AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳಿತಾಯದ ಹಣ ಯಾವುದೋ ಕಾರಣಾಂತರದಿಂದ ಖಾಲಿಯಾಗಬಹುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ಚತುರ್ಥೀ ತಿಥಿ, ಗುರುವಾರದಂದು ದಾಯಾದಿ ಕಲಹ, ಸಂಗಾತಿಯ ಜೊತೆ ಪ್ರಯಾಣ, ಪ್ರೇಮಕ್ಕಾಗಿ ಯಾಚನೆ ಇವೆಲ್ಲ ಈ ದಿನ ಇದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಉಳಿತಾಯದ ಹಣ ಯಾವುದೋ ಕಾರಣಾಂತರದಿಂದ ಖಾಲಿಯಾಗಬಹುದು
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 17, 2025 | 1:31 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ವರಿಯಾನ್, ಕರಣ : ಬಾಲವ, ಸೂರ್ಯೋದಯ – 06:18 am, ಸೂರ್ಯಾಸ್ತ – 06:45 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:06 – 15:39, ಯಮಘಂಡ ಕಾಲ 06:19 – 07:52, ಗುಳಿಕ ಕಾಲ 09:26 – 10:59

ತುಲಾ ರಾಶಿ: ಯಾರ ಬಳಿಯು ನಕಲಿ ತನವನ್ನು ತೋರಿಸುವುದು ಬೇಡ. ನಿಮ್ಮ ವಿಚಾರದಲ್ಲಿ ಅದು ಆಗದು. ಹಿತತ್ರುಗಳು ನಿಮ್ಮ ಸಂಪತ್ತನ್ನು ಬಳಿಸಿಕೊಳ್ಳಬಹುದು. ಹೂಡಿಕೆಗೆ ಬೇಕಾದ ಆಲೋಚನೆಗಳನ್ನು ಮಾಡಬಹುದು. ಮನೆಯನ್ನು ಕಟ್ಟಲು ಸಾಲಮಾಡಬೇಕಾದ ಸ್ಥಿತಿಯು ಬರಬಹುದು. ಆಸ್ತಿ ಸಂಬಂಧಿ ಸಮಸ್ಯೆ ಎದುರಾಗಬಹುದು. ಮೋಸ ಹೋಗಬಹುದಾದ ಸಾಧ್ಯತೆ ಹೆಚ್ಚಿದೆ, ಆದ್ದರಿಂದ ಅಪರಿಚಿತರಿಂದ ದೂರವಿರಿ. ಹೊಸ ಕಾರ್ಯ ಆರಂಭಿಸಲು ಇದು ಯೋಗ್ಯ ಕಾಲವಲ್ಲ. ಆತ್ಮಸ್ಥೆರ್ಯ ಕಳೆದುಕೊಂಡರೆ ಶಕ್ತಿಯ ಹಿನ್ನಡೆ ಆಗಬಹುದು. ನಿಮ್ಮ ಬಂಧುಗಳಿಗೆ ನಿಮ್ಮ‌ ಮೇಲೆ‌ ಪ್ರೀತಿ ಹೆಚ್ಚಾದೀತು. ನಿಮ್ಮ ಕೆಲಸಕ್ಕೆ ತಂದೆಯಿಂದ ಆಕ್ಷೇಪ ಬರಬಹುದು. ಎಲ್ಲವನ್ನೂ ತಿಳಿದಿದ್ದೇನೆ ಎಂಬ ಮನೋಭಾವು ಎದ್ದು ತೋರುವುದು. ಹೂಡಿಕೆಯಲ್ಲಿ ವಿಶ್ವಾಸವು ಹೆಚ್ಚಾಗಲಿದೆ. ಸಾಲ ಕೊಟ್ಟವರು ನಿಮ್ಮನ್ನು ಕೇಳುವುದು ಹಿಂಸೆಯಾದೀತು. ಕೆಲಸದ ಸುಲಭ ಮಾರ್ಗವು ನಿಮಗೆ ಸೂಚಿಸದೇ ಇರಬಹುದು. ಮಕ್ಕಳ ವಿವಾಹವನ್ನು ನಿಶ್ಚಯಿಸಿ ನಿಶ್ಚಿಂತರಾಗುವಿರಿ. ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ನಿಮಗೆ ಆಗದು.

ವೃಶ್ಚಿಕ ರಾಶಿ: ದೊಡ್ಡವರಿಂದ ಪ್ರಶಂಸೆ ಸಿಗಲಿದೆ. ನಿಮ್ಮ ಬುದ್ಧಿ, ಮನಸ್ಸುಗಳು ನಿಮ್ಮ ಹಿಡಿತದಲ್ಲಿ ಇರಲಿ. ಯಾವ ಸಂದರ್ಭದಲ್ಲಿ ಕೈಮೀರಿ ಹೋಗಿವ ಸನ್ನಿವೇಶವನ್ನು ತಂದುಕೊಳ್ಳಬೇಡಿ. ಪರರ ನಿಂದನೆಯಿಂದ ಕಳಂಕಬರುವುದು. ಕಲಾವಿದರಿಗೆ ಗಲಿಬಿಲಿಯ ಸನ್ನಿವೇಶವು ಬರಲಿದೆ. ಕೋಪ ನಿಯಂತ್ರಣದಲ್ಲಿ ಇಡಬೇಕು. ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಸಾಧ್ಯ. ಅಜಾಗರೂಕತೆ ನಿಮ್ಮ ಗುರಿಯಿಂದ ದೂರವಿರಿಸಬಹುದು. ಅತಿಯಾದ ಆಲೋಚನೆ ತಪ್ಪಿಸಿ ದೃಢ ನಿರ್ಧಾರ ತೆಗೆದುಕೊಳ್ಳಿ. ಹಿರಿಯರ ಸಲಹೆ ನಿಮಗೆ ಒಳಿತಾಗಿಸಬಹುದು. ನಿಮ್ಮ ಕಾರ್ಯದಲ್ಲಿ ಅನುಭವದ ಕೊರತೆ ಕಾಣಿಸಲಿದ್ದು, ಮಾರ್ಗದರ್ಶನದ ಅವಶ್ಯಕತೆ ಇರಲಿದೆ. ತಾಯಿಯ ಆರೋಗ್ಯಕ್ಕಾಗಿ ಹೆಚ್ಚು ಓಡಾಟ ಮಾಡಬೇಕಾದೀತು. ಹಿತಶತ್ರುಗಳ ವಂಚನೆಯಾಗಿರುವುದು ಸಮಯ ಸರಿದಂತೆ ಗೊತ್ತಾಗುತ್ತದೆ. ಸಂಬಂಧದಲ್ಲಿ ಸಕಾರಾತ್ಮಕ ಮಾತುಗಳು ಅಗತ್ಯ. ನೌಕರರು ನಿಮ್ಮ‌ಆಪ್ತರಾಗಿ ನಿಮ್ಮ ಕೆಲಸದಲ್ಲಿ ಭಾಗಿಯಾಗುವರು. ನಿಮ್ಮ ಸಂಪತ್ತನ್ನು ಸದುಪಯೋಗ ಮಾಡಿಕೊಳ್ಳುವ ದಾರಿಯನ್ನು ಕಂಡುಕೊಳ್ಳಿ.

ಧನು ರಾಶಿ: ಒಬ್ಬರಿಂದ ಆಗದಿರುವುದು ಕಾರ್ಯ ಅನೇಕರಿಂದ ಸಾಧ್ಯ. ಸ್ವಾರ್ಥ ಬಿಟ್ಟು ಆಚೆ ಬರುವುದು ಉತ್ತಮ. ಎಂದೋ ಆದ ತಪ್ಪನ್ನು ಇಂದು ಪುನಃ ಹೇಳಿ ಬೇಸರ ಮಾಡಬಹುದು. ಸ್ತ್ರೀಯರಿಗೆ ವಿವಾಹವು ಬಹಳ ವಿಳಂಬವೆಂದು ಅನ್ನಿಸಬಹುದು. ಮನಸ್ಸಿನಲ್ಲಿ ಗೊಂದಲ ಉಂಟಾಗಿ ತೀರ್ಮಾನ ಕಷ್ಟ. ಮನೆಗೆ ಸಂಬಂಧಿಸಿದ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಮಯ ಬೇಕಾಗುತ್ತದೆ. ತುರ್ತಿಲ್ಲದ ಕೆಲವೊಂದು ಕಾರ್ಯಗಳನ್ನು ಮುಂದೂಡಬೇಕಾಗಬಹುದು. ಮನೆಯಲ್ಲಿನ ಸಮಸ್ಯೆಗಳು ಹೆಚ್ಚಾದಂತೆ ತೋರುವುದು. ಧಾರ್ಮಿಕ ಕ್ಷೇತ್ರದಲ್ಲಿ ಕಾರ್ಯ ಮಾಡುವವರಿಗೆ ಶುಭದಿನ ಇಂದು. ಆತ್ಮಪ್ರಶಂಸೆಗೆ ಸರಿಯಾಗಿ ಕಾರಣವಿರಲಿ. ನಿಮ್ಮ ಸಾಮರ್ಥ್ಯದ ಮೇಲಿನ ವಿಶ್ವಾಸ ಕಡಿಮೆ ಆಗಲಿದೆ. ಹಿತಶತ್ರುಗಳ ಚಾಡಿ ಮಾತಿನಿಂದ ಒಳ್ಳೆಯ ಅವಕಾಶಗಳು ಕೈ ತಪ್ಪಬಹುದು. ಉದ್ಯೋಗಕ್ಕೆ ಸಂಬಂಧಿಸಿದಂತೆ ನೀವು ಬಂಧುಗಳ ಸಹಾಯವನ್ನು ಕೇಳುವಿರಿ. ಕೊಟ್ಟ ಹಣಕ್ಕೆ ಸರಿಯಾದ ಕೆಲಸವನ್ನು ಮಾಡಿಕೊಡುವಿರಿ.‌ ಗ್ರಾಹಕರಲ್ಲಿ ಸಂತುಷ್ಟಿ ಇರುವುದು. ಆಸ್ತಿಯನ್ನು ಸ್ವಂತಕ್ಕೆ ಮಾಡಿಕೊಳ್ಳುವ ಉಪಾಯವು ಹೊಳೆಯಬಹುದು.

ಮಕರ ರಾಶಿ: ಆಡಂಬರವನ್ನು ಮಾಡಿಕೊಂಡು ಸುತ್ತಾಡಿ ಸಂಕಟಕ್ಕೆ ಸಿಲುಕುವಿರಿ. ಕಾನೂನಾತ್ಮಕ ವಿಚಾರದಲ್ಲಿ ಮುಳುಗಲಿದ್ದೀರಿ. ಹಳೆಯ ಘಟನೆಗಳು ನಿಮಗೆ ನೆನಪಾಗುವುದು. ನಿಮ್ನ ಸಕಾರಾತ್ಮಕತೆಯನ್ನು ಹೆಚ್ಚು ಬಳಸಿಕೊಳ್ಳುವರು. ಸಾಮಾಜಿಕವಾಗಿ ನಿಮ್ಮ ಸ್ಥಾನ ಹೆಚ್ಚಾಗಬಹುದು. ಶುಭ ಸುದ್ದಿಗಳು ಕೇಳಿ ಬರುತ್ತವೆ. ಕುಟುಂಬದಲ್ಲಿ ಇಂದು ಸಂತಸದ ಸಮಯ. ನಿರ್ಣಯ ತೆಗೆದುಕೊಳ್ಳುವ ಮೊದಲು ಎಲ್ಲರ ಅಂಶಗಳನ್ನೂ ಪರಿಗಣಿಸಿ. ಹಣದ ಚಿಂತೆ ನಿಮ್ಮನ್ನು ಇಂದು ಕಾಡಲಿದೆ. ನಿಮ್ಮ ಕೆಲಸದಿಂದ ಮನೆಯ ಹಿರಿಯರು ಕೋಪಗೊಳ್ಳುವರು. ತಾಳ್ಮೆ ಹಾಗೂ ಏಕಾಗ್ರತೆಯಿಂದ ದಿನವನ್ನು ಮುನ್ನಡೆಸುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಸೂಕ್ತ ವ್ಯಕ್ತಿಗಳ ಕೊರತೆ ಕಾಣಿಸುವುದು. ವಿದೇಶೀಯ ವ್ಯವಹಾರದ ಮಾರ್ಗವು ನಿಮಗೆ ತೆರೆದುಕೊಳ್ಳುವುದು. ನಿಮ್ಮ‌ ಬಗ್ಗೆ ನಿಮ್ಮ ಶ್ರಮದಿಂದ ಎಣಿಸಿದಷ್ಟು ಲಾಭವು ಆಗುವುದು. ಲಾಭದ ಮುಂದೆ ಆಯಾಸವು ನಗಣ್ಯವಾಗಲಿದೆ. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿರುವಿರಿ.

ಕುಂಭ ರಾಶಿ: ಮಕ್ಕಳಿಂದ ಮಾನಸಿಕ ತೊಂದರೆ. ಪರಿಹಾರ ಕಂಡುಕೊಳ್ಳಲಾಗದ ಸ್ಥಿತಿ. ನಿಮ್ಮ ಪಾಲುದಾರಿಕೆಯಲ್ಲಿ ವೈಮನಸ್ಯ ತಲೆ ಹಾಕಬಹುದು. ಮೊದಲೇ ಸರಿ‌ಮಾಡಿಕೊಂಡರೆ ಒಳ್ಳೆಯದು. ದೂರದಲ್ಲಿ ವಾಸಿಸುವ ನೀವು ಇಂದು ಮನೆಗೆ ಹೋಗುವುದು ಪೋಷಕರಿಗೆ ಖುಷಿಯಾಗುವುದು. ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆಯಿಂದ ಇರಬೇಕಾದ ದಿನ. ಕೆಲಸದ ಸ್ಥಳದಲ್ಲಿ ತೊಂದರೆ ಎದುರಾಗಬಹುದು. ಮನೆಗೆ ದೂರದ ಬಂಧುಗಳು ಭೇಟಿ ನೀಡಬಹುದು, ಈ ವೇಳೆ ಖರ್ಚು ಕೂಡ ಅಧಿಕವಾಗಬಹುದು. ಹಣದ ವ್ಯವಹಾರಗಳಲ್ಲಿ ಇತರರ ಸಲಹೆ ತೆಗೆದುಕೊಳ್ಳಿ. ಸಂಗಾತಿಯ ಮಾತಿನಿಂದ ಉದ್ವೇಗಕ್ಕೆ ಒಳಗಾಗುವಿರಿ. ಮನೋರಂಜನೆಯ ಅವಧಿಯಲ್ಲಿ ಸ್ನೇಹಿತರ ಜೊತೆ ಸಮಯವನ್ನು ಕಳೆಯುವಿರಿ. ಸ್ನೇಹಿತರು ಕೊಟ್ಟ ಹಣವನ್ನು ಪುನಃ ಕೇಳಿದ್ದು ನಿಮಗೆ ಅಪಮಾನವಾಗುವುದು. ಅಪಘಾತಗಳು ಸಂಭವಿಸಬಹುದು. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು.

ಮೀನ ರಾಶಿ: ವಾಹನ ಸಂಚಾರದಲ್ಲಿ ವ್ಯತ್ಯಾಸ. ನೀವು ಹೋಗಬೇಕಾದ ಸ್ಥಳಕ್ಕೆ ವಿಳಂಬವಾಗಿ ಪ್ರವೇಶ ಮಾಡುವಿರಿ. ಇಂದು ನೀವು ಒತ್ತಡದ ನಡುವೆಯೂ ನಿಮ್ಮ ಕಾರ್ಯಗಳನ್ನು ಸರಳೀಕರಿಸಿಕೊಂಡು ಮಾಡುವ ವಿಧಾನಕ್ಕೆ ಮೆಚ್ಚುಗೆ ಸಿಗಲಿದೆ. ಹಣವನ್ನು ಉಳಿಸಲು ಯತ್ನದಲ್ಲಿ ಸೋಲಾಗುವುದು. ಬಹುಕಾಲದಿಂದ ಬಾಕಿಯಾಗಿದ್ದ ಕೆಲಸಗಳು ಪೂರ್ತಿಯಾಗುವ ಸಾಧ್ಯತೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಕುಟುಂಬದಲ್ಲಿ ಹರ್ಷಮಯ ವಾತಾವರಣ ಉಂಟಾಗುತ್ತದೆ. ಒಂದು ಶುಭ ಸಂದೇಶ ನಿಮಗೆ ತಲುಪಬಹುದು. ಹಣಕಾಸು ಮಟ್ಟದಲ್ಲಿ ಏಳಿಗೆ ಕಾಣುತ್ತೀರಿ. ಇಂದು ನಿಮ್ಮ ಉಳಿತಾಯದ ಹಣವು ಯಾವುದೋ ಕಾರಣಾಂತರಗಳಿಂದ ಖಾಲಿಯಾಗಬಹುದು. ಆದಾಯ ವೃದ್ಧಿಗೊಳಿಸಲು ಕಾನೂನಿಗೆ ವಿರುದ್ಧವಾದ ಕಾರ್ಯಗಳ‌ ಕಡೆ ಗಮನವಿರುವುದು. ಬಂಧುಗಳಿಂದ ನಿರ್ಲಕ್ಷ್ಯಕ್ಕೆ ಒಳಗಾದಂತೆ ಅನ್ನಿಸಬಹುದು. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ