AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ಆರೋಗ್ಯ ವಿಚಾರದಲ್ಲಿ ಎಚ್ಚರ, ಹಣ ಕಳೆದುಕೊಳ್ಳಬೇಕಾದೀತು

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 03 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ಆರೋಗ್ಯ ವಿಚಾರದಲ್ಲಿ ಎಚ್ಚರ, ಹಣ ಕಳೆದುಕೊಳ್ಳಬೇಕಾದೀತು
ನಿತ್ಯಭವಿಷ್ಯImage Credit source: freepik
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 03, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶಿವ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 27 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:36 ರಿಂದ 02:08ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:59 ರಿಂದ 09:32ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:04 ರಿಂದ ಮಧ್ಯಾಹ್ನ 12:36ರ ವರೆಗೆ.

ಮೇಷ ರಾಶಿ: ಇಂದು ನೀವು ಮನೆಯಿಂದ ಹೊರಗೆ ಕೆಲಸ ಮಾಡುತ್ತಿದ್ದರೆ ಎಚ್ಚರಿಕೆ ಅಗತ್ಯವಾಗಿ ಬೇಕು. ನಿಮ್ಮ ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಕಾಣಿಸಿಕೊಳ್ಳುವುದು. ತಾಯಿಯ ಆರೋಗ್ಯದ ವಿಚಾರಕ್ಕೆ ಹಣವನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಬಗ್ಗೆ ನಕಾರಾತ್ಮಕ ಮನೋಭಾವವು ದೂರಾಗುವುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಭಯದ ಕಾರಣಕ್ಕೆ ನೀವು ಎಲ್ಲ ಕಾರ್ಯಗಳಿಂದ ಹಿಮ್ಮುಖರಾಗುವಿರಿ. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಯಾವುದೋ ಸಮಯಕ್ಕೆ ಆಹಾರವನ್ನು ಸ್ವೀಕರಿಸಬೇಕಾದೀತು. ನಿಮ್ಮ ಆದ ಕೆಲವು ಸಿದ್ಧಾಂತಗಳನ್ನು ಬಿಡುವುದು ಕಷ್ಟವಾಗುವುದು.

ವೃಷಭ ರಾಶಿ: ಯಾರ ಸಹಾನುಭೂತಿಯನ್ನು ನೀವು ಪಡೆದುಕೊಳ್ಳಲಾರಿರಿ. ನೀವು ಇತರರ ಸಲಹೆಯನ್ನು ಮಾತ್ರ ಅವಲಂಬಿಸಿದ್ದರೆ ಸಂಭಾವ್ಯ ಆರ್ಥಿಕ ನಷ್ಟಗಳ ಬಗ್ಗೆ ಜಾಗರೂಕರಾಗಿರಿ. ಇದಲ್ಲದೆ, ಭಾವನಾತ್ಮಕ ಅಡಚಣೆಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸಬಹುದು.  ಇಂದು ನೀವು ಎಲ್ಲ ಕಾರ್ಯಗಳನ್ನು ಶಿಸ್ತುಬದ್ಧವಾಗಿ ಮಾಡಲು ಪ್ರಯತ್ನಿಸುವಿರಿ. ಹಣಕಾಸಿನ ವ್ಯವಹಾರವು ಪೂರ್ಣಪ್ರಮಾಣದಲ್ಲಿ ನಿಮ್ಮದಾಗದು. ದ್ವೇಷವನ್ನು ಕಟ್ಟಿಕೊಳ್ಳುವ ಸಾಧ್ಯತೆ ಇದೆ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಸಜ್ಜನರ ಸಹವಾಸದಿಂದ ಕೆಲವು ಬದಲಾವಣೆಯನ್ನು ತಂದುಕೊಳ್ಳುವಿರಿ. ದೇವತಾಕಾರ್ಯದಲ್ಲಿ ಆಸಕ್ತಿ ಕಡಿಮೆ ಇರುವುದು.

ಮಿಥುನ ರಾಶಿ: ಇಂದು ನಿಮ್ಮ ಬಿಡುವಿಲ್ಲದ ದಿನದಲ್ಲಿಯೂ ಕುಟುಂಬದವೆ ಬಗ್ಗೆ ಕಾಳಜಿ ಇರಲಿದೆ. ವಿದ್ಯುತ್ ಉಪಕರಣಗಳಿಗೆ ಧನವ್ಯಯವಾಗಬಹುದು. ನಿಮ್ಮ ಮಾತುಕತೆಗಳು ಪ್ರಾಮಾಣಿಕರಾಗಿರಲಿ. ಏಕೆಂದರೆ ನಾಟಕೀಯವಾಗಿ ಬದುಕುವುದರಿಂದ ಏನೂ ಪ್ರಯೋಜನವಿಲ್ಲ. ಎಲ್ಲದಕ್ಕೂ ಯಶಸ್ಸು ಸಿಗಬೇಕು ಎಂಬ ಮನೋಭಾವವು ಬದಲಾದರೆ ಒಳ್ಳೆಯದು. ಉದ್ಯಮದ ವಿಸ್ತಾರದ ಕುರಿತು ನಿಮ್ಮ ಆಲೋಚನೆ ವಿಭಿನ್ನವಾಗಿ ಇರುವುದು. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುವಿರಿ. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು.

ಕಟಕ ರಾಶಿ: ನೀವು ನಿಮ್ಮ ಸ್ಥಾನವನ್ನು ಬಿಟ್ಟುಕೊಡಲು ತಯಾರಿಲ್ಲ. ಕುಟುಂಬ ಸದಸ್ಯರ ಬಗ್ಗೆ ನಿಮಗಿದ್ದ ನಿರೀಕ್ಷೆಗಳು ಹುಸಿಯಾಗಬಹುದು.  ಪ್ರೀತಿ ಇಂದು ನಿಮಗೆ ಸಂತೋಷವನ್ನು ತರಬಹುದು. ಕೆಲಸದಲ್ಲಿ ಉತ್ಪಾದಕ ದಿನವನ್ನು ನಿರೀಕ್ಷಿಸಿ. ಶುಭ ಸುದ್ದಿಯನ್ನು ನಿಮಗಾಗಿ ಕಾದಿದೆ. ಇಂದಿನ‌ ನಿಮ್ಮ ಸಂತೋಷಕ್ಕೆ ಬೇರೆ ಬೇರೆ ಕಾರಣಗಳು ಇರುವುದು.‌ ಮನೆಯವರನ್ನು ದೂಷಿಸುವುದು ನಿಮಗೆ ಸ್ವಭಾವದಂತೆ ಆಗಬಹುದು. ದೂರಾಲೋಚನೆಯು ಕ್ರಮಬದ್ಧವಾಗಿ ಇರಲಿ. ದಾಂಪತ್ಯದ ಕಲಹವು ಬೇರೆ ದಾರಿಯಲ್ಲಿ ನಡೆಯುವುದು. ಪರದೇಶಲ್ಲಿರುವವರಿಗೆ ಜೀವನ ಕಷ್ಟವೆನಿಸಬಹುದು. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ನಿಮ್ಮ‌ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ