Astrology: ಮಕ್ಕಳ‌ ಬಗ್ಗೆ ನಿರ್ಲಕ್ಷ್ಯ ಬೇಡ, ಒತ್ತಡಕ್ಕೆ ಸಿಲುಕುವಿರಿ

ರಾಶಿ ಭವಿಷ್ಯ, ಶನಿವಾರ(ಅಕ್ಟೋಬರ್: 19): ಮನೆಯನ್ನು ಬದಲಾಯಿಸಬೇಕಾಗಬಹುದು. ಅನ್ಯಾಯದ ವಿರುದ್ಧ ನಿಲ್ಲುವುದು ಕಷ್ಟಕರವೆನಿಸಬಹುದು. ಯಂತ್ರೋಪಕರಣಗಳ ತಯಾರಿಯಲ್ಲಿ ಹಿನ್ನಡೆ ಸಾಧ್ಯತೆವಿದೆ. ಕಛೇರಿಯ ಒತ್ತಡದಿಂದ ಕುಟುಂಬದ ಜೊತೆ ಕಳೆಯುವುದು ಆಗದು. ಹಾಗಾದರೆ ಅಕ್ಟೋಬರ್: 19ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಮಕ್ಕಳ‌ ಬಗ್ಗೆ ನಿರ್ಲಕ್ಷ್ಯ ಬೇಡ, ಒತ್ತಡಕ್ಕೆ ಸಿಲುಕುವಿರಿ
ಮಕ್ಕಳ‌ ಬಗ್ಗೆ ನಿರ್ಲಕ್ಷ್ಯ ಬೇಡ, ಒತ್ತಡಕ್ಕೆ ಸಿಲುಕುವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2024 | 12:15 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಸಿದ್ಧಿ​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:50ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:45 ರಿಂದ 03:13ರವರೆಗೆ, ಗುಳಿಕ ಕಾಲ ಸಂಜೆ 06:26 ರಿಂದ 07:54 ರವರೆಗೆ.

ಧನು ರಾಶಿ: ಎರಡು ದೋಣಿಯಲ್ಲಿ ಕಾಲು ಹಾಕಿ ಸಾಗಲಾಗದು. ಖರ್ಚನ್ನು ‌ನಿಭಾಯಿಸುವ ಕೌಶಲವನ್ನು ಅನುಭವಿಗಳಿಂದ ಪಡೆಯಬೇಕು. ಇಂದು ದುಸ್ಸಾಧ್ಯವಾದ ಕಾರ್ಯವನ್ನೇ ಮಾಡಲು ಮುಂದಾಗುವಿರಿ. ನಿಮ್ಮ ಹಳೆಯ ವಸ್ತುಗಳನ್ನು ಆರ್ಥಿಕ ಸಮಸ್ಯೆಯಿಂದಾಗಿ ಮಾರಾಟ ಮಾಡುವಿರಿ. ಸ್ಥಿರಾಸ್ತಿಯನ್ನೂ ಕಳೆದುಕೊಳ್ಳುವ ಸ್ಥಿತಿಯು ಬರಬಹುದು. ನಿಮ್ಮದೆನ್ನುವ ಪ್ರತಿಷ್ಠೆಯು ಮುರಿದುಹೋದೀತು. ಬೇಕು ಎನಿಸಿದವರಿಗೆ ಸಹಾಯವನ್ನು ಮಾಡುವಿರಿ. ನೀವು ನಂಬಿಕೆಯನ್ನು ಒಂದು ಮಾತಿನಿಂದ ಕಳೆದುಕೊಳ್ಳುವಿರಿ. ಆಕಸ್ಮಿಕವಾಗಿ ಅಶುಭವಾರ್ತೆಯು ಬರಲಿದೆ. ಕಾರ್ಯದ ಒತ್ತಡವನ್ನು ನೀವು ಕಡಿಮೆ ಮಾಡಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸ ಬಗ್ಗೆ ಚಿಂತೆ ಇರಲಿದೆ. ಹೂಡಿಕೆಯನ್ನು ತಾಳ್ಮೆಯಿಂದ ಮಾಡಿ. ಮಕ್ಕಳ ಅತಿಯಾದ ಮಾತು ನಿಮಗೆ ಮುಜುಗರ ತಂದೀತು. ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಪೋಷಕರ ಸಹಕಾರ ಸಿಗಲಿದೆ.

ಮಕರ ರಾಶಿ: ಜಾಣ ಕಿವುಡುತನವನ್ನು ತೋರಿಸುವಿರಿ.‌ ಇಂದು ನಿಮಗೆ ನ್ಯಾಯಾಲಯದ ವಿಚಾರದಲ್ಲಿ ಬೇಸರವೆನಿಸಬಹುದು. ಹಿಂದೆ ಮಾಡಿದ ಹೂಡಿಕೆಯಿಂದ ಇಂದು ಪ್ರಯೋಜನವಾಗುವುದು. ಸ್ವಂತ ವ್ಯವಹಾರವು ಲಾಭದಾಯಕವಾಗುವುದು. ಮನೆಯನ್ನು ಬದಲಾಯಿಸಬೇಕಾಗಬಹುದು. ಅನ್ಯಾಯದ ವಿರುದ್ಧ ನಿಲ್ಲುವುದು ಕಷ್ಟಕರವೆನಿಸಬಹುದು. ಯಂತ್ರೋಪಕರಣಗಳ ತಯಾರಿಯಲ್ಲಿ ಹಿನ್ನಡೆ ಸಾಧ್ಯತೆವಿದೆ. ಕಛೇರಿಯ ಒತ್ತಡದಿಂದ ಕುಟುಂಬದ ಜೊತೆ ಕಳೆಯುವುದು ಆಗದು. ಯಾರದೋ ವಿಚಾರಕ್ಕೆ ನಿಮ್ಮನ್ನು ತೋರಿಸುವರು. ನೀವು ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಪಡುವಿರಿ. ಕೆಲವು ಉದ್ವೇಗದ ಮಾತುಗಳನ್ನು ಗೊತ್ತಿಲ್ಲದಂತೆ ಆಡುವಿರಿ.‌ ಸಂಬಂಧಗಳನ್ನು ನೀವು ಚೆನ್ನಾಗಿ ಇಟ್ಟುಕೊಳ್ಳುವಿರಿ. ನಿದ್ರೆಯಿಂದ ಸುಖವು ಸಿಗಲಿದೆ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ.

ಕುಂಭ ರಾಶಿ: ಸ್ಥಿರಾಸ್ತಿಯಿಂದ ಕೆಲವು ಲಾಭಗಳೂ ಆಗಲಿವೆ. ನಿಮ್ಮ ಗುರಿಯನ್ನು ಇಂದು ಯಾರಾದರೂ ಬದಲಿಸಬಹುದು. ವೃತ್ತಿಯ ಸ್ಥಳದಲ್ಲಿ ನಿಮಗೆ ಕಿರಿಕಿರಿ ಆಗಬಹುದು. ಲೆಕ್ಕ ಶೋಧಕರು ಹೆಚ್ಚಿನ ಒತ್ತಡದಲ್ಲಿ ಸಿಲುಕುವರು. ದೇವರ ಮೇಲೆ ಪೂರ್ಣ ಭಾರ ಹಾಕಿ ಕೈಕಟ್ಟಿ ಕೂರಬಾರದು. ಅಪರಿಚಿತರ ಜೊತೆ ಮಾತನ್ನು ಕಡಿಮೆ‌ ಮಾಡಿ. ನಿಮ್ಮ ವಸ್ತುವೇ ಆದರೂ ಅದನ್ನು ನಿಯಮಿತವಾಗಿ ಬಳಸಿಕೊಳ್ಳಬೇಕು. ಸಂಗಾತಿಯ ಮಾತು ನಿಮಗೆ ಇಷ್ಟವಾಗದೇ ಹೋಗದಬಹುದು. ಪ್ರೇಮದಿಂದ ಹೊರಬರುವುದು ನಿಮಗೆ ಕಷ್ಟ ಎನಿಸಬಹುದು. ರಾಜಕಾರಣಿಗಳು ಹಿನ್ನಡೆಯನ್ನು ಪಡೆಯುವರು. ನಿಮ್ಮ‌ ಮಾತಿಗೆ ವಿರೋಧವು ಬರುವುದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ. ಇಂದು ಸಮಯವನ್ನು ಸಂತೋಷದಿಂದ ಕಳೆಯುವಿರಿ. ಧಾರ್ಮಿಕ ಮುಖಂಡರು ತಮ್ಮ ನಿಲುವನ್ನು ಗಟ್ಟಿಮಾಡಿಕೊಳ್ಳಿ.

ಮೀನ ರಾಶಿ: ಕೆಡುಕಿನ ಆಲೋಚನೆಯಿಂದಲೇ ನೀವು ದೂರವಾಗುವುದು ಉತ್ತಮ. ನಿಮಗೆ ಸಿಗುವ ಕೆಲವು ಜವಾಬ್ದಾರಿಗಳಲ್ಲಿ ಹಿನ್ನಡೆಯಾಗಲಿದೆ. ನಿಮ್ಮ ಮಕ್ಕಳ‌ ಬಗ್ಗೆ ನಿರ್ಲಕ್ಷ್ಯ ಮಾಡುವುದು ಬೇಡ. ಸಂಗಾತಿಯನ್ನು ಹೆಚ್ಚು ಇಷ್ಟುಪಡುವಿರಿ. ಏನಾದರೂ ಉಡುಗೊರೆಯನ್ನು ಕೊಡುವಿರಿ. ಸ್ವಯಂ ಆತ್ಮಸ್ಥೈರ್ಯವನ್ನು ತುಂಬಿಕೊಳ್ಳುವ ಪ್ರಯತ್ನವನ್ನು ಮಾಡಲೇಬೇಕು. ಧಾರ್ಮಿಕ ಆಚರಣೆಗಳಲ್ಲಿ ಶ್ರದ್ಧೆ ಬರುವುದು. ಮಿತ್ರರ ಸಹಾಯದಿಂದ ವಾಹನವನ್ನು ಖರೀದಿಸುವಿರಿ. ವಿದೇಶೀಯ ವ್ಯಾಪಾರದಿಂದ ಲಾಭವಾಗುವುದು.‌ ನಿಮ್ಮ ವಿರುದ್ಧ ಯಾರಾದರೂ ಮಾತು ಕೇಳಿಬರಬಹುದು. ಹಿತಶತ್ರುಗಳಿರುವ ಕಾರಣ ವ್ಯವಹಾರದ ಬಗ್ಗೆ ಗಮನವು ಅವಶ್ಯಕ. ಅಪರಿಚಿತರ ಕರೆಯನ್ನು ನಿರ್ಲಕ್ಷಿಸಿ. ದೂರ ಪ್ರಯಾಣವನ್ನು ಮಾಡುವಿರಿ‌. ಕಛೇರಿಯಲ್ಲಿ ಅನಿರೀಕ್ಷಿತವಾಗಿ ಒತ್ತಡಕ್ಕೆ ಸಿಲುಕುವಿರಿ. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಶತ್ರುಗಳು ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ.

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ