AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕೆಲಸದವರಿಗೆ ಇಂದು ಶುಭ ಸುದ್ದಿ ಕೇಳುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ನವಮೀ ತಿಥಿ, ಮಂಗಳವಾರ ಬರುವ ಸಂಪತ್ತಿನ ರಕ್ಷಣೆ, ಅತಿಯಾದ ಆಹಾರ ಭಕ್ಷಣೆ, ಭವಿಷ್ಯದ ವೀಕ್ಷಣೆ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಸರ್ಕಾರಿ ಕೆಲಸದವರಿಗೆ ಇಂದು ಶುಭ ಸುದ್ದಿ ಕೇಳುವರು
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 22, 2025 | 1:34 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ನವಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶುಭ, ಕರಣ: ತೈತಿಲ, ಸೂರ್ಯೋದಯ – 06 : 15 am, ಸೂರ್ಯಾಸ್ತ – 06 : 46 pm, ಇಂದಿನ ಶುಭಾಶುಭಕಾಲ: ರಾಹು ಕಾಲ 15:39 – 17:13, ಯಮಘಂಡ ಕಾಲ 09:24 – 10:57, ಗುಳಿಕ ಕಾಲ 12:31 – 14:05

ಮೇಷ ರಾಶಿ: ಹಳೆಯದಾದ ದೈಹಿಕ ಹಾಗೂ ಮಾನಸಿಕ ನೋವುಗಳು ಕಾಡಬಹುದು. ನಿಮ್ಮ ಉತ್ತಮ‌ವಾದ ನಡವಳಿಕೆಯೇ ಸಮೀಪಕ್ಕೆ ಜನರು ಬರುವಂತೆ ಮಾಡುವುದು. ಆತ್ಮವಿಶ್ವಾಸದಿಂದ ನೀವು ದಿನವನ್ನು ಸುಗಮವಾಗಿ ಕಳೆಯುತ್ತೀರಿ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯ. ಸಂಗಾತಿಯೊಂದಿಗೆ ಜಗಳವಾದರೂ, ತಾಳ್ಮೆ ಬೇಕು. ಆಸೆಗೆ ಪೂರಕ ವಾತಾವರಣ ಸಿಕ್ಕಿದ್ದು ತೃಪ್ತಿ ನೀಡುವುದು. ಹಿರಿಯರಿಂದ ಮಾರ್ಗದರ್ಶನ ಸಿಗಬಹುದು. ಸಹಾಯ ಮಾಡುವ ಮನೋಭಾವನೆ ನಿಮಗೆ ಸಂತೋಷ ನೀಡುತ್ತದೆ. ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಭೇಟಿಯಾಗಿ ಕೃತಜ್ಞತೆಯ ಭಾವವನ್ನು ಅರ್ಪಿಸುವರು.‌ ಉದ್ಯೋಗವು ನಿಮ್ಮ ಹಿಡಿತಕ್ಕೆ ಬರಲು ಪ್ರಯತ್ನಿಸುವಿರಿ. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು.

ವೃಷಭ ರಾಶಿ: ಆಡಳಿತ ವರ್ಗದಲ್ಲಿ ನಿಮ್ಮ ಮಾತು ನಡೆಯದು. ಕ್ಷಣಕಾಲ ಏನನ್ನೂ ಯೋಚಿಸದೇ ಇರಿ.‌ ಗಂಭೀರ ಸಮಸ್ಯೆಗಳನ್ನು ನಿಯಂತ್ರಣದಲ್ಲಿಡಿ. ವ್ಯವಹಾರದಲ್ಲಿ ಲಾಭ ಸಾಧ್ಯ. ಮಕ್ಕಳಿಗೆ ಸಹಾಯ ಮಾಡಿ ಒಳ್ಳೆಯ ಸಂಬಂಧ ಬೆಳೆಸಿಕೊಳ್ಳಿ. ಯಾರ ವ್ಯಕ್ತಿತ್ವವನ್ನೂ ಕೇವಲವಾಗಿ ನೋಡುವುದು ಬೇಡ. ಪ್ರೇಮ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ದಿವಸದ ಕೊನೆಯಲ್ಲಿ ಆತ್ಮೀಯರೊಂದಿಗೆ ಸಮಯ ಕಳೆಯಬಹುದು. ಸಂಗಾತಿಯ ಪ್ರೀತಿ ನಿಮ್ಮ ನೆನಪಿನಲ್ಲಿ ಉಳಿಯುವ ರೀತಿಯಲ್ಲಿರುತ್ತದೆ. ಅದಕ್ಕೆ ಉತ್ತರಿಸಲು ಹೋಗಿ ಇನ್ನೊಂದಿಷ್ಟು ಕೆಸರಿನ್ನು ಮೈಗೆ ಹಚ್ಚಿಕೊಳ್ಳುವ ಕೆಲಸವಾದೀತು. ನೀವು ಉದ್ಯೋಗವನ್ನು ಹುಡುಕುತ್ತಿದ್ದರೆ ಉತ್ತಮ ಉದ್ಯೋಗ ಸಿಗುವ ಸಾಧ್ಯತೆ. ವ್ಯಾಪಾರದಲ್ಲಿ ಕೆಲವಾರು ಸಂಗತಿಗಳನ್ನು ಅರ್ಥಮಾಡಿಕೊಳ್ಳಬೇಕಿದೆ. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶ ಸಿಗದು. ಕೆಲವು ಸನ್ನಿವೇಶವು ನಿಮಗೆ ಇಷ್ಟವಾಗದು. ಅದರೂ ಅನಿವಾರ್ಯ ಎನಿಸೀತು. ಕೋಪವನ್ನು ಬಿಟ್ಟರೂ ಬಿಡಲಾಗದು. ನಕಾರಾತ್ಮಕ ಸೂಚನೆ ನಿಮಗೆ ಸಿಗಲಿದ್ದು, ಅದನ್ನು ನಿರ್ಲಕ್ಷ್ಯ ಮಾಡುವಿರಿ.

ಮಿಥುನ ರಾಶಿ: ಎರಡು ಆಲೋಚನೆಯ ನಡುವೆ ವೈಮನಸ್ಸು ಬಂದರೂ ತಾಳ್ಮೆ, ಹೊಂದಾಣಿಕೆಯು ಎಲ್ಲವನ್ನೂ ಮಾಯಮಾಡವುದು. ಹಣದ ಹೂಡಿಕೆ ಕುರಿತು ಯೋಚಿಸಿ ನಿರ್ಧಾರ ಮಾಡಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಇರುವಾಗ ಸಹನೆವಹಿಸಿ. ಪ್ರೇಮದಲ್ಲಿ ವಿಶಿಷ್ಟ ಅನುಭವ ಸಾಧ್ಯ. ಕೆಲಸಕ್ಕಾಗಿ ಕೈಗೊಂಡ ಪ್ರಯಾಣ ಯಶಸ್ಸು ತರುತ್ತದೆ. ಭೂಮಿಯನ್ನು ಪಡೆಯಲು ಓಡಾಟ‌ಮಾಡುವಿರಿ. ಸಂಗಾತಿಯ ಪ್ರೀತಿ ಮತ್ತೆ ಜೀವಮಾನದಲ್ಲೇ ಹೊಸ ಬೆಳಕು ತರಬಹುದು. ವ್ಯಾಪಾರದಲ್ಲಿ ತೊಡಗಿರುವವರು ಅಪರಿಚಿತರನ್ನು ಪೂರ್ಣವಾಗಿ ನಂಬುವುದು ಬೇಡ. ಉದ್ಯೋಗಸ್ಥರಿಗೆ ಇಂದು ಬಿಡುವಿಲ್ಲದ ದಿನವಾಗಿರುತ್ತದೆ. ನಿಮಗೆ ಕೆಲವು ಹೆಚ್ಚುವರಿ ಜವಾಬ್ದಾರಿಗಳನ್ನು ಕೊಡಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಬದಲಾವಣೆ ಇರಲಿದೆ. ವ್ಯವಹಾರದಲ್ಲಿ ನಿಮ್ಮ ನಿರ್ಧಾರಗಳೇ ಅಂತಿಮವಾಗುವುದು. ಯಶಸ್ಸಿನ ಗುಟ್ಟನ್ನು ನೀವು ಯಾರಿಗೂ ಹೇಳಲಾರಿರಿ. ಮನೆಯಲ್ಲಿ ಹರ್ಷದ ವಾತಾವರಣ, ಬಂಧುಗಳ ಸಮಾಗಮ.

ಕರ್ಕಾಟಕ ರಾಶಿ: ಯಾವುದನ್ನೂ ಸರಳವಾಗಿ ಒಪ್ಪಿಕೊಳ್ಳುವ ಸ್ಥಿತಿ ಇರದು. ಪಾಪಪ್ರಜ್ಞೆಯು ನಿಮ್ಮನ್ನು ಕಾಡಿ ಮನಸ್ಸು ದುರ್ಬಲವಾಗಬಹುದು. ದ್ವಿಚಕ್ರ ವಾಹನಚಾಲನೆ ಮಾಡುವಾಗ ಎಚ್ಚರಬೇಕು. ಅನಿರೀಕ್ಷಿತ ಲಾಭವು ಉತ್ಸಾಹ ತರುವುದು. ಪ್ರೇಮ ಜೀವನದಲ್ಲಿ ಅನಿರೀಕ್ಷಿತ ಶಾಂತಿ. ಹೆಚ್ಚು ಕೆಲಸವಿದ್ದರೂ ನೀವು ಶಕ್ತಿವಂತನಂತೆ ಕಾಣಬಹುದು. ಕೆಲಸ ಮುಗಿದ ಅನಂತರ ಮನೆಯಲ್ಲಿಯೂ ಸಮಯ ಕಳೆಯಲು ಪ್ರಯತ್ನ ಮಾಡಿ. ಸಂಗಾತಿಯ ಕಾರಣದಿಂದ ದೂರಪ್ರಯಾಣ. ನೆಮ್ಮದಿಗೆ ಭಂಗವನ್ನು ತರುವ ಘಟನೆಗಳು ನಡೆಯಲಿವೆ. ನಿಮ್ಮ ಸ್ವಂತ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಲು ಕಷ್ಟವಾದೀತು. ಸಹೋದರರ ಜೊತೆ ಮನಸ್ತಾಪ ಬರಬಹುದು. ಕೊಡಬೇಕಾದವರ ಹಣವನ್ನು ಹಾಗೆಯೇ ಇಟ್ಟುಕೊಳ್ಳುವಿರಿ. ನಿಮ್ಮ ತಪ್ಪನ್ನು ಒಪ್ಪಿಕೊಳ್ಳಲು ನಿಮಗೆ ಸಂಕೋಚವಾಗಬಹುದು. ವಾಹನ ಮುಂತಾದ ಉದ್ಯಮವನ್ನು ನಡೆಸುತ್ತಿದ್ದರೆ ಲಾಭವು ಇರುವುದು. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ಯಾರಿಂದಲೋ ನಿಮಗೆ ಸಂಕಟವಾಗುವುದು.

ಸಿಂಹ ರಾಶಿ: ಅನ್ಯಮಾನಸಿಕತೆಯಿಂದ ಆಪ್ತರ ನಡುವೆ ವೈಷಮ್ಯ ಬರಲಿದೆ. ಯಾರನ್ನೋ ಮೆಚ್ಚಿಸಲು ನಿಮ್ಮ ಸಮಯವನ್ನು ವ್ಯಯಿಸುವಿರಿ. ಅದರಿಂದ ಯಾವ ಲಾಭವೂ ಆಗದು. ಭೂವ್ಯವಹಾರದಲ್ಲಿ ಅನುಕೂಲಕರವಾದ ಸನ್ನಿವೇಶಗಳನ್ನು ಸೃಷ್ಟಿ ಮಾಡಿಕೊಳ್ಳುವಿರಿ. ಸ್ಥಾನಮಾನಕ್ಕೆ ಶೀತಲ ಸಮರ ಆರಂನಬವಾಗಲಿದೆ. ಹಣದ ಬದಲು ಸುರಕ್ಷಿತ ಹೂಡಿಕೆ ಅತ್ಯುತ್ತಮ. ಮನೆಯಲ್ಲಿ ಸಮಸ್ಯೆಗಳಿದ್ದರೂ ನೀವು ಸಮಾಧಾನದಿಂದಿರುವುದು ಉತ್ತಮ. ಉಚಿತ ಸಮಯದಲ್ಲಿ ಹೊಸದನ್ನು ಕಲಿಯಿರಿ. ಸಂಗಾತಿಯ ಬೆಂಬಲ ನಿಮಗೆ ಬೆರಗಾಗಿಸುವಷ್ಟು ಉತ್ತಮವಾಗಿರಬಹುದು. ನಿಮ್ಮ ಮೇಲೆ ತಪ್ಪಾದ ಆರೋಪವು ಬರಬಹುದು. ಕಾನೂನನ್ನು ಪಾಲಿಸಬೇಕಾಗುವುದು. ನಿಮ್ಮ ಗಮನಾಗಮನವನ್ನು ಯಾರಾದರೂ ತಿಳಿದುಕೊಳ್ಳುತ್ತಿರಬಹುದು. ಕುಟುಂಬದ ಚಿಂತೆಯಿಂದ ಆರೋಗ್ಯ ಹಾಳು. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಜೀವನಕ್ಕೆ ಕೆಲವು ಮಾರ್ಪಾಡುಗಳು ಅನಿವಾರ್ಯವಾದೀತು.

ಕನ್ಯಾ ರಾಶಿ: ಮಕ್ಕಳಲ್ಲಿ ಸದ್ಭಾವ ಮೂಡಿಸುವ ಪ್ರಯತ್ನ ಮಾಡುವಿರಿ. ಹಣ ಉಳಿಸುವ ಯತ್ನ ಇಂದು ಯಶಸ್ವಿ ಸಂಬಂಧಿಗಳೊಂದಿಗೆ ಸಣ್ಣ ಪ್ರಯಾಣ ನೆಮ್ಮದಿ ತರಬಹುದು. ಸಂಗಾತಿ ಪುನರಾವರ್ತನೆಯನ್ನು ಸಹಿಸಲಾರಿರಿ. ಪ್ರೇಮ ಜೀವನದಲ್ಲಿ ಗಾಢತೆಯ ಅನುಭವ. ನಿಮ್ಮ ಶ್ರಮದ ಫಲವನ್ನು ಇತರರು ಪಡೆದರೆ ವ್ಯಥೆ ಆಗಬಹುದು. ಹಳೆ ಸ್ನೇಹಿತರ ಭೇಟಿಗೆ ಯೋಜನೆ ಮಾಡುವಿರಿ. ಹಿತಶತ್ರುಗಳು ನಿಮಗೆ ಮಾಡಿದ ಕೆಡುಕು ನಿಮಗೆ ಒಳ್ಳೆಯದೇ ಆಗಲಿದೆ. ಸರ್ಕಾರಿ ಕೆಲಸ ಮಾಡುವವರಿಗೆ ಉನ್ನತ ಸ್ಥಾನದ ವಾರ್ತೆ ಬರುವುದು. ದೇವಾಲಯದಲ್ಲಿ ನಿಮ್ಮ ಹೆಚ್ಚಿನ ಸಮಯವು ಕಳೆದುಹೋಗುವುದು. ನೀವು ಉದ್ಯೋಗ ಬದಲಾವಣೆಯ ನಿರೀಕ್ಷೆಯಲ್ಲಿದ್ದರೆ, ನೀವು ಬಹಳ ದಿನಗಳ ಅನಂತರ ವಿವಿಧ ಅವಕಾಶಗಳನ್ನು ಪಡೆದುಕೊಳ್ಳುವಿರಿ. ಹೊಸ ಉದ್ಯೋಗವನ್ನು ಆರಂಭಿಸಲು ತೀವ್ರತೆಯು ಇರಲಿದೆ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ಓಡಾಟದಿಂದ ಸಮಯ ವ್ಯರ್ಥ ಮಾಡುವಿರಿ.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ