Horoscope 5 April: ದಿನಭವಿಷ್ಯ; ಯಾವ ರಾಶಿಗೆ ಏನು ಫಲ? ಯಾವ ರಾಶಿಯವರಿಗೆ ಅದೃಷ್ಟ?

Rashi Bhavishya: 2024 ಏಪ್ರಿಲ್​​ 05 ಶುಕ್ರವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 5 April: ದಿನಭವಿಷ್ಯ; ಯಾವ ರಾಶಿಗೆ ಏನು ಫಲ? ಯಾವ ರಾಶಿಯವರಿಗೆ ಅದೃಷ್ಟ?
ದಿನಭವಿಷ್ಯ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Apr 05, 2024 | 1:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸಾಧ್ಯ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:03ರಿಂದ ಮಧ್ಯಾಹ್ನ 12:35ರ ವರೆಗೆ, ಯಮಘಂಡ ಕಾಲ 15:40 ರಿಂದ 17:12 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:59 ರಿಂದ ಬೆಳಗ್ಗೆ 09:31ರ ವರೆಗೆ.

ಮೇಷ ರಾಶಿ :ಇಂದು ನಿಮ್ಮ ಹಿಂದಿನ ಶ್ರಮಕ್ಕೆ ಫಲವು ಪ್ರಾಪ್ತವಾಗಿ ಖುಷಿ ಎನಿಸುವುದು. ಜೀವನದಲ್ಲಿ ನಮಗಾಗಿ ನಾವು ಬದುಕಬೇಕೆ ಹೊರತು ಬೇರೆಯವರಿಗೋಸ್ಕರವಲ್ಲ ಎಂಬ ಯೋಚನೆ ಬರುವುದು. ಜೀವನದಲ್ಲಿ ಮನುಷ್ಯ ಎಷ್ಟು ನೋವು ಅವಮಾನ ಪಡುತ್ತಾನೋ, ಅಷ್ಟೇ ಚೆನ್ನಾಗಿ ಬದುಕುತ್ತಾನೇ. ಬದಲಾವಣೆಯೆ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ನೆಮ್ಮದಿ ನಿಮ್ಮೆದುರು ನಿಲ್ಲುವುದು. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.

ವೃಷಭ ರಾಶಿ :ನಿಮ್ಮ ಸ್ವಭಾವಕ್ಕೆ ಜನರು ಸಕ್ಕರೆಯನ್ನು ಇರುವೆಗಳು ಮುತ್ತಿದಂತೆ ಜನರು‌ ಮುತ್ತುವರು. ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಅಥವಾ ವಿಷಯಾಂತರಿಸಿ. ಪಿತ್ರಾರ್ಜಿತ ಸಂಪತ್ತು ನಿಮಗೆ ಉಪಯೋಗವಾಗಬಹುದು. ಸಂಗಾತಿಯೊಡನೆ ಸಲ್ಲಾಪ ಮಾಡುವಿರಿ. ಸಂಪತ್ತು ನಿಮ್ಮ ಶ್ರಮಕ್ಕನುಸಾರ ಸಿಗಲಿದೆ. ನಿಮ್ಮ ಬರೆವಣಿಗೆಯಿಂದ, ಮಾತಿನಿಂದ‌ ನಿಮಗೆ ಕೀರ್ತಿಯು ಲಭ್ಯ. ಇಂದು ನೀವು ಯಾರದೋ ವಿರುದ್ಧವಾಗಿ ಹೋಗುವುದು ಬೇಡ. ಲೆಕ್ಕಪತ್ರವನ್ನು ಸರಿಯಾಗಿ ಇಟ್ಟುಕೊಳ್ಳಿ. ಕ್ರಿಯಾಶೀಲತೆಗೆ ನಿಮಗೆ ಯಾವುದೇ ಪ್ರಶಂಸೆ ಸಿಗದಿರುವುದು ನಿಮಗೆ‌ ಕಷ್ಟವಾದೀತು. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಇಲ್ಲವಾದರೆ ದೇಹಾರೋಗ್ಯ ಕೆಡಬಹುದು. ಉತ್ತಮ ಆರೋಗ್ಯದಿಂದ ಆನಂದಿಸುವಿರಿ. ನಿಮ್ಮವರ ಬಗ್ಗೆ ಸರಿಯಾದ ಭಾವನೆಯು ಇಲ್ಲದೇ ಇರಬಹುದು.

ಮಿಥುನ ರಾಶಿ :ಇಂದು ದಾಂಪತ್ಯಜೀವನದಲ್ಲಿ ಬಹಳ ಗೊಂದಲವಾಗಬಹುದು. ಇನ್ಮೊಂದು ಜೀವವನ್ನು ಗರ್ಭದಲ್ಲಿ ಹೊತ್ತಿರುವವರು ನಡಿಗೆಯಲ್ಲೂ ಮನಸ್ಸಿನಲ್ಲೂ ಮಾತಿನಲ್ಲೂ ಎಚ್ಚರ, ಸಾವಧಾನತೆಯಿರಲಿ. ಸ್ನೇಹಿತರ ಜೊತೆ ಸೇರಿ ಹಣವನ್ನು ಖರ್ಚು ಮಾಡಲು ಮುಂದಾಗುತ್ತೀರಿ. ನಿಮ್ಮ ನ್ಯೂನತೆಗಳು ಇನ್ನೊಬ್ಬರ ಬಾಯಿಗೆ ಸಿಕ್ಕ ರಸಗವಳದಂತೆ ಚಪ್ಪರಿಸಿ ಸೇವಿಸುತ್ತಿರುತ್ತಾರೆ. ಇಂದು ನಿಮ್ಮ ಪೂರ್ವಜರ, ಹಿರಿಯರ ಕಾರ್ಯಗಳು ನೆನಪಾಗುವುದು. ಸಂಗಾತಿಯ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ಗೊತ್ತಿಲ್ಲದೇ ಯಾರ ಬಗ್ಗೆಯೂ ನಿಮ್ಮ ಮಾತುಗಳನ್ನು ಹರಿ ಬಿಡುವುದು ಬೇಡ. ಅದೇ ನಿಮ್ಮ ತಲೆಯನ್ನು ದಿನವಿಡೀ ಕೊರೆಯಬಹುದು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆರೋಗ್ಯದ ಆರೈಕೆಯ ಬಗ್ಗೆ ಗಮನವಿರಲಿ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ.

ಕಟಕ ರಾಶಿ :ಇಂದು ನೀವು ಒಪ್ಪಿಕೊಂಡ ಕಾರ್ಯವನ್ನು ಬಿಡದೆ ಮುನ್ನಡೆಸು ಛಾತಿ ನಿಮ್ಮ ಯಶಸ್ಸಿನ ಗುಟ್ಟುಗಳಲ್ಲೊಂದು. ಗೊತ್ತಿದ್ದೂ ಉದ್ವೇಗಕ್ಕೆ ಒಳಗಾಗಬೇಡಿ. ಎದೆ ನೋವು ಕಾಣಿಸಿಕೊಂಡೀತು. ಶಸ್ತ್ರಚಿಕಿತ್ಸೆಯವರೆಗೂ ಒಯ್ಯಬಹುದು. ನಾಗರಾಜನಿಗೆ ಸುತ್ತು ಬನ್ನಿ. ಇಂದು ಹುಟ್ಟಿದ ಪ್ರೇಮವು ಕೆಲವೇ ದಿನದಲ್ಲಿ ಸಾಯುತ್ತದೆ. ಕಛೇರಿಯಲ್ಲಿ ಎಲ್ಲರ ಜೊತೆ ಸೌಹಾರ್ದದಿಂದ ಇರುವಿರಿ. ಅಧ್ಯಾತ್ಮದ ಚಿಂತನೆಯಿಂದ ನಿಮ್ಮ ಬದುಕಿನ ದಿಕ್ಕು ಬದಲಾಗುವ ಸಾಧ್ಯತೆ ಇದೆ. ಯಾರನ್ನೂ ನೀವು ಪೂರ್ಣವಾಗಿ ನಂಬಲಾರಿರಿ. ಸಂಗಾತಿಯ ಬಗ್ಗೆ ಕುತೂಹಲವಿರಬಹುದು. ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು.

ಸಿಂಹ ರಾಶಿ :ಇಂದು ಯಾರದೋ ಜೊತೆ ವ್ಯಾಪಾರದ ಕಾರಣಕ್ಕೆ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ನೀವು ವಾಹನವನ್ನು ಚಾಲನೆ ಮಾಡುವುದು ಬೇಡ. ಪರರ ದೃಷ್ಟಿ ನಿಮ್ಮ ಮೇಲೆ ಬೀಳಲಿದೆ. ಎಲ್ಲ ಸೋಲುಗಳನ್ನು ಪಾಠವನ್ನಾಗಿ ಸ್ವೀಕರಿಸಿ, ಸಂತೋಷವೂ ಸಿಗುವುದು. ಪುತ್ರೋತ್ಸವದ ಆನಂದ ನಿಮ್ಮ ಪಾಲಿಗಿದೆ‌. ನೆರೆ-ಹೊರೆಯವರ ಜೊತೆ ಜಗಳಕ್ಕೆ ಹೋಗಬೇಡಿ. ನೀವು ಕೊಟ್ಟ ಹಣವು ಬರಬೇಕಾದ ಕಡೆಯಿಂದ ಬಾರದೇ ಇರಬಹುದು. ಮರೆವಿನ ಶಕ್ತಿ ಅತಿಯಾದಂತೆ ತೋರುವುದು. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಹೊಸ ಯೋಜನೆಯನ್ನು ಪಡೆದುಕೊಳ್ಳುವಿರಿ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು. ಕೆಲವು ಹೊಸ ಅವಕಾಶಗಳು ಸಿಗುವ ಲಕ್ಷಣಗಳಿವೆ.

ಕನ್ಯಾ ರಾಶಿ :ನೀವು ಹೊಸ ವಸ್ತುಗಳನ್ನು ಖರೀದಿಸುವಿರಿ. ಇದರಿಂದ ಮನೆಯಲ್ಲಿ ಕಿರಿಕಿರಿಯ ವಾತಾವರಣವೂ ನಿರ್ಮಾಣವಾಗುವುದು. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ಔಷಧೀಯ ವಸ್ತುಗಳಿಂದ ಹೆಚ್ಚು ಲಾಭವಿರಲಿದೆ. ಯಾವ ಮಾತನ್ನೂ ಯೋಚಿಸದೇ ಕೊಡಬೇಡಿ. ಅದೇ ಮುಳುವಾದೀತು. ಸಂಗಾತಿಯ ಸೌಂದರ್ಯಕ್ಕೆ ಮಾರುಹೋಗಬೇಡಿ. ಎಲ್ಲರ ಜೊತೆ ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಆಪತ್ತು ಎದುರಾದಾಗ ಅಂಬಿಕೆಯನ್ನು ಆರಾಧಿಸಿ. ಯಾವ ಕಾರ್ಯವನ್ನೂ ಪೂರ್ಣವಾದ ಮನಸ್ಸಿನಿಂದ ಮಾಡಲಾರಿರಿ. ನಿಮ್ಮ ಬಗ್ಗೆ ನಂಬಿಕೆ ಕಡಿಮೆ ಆಗಬಹುದು. ಕುಟುಂಬದ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ವಿನಾಕಾರಣ ವಾಗ್ವಾದದಿಂದ ನೀವು ಬೇಸರವಾಗಬಹುದು. ಹಳೆಯ ಬಂಧುಗಳನ್ನು ಭೇಟಿಯಿಂದ ನಿಮ್ಮಲ್ಲಿ ಉತ್ಸಾವಿರುವುದು. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ.

ತುಲಾ ರಾಶಿ :ಇಂದು ಮಂದಗತಿಯಲ್ಲಿ ಸಾಗುತ್ತಿದ್ದ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳು ವೇಗವನ್ನು ಪಡೆಯುವುವು. ವ್ಯರ್ಥ ಓಡಾಟಗಳು ಆಗುತ್ತವೆ. ಆ ಕಾರ್ಯಕ್ಕೊಸ್ಕರ ಖರ್ಚನ್ನೂ ಮಾಡುವಿರಿ. ಸಂಗಾತಿಯೊಡನೆ ಸಂತೋಷದಿಂದ ಸಲ್ಲಾಪಮಾಡುತ್ತ ಸಮಯ ಸರಿಯುವುದು. ಭೂಮಿಯನ್ನು ಮಾರಾಟ ಮಾಡಲು ಪ್ರಯತ್ನಿಸಿದರೆ ನಿಮ್ಮ ಬೆಲೆಗೆ ಸರಿಹೊಂದುವಂತೆ ಖರೀದಿಯಾಗುವುದು. ಅತಿಯಾದ ಮಾಧುರ್ಯವು ದೇಹವನ್ನು ಹಾಳುಮಾಡುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿಮ್ಮ ಮಾತುಗಳಿಗೆ ಪ್ರಾಶಸ್ತ್ಯ ಸಿಗಬಹುದು. ಜಟಿಲ ಸಮಸ್ಯೆಗಳನ್ನು ಸರಳಗೊಳಿಸುವಿರಿ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ‌. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ :ಇಂದು ನಿಮ್ಮವರ ಅನಾರೋಗ್ಯವನ್ನು ಸರಿಪಡಿಸಿಕೊಳ್ಳುವತ್ತ ನಿಮ್ಮ ಗಮನವಿರಲಿದೆ. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ಬಹಳ ದಿನಗಳಿಂದ ಹೋಗಬೇಕು ಎಂದುಕೊಂಡ ಸ್ಥಳಗಳಿಗೆ ಹೋಗಿ ಬರುತ್ತೀರಿ. ನಿಮ್ಮ ಬಗ್ಗೆ ಪೂರ್ವಾಗ್ರಹದಿಂದ‌ ಕೂಡಿರುವವರಿಗೆ ನಿಮ್ಮ ನಿಜಸ್ಥಿತಿಯನ್ನು ತಿಳಿಸುವಿರಿ. ಸಂಪಾದನೆ ಹೆಚ್ಚಾಗುವುದು. ಮನೋರಂಜನೆಯ ಕಾರ್ಯಕ್ರಮಗಳಿಗೆ ಭಾಗವಹಿಸಬಹುದು. ಇಂದಿನ ನಿಮ್ಮ‌ ಕಾರ್ಯಗಳ ಬಗ್ಗೆ ಸ್ಪಷ್ಟತೆ ಇರಲಿ. ಯಾವುದನ್ನೂ ಸಡಿಲ ಮಾಡಿಕೊಳ್ಳದೇ ಮುಗಿಸಿ. ಚರಾಸ್ತಿಯನ್ನು ಉಳಿಸಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯಬಹುದು. ವೃತ್ತಿಯ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು. ಸಜ್ಜನರ ಕೂಟದಲ್ಲಿ ಭಾಗವಹಿಸುವಿರಿ. ಸಂಜೆಯ ವೇಳೆಗೆ ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳುವಿರಿ.

ಧನು ರಾಶಿ :ಬಹಳ ದಿನಗಳ ಅನಂತರ ನಿಮ್ಮ ವ್ಯಾಪಾರದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುವುದು. ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ಕುಟುಂಬಕ್ಕೆ ಸ್ವಲ್ಪ ಸಮಯವನ್ನು ಕೊಡಿ. ಅವರಿಗೆ ಏನು ಬೇಕು? ಏನು ಮಾಡಬೇಕು ಎಂಬುದನ್ನು ಅರಿತು ಕಾರ್ಯಪ್ರವೃತ್ತರಾಗಿ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡಬೇಡಿ.‌ ಇಂದು ನಿಮ್ಮ ಜವಾಬ್ದಾರಿಗಳ ಬಗ್ಗೆ ಕೂಲಂಕಷದ ಅಧ್ಯಯನವನ್ನು ಮೇಲಧಿಕಾರಿಗಳು ಮಾಡಿಯಾರು. ನಂಬಿಕೆಯನ್ನು ಉಳಿಸಿಕೊಳ್ಳುವತ್ತ ನಿಮ್ಮ ಯೋಚನೆ ಇರಲಿದೆ. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಇಂದು ಮಹಿಳೆಯರಿಗೆ ಶುಭ ದಿನ. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ.

ಮಕರ ರಾಶಿ :ನಿಮ್ಮಲ್ಲಿ ಹತಾಶೆಯ ಭಾವವು ಮೂಡುವುದು. ಅದನ್ನು ದೂರ ಮಾಡಿಕೊಳ್ಳಲು ಏನಾದರೂ ಇಷ್ಟವಾಗುವ ಚಟುವಟಿಕೆಯಲ್ಲಿ ಭಾಗವಹಿಸಿ. ಋಣಾತ್ಮಕ ಭಾವನೆಗಳೂ ದೂರವಾಗುವವು. ಮಾನಸಿಕ ನೆಮ್ಮದಿಯೂ ಸಿಗುವುದು. ಜೀವನೂ ಸರಳ ಎನಿಸಬಹುದು. ಕುಟುಂಬದವರ ಜೊತೆ ನಗುತ್ತಾ ಇರಿ. ಕಲಾವಿದರಿಗೆ ದೊಡ್ಡ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನ ಬರಬಹುದು. ಇಂದು ನಿಮ್ಮ ದೇಹಕ್ಕೆ ಪೀಡೆಯು ಅಧಿಕವಾದಂತೆ ತೋರುವುದು. ಏನನ್ನೂ ಮಾಡಲಾಗದ ಸ್ಥಿತಿಯಲ್ಲಿ ನೀವು ಇರುವಿರಿ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಬಾಕಿ ಇರುವ ಕೆಲಸದ ಕಡೆ ನಿಮ್ಮ ಗಮನ ಅವಶ್ಯಕ. ಗುರಿಯನ್ನು ಆದಷ್ಟು ಬೇಗ ಮುಟ್ಟಿ. ನಿಮ್ಮ ತಪ್ಪನ್ನು ಯಾರ ಮೇಲೋ ಹಾಕುವಿರಿ.

ಕುಂಭ ರಾಶಿ :ಇಂದು ನೀವು ಯಾರಮೇಲೋ ದ್ವೇಷವನ್ನು ಸಾಧಿಸುತ್ತ ಕೂರಬೇಡಿ. ಮನಸ್ಸು ಹಾಳಾಗುವುದು ಬಿಟ್ಟರೆ ಮತ್ತೇನೂ ಆಗದು. ಸಾಧ್ಯಾವಾದರೆ ಪ್ರೀತಿಸಿ, ಇಲ್ಲವೇ ತಟಸ್ಥವಾಗಿರಿ. ಬರುವ ಹಣವನ್ನು ನಿರೀಕ್ಷಿಸಬಹುದು. ಸಂಗಾತಿಯೊಂದಿಗೆ ಮನಸ್ತಾಪಗಳು ಏಳಬಹುದು. ಪ್ರೇಮನಿವೇದನೆಯನ್ನು ಮಾಡಲು ಹೋಗಬೇಡಿ. ತಿರಸ್ಕಾರಿಸಬಹುದು. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಉದ್ಯೋಗದಲ್ಲಿ ಕೆಲವು ಸವಾಲುಗಳು ಬರಬಹುದು. ಇಂದಿನ ಹಣದ ಅಗತ್ಯತೆಯನ್ನು ಸ್ನೇಹಿತರ ಮೂಲಕ ಪಡೆದುಕೊಳ್ಳುವಿರಿ. ಆಹಾರದಲ್ಲಿ ಕ್ರಮವನ್ನು ಇಟ್ಟುಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.

ಮೀನ ರಾಶಿ :ಇಂದು ನೀವು ಸುಮ್ಮನೇ ಕೆಲಸವಿಲ್ಲದೇ ಕುಳಿತಿರುವ ಬದಲು ಏನನ್ನಾದರೂ ಮಾಡಿ. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಿರಿ. ಕೊಟ್ಟಿರುವ ಜವಾಬ್ದಾರಿಯನ್ನು ಯೋಗ್ಯರೀತಿಯಲ್ಲಿ ಮಾಡಿ ಮುಗಿಸುವಿರಿ. ಸಂಪತ್ತನ್ನು ಉಳಿಸಲು ಯತ್ನಿಸಿದಷ್ಟೂ ಯಾವುದಾದರೂ ಒಂದು ರೀತಿಯಲ್ಲಿ ಖರ್ಚಾಗುವುದು. ನಿದ್ರೆಯಲ್ಲಿ ಕಂಡ ಕನಸುಗಳೆಲ್ಲ ಸತ್ಯವಾಗದು. ನಿಮ್ಮ ಮಾತಿಗೆ ಅಪರಿಚಿತರೂ ಮೂಕವಿಸ್ಮತರಾದಾರು. ಮಕ್ಕಳ ವ್ಯವಹಾರಕ್ಕೆ ಬೇಕಾದ ಹಣಕಾಸು ನೆರವನ್ನು ನಿಜವು ನೀಡುವಿರಿ. ಹೂಡಿಕೆಯಲ್ಲಿ ಆದ ಲಾಭವನ್ನು ನೀವು ಪಡೆಯುವಿರಿ. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು.

-ಲೋಹಿತ ಹೆಬ್ಬಾರ್-8762924271 (what’s app only)

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ