ ಮಾಡುತ್ತೀರೆಂಬ ನಂಬಿಕೆಯಿಂದ ಜನರು ನಿಮ್ಮ ಬಳಿ ಕೇಳುವರು. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು.

ಮಿಥುನ ರಾಶಿ: ಇಂದು ತಂದೆ ಹಾಗು ತಾಯಿಯರ ಸೇವೆಯನ್ನು ಮಾಡುವ ಅವಕಾಶವು ಸಿಗುವುದು. ಮನೆಯಿಂದ‌ ದೂರ ಹೋಗುವಾಗ, ಕಛೇರಿಗೆ ಹೋಗುವಾಗ ದೇವರಿಗೆ ನಮಸ್ಕರಿಸಿ ಮುನ್ನಡೆಯಿರಿ. ವಿಧಿಯನ್ನು ಹಳಿದು ನಿಮಗೆ ಸಮಾಧಾನವನ್ನು ತಂದುಕೊಳ್ಳುವಿರಿ. ನಿಮ್ಮ ಮಾತುಗಳಿಂದ ಕೆಲವರು ಪ್ರೇರಣೆ ಪಡೆದರೆ, ಕೆಲವರು ನಿಮ್ಮ ಮಾತನ್ನೇ ಆಡಿಕೊಳ್ಳುವರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತಲ್ಲೀನರಾಗಿ ಹೊರ ಜಗತ್ತನ್ನು ಮರೆಯುವರು. ಮನೆ ಮತ್ತು ಉದ್ಯೋಗವೆಂದು ಅಲೆಯುತ್ತಿದ್ದರೆ ಸ್ವಲ್ಪ ದಿನ ವಿರಾಮ ಪಡೆದು ಆಮೇಲೆ ಹೋಗಿ. ಕೆಲಸವು ಚೆನ್ನಾಗಿ, ಉತ್ಸಾಹದಿಂದ ನಡೆಯುವುದು. ನಿಮ್ಮ ವಿರುದ್ಧ ಮಾತನಾಡಿದವರಿಗೆ ಇಂದು ಕಾಲವೇ ಉತ್ತರಿಸುವುದು. ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗವಾಗುವ ಸಾಧ್ಯತೆ ಇದೆ. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಜವಾಬ್ದಾರಿಯಿಂದ ತಲೆ ಭಾರವಾಗುವುದು.

ಕಟಕ ರಾಶಿ: ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ನೀರೀಕ್ಷಿಸಿದ ವಸ್ತುಗಳು ಕೆಲವು ಸಿಗಲಿವೆ. ಮನಸ್ಸು ಸ್ವಲ್ಪ ಎಲ್ಲವನ್ನೂ ಮರೆತು ಹಗುರಾಗಬಹುದು. ಅನಾರೋಗ್ಯದಿಂದಲೂ ಚೇತರಿಕಯನ್ನು ಕಂಡುಕೊಳ್ಳಬಹುದಾಗಿದೆ. ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಒತ್ತಾಯ ಪೂರ್ವಕವಾಗಿ ನಿಮಗೆ ಇಚ್ಛೆಯಿರುವ ವಿಷಯವನ್ನು ಹೇರಬೇಡಿ. ಆಯ್ಕೆ ಮಾಡಲು ಅವರಿಗೆ ಸ್ವಾತಂತ್ರ್ಯವಿರಲಿ. ಇದರಿಂದ ನಿಮಗೆ ನಿರಾಸೆಯಾಗಲಿದೆ. ಬಹಳ ಬೇಸರಗೊಳ್ಳುವಿರಿ. ಹಣವೂ ನಷ್ಟ ಶ್ರಮವೂ ನಷ್ಟವಾಗಿ ದುಃಖಿಸುವಿರಿ. ಕಳೆದುಕೊಂಡದ್ದನ್ನು ಪಡೆಯಬೇಕು ಎಂಬ ಛಲವು ನಿಮ್ಮಲ್ಲಿ ಇರುವುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ. ಆಸ್ತಿಯ ವಿಚಾರಕ್ಕೆ ನೆರೆಹೊರೆಯ ನಡುವೆ ಕಲಹವಾದೀತು. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಕಿರಿಕಿರಿ ಆಗುವುದು.

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ