AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ಯಾವ ಲಾಭವನ್ನು ನಗಣ್ಯ ಮಾಡುವುದು ಬೇಡ, ಬಂದಿದ್ದನ್ನು ಸ್ವೀಕರಿಸಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ, ಮಂಗಳವಾರ ಆಪ್ತರಿಂದ ಮೋಸ, ಇನ್ನೊಬ್ಬರ ಸಹಾನುಭೂತಿಯ ಅಪೇಕ್ಷೆ, ಹೊಸ ಕಾರ್ಯದಲ್ಲಿ ಕುತೂಹಲವಿರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Astrology: ಯಾವ ಲಾಭವನ್ನು ನಗಣ್ಯ ಮಾಡುವುದು ಬೇಡ, ಬಂದಿದ್ದನ್ನು ಸ್ವೀಕರಿಸಿ
ದಿನ ಭವಿಷ್ಯ
Follow us
ಗಂಗಾಧರ​ ಬ. ಸಾಬೋಜಿ
|

Updated on: May 20, 2025 | 12:12 AM

ಬೆಂಗಳೂರು, ಮೇ 20, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಮಂಗಳವಾರ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಐಂದ್ರ ಕರಣ : ಬಾಲವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 53 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:41 – 17:17, ಯಮಘಂಡ ಕಾಲ 09:17 – 10:53, ಗುಳಿಕ ಕಾಲ 12:29 – 14:05.

ತುಲಾ ರಾಶಿ: ಕೆಲಸಗಳು ನಿಮ್ಮ ನೆನಪಿಗೆ ಬಾರದೇ ಇರಬಹುದು. ಇದರಿಂದ ಅಪಮಾನವಾಗುವ ಸಾಧ್ಯತೆ ಇದೆ. ಇಂದು ಜಾಣತನದಿಂದ ಕೆಲಸ ಮಾಡಿಕೊಂಡು ನಿಶ್ಚಿಂತರಾಗುವಿರಿ. ಇದರಿಂದ ನೀವು ಜಟಿಲವಾದ ಸಮಸ್ಯೆಯನ್ನು ಸರಾಗವಾಗಿ ಪರಿಹರಿಸಿಕೊಳ್ಳುವಿರಿ. ಪುತ್ರೋತ್ಸವವಿರಲಿದೆ. ಹೂಡಿಕೆಯಲ್ಲಿ ಲಾಭದ ಸೂಚನೆಗಳಿವೆ. ಸ್ನೇಹಿತರ ಮೂಲಕ ಹೊಸ ಸಂಪರ್ಕಗಳು ದೊರೆಯಲಿವೆ. ಪ್ರೇಮ ಸಂಬಂಧದ ಗೊಂದಲಗಳು ತೀರಬಹುದು. ಹೊಸ ಉದ್ಯಮದ ಪ್ರಾರಂಭಕ್ಕೆ ಇದು ಉತ್ತಮ ದಿನ. ಹಾಸ್ಯಪ್ರಜ್ಞೆಯೇ ನಿಮ್ಮ ನಿಜವಾದ ಶಕ್ತಿ. ಸಂಗಾತಿಯ ಆರೋಗ್ಯ ಅಥವಾ ಮನಃಸ್ಥಿತಿಗೆ ಗಮನ ಹರಿಸಿ. ವ್ಯಾಪಾರದಲ್ಲಿ ಲಾಭವು ಅಧಿಕವಾಗಲಿದೆ. ಅನ್ಯರ ಕಾರಣದಿಂದ ವಿದೇಶದ ವ್ಯಾಮೋಹವು ಹೆಚ್ಚಾದೀತು. ಒಮ್ಮೆ ನಂಬಿಕೆಯನ್ನು ಇಟ್ಟುಕೊಂಡ ಅನಂತರ ಅನುಮಾನ ಬೇಡ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಸ್ವಪ್ನದ ಚಿಂತೆಯಲ್ಲಿಯೇ ಇರಬಹುದು.

ವೃಶ್ಚಿಕ ರಾಶಿ: ನಿಮ್ಮ ಸ್ಥೈರ್ಯವು ಹಲವರಿಗೆ ಸ್ಪೂರ್ತಿಯಾಗಲಿದೆ. ನಿಮ್ಮ ಪಿತ್ರಾರ್ಜಿತ ಆಸ್ತಿಯ ಸಮಸ್ಯೆಯು ಅನ್ಯರಿಂದ ಸರಿಯಾಗುವುದು. ಅತಿಯಾಗಿ ಭಾವನಾತ್ಮಕವಾಗುವುದು. ನಿಮ್ಮವರಿಂದ ಹೆಚ್ಚಿನದನ್ನು ನಿರೀಕ್ಷಿಸದಿರುವುದು ಒಳ್ಳೆಯದು. ಯಾವುದನ್ನೂ ಅಳುಕಿನಿಂದ ಮಾಡಲಾರಿರಿ. ಪ್ರೀತಿಯ ಮಹತ್ವವನ್ನು ನೀವು ಹೊಸದಾಗಿ ಅರಿಯುವಿರಿ. ಉತ್ತಮ ಯೋಜನೆಗಳ ಮೂಲಕ ಯಶಸ್ಸು ಗಳಿಸಬಹುದು. ಆರೋಗ್ಯದ ಬಗ್ಗೆ ಜಾಗರೂಕತೆ ಇರಲಿ. ಹೊಸ ಬದ್ಧತೆಗಳು ಆರಂಭವಾಗುವ ಸೂಚನೆ. ಇಂದು ನಿಮ್ಮ ಸಂಗಾತಿಯ ಸಾಂತ್ವನಮಯ ನಡೆ ಮನಸ್ಸಿಗೆ ಶಾಂತಿ ತರಲಿದೆ. ಕುಟುಂಬದ ಬೆಂಬಲ ನಿಮ್ಮಶಕ್ತಿ ಆಗಲಿದೆ. ವ್ಯವಹಾರ ಅಭಿವೃದ್ಧಿಗಾಗಿ ಹೊಸ ಯೋಜನೆಯನ್ನು ಪ್ರಯೋಗಕ್ಕೆ ತರುವಿರಿ. ನಿಮಗೆ ಇಷ್ಟವಾದವರ ಬಗ್ಗೆ ನಿಮಗೆ ಅನುಕಂಪ ಬರಬಹುದು. ಆರ್ಥಿಕ ವಿಚಾರವನ್ನು ಬಹಿರಂಗಪಡಿಸುವುದು ಬೇಡ. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ.

ಧನು ರಾಶಿ: ಯಾವ ಲಾಭವನ್ನೂ ನಗಣ್ಯ ಮಾಡುವುದು ಬೇಡ. ಬಂದಿದ್ದನ್ನು ಸ್ವೀಕರಿಸಿ, ಅನುಭವಿಸಿ. ನಿಮ್ಮ ದಿನಚರಿಯಲ್ಲಿ ವ್ಯತ್ಯಾಸವಾಗುವುದು. ನಿಮ್ಮ ಪ್ರತಿಭೆಗೆ ಇಂದು ಪರೀಕ್ಷಾಕಾಲವಾಗಲಿದೆ. ಇದರಿಂದ ನಿಮ್ಮ ಆತ್ಮಬಲವು ಅಧಿಕವಾಗುವುದು. ಆರ್ಥಿಕತೆಯ ದುರ್ಬಲದಿಂದಾಗಿ ದುರ್ಮಾರ್ಗದವನ್ನು ಅನುಸರಿಸುವ ಸಾಧ್ಯತೆ ಇದೆ. ಹಾಗಾಗಿ ನಿಮ್ಮ ಆಲೋಚನೆಗಳು ಸಕಾರಾತ್ಮಕವಾಗಿ ಇರಲಿ. ಹಣ ಮರಳಿ ಸಿಗುವ ಸಾಧ್ಯತೆ ಇದೆ. ಕಾರ್ಯಕ್ಷೇತ್ರದ ಕೆಲಸಗಳು ಮುಂದಿನ ದಿನಗಳಲ್ಲಿ ಫಲ ನೀಡಲಿವೆ. ಬಹುಕಾಲದ ನಿರೀಕ್ಷೆಯ ವಿಷಯದಲ್ಲಿ ಸಣ್ಣ ಕಂಡುಬರಬಹುದು. ಸಂಗಾತಿಯೊಂದಿಗೆ ಗುಣಮಟ್ಟದ ಕಳೆಯುವ ಅವಕಾಶ. ಮನಸ್ಸಿನಲ್ಲಿ ಶಾಂತಿ ಭಾಸವಾಗುವುದು. ತುರ್ತು ಕಾರ್ಯಗಳಿಂದ ನಿಮಗೆ ಒತ್ತಡ ಉಂಟಾಗಬಹುದು. ನಿಮ್ಮ ಮನೆಯ ಕಾರ್ಯವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭಿಸುವಿರಿ. ವೈಯಕ್ತಿಕ ಕಾರ್ಯದಲ್ಲಿ ಗಮನವು ಕಡಿಮೆ ಇರುವುದು.

ಮಕರ ರಾಶಿ: ಯಾವುದನ್ನೂ ಕೈಲಾಗದು ಎಂದು ನೀವೇ ನಿರ್ಧರಿಸಿ ಸುಮ್ಮನಾಗಬೇಡಿ. ಕೈಲಾದ ಪ್ರಯತ್ನವಂತೂ ಇರಲಿ. ನೀವು ಕಷ್ಟದಲ್ಲಿರುವ ಸ್ನೇಹಿತನಿಗೆ ಸಹಾಯ ಮಾಡುವಿರಿ. ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀವು ಪ್ರಯತ್ನಿಸುತ್ತೀರಿ. ನಿಮ್ಮ ಕೋಪವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಕ್ಕಳಿಂದ ಹಣಕಾಸು ಲಾಭ ಸಾಧ್ಯ. ಮನೆಯಲ್ಲಿ ಖರ್ಚು ಅಥವಾ ಇತರೆ ವಿಚಾರದಿಂದ ಗಲಾಟೆ ಉಂಟಾಗಬಹುದು. ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶಗಳ ಸೂಚನೆಗಳಿವೆ. ಪರಿಚಯಗಳು ಭವಿಷ್ಯದ ಯಶಸ್ಸಿಗೆ ಕಾರಣವಾಗುತ್ತವೆ. ಸಂಗಾತಿಯೊಂದಿಗೆ ಸಂತೋಷದ ಸಂವಾದ ಸಾಧ್ಯ. ನೀವು ಸಾಲವನ್ನು ಮಾಡಿದ್ದರೆ, ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಬಂಧುಗಳಿಂದಾದ ನೋವನ್ನು ನೀವು ಹೇಳಿಕೊಳ್ಳಲಾರಿರಿ. ಅನವಶ್ಯಕ ಸಂಪರ್ಕವನ್ನು ಕಡಿದುಕೊಳ್ಳಲು ಇಚ್ಛಿಸುವಿರಿ. ಕಾನೂನಿನ ಪಾಠವನ್ನು ಹಿರಿಯರು ಮಾಡುವರು.

ಕುಂಭ ರಾಶಿ: ಪರರ ಬಗ್ಗೆ ಸ್ಪಂದನೆ ಇರುವುದು.‌ ಕಷ್ಟದಲ್ಲಿ ಇರುವವರಿಗೆ ನಿಮ್ಮಿಂದಾದ ಸಹಾನುಭೂತಿ ಕೊಡುವಿರಿ. ನೀವು ಇಂದು ಕೆಲವು ಸಮಸ್ಯೆಗಳು ಇದ್ದರೂ ಅದನ್ನು ಬದಿಗೊತ್ತಿ ಸಕಾರಾತ್ಮಕ ಚಿಂತನೆಯಲ್ಲಿ ತೊಡಗುವಿರಿ. ನಿಮ್ಮ ಕಾರ್ಯಗಳು ಅಪರಿಪೂರ್ವಾಗುತ್ತದೆ ಎಂಬ ಭರವಸೆಯಿದ್ದರೆ ಅದನ್ನು ಬಿಟ್ಟುಬಿಡಿ‌. ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುತ್ತದೆ. ಸಾಲವಿದ್ದರೆ ಅದನ್ನು ತಿರುಗಿಸಿ ಮುಕ್ತಗೊಳ್ಳುವ ಅವಕಾಶವಿದೆ. ಮನೆಯವರೊಂದಿಗೆ ಕೆಲಸಗಳಲ್ಲಿ ನಿರತರಾಗುವ ದಿನ. ಪ್ರೇಮ ಜೀವನದಲ್ಲಿ ಹೊಸ ತಿರುವು ಮೂಡಲಿದೆ. ಕೆಲಸದ ಒತ್ತಡದಿಂದ ದೂರವಿದ್ದು ಸಂಬಂಧಗಳಿಗೆ ಹೆಚ್ಚು ಸಮಯ ನೀಡಲಾಗುವುದು. ತಲೆ ಕೆಡಿಸಿಕೊಳ್ಳದೇ ಜಾಣ್ಮೆಯಿಂದ ಪರಿಹರಿಸಿ‌. ಇಂದು ನಿಮ್ಮ ವಾಹನದ ಬಳಕೆಯನ್ನು ಹೆಚ್ಚು ಮಾಡುವಿರಿ. ದೇಹವನ್ನು ದಂಡಿಸಲು ನಿಮಗೆ ಆಗದು. ಕಾರ್ಯದ ನಿಮಿತ್ತ ನಿಮ್ಮ ಓಡಾಟವು ವ್ಯರ್ಥವಾಗಬಹುದು. ದುಷ್ಕೃತ್ಯಕ್ಕೆ ಪ್ರೇರಣೆ ಸಿಗಬಹುದು. ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ. ಆಪ್ತ ಬಂಧುವನ್ನು ಅಕಾಲದಲ್ಲಿ ಕಳೆದುಕೊಳ್ಳುವಿರಿ.

ಮೀನ ರಾಶಿ: ನಿಮಗೆ ಎಲ್ಲ ಕೆಲಸದಲ್ಲಿ ಕುತೂಹಲವಿರಲಿದೆ. ಹೊಸ ಊರನ್ನು ನೋಡುವ ಕನಸಿರುವುದು. ನೀವು ಇಂದು ಒಳ್ಳೆಯ ಕ್ರಮವನ್ನು ರೂಢಿಸಿಕೊಳ್ಳಲು ಪ್ರಯತ್ನಿಸಿ. ಮನೆಯಲ್ಲಿ ಶಿಸ್ತಿನ ವಾತಾವರಣವು ಸಂತೋಷವನ್ನು ತರುವುದು. ದೀರ್ಘಕಾಲದ ಖಾಯಿಲೆಯು ಇಂದು ಸ್ವಲ್ಪ ಕಡಿಮೆಯಾಗಲಿದೆ. ಇಂದು ನಿಮ್ಮ ಮನಸ್ಸು ಶಾಂತವಾಗಿದ್ದು ಶ್ರೇಷ್ಠ ಚಿಂತನೆಗೆ ಇದು ಸೂಕ್ತ ಸಮಯವಾಗಿದೆ. ಹಣಕಾಸಿನ ವಿಷಯದಲ್ಲಿ ನಿರೀಕ್ಷಿಸದ ಲಾಭ ಸಾಧ್ಯವಿದೆ. ಕುಟುಂಬದವರೊಂದಿಗೆ ಸಣ್ಣ ವಿಚಾರಗಳಿಗೆ ತೀವ್ರತೆ ಬೆಳೆಸಬೇಡಿ. ನಿಮ್ಮ ಸಂಗಾತಿಯ ಒಲವಿನ ನಡೆ ನಿಮಗೆ ಹೊಸ ಉತ್ಸಾಹ ನೀಡುತ್ತದೆ. ಗುರುಜನರ ಮಾರ್ಗದರ್ಶನದಿಂದ ಹೊಸ ಯೋಚನೆಗಳು ಬಲ ಪಡೆಯುತ್ತವೆ. ಬಹಳ ಹುಡುಕಾಟದ ಅನಂತರದ ಉತ್ತಮ‌ ವಿವಾಹ ಸಂಬಂಧವು ಬರುವುದು. ಕರ್ತವ್ಯದ ವಿಚಾರದಲ್ಲಿ ನೀವು ಆಲಸ್ಯವೋ ಬೇಜವಾಬ್ದಾರಿಯೋ ಒಳ್ಳೆಯದಲ್ಲ. ಬಂಧುಗಳಿಂದ ಬೇಗ ಹಣವನ್ನು ಕೊಡುವುದಾಗಿ ಪಡೆಯುವಿರಿ.

ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!