Astrology: ಈ ರಾಶಿಯವರು ಇಂದು ತಾಳ್ಮೆಯಿಂದ ವರ್ತಿಸುವುದು ಉತ್ತಮ

ರಾಶಿ ಭವಿಷ್ಯ ಶುಕ್ರವಾರ(ಸೆ. 6): ಆಸ್ತಿಯ ಆಧಾರದ ಮೇಲೆ ನೀವು ಸಾಲವನ್ನು ಪಡೆಯಬೇಕಾಗಬಹುದು. ನಿಮ್ಮ ಜೀವನಕ್ಕೆ ಇಂದು ಯಾರಾದರೂ ಆಸರೆ ಬೇಕೆನಿಸಬಹುದು. ನಿಮ್ಮದಲ್ಲದ ವಿಚಾರದಲ್ಲಿ ಸಲಹೆಯನ್ನು ಕೊಡಲು ಹೋಗುವುದು ಬೇಡ. ಯಾರದೋ ಅಸೆಗೆ ನೀವು ಬಲಿಯಾಗಬಹುದು. ಹಾಗಾದರೆ ಸೆಪ್ಟೆಂಬರ್​ 6ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯವರು ಇಂದು ತಾಳ್ಮೆಯಿಂದ ವರ್ತಿಸುವುದು ಉತ್ತಮ
ದಿನಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 06, 2024 | 12:30 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಶುಕ್ಲ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:39 ಗಂಟೆ, ರಾಹು ಕಾಲ ಬೆಳಿಗ್ಗೆ 10:59 ರಿಂದ ಸಂಜೆ 12:31, ಯಮಘಂಡ ಕಾಲ ಮಧ್ಯಾಹ್ನ 03:35 ರಿಂದ 05:07ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:54 ರಿಂದ 09:26ರ ವರೆಗೆ.

ಧನು ರಾಶಿ : ನಿಮ್ಮ ವರ್ತನೆಗಳೇ ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಯುವಂತೆ ಮಾಡುವುದು. ನಿಮಗಾದ ವಂಚನೆಯನ್ನು ಸರಿ ಮಾಡಿಕೊಳ್ಳಲು ಕಾನೂನಿಗೆ ವಿರುದ್ಧವಾಗಿ ಹೋಗುವಿರಿ. ಸಾರ್ವಜನಿಕವಾಗಿ ಸ್ಥಾನಮಾನವನ್ನು ಪಡೆಯಲು ಹಂಬಲಿಸುವಿರಿ. ರಾಜಕಾರಣ ಗಾಳಿ ಬೀಸಲಿದೆ. ಸಹೋದರ ನಡುವಿನ ಸ್ನೇಹ ಭಾವವು ದೂರಾಗಬಹುದು. ನಿಮ್ಮ ಸಹೋದರನ ಆರೋಗ್ಯವು ವ್ಯತ್ಯಾಸವಾಗಬಹುದು. ಸಂಗಾತಿಯೇ ನಿಮ್ಮ ಕೆಲಸಗಳನ್ನು ಮಾಡಿಕೊಡಬಹುದು. ಏನಾದರೂ ಮಾಡಬೇಕೆಂಬ ತುಡಿತವಿದ್ದರೂ ಸರಿಯಾದ ತೀರ್ಮಾನ ಸಾಧ್ಯವಾಗದು.‌ ಸರ್ಕಾರದಲ್ಲಿ ಆಗಬೇಕಾದ ನಿಮ್ಮ ಕೆಲಸವು ವೇಗವಾಗಲಿದೆ. ಜೊತೆ ಇರುವವರ ಮೇಲೆ‌ ನಂಬಿಕೆ ಕಡಿಮೆ ಆದೀತು. ಏನಾದರೂ ಬೇಡದ ಸಂಗತಿಗಳನ್ನು ಬಗೆಗೆ ನಿಮ್ಮ‌ ಆಲೋಚನೆಗಳು ಇರುತ್ತವೆ. ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ. ಭೂಮಿಯ ಉತ್ಪನ್ನದಿಂದ ಲಾಭವು ಸಿಗುವುದು. ಆತುರದಲ್ಲಿ ಯಾವ ನಿರ್ಧಾರವನ್ನೂ ಮಾಡವುದು ಬೇಡ.

ಮಕರ ರಾಶಿ : ನಿಮ್ಮ ಸುರಕ್ಷತೆಯ ಬಗ್ಗೆ ಮೊದಲು ಗಮನವಿರಲಿ. ಅನಂತರ ಉಳಿದುದರ ರಕ್ಷಣೆ. ಇಂದು ನೀವು ಮಾಡುವ ಪ್ರಯಾಣದಿಂದ ಸುಖವಿರದು. ನಿಮ್ಮ ಮಾತುಗಳು ಇನ್ನೊಬ್ಬರಲ್ಲಿ ಕರುಣೆಯನ್ನು ಉಂಟುಮಾಡುವುದು. ಇಂದಿನ ನಿಮ್ಮ ಕಾರ್ಯಪರತೆಯಿಂದ ಸಂಸ್ಥೆಯು ಯಶಸ್ಸನ್ನು ಸಾಧಿಸಬಹುದು. ನಿಮ್ಮ ಆಲೋಚನೆಗಳು ನಿಮ್ಮ ವ್ಯಕ್ತಿತ್ವವನ್ನು ರೂಪಿಸಿದೆ. ಪತ್ರವ್ಯವಹಾರವೇ ನಿಮಗೆ ಸರಿಯಾದ ದಾರಿಯಾಗಬಹುದು. ಇಂದು ಸಂಗಾತಿಯ ನಡುವೆ ಭಿನ್ನಾಭಿಪ್ರಾಯಗಳು ಏಳಬಹುದು. ಒಬ್ಬರು ತಟಸ್ಥರಾಗಿ. ವಿದ್ಯಾರ್ಥಿಗಳು ಇಂದು ಖುಷಿಪಡಲಿದ್ದಾರೆ. ಮಾತಿನಲ್ಲಿ ಹೆಚ್ಚಿನ ಎಚ್ಚರವಿರಲಿ, ಕುಹುಕವಾಡುವುದು ನಿಮ್ಮ ಇಷ್ಟದವರ ಜೊತೆ ಸಮಯವನ್ನು ಕಳೆಯುವಿರಿ. ವಿವಾದವನ್ನು ಮಾಡಿಕೊಳ್ಳಲು ಹೋಗಬೇಡಿ. ಯಾರೇ ಏನೇ ಹೇಳಿದರೂ ಕೇಳಿಕೊಳ್ಳುವ ತಾಳ್ಮೆ ಅಗತ್ಯವಾಗಿ ಬೇಕು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು.

ಕುಂಭ ರಾಶಿ : ನಿಮಗಿರುವ ಸ್ಥಾನಮಾನದ ಬಗ್ಗೆ ಆತಂಕ ಬರಬಹುದು. ಇಂದು ನಿಮ್ಮ ಯೋಜನೆಗೆ ಇಂದು ಎಲ್ಲವೂ ವಿರುದ್ಧವಾಗಬಹುದು. ಯಾರ ಮೇಲೂ ದ್ವೇಷವನ್ನು ಸಾಧಿಸುವುದು ಬೇಡ. ಇಂದು ನೀವು ಮಕ್ಕಳ ಜೊತೆ ಖುಷಿಯಿಂದ ಕಾಲ ಕಳೆಯುವಿರಿ. ಅನಿದ್ದನ್ನು ಹೇಳಿಕೊಂಡು ಮನಸ್ಸು ನಿರಾಳವಾಗಲಿದೆ. ಅನಿಸಿದ್ದನ್ನು ಹೇಳಿ ಅನಂತರ ಪಶ್ಚಾತ್ತಾಪಪಡುವಿರಿ. ವ್ಯವಹಾರದಿಂದ ವಂಚಿತರಾಗುವಿರಿ. ತಾಯಿಯು ನಿಮಗೆ ಬೇಕಾದ ಸಹಕಾರವನ್ನು ಕೊಡುವಳು. ಉಸಿರಾಟ ತೊಂದರೆ ಕಾಣಿಸಿಕೊಳ್ಳಬಹುದು. ಸಮಯಪಾಲನಯಲ್ಲಿ ಸೋಲುವಿರಿ. ಸಂದರ್ಭವನ್ನು ನೋಡಿಕೊಂಡು ಮಾತನಾಡಿ. ದಿನನಿತ್ಯದ ಕಾರ್ಯವನ್ನು ಮಾಡುವವರಿಗೆ ಲಾಭವಿದೆ. ಮನೆಯವರ ಜೊತೆ ಸಮಯವನ್ನು ಕಳೆಯುವಿರಿ. ನೀವು ಖರೀದಿಸುವ ಭೂಮಿಯ ದಾಖಲೆಯನ್ನು ಸಮಾಧಾನಚಿತ್ತದಿಂದ ಕೂಲಂಕಷವಾಗಿ ಪರಿಶೀಲಿಸಿ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವು ಕೆಡುವುದು.

ಮೀನ ರಾಶಿ : ಆಸ್ತಿಯ ಆಧಾರದ ಮೇಲೆ ನೀವು ಸಾಲವನ್ನು ಪಡೆಯಬೇಕಾಗಬಹುದು. ನಿಮ್ಮ ಜೀವನಕ್ಕೆ ಇಂದು ಯಾರಾದರೂ ಆಸರೆ ಬೇಕೆನಿಸಬಹುದು. ನಿಮ್ಮದಲ್ಲದ ವಿಚಾರದಲ್ಲಿ ಸಲಹೆಯನ್ನು ಕೊಡಲು ಹೋಗುವುದು ಬೇಡ. ಯಾರದೋ ಅಸೆಗೆ ನೀವು ಬಲಿಯಾಗಬಹುದು. ವಾಹನದಿಂದ ಅಲ್ಪ ಲಾಭವೂ ನಿಮಗೆ ಸಮಾಧಾನ ತರಬಹುದು. ನಿಮ್ಮ ನಡುವಲ್ಲಿ ಬಿಟ್ಟು ಆನಂದಿಸುವರು. ಗೃಹ ನಿರ್ಮಾಣ ಕಾರ್ಯದಲ್ಲಿ ಅತಿಯಾ ಗಡಿಬಿಡಿ ಬೇಡ. ಒಂದೊಂದೇ ಮೆಟ್ಟಿಲೇರಿ ತುದಿಯನ್ನು ಮುಟ್ಟಬೇಕು. ಒಂದೇ ಬಾರಿಗೆ ಆಗುವುದಿಲ್ಲ.‌ ಸಜ್ಜನರ ಸಹವಾಸ ಸಿಗಬಹುದು. ಆರೋಗ್ಯವು ಸರಿಯಿಲ್ಲದ ಕಾರಣ ಕೋಪವು ಹೆಚ್ಚಾಗುವುದು. ಅನಪೇಕ್ಷಿತ ವಿಷಯವನ್ನು ಯಾರ ಜೊತೆಯೂ ಮಾತನಾಡಬೇಡಿ. ನಿಮ್ಮ‌‌ ಕೆಲಸದ ಬಗ್ಗೆ ಗಮನ ಹೆಚ್ಚಿರಲಿ. ಏಕಾಗ್ರತೆಯು ಭಂಗವಾಗಲು ಅನೇಕ ಕಾರಣಗಳು ಇರಲಿವೆ. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)