Horoscope 23 April: ರಾಶಿ ಭವಿಷ್ಯ; ಈ ರಾಶಿಯವರು ಇಂದು ಸಾಲಗಾರರ ಕಾಟದಿಂದ ಮುಕ್ತ

Rashi Bhavishya: 2024 ಏಪ್ರಿಲ್​​ 23 ಮಂಗಳವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 23 April: ರಾಶಿ ಭವಿಷ್ಯ; ಈ ರಾಶಿಯವರು ಇಂದು ಸಾಲಗಾರರ ಕಾಟದಿಂದ ಮುಕ್ತ
ಪ್ರಾತಿನಿಧಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Apr 23, 2024 | 6:33 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನಿ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ: ಮಧ್ಯಾಹ್ನ 03:39 ರಿಂದ ಸಾಯಂಕಾಲ 05:13ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:23 ರಿಂದ 10:57 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:31 ರಿಂದ 02:05ರ ವರೆಗೆ.

ಮೇಷ ರಾಶಿ: ಆರೋಗ್ಯವಾಗಿದ್ದರೆ ಎಂತಹ ಕಾರ್ಯವನ್ನೂ ಉತ್ತಮ ಆರೋಗ್ಯವಿದ್ದರೆ ಏನಾದರೂ ಸಾಧಿಸಬಹುದು. ಸಾಮಾಜಿಕವಾಗಿ ಮನ್ನಣೆ ಸಿಗುವ ದಿನ. ಶುಭಕಾರ್ಯಗಳಿಗೆ ಆಹ್ವಾನ ಬರಲಿದೆ. ಯಾರಾದರೂ ಹೊಗಳಿದರೆ ಹಿಗ್ಗಬೇಡಿ. ಶಿಕ್ಷಕರಾಗಿದ್ದರೆ ನಿಮಗೆ ನಿಮ್ಮ ವಿದ್ಯಾರ್ಥಿಗಳಿಂದ ಉಡುಗೊರೆ ಸಿಗಬಹುದು. ತಂದೆಯು ನಿಮ್ಮ ಪ್ರಗತಿಯನ್ನು ನಿರೀಕ್ಷಿಸುವಿರಿ. ಯೋಜನೆಯು ಮಸುಕಾಗಿದ್ದು ಮುಂದಿನ ದಾರಿ ಸರಿಯಾಗಿ ಗೊತ್ತಾಗದೇ ಇರಬಹುದು. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ತಂತ್ರಜ್ಞಾನವನ್ನು ನೀವು ಅತಿಯಾಗಿ ಬಳಸುವಿರಿ.

ವೃಷಭ ರಾಶಿ: ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಅನಿರೀಕ್ಷಿತ ಧನಲಾಭವು ನಿಮ್ಮ ನಿಶ್ಚಿಂತೆಗೆ ಕಾರಣವಾಗಲಿದೆ. ದೀರ್ಘಪ್ರಯಾಣವನ್ನು ಇಚ್ಛಿಸುವ ನೀವು ಆರೋಗ್ಯದ ಮೇಲೂ ಗಮನವಿರಿಕೊಳ್ಳಿ. ಯಾರದ್ದೋ ಮಾತನ್ನು ಕೇಳಿ ಕೆಲಸಗಳನ್ನು ಮಾಡಬೇಡಿ. ನಿಮ್ಮ ಮನಸ್ಸಿಗೆ ಅದು ಒಪ್ಪಿಗೆಯಾಗಲಿ. ಹಿರಿಯರಿಂದ ಸಂಪತ್ತು ಸಿಗಬಹುದು ಅಥವಾ ಉತ್ತಮಮಾರ್ಗದಿಂದ ಬರುವ ಸಂಪತ್ತು ನಿಮ್ಮನ್ನು ಖುಷಿಯಾಗಿಡಲಿದೆ. ನೂತನ ಉದ್ಯೋಗದ ಅನ್ವೇಷಣೆಯನ್ನು ನೀವು ಮಾಡಬೇಕಾಗುವುದು. ಸಾಲವನ್ನು ದಿನದ ಮೊದಲೇ ತೀರಿಸಿ ಪ್ರಶಂಸೆ ಗಳಿಸುವಿರಿ. ಎರಡೆರಡು ಕಾರ್ಯವನ್ನು ಮಾಡುವ ಸಂದರ್ಭವು ಬರಬಹುದು. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ.

ಮಿಥುನ ರಾಶಿ: ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಿ ಅವುಗಳನ್ನು ಬಿಡುವತ್ತ ಯೋಜನೆಗಳನ್ನು ರೂಪಿಸಿಕೊಳ್ಳುವಿರಿ. ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಸಮಾಧಾನದಿಂದ ಅವರಿಗೆ ಉತ್ತರಕೊಟ್ಟು ಕೆಲವು ದಿನಗಳ ಅನಂತರ ಪಾವತಿಸುವೆನು ಎಂದು ಹೇಳಿ. ಆಮೆಯ ಗತಿ ಸಾಗುವ ಬದುಕನ್ನು ಕಂಡು ನಿರಾಶರಾಗುವುದು ಬೇಡ. ಮಂದಗತಿ, ಶೀಘ್ರಗತಿ ಬದುಕಿನಲ್ಲಿ ಸಾಮಾನ್ಯವೆಂದು ತಿಳಿಯಿರಿ. ಭೂಮಿಯ ವ್ಯವಹಾರದಲ್ಲಿ ಅನುಭವಿಗಳನ್ನು ಜೊತೆಯಲ್ಲಿ ಇರಿಸಿಕೊಳ್ಳಿ. ಆಹಾರದಿಂದ ಆರೋಗ್ಯವು ಕೆಡಲಿದೆ. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ಅಮೂಲ್ಯವಾದ ಉಡುಗೊರೆಯನ್ನು ಕೊಡುವಿರಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರು ಹೇಳುವರು.

ಕರ್ಕ ರಾಶಿ: ಆಟ, ಓಟ, ಓದಿನಲ್ಲಿ ಆಸಕ್ತಿ ಇರಲಿದೆ. ಮಕ್ಕಳು ನಿಮ್ಮನ್ನು ಬಹಳ ಹಚ್ಚಿಕೊಳ್ಳುತ್ತಾರೆ. ಆತುರದ ನಿರ್ಧಾರಕ್ಕೆ ಹೋಗಬೇಡಿ. ಸಮಯಕ್ಕಾಗಿ ಕಾಯಿರಿ. ಎಲ್ಲವನ್ನೂ ಕಾಲವೇ ತಿಳಿಸುತ್ತದೆ. ಅದಕ್ಕೋಸ್ಕರ ನಿಮ್ಮ ಶ್ರಮವನ್ನು ವ್ಯರ್ಥಮಾಡಿಕೊಳ್ಳಬೇಡಿ. ಮಾಡುತ್ತಿರುವ ವ್ಯಾಪಾರದಲ್ಲಿ ಅಭಿವೃದ್ಧಿಯಾಗಲಿದೆ. ಓದಿನೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ಇರಿ. ಹೊಸ ವಸ್ತ್ರಗಳನ್ನು ಖರೀದಿಸುವಿರಿ. ನಿಮ್ಮ ವಿಚಾರವನ್ನು ಇತರರ ಮುಂದೆ ಬಹಿರಂಗವಾಗಿ ಇರಿಸಿ. ನೀವು ನಿಮ್ಮವರನ್ನು ಗ್ರಹಿಸುತ್ತ ಇರುವಿರಿ. ಅತಿವೇಗದ ಮಾತು ಇತರರಿಗೆ ಸ್ಪಷ್ಟವಾಗದೇ ಹೋಗಬಹುದು. ನಿಮ್ಮ ಅದೃಷ್ಟದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ತಾಯಿಯ ಮೇಲೆ ನಿಮ್ಮ ಕೋಪವನ್ನು ತೋರಿಸುವಿರಿ. ಇಕ್ಕಟ್ಟಿನಿಂದ ಹೊರಬರಲು ಮನಸ್ಸು ಮಾಡುವಿರಿ. ಆದರೂ ಕಷ್ಟವಾದೀತು.

ಸಿಂಹ ರಾಶಿ: ನೀವು ಅಪವಾದಗಳನ್ನು ಕೇಳುವ ಸ್ಥಿತಿ ಬರಬಹುದು. ಜಾಗರೂಕರಾಗಿ ಇರಿ. ಸಾಲವನ್ನು ಕೊಟ್ಟವರು ಇಂದು ಪೀಡಿಸಲಿದ್ದಾರೆ. ವ್ಯವಸ್ಥಾಪಕರಾಗಿದ್ದರೆ ನಿಮ್ಮ ಕೆಲಸವು ಮೇಲಧಿಕಾರಿಗಳಿಗೆ ಸಂತಸ ನೀಡುವುದು. ಹೊಸವಾಹನ ಖರೀದಿಗೆ ಮನಸ್ಸು ಮಾಡಿದರೆ ಸ್ವಲ್ಪ ಮುಂದೂಡಿ. ಸಮಯ ನೋಡಿ ಪ್ರೇಮವಿವಾಹದ ಪ್ರಸ್ತಾಪ ಮಾಡಿ. ಮನೆಯಲ್ಲಿ ಒಪ್ಪುತ್ತಾರೆ. ಇನ್ನೊಬ್ಬರಿಗೆ ತೊಂದರೆಯನ್ನು ಕೊಡುವ ವಿಧಾನವನ್ನು ಚಿಂತಿಸುವಿರಿ. ನೀವು ಯಾವುದಕ್ಕೂ ವಿಚಲಿತರಾಗದೇ ಮುಂದುವರಿಯುವುದು ಉತ್ತಮ. ಸಹೋದರನ ಕುಟುಂಬದಲ್ಲಿ ನಿಮ್ಮ ಮಧ್ಯಪ್ರವೇಶವು ಆಗಬೇಕಾಗಬಹುದು. ಧಾರ್ಮಿಕ ಕಾರ್ಯದಲ್ಲಿ ನಿಮ್ಮ ತೊಡಗುವಿಕೆ ಹೆಚ್ಚಿರುವುದು. ಶಿಕ್ಷಣಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಸಕಾಲಕ್ಕೆ ಆರ್ಥಿಕ ನೆರವು ಸಿಗಲಿದ್ದು ಸ್ವಲ್ಪ ನೆಮ್ಮದಿ ಸಿಗುವುದು. ನಿಮ್ಮ ಸುರಕ್ಷಿತ ತಾಣವನ್ನು ನೀವೇ ಆರಿಸಿಕೊಳ್ಳಿ. ಸಾಲದ ಕಾರಣಕ್ಕೆ ತಲೆ ಮರೆಸಿಕೊಳ್ಳಬಹುದು.

ಕನ್ಯಾ ರಾಶಿ: ನಿಮ್ಮ ಸಹಾಯಕರೇ ನಿಮಗೆ ತೊಂದರೆ ಕೊಟ್ಟಾರು. ಕಲಹವನ್ನು ಮಾಡಿಕೊಳ್ಳಲಿದ್ದೀರಿ. ಚೆನ್ನಾಗಿ ಮಾತನಾಡುತ್ತೇನೆಂದು ಏನನ್ನಾದರೂ ಹೇಳಿ ಬೇರೆಯವರಿಗೆ ನೋವನ್ನು ಕೊಡಬೇಡಿ. ಬಾಯ್ಚಪಲಕ್ಕೆ ಬೇರೆಯವರು ನೋವುಣ್ಣುವರು. ಸದಾ ನಗುಮುಖದಿಂದ ಇರಿ. ವ್ಯಾಪರ ಸುಗಮವಾಗಿ ಸಾಗುವುದು. ನಿಶ್ಚಿಂತೆಯಿಂದ ನಿದ್ರಿಸಬಹುದು. ನಾಳೆಯದನ್ನು ಹಂಬಲಿಸಿ ಇಂದು ಹಾಗೂ ನಾಳೆಯನ್ನು ಹಾಳು ಮಾಡಿಕೊಳ್ಳಬೇಡಿ. ಶ್ರಮದಷ್ಟು ಫಲ ಸಿಗುತ್ತದೆ. ಕಠಿಣ ಪರಿಶ್ರಮದ ಕಡೆ ನಿಮ್ಮ ಮನಸ್ಸು ತಯಾರಿರುವುದು. ದೇವರ ಕೃಪೆಯನ್ನು ಬೇಡಿ ಇಂದು ನೀವು ಮಾಡುವ ಕೆಲಸಕ್ಕೆ ಕೇಳಿಕೊಳ್ಳಿ. ಹೊಸ ವ್ಯವಹಾರವನ್ನು ಪ್ರಾರಂಭಿಸಿವರು ಉತ್ಸಾಹದ ಕಾರಣ ಉತ್ತಮ ಲಾಭವನ್ನು ಪಡೆಯಬಹುದು. ವಕೀಲವೃತ್ತಿಯವರಿಗೆ ಹೆಚ್ಚಿನ ಕಾರ್ಯವು ಬರಲಿದ್ದು ನಿಭಾಯಿಸುವ ಕಲೆಯನ್ನು ಕಲಿತಿರುವಿರಿ.

ತುಲಾ ರಾಶಿ: ನಿಮಗೆ ನಿಮ್ಮವರು ಸಹಾಯ ಮಾಡುವವರಿದ್ದಾರೆ. ಕಛೇರಿಯ ಕಾರ್ಯಕ್ಕೆಂದು ದೂರದ ಊರಿಗೆ ಹೋಗುವವರಿದ್ದೀರಿ‌. ವಾಹನದಿಂದ ತೊಂದರೆ ಇರಲಿದೆ. ಸ್ನೇಹಿತರು ಮಾಡಿದ ಕೆಟ್ಟ ಕೆಲಸದಿಂದ ನಿಮಗೆ ಕಂಟಕವು ಬರಬಹುದು. ಲೇವಾದೇವಿಯ ವ್ಯವಹಾರದಲ್ಲಿ ತೊಡಗಿದ್ದರೆ ನಷ್ಟವನ್ನು ಅನುಭವಿಸುವಿರಿ. ವಿದ್ಯಾಭ್ಯಾಸಕ್ಕೆಂದು ಪರ ಊರಿಗೆ ಹೋಗುವವರಿದ್ದೀರಿ. ಹಣದ ಉಳಿತಾಯವು ಸಾಕೆಂದು ಅನ್ನಿಸದು. ನೀವು ಮಾಡುವ ಕೆಲಸದಲ್ಲಿ ಜಾಣ್ಮೆಯು ಅವಶ್ಯಕವಾಗಿರುವುದು. ಹಿತಮಿತವಾದ ಮಾತುಗಾರಿಕೆಯಿಂದ ಎಲ್ಲರಿಗೂ ಹಿತವಾಗುವುದು. ಯಾರ ಜೊತೆಗೂ ಹುಡುಗಾಟವನ್ನು ಮಾಡುವುದು ಬೇಡ. ತಂದೆಯ ಆಸೆಯನ್ನು ಪೂರ್ಣ ಮಾಡಿ, ಅವರಿಗೆ ಖುಷಿಯನ್ನು ಕೊಡುವಿರಿ. ಮಂದಗತಿಯಲ್ಲಿ ಸಾಗುವ ನಿಮ್ಮ ಕೆಲಸದಿಂದ ಸಹೋದ್ಯೋಗಿಗಳು ಆಡಿಕೊಳ್ಳುವರು.

ವೃಶ್ಚಿಕ ರಾಶಿ: ನಿಧಾನಗತಿಯ ಕೆಲಸವು ನಿಮ್ಮ ಮನಃಸ್ಥಿತಿಗೆ ಹೊಂದದಿರಬಹುದು. ಕಾರಣಾಂತರಗಳಿಂದ ಖರ್ಚು ಹೆಚ್ಚಾಗಬಹುದು. ಹಿತಶತ್ರುಗಳು ಕತ್ತಿಯನ್ನು ಮಸೆಯುತ್ತಲೇ ಇದ್ದಾರು. ಕುಟುಂಬದಲ್ಲಿ ಮಾತಿನ ಚಕಮಕಿ ನಡೆಯಬಹುದು. ಪತಿ – ಪತ್ನಿಯರ ನಡುವೆ ವಿರಸಭಾವವು ಏಳಬಹುದು. ಮನಸ್ಸು ಹೇಳಿದಂತೆ ಕೇಳದೇ ಸಮಾಧಾನದಿಂದ ಇರಿ. ಮನಸ್ತರಂಗ ನಿಸ್ತರಂಗವಾಗುವುದು. ಇಂದಿನ ಕಾರ್ಯವನ್ನು ಮಾಡಲು ಹಣವು ಬೇಕಾದೀತು. ಅನೇಕ ರೀತಿಯ ಫಲಗಳನ್ನು ನೀವು ಪಡೆಯಲಿದ್ದು ಕೋಪ ನಿಯಂತ್ರಿಸಬೇಖಾಗುವುದು. ಪ್ರವಾಸದಲ್ಲಿ ಇರುವವರಿಗೆ ಆಹಾರದ ವ್ಯತ್ಯಾಸದಿಂದ ಕಷ್ಟವಾಗುವುದು. ಸಂಶೋಧನೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯದಲ್ಲಿ ಪ್ರವೃತ್ತರಾಗುವರು. ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಯಶಸ್ಸು ಸಿಗುವುದು. ನಿಮ್ಮನ್ನು ಅನುಕರಣೆ ಮಾಡಬಹುದು.

ಧನು ರಾಶಿ: ನೀವು ಹಾಕಿಕೊಂಡ ಯೋಜನೆಗಳಿಗೆ ಕುಟುಂಬದ ಸಹಾಯವು ಲಭ್ಯವಾಗಲಿದೆ. ಭೂಮಿಯ ಕ್ರಯ ಮತ್ತು ವಿಕ್ರಯಗಳ ವಿಷಯದಲ್ಲಿ ಲಾಭವನ್ನು ಕಾಣಬಹುದಾಗಿದೆ. ಸಹೋದರರ ನಡುವೆ ಭಿನ್ನಾಭಿಪ್ರಾಯಗಳು ನಡೆಯಬಹುದು. ಕಣ್ಣಿಗೆ ಸಂಬಂಧಿಸಿದ ರೋಗಗಳು ಬರಬಹುದು. ನೀವಿಂದು ಅನ್ಯಥಾ ಶರಣಂ ನಾಸ್ತಿ ಎಂದು ದೇವರ ಮೊರೆ ಹೋಗುವಿರಿ. ವಿದ್ಯಾರ್ಥಿಗಳ ಮನಸ್ಸು ಅಧ್ಯಯನದಲ್ಲಿ ತೊಡಗುತ್ತದೆ. ತಂದೆಯ ಜೊತೆ ವೈಮನಸ್ಯವಾಗಿದ್ದು ಇಂದು ಸಂಬಂಧವು ಸುಧಾರಿಸುವುದು. ಹೊಸ ಜೀವನದಲ್ಲಿ ಪ್ರೀತಿ ಹೆಚ್ಚಾಗಿರುವುದು. ವ್ಯಾಪಾರದಲ್ಲಿ ಚಾಣಕ್ಷತೆಯಿಂದ ಲಾಭವನ್ನು ಪಡೆಯುವಿರಿ. ಸಹೋದರಿಯ ಜವಾಬ್ದಾರಿಯೂ ನಿಮಗೆ ಬರಲಿದ್ದು ನಿಮ್ಮ ಜವಾಬ್ದಾರಿ ಹೆಚ್ಚಾಗುವುದು. ಭೂಮಿಯ ವ್ಯವಹಾರವು ಪಾಲುದಾರರ ಸಹಕಾರದಿಂದ ಸುಗಮವಾಗಿ ಸಾಗಲಿದೆ.

ಮಕರ ರಾಶಿ: ನಿಮ್ಮ ಆಲೋಚನಗಳಿಗೆ ಇಳ್ಳೆಯ ಪ್ರತಿಕ್ರಿಯೆ ಸಿಗಲಿದೆ. ದೇಶಗಳಿಗೆ ವಸ್ತುಗಳನ್ನು ಕಳುಹಿಸುವ ಉದ್ಯೋಗವನ್ನು ಮಾಡುತ್ತಿದ್ದರೆ ಅವರಿಗೆ ಲಾಭವಿದೆ. ಕಾರ್ಯದ ನಿಮಿತ್ತ ಅನ್ಯಸ್ಥಳಕ್ಕೆ ಹೋಗಬೇಕಾಗಿ ಬರಬಹುದು. ಅಲ್ಲಿಯೇ ಇಂದಿನ ನಿಮ್ಮ ವಾಸವಾಗಲಿದೆ. ಊಟ, ನಿದ್ರೆ, ಆರೋಗ್ಯದ ಬಗ್ಗೆ ನಿಮ್ಮ ಹೆಚ್ಚಿನ ಗಮನ ಅಗತ್ಯ. ದಾಂಪತ್ಯದ ಉತ್ತಮ ಹಾಗೂ ಖುಷಿಯ ದಿನವನ್ನು ಅನುಭವಿಸುವಿರಿ. ಅಪರಿತರು ನಿಮಗೆ ಸಹಾಯವನ್ನು ಮಾಡಲಿದ್ದಾರೆ. ಇಂದು ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗಲಿದೆ. ಕಚೇರಿಯಲ್ಲಿ ಉತ್ತಮವಾದ ವಾತಾವರಣದ ಉತ್ಸಾಹದಿಂದ ಇರುವಿರಿ. ಜಾಣ್ಮೆಯಿಂದ ಮಾಡಿದ ವ್ಯವಹಾರಕ್ಕೆ ಪ್ರಶಂಸೆ ಸಿಗಲಿದೆ. ಬಯಸಿದ್ದನ್ನು ಪಡೆದುಕೊಳ್ಳುವ ಅರ್ಹತೆ ನಿಮಗೆ ಬರಲಿದೆ. ಶಿಸ್ತನ್ನು ಬಿಡದೇ ಪಾಲಿಸುವುದು ನಿಮಗೆ ಗೌರವವನ್ನು ತಂದು ಕೊಡುವುದು. ಶಿಸ್ತುಬದ್ಧವಾದ ವ್ಯವಹಾರದಿಂದ ನಿಮಗೆ ಹೊಗಳಿಕೆ ಸಿಗುವುದು.

ಕುಂಭ ರಾಶಿ: ಇಂದಿನ ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತಿರುವಂತೆ ಕಾಣಬಹುದು. ಕೃಷಿಯನ್ನು ಅವಲಂಬಿಸಿ ಬದುಕುವವರಿಗೆ ಅಲ್ಪ ಲಾಭವೂ ಸಿಗಲಿದೆ‌. ವಿದ್ಯಾರ್ಥಿಗಳು ಹತ್ತಾರು ಗೊಂದಲಗಳನ್ನು ಇಟ್ಟುಕೊಳ್ಳಲಿದ್ದಾರೆ. ಎಂದೂ ಇರುವ ಶತ್ರುಗಳು ಇಂದು ನಿಮಗೆ ಏನಾನ್ನಾದರೂ ಮಾಡಬೇಕು ಎನ್ನುವ ಹೊಂಚನ್ನು ಹಾಕಬಹುದು. ಇನ್ನೊಬ್ಬರ ಸಹಾಯವನ್ನು ಪಡೆದು ಅಪಾಯದಿಂದ ಪಾರಾಗುವಿರಿ. ಅವಿಶ್ರಾಂತ ಕೆಲಸವು ನಿಮಗೆ ಆಯಾಸವನ್ನು ನೀಡುವುದು. ಧಾರ್ಮಿಕವಾಗಿ ಹಣವನ್ನು ವ್ಯಯಿಸಲಿದ್ದೀರಿ. ಕುಟುಂಬದಲ್ಲಿ ನಿಮ್ಮ ವಿವಾಹದ ಕುರಿತು ಚರ್ಚೆಯಾಗುವುದು. ನಿಮಗಾಗಿ ಅನುಕೂಲಕರ ವಾತಾವರಣವನ್ನು ಸಿದ್ಧ ಮಾಡುವರು. ಪ್ರೀತಿಯಲ್ಲಿ ಇಂದು ಸಮಯ ಸರಿಯುವುದೇ ಗೊತ್ತಾಗದು. ಇಂದು ನಡೆಯುವ ತಪ್ಪಿಗೆ ನೀವೇ ಕಾರಣರಾಗುವಿರಿ.

ಮೀನ ರಾಶಿ: ಇಂದು ಉದ್ಯಮವು ನಿಮಗೆ ಲಾಭವನ್ನು ತರಲಿದೆ. ಹಲವು ದಿನಗಳಿಂದ ಅನಾರೋಗ್ಯದ ಕಾರಣ ಕಿರಿಕಿರಿಯನ್ನು ಅನುಭವಿಸುತ್ತಿರುವ ನೀವು ಇಂದು ಆರೋಗ್ಯದತ್ತ ಮುಖಮಾಡುವಿರಿ. ನಿಮ್ಮ ಕಾರ್ಯದಕ್ಷತೆಯನ್ನು ಕಂಡು ಉದ್ಯೋಗದಲ್ಲಿ ಉನ್ನತಸ್ಥಾನಕ್ಕೆ ಏರುವ ಸಾಧ್ಯತೆ ಇದೆ‌. ಕುಟುಂಬದಿಂದ ನಿರೀಕ್ಷಿಸುವ ವಸ್ತುವು ನಿಮಗೆ ಸಿಗಲಿದೆ. ಪ್ರೇಮನಿವೇದನೆಯನ್ನು ಮಾಡಿ ನಿಮ್ಮೊಳಗೆ ಇರುವ ಗೊಂದಲವನ್ನು ಪರಿಹರಿಸಿಕೊಳ್ಳುವಿರಿ. ಹೊಸ ಉದ್ಯೋಗದಿಂದ ನೀವು ಸಾಕಷ್ಟು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಮನೆಯಲ್ಲಿ ಇರುವಂತಹವರ ಆರೋಗ್ಯದ ಬಗ್ಗೆ ಚಿಂತೆ ಮಾಡಬೇಡಿ. ಅವರ ಆರೋಗ್ಯವೂ ಚೇತರಿಕೆ ಕಾಣುವುದು. ಇಂದು ನಿಮ್ಮ ಆದಾಯವನ್ನು ಇಮ್ಮಡಿಗೊಳಿಸಿಕೊಳ್ಳಬಹುದು. ಮಕ್ಕಳಿಗೆ ಬೇಕಾದ ವಿದ್ಯಾಭ್ಯಾಸವನ್ನು ಕೊಡಲು ಸಾಲ ಮಾಡಬೇಕಾದೀತು. ಆದಾಯದ ಮೂಲವು ಬದಲಾಗಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ