AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರ ಆರೋಗ್ಯದತ್ತ ಎಚ್ಚರಿಕೆಯಿಂದ ಗಮನ ಹರಿಸಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ, ಶನಿವಾರ ಬಹುದಿನದ ಕಲಹ ಮುಕ್ತಾಯ, ಸಾಮಾಜಿಕ ಕಾರ್ಯಕ್ಕೆ ಸಮ್ಮಾನ, ವಿವಾಹಕ್ಕೆ ಸಿದ್ಧತೆ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಮನೆಯವರ ಆರೋಗ್ಯದತ್ತ ಎಚ್ಚರಿಕೆಯಿಂದ ಗಮನ ಹರಿಸಿ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 19, 2025 | 1:07 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಶಿವ, ಕರಣ: ವಣಿಜ, ಸೂರ್ಯೋದಯ – 06:17 am, ಸೂರ್ಯಾಸ್ತ – 06:45 pm, ಇಂದಿನ ಶುಭಾಶುಭಕಾಲ: ರಾಹು ಕಾಲ 09:25 – 10:58, ಯಮಘಂಡ ಕಾಲ 14:05 – 15:39, ಗುಳಿಕ ಕಾಲ 06:18 – 07:51

ಮೇಷ ರಾಶಿ: ಚರಾಸ್ತಿಯ ರಕ್ಷಣೆ ಕಷ್ಟ. ಆರ್ಥಿಕವಾಗಿ ನಿಮ್ಮನ್ನು ಯಾರಾದರೂ ಕೆಣಕಬಹುದು. ಸಿಕ್ಕಿದ್ದನ್ನು ಸದುಪಯೋಗ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡಿ. ಚಿಕ್ಕಚಿಕ್ಕ ವಿಷಯಗಳಲ್ಲಿಯೇ ಹೆಚ್ಚು ಶ್ರಮ ವಹಿಸುವಿರಿ. ಬಾಂಧವ್ಯದಲ್ಲಿ ಅಭಿಪ್ರಾಯ ಭೇದದಿಂದ ಕಲಹವಾಗಬಹುದು. ಹಣದ ನಷ್ಟದ ಸಂಭವವಿದೆ. ದೂರದ ಬಂಧುಗಳಿಂದ‌ ಕಾರ್ಯ ಮಾಡಬಹುದು. ವಿದ್ಯಾರ್ಥಿಗಳ ಸಾಧನೆಯ ಹಾದಿಯು ಸುಗಮವಾಗುವುದು. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ವಿಚಾರವೊರುವುದು. ದೂರಪ್ರಯಾಣದಿಂದ ಆತಂಕ ಸೃಷ್ಟಯಾಗಬಹುದು. ಮನದಲ್ಲಿ ಆತಂಕವಿದ್ದರೂ ಶಾಂತಿಯಿಂದ ವರ್ತಿಸುವಿರಿ. ಅವಶ್ಯಕವೆನಿಸಿದ ಹೂಡಕೆಗಳನ್ನು ಮಾಡಿ. ಸಂಧಾನದಲ್ಲಿ ಔಚಿತ್ಯ ಮಾತುಗಳನ್ನು ಆಡುವಿರಿ. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ಯಾರಾದರೂ ಸುಮ್ಮನೆ ನಿಮ್ಮ ಜೊತೆ ಕಲಹಕ್ಕಾಗಿ ಬರಬಹುದು.

ವೃಷಭ ರಾಶಿ: ನಕಾರಾತ್ಮಕ ವಿಚಾರಗಳು ನಿಮ್ಮ ಗಮನವನ್ನು ಹೆಚ್ಚು ಸೆಳೆಯುವುದು. ಕರಕುಶಲಗಳಲ್ಲಿ ನಿಮಗೆ ಆಸಕ್ತಿ ಹೆಚ್ಚಾಗುವುದು ಇಂದು. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ಹಣಕಾಸನ್ನು ಹೊಂದಿಸುವುದು ಇಂದು ಕಷ್ಟವಾಗುವುದು. ಹೊಸ ಪರಿಚಯಗಳಿಗೆ ದೂರವಿರಲು ಪ್ರಯತ್ನಿಸಿ. ತಮ್ಮಂದಿರು ಮತ್ತು ಅಣ್ಣಂದಿರೊಡನೆ ಜಗಳ ಆಗದಂತೆ ನೋಡಿಕೊಳ್ಳಿ. ಕೆಲ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬಡ್ತಿ ದೊರೆತು ವಿದೇಶಕ್ಕೆ ತೆರಳಬಹುದು. ಮಕ್ಕಳಿಗೆ ಪ್ರಸಿದ್ಧ ಸಂಸ್ಥೆಯ ಅಧಿಕಾರವು ಸಿಗಬಹುದು. ನಿಮ್ಮ ಮನಸ್ಸಿಗೆ ಒಪ್ಪುವಂತಹ ಕೆಲಸಗಳನ್ನು ಮಾತ್ರ ಮಾಡಿ. ನಿರ್ಧಾರವನ್ನು ಬದಲಿಸುವುದು ಸರಿಕಾಣದು. ಆಸ್ತಿಯ ವಿಚಾರದಲ್ಲಿ ನೀವು ಆಸಕ್ತಿಯನ್ನು ಕಳೆದುಕೊಳ್ಳುವಿರಿ. ಯಾರಾದರೂ ನಿಮ್ಮ ಕಿವಿಚುಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಲಾರಿರಿ. ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಅಹಂಕಾರವಾದೀತು.

ಮಿಥುನ ರಾಶಿ: ಕೆಟ್ಟ ನಿರ್ಧಾರಗಳನ್ನು ಮಾಡಿದ್ದು ಕಾಲ ಕಳೆದ ಅನಂತರ ಗೊತ್ತಾಗಲಿದೆ. ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುವಿರಿ. ವ್ಯಾಪಾರದಲ್ಲಿ ಹಣದ ಲಾಭಉಂಟಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ನಿಮ್ಮ ಯೋಜನೆಗಳು ನೆರವೇರಲಿವೆ. ಮನೆಯಲ್ಲಿನ ಬದಲಾವಣೆಗಳು ಸಂತೋಷ ತಂದಿಡುತ್ತವೆ. ಸ್ನೇಹಿತರೊಂದಿಗೆ ಭೆಟ್ಟಿಯಾಗುವ ಅವಕಾಶ ಸಿಗುತ್ತದೆ. ನಿಮ್ಮ ಶ್ರಮ ಯಶಸ್ಸಿನ ಮಾರ್ಗವನ್ನೇ ತೋರಿಸುತ್ತದೆ. ಪ್ರಯಾಣವೊಂದನ್ನು ಮುಂದೂಡಿ. ಗೃಹನಿರ್ಮಾಣದ ವಸ್ತುಗಳನ್ನು ಮಾರಾಟ ಮಾಡುವವರು ಅಧಿಕ ಲಾಭವನ್ನು ಪಡೆಯುವರು. ಹೊಸ ಉದ್ಯಮದ ಸಲುವಾಗಿ ಉದ್ಯಮಿಗಳನ್ನು ಭೇಟಿ ಮಾಡುವಿರಿ. ಸಾಲವನ್ನು ಮಾಡಬೇಕಾಗಿಬರಬಹುದು. ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು. ಅಕಸ್ಮಾತ್ ಹಣವು ಸಿಗುವುದು.

ಕರ್ಕಾಟಕ ರಾಶಿ: ಉದ್ಯೋಗದಲ್ಲಿ ಹೊಂದಲ ಸೃಷ್ಟಿಯಾಗಲಿದೆ. ಎರಡು ಕಾರ್ಯವನ್ನೂ ಒಟ್ಟಿಗೆ‌ ಮಾಡಲಾಗದು. ಮನೆಯ ಕೆಲಸದಲ್ಲಿ ಆಸಕ್ತಿ ಹೆಚ್ಚಿರುವುದು. ಮಂಗಳ ಕಾರ್ಯಗಳಿಗಾಗಿ ಸಿದ್ಧತೆಗಳು ಸುಲಭವಾಗಿ ನಡೆಯುತ್ತವೆ. ಶುಭಸುದ್ದಿ ಸಿಗುವ ಸಾಧ್ಯತೆ ಇದೆ. ಸ್ನೇಹಿತರೊಂದಿಗೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಹಣದ ಲಾಭವೂ ಲಭ್ಯವಾಗಬಹುದು. ಇಂದು ಖರ್ಚು ಮಾಡುತ್ತಿದ್ದರೂ ಸಂತೋಷದಲ್ಲಿ ಅದರ ಅರಿವೇ ಆಗದು. ಸಂತಾನದ ಲಾಭವು ನಿಮ್ಮ ಸಂತೋಷವನ್ನು ಅಧಿಕ ಮಾಡುವುದು. ಕುಟುಂಬ ಹಿರಿಯರಿಗೆ ಸೇರಿದ ಆಸ್ತಿಯಲ್ಲಿನ ಪಾಲು ಪಡೆಯುವಿರಿ. ಅವಶ್ಯಕತೆ ಇದ್ದಲ್ಲಿ ಉದ್ಯೋಗ ಬದಲಿಸಬಹುದು. ಹಣಕಾಸಿನ ವಿಚಾರದಲ್ಲಿ ದೃಢವಾದ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ನೀವು ಎಲ್ಲವನ್ನು ತಿಳಿದವರಂತೆ ನಿಮ್ಮ ನಡವಳಿಕೆ ಇರುವುದು. ಯಾರದೋ ತಪ್ಪಿನ ಕಾರಣ ವಾಹನದಿಂದ ಬೀಳುವ ಸಾಧ್ಯತೆ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು.

ಸಿಂಹ ರಾಶಿ: ನಿಮ್ಮ ಕಾರಣದಿಂದ ತಂದೆಗೆ ಧನಾಗಮನವಾಗಲಿದೆ. ಇಷ್ಟದ‌ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ನಿಮ್ಮ ಶ್ರಮಕ್ಕೆ ಕೂಡಲೇ ಫಲ ಸಿಗುತ್ತದೆ ಎನ್ನುವ ಧಾವಂತ‌ ಬೇಡ. ತಾಳ್ಮೆಯ ಅವಶ್ಯಕತೆ ಇದೆ. ಮಕ್ಕಳ ಸಂತೋಷಕ್ಕಾಗಿ ಕೆಲಸಮಾಡುವಿರಿ. ಉದ್ಯೋಗ ಅಥವಾ ವ್ಯವಹಾರದಲ್ಲಿ ಉತ್ತೇಜನಕಾರಿ ಬೆಳವಣಿಗೆ ಕಂಡುಬರುತ್ತದೆ. ಹಣದ ಸುಲಭ ಲಾಭ ಸಿಗಲಿದೆ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುತ್ತೀರಿ. ಇಂದು ಅನಾಯಾಸವಾಗಿ ಆದಾಯ ದೊರೆಯುತ್ತದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಉನ್ನತ ಮಟ್ಟ ತಲುಪುವುದು ನಿಮಗೆ ಖುಷಿ ಕೊಡುವುದು.‌ ಸಂಗಾತಿಯ ಸಹಕಾರದಿಂದ ನೀವು ಗೆಲುವಾಗಿ ಇರುವಿರಿ. ಗೌರವವಿಲ್ಲದೆ ಕಡೆ ಹೋಗಲು ನೀವು ಬಯಸುವುದಿಲ್ಲ. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ಕಳೆದ ಸಮಯವನ್ನು ಮೆಲುಕು ಹಾಕುವಿರಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ. ನೀವು ಕುಟುಂಬದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಬಯಸುವಿರಿ. ಇನ್ನೊಬ್ಬರ ಬಗ್ಗೆ ಏನೇನೋ ಕಲ್ಪನೆಗಳು ಇರಬಹುದು.

ಕನ್ಯಾ ರಾಶಿ: ಯಾವುದೋ ಕಾರಣಕ್ಕೆ ಕಾರ್ಯದ ಸ್ಥಳ ಬದಲಾವಣೆಯಾದರೂ ನಿಮಗೆ ಅನುಕೂಲವೇ. ನಿಮಗೆ ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಆದರೆ ಯಾವುದು? ಹೇಗೆ ಎನ್ನುವ ಬಗ್ಗೆ ಚಿತ್ರಣವಿಲ್ಲ. ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಸಾಲದ ವಿಷಯದಲ್ಲಿ ಯಶಸ್ಸು ದೊರಕುತ್ತದೆ. ಮನೆಯವರ ಆರೋಗ್ಯದತ್ತ ಎಚ್ಚರಿಕೆಯಿಂದ ಗಮನ ಹರಿಸಿ. ಸ್ನೇಹಿತರೊಂದಿಗೆ ವಿರೋಧ ಉಂಟಾಗದಂತೆ ಮಾತನಾಡುವುದು ಅಗತ್ಯ. ಕೆಲಸಗಳಲ್ಲಿ ವಿಘ್ನಗಳ ಸಾಧ್ಯತೆ ಇದೆ. ಕೆಲಸ ಕಾರ್ಯದಿಂದ ಸಮಾಜದಲ್ಲಿ ಗುರುತಿಸುವಿರಿ. ವಿದ್ಯಾರ್ಥಿಗಳ ಬಗ್ಗೆ ಯೋಚಿಸದೆ ಕರ್ತವ್ಯದಲ್ಲಿ ಭ್ರಷ್ಟರಾಗುವಿರಿ. ಸಂತೃಪ್ತಿಯ ಜೀವನವು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಅಶಿಸ್ತಿನಿಂದ ನಿಮಗೆ ಕೆಟ್ಟ ಹೆಸರು ಬರಬಹುದು. ಸಂಕುಚಿತ ಸ್ವಭಾವವನ್ನು ದೂರ ಮಾಡಿಕೊಳ್ಳುವುದು ಉತ್ತಮ. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ನಿದ್ರೆಯು ಸರಿಯಾಗದೇ ಮನಸ್ಸು ಭಾರವಾಗಬಹುದು. ಇಷ್ಟವಿಲ್ಲದ ವೃತ್ತಿಯನ್ನು ಅವಲಂಬಿಸಿ ಕಷ್ಟಪಡುವಿರಿ.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ