AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರಿಗೆ ಎಪ್ರಿಲ್​​ ತಿಂಗಳು ಲಕ್ಕೋ ಲಕ್ಕು: ಉದ್ಯೋಗ, ವಿದ್ಯಾಭ್ಯಾಸ, ಹಣಕಾಸಿನಲ್ಲಿ ಭರ್ಜರಿ ಅವಕಾಶ

2026ರ ಏಪ್ರಿಲ್ ತಿಂಗಳಲ್ಲಿ ವೃಷಭ ರಾಶಿಯವರ ಗ್ರಹಗತಿಗಳ ಆಧಾರದ ಮೇಲೆ ವೃತ್ತಿ, ವಿದ್ಯಾಭ್ಯಾಸ, ಹಣಕಾಸು ಮತ್ತು ಕೌಟುಂಬಿಕ ಜೀವನದ ಫಲಗಳನ್ನು ಇಲ್ಲಿ ವಿವರಿಸಲಾಗಿದೆ. ವಿದ್ಯಾರ್ಥಿಗಳಿಗೆ ಇದು ಉತ್ತಮ ಸಮಯ, ಆದರೆ ಹಣಕಾಸಿನಲ್ಲಿ ಏರಿಳಿತವಿರಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಇದೆ. ಕೆಲಸದಲ್ಲಿ ಒತ್ತಡವಿರಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಪರಿಹಾರವಾಗಿ ಮಹಾಲಕ್ಷ್ಮಿ ಅಷ್ಟಕ ಪಠಿಸಿ.

ಈ ರಾಶಿಯವರಿಗೆ ಎಪ್ರಿಲ್​​ ತಿಂಗಳು ಲಕ್ಕೋ ಲಕ್ಕು: ಉದ್ಯೋಗ, ವಿದ್ಯಾಭ್ಯಾಸ, ಹಣಕಾಸಿನಲ್ಲಿ ಭರ್ಜರಿ ಅವಕಾಶ
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Mar 26, 2026 | 4:32 PM

Share

2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆ ಮತ್ತು ಗೋಚಾರ ಫಲಗಳ ಆಧಾರದ ಮೇಲೆ ವೃಷಭ ರಾಶಿಯವರಿಗೆ ತಿಂಗಳಲ್ಲಿ ಯೋಜನೆಗೆ ಅನುಕೂಲಕರವಾಗಲಿದೆ. ಈ ರಾಶಿಗೆ ಕೃತ್ತಿಕಾದ ಮೂರು ಪಾದ, ರೋಹಿಣಿಯ ನಾಲ್ಕು ಪಾದ ಹಾಗೂ ಮೃಗಶಿರಾದ ಎರಡು ಪಾದಗಳು ಬರಲಿವೆ. ರೋಹಿಣೀ ನಕ್ಷತ್ರಕ್ಕೆ ವೃಷಭ ರಾಶಿಗೆ ಹೇಳಿದ ಪೂರ್ಣ ಫಲ ಸಿಗಲಿದೆ.

​ಉದ್ಯೋಗ ಮತ್ತು ವೃತ್ತಿ ಜೀವನ

​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ಸಮಾಧಾನಕರ ಬೆಳವಣಿಗೆಗಳಿರುತ್ತವೆ. ಹತ್ತನೇ ಮನೆಯ ಮೇಲೆ ಗ್ರಹಗಳ ದೃಷ್ಟಿ ಇರುವುದರಿಂದ ಕೆಲಸದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗಿರುತ್ತದೆ. ಸಹೋದ್ಯೋಗಿಗಳೊಂದಿಗೆ ವಿನಾಕಾರಣ ವಾದ ಮಾಡಬೇಡಿ. ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿರುವವರಿಗೆ ತಿಂಗಳ ದ್ವಿತೀಯಾರ್ಧದಲ್ಲಿ ಉತ್ತಮ ಅವಕಾಶಗಳು ಸಿಗಬಹುದು. ​ ವಿದ್ಯಾಭ್ಯಾಸ

​ವಿದ್ಯಾರ್ಥಿಗಳಿಗೆ ಇದು ಅತ್ಯುತ್ತಮ ಸಮಯ. ಪಂಚಮ ಸ್ಥಾನದ ಮೇಲೆ ಗುರುವಿನ ಶುಭ ದೃಷ್ಟಿ ಇರುವುದರಿಂದ ಏಕಾಗ್ರತೆ ಹೆಚ್ಚುತ್ತದೆ. ಉನ್ನತ ಮಟ್ಟದ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವವರಿಗೆ ಈ ತಿಂಗಳು ವಿಷಯಗಳನ್ನು ಆಳವಾಗಿ ಅರ್ಥೈಸಿಕೊಳ್ಳಲು ಸಹಕಾರಿಯಾಗಿದೆ. ಸಂಸ್ಕೃತ ಅಥವಾ ಸಾಂಪ್ರದಾಯಿಕ ವಿಷಯಗಳನ್ನು ಕಲಿಯುವವರಿಗೆ ವಿಶೇಷ ಯಶಸ್ಸು ಸಿಗಲಿದೆ.

​ಹಣಕಾಸು ಸ್ಥಿತಿ

​ಹಣಕಾಸಿನ ವಿಚಾರದಲ್ಲಿ ಏರಿಳಿತಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಅಡಿಕೆ ಅಥವಾ ಇತರ ತೋಟಗಾರಿಕಾ ಬೆಳೆಗಳಿಂದ ನಿರೀಕ್ಷಿತ ಲಾಭ ಬರುವ ಸಾಧ್ಯತೆ ಇದೆ. ಹೂಡಿಕೆ ಮಾಡುವ ಮೊದಲು ನುರಿತವರ ಸಲಹೆ ಪಡೆಯುವುದು ಉತ್ತಮ.

​ವಿವಾಹ ಮತ್ತು ಕೌಟುಂಬಿಕ ಜೀವನ

​ಕುಟುಂಬದಲ್ಲಿ ಮಂಗಳ ಕಾರ್ಯಗಳು ನಡೆಯುವ ಸೂಚನೆಗಳಿವೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಮನಸ್ತಾಪಗಳಿದ್ದರೂ ಅವು ಬೇಗನೆ ಬಗೆಹರಿಯುತ್ತವೆ. ಮನೆಯ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ​ ವಿದೇಶ ಪ್ರವಾಸ

​ಈ ತಿಂಗಳು ವಿದೇಶ ಪ್ರವಾಸದ ಯೋಗವು ಸ್ವಲ್ಪ ದುರ್ಬಲವಾಗಿದೆ. ಪ್ರಯಾಣಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ವೀಸಾ ಅಥವಾ ಪಾಸ್‌ಪೋರ್ಟ್ ತಾಂತ್ರಿಕ ತೊಂದರೆಗಳು ಎದುರಾಗಬಹುದು. ಅನಿವಾರ್ಯವಲ್ಲದಿದ್ದರೆ ವಿದೇಶ ಪ್ರವಾಸವನ್ನು ಮುಂದೂಡುವುದು ಸೂಕ್ತ.

​ಸಾಲ ಮತ್ತು ಆರೋಗ್ಯ

​ಹೊಸದಾಗಿ ಸಾಲ ಮಾಡುವ ಸಾಹಸಕ್ಕೆ ಕೈ ಹಾಕಬೇಡಿ. ಹಳೆಯ ಸಾಲಗಳನ್ನು ತೀರಿಸಲು ಈ ಸಮಯ ಪೂರಕವಾಗಿದೆ. ಕೆಲಸದ ಒತ್ತಡದಿಂದಾಗಿ ಮಾನಸಿಕ ಆಯಾಸವಾಗಬಹುದು. ಪಾದ ಅಥವಾ ಬೆನ್ನಿನ ನೋವಿನ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಏಪ್ರಿಲ್ ತಿಂಗಳಲ್ಲಿ ಶುಭ ದಿನಾಂಕಗಳಿವು – ೪, ೧೩, ೨೨ ಮತ್ತು ೩೦. ​ಅಶುಭ ದಿನಗಳಿವು ೮, ೯ ಮತ್ತು ೧೮. ​ದೋಷಕ್ಕೆ ಪರಿಹಾರವಾಗಿ ಪ್ರತಿದಿನ ಮಹಾಲಕ್ಷ್ಮಿ ಅಷ್ಟಕವನ್ನು ಅಥವಾ ಲಕ್ಷ್ಮೀನಾರಾಯಣ ಸ್ತೋತ್ರವನ್ನು ಮಾಡಿ.

– ಲೋಹಿತ ಹೆಬ್ಬಾರ್

Follow Us
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ