
ಮನೆಯ ಅಂಗಳದಲ್ಲಿರುವ ತುಳಸಿ ಗಿಡಕ್ಕೆ ಪ್ರತಿದಿನ ಸಂಜೆ ತುಪ್ಪದ ದೀಪ ಹಚ್ಚಿ ಪ್ರದಕ್ಷಿಣೆ ಹಾಕಿ. ಹೀಗೆ ಮಾಡುವುದರಿಂದ ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳು ದೂರ ಆಗಲಿವೆ. ಉದ್ಯೋಗ ಸ್ಥಳದಲ್ಲಿ ಇರುವ ಗೊಂದಲ ಬಗೆಹರಿಯುತ್ತದೆ.
ನಿಮ್ಮಲ್ಲಿ ಕೆಲವರು ದೂರ ಪ್ರಯಾಣಕ್ಕಾಗಿ ಸಿದ್ಧತೆ ಮಾಡಿಕೊಳ್ಳಬಹುದು ಅಥವಾ ಹೊರಟು ಬಿಡಬಹುದು. ಇದರಿಂದ ದೀರ್ಘಾವಧಿಯಲ್ಲಿ ಬಹಳ ದೊಡ್ಡ ಮಟ್ಟದ ಅನುಕೂಲ ಇದೆ. ಆದರೆ ಹೊರಡುವ ಮುನ್ನ ಕುಟುಂಬದ ಕಡೆಯಿಂದ ಒತ್ತಡವಂತೂ ಇರುತ್ತದೆ. ಆದರೆ ಅದು ನಿಮ್ಮ ಕೆಲಸ ಯಶಸ್ವಿಯಾದ ಮೇಲೆ ಕರಗಿ ಹೋಗಲಿದೆ.
ನಿಮಗೆ ಚೆನ್ನಾಗಿ ಗೊತ್ತಿರುವಂಥ ವಿಷಯದಲ್ಲೇ ನಿಮ್ಮಿಂದ ಕೆಲವು ತಪ್ಪುಗಳು ಆಗಬಹುದು. ಮುಖ್ಯವಾಗಿ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಅದರಲ್ಲೂ ಉದ್ಯೋಗ ಸ್ಥಳದಲ್ಲಿ ಮೇಲಧಿಕಾರಿಗಳು ನಿಮ್ಮನ್ನು ಪ್ರಶ್ನೆ ಕೇಳಿದಲ್ಲಿ ಒಂದು ಸಲ ಪರಿಶೀಲನೆ ಮಾಡಿ, ಆ ನಂತರವೇ ಉತ್ತರವನ್ನು ಹೇಳಿ. ಕೆಲವು ಜವಾಬ್ದಾರಿಗಳನ್ನು ನಿಮಗೆ ವಹಿಸುವುದಕ್ಕೆ ಕುಟುಂಬದಲ್ಲಿ ಹಾಗೂ ಉದ್ಯೋಗ ಸ್ಥಳದಲ್ಲಿ ಕೇಳಲಿದ್ದಾರೆ.
ಉತ್ತಮವಾದ ಸಂಬಳ ಹಾಗೂ ಹುದ್ದೆಯ ಜತೆಗೆ ಆಫರ್ ಬರಲಿದೆ. ಆದ್ದರಿಂದ ಈ ಅವಕಾಶವನ್ನು ಬೇಡ ಅನ್ನುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಎಂಬಂತೆ ಆಲೋಚನೆಯನ್ನು ಮಾಡುವುದು ಒಳ್ಳೆಯದು. ಸಾಕು ಪ್ರಾಣಿಗಳನ್ನು ಮನೆಗೆ ತರುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ದಿನದ ಕೊನೆ ಹೊತ್ತಿಗೆ ಮನಸ್ಸಿಗೆ ಹೆಚ್ಚು ಸಂತೋಷ ಎನಿಸುವಂಥ ವ್ಯಕ್ತಿ ಜತೆಗೆ ಮಾತುಕತೆ ಆಡಲಿದ್ದೀರಿ.
ಲೇಖನ- ಸ್ವಾತಿ ಎನ್.ಕೆ.