Horoscope: ಈ ರಾಶಿಯವರನ್ನು ಒಲಿಸಿಕೊಳ್ಳಲು ಸ್ತ್ರೀಯರು ಪ್ರಯತ್ನಿಸುವರು, ಕಂಕಣ ಭಾಗ್ಯ ಸಾಧ್ಯತೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜುಲೈ. 02 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರನ್ನು ಒಲಿಸಿಕೊಳ್ಳಲು ಸ್ತ್ರೀಯರು ಪ್ರಯತ್ನಿಸುವರು, ಕಂಕಣ ಭಾಗ್ಯ ಸಾಧ್ಯತೆ
ಈ ರಾಶಿಯವರನ್ನು ಒಲಿಸಿಕೊಳ್ಳಲು ಸ್ತ್ರೀಯರು ಪ್ರಯತ್ನಿಸುವರು, ಕಂಕಣ ಭಾಗ್ಯ ಸಾಧ್ಯತೆ
Follow us
|

Updated on: Jul 02, 2024 | 12:12 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜುಲೈ.02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಸುಕರ್ಮಾ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 15:51 ರಿಂದ 17:28ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:23 ರಿಂದ ಬೆಳಿಗ್ಗೆ 10:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:37 ರಿಂದ 14:14ರ ವರೆಗೆ.

ಧನು ರಾಶಿ: ಇಂದು ನೀವು ಸರ್ಕಾರದ ಕಡೆಯಿಂದ ಆಗಬೇಕಾದ ಕೆಲಸಕ್ಕೆ ಹಣವನ್ನು ಕೊಡಬೇಕಾಗಿಬರಬಹುದು. ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ವಾಹನ ರಿಪೇರಿಯಿಂದ ಖರ್ಚಾಗಲಿದೆ. ಕುಟುಂಬದಲ್ಲಿ ತಾನೇ ಶ್ರೇಷ್ಠ ಎಂಬ ಭಾವ ಬೇಡ. ಸಮಯವು ಒಂದೇ ರೀತಿಯಲ್ಲಿ ಇರದು. ಅಕಸ್ಮಾತ್ ಆಗಿ ಸಿಕ್ಕ ಜವಾಬ್ದಾರಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಇರುವ ಸಮಸ್ಯೆಯನ್ನು ಎದುರಿಸಲು ಹೋಗಿ ಮತ್ತೊಂದು ಸಮಸ್ಯೆಯನ್ನು ಹುಟ್ಟುಹಾಕಿಕೊಳ್ಳಬೇಡಿ. ಸ್ವಾಭಾವಿಕ ಮಾತೂ ತಿರುಗುಬಾಣವಗಬಹುದು. ಅವರ ಮೇಲೆ ಬುದ್ಧಿವಂತಿಕೆ ಸವಾರಿ ಮಾಡಬೇಡಿ. ಅವರ ಬೇಸರವೇ ನಿಮಗೆ ದುಃಖವನ್ನು ತಂದುಕೊಟ್ಟೀತು. ಯಾರನ್ನೂ ನಂಬದವರು ಇಂದು ನಂಬಿ ಮೋಸ ಹೋಗಬಹುದು. ನಿಮಗೆ ಬೆಲೆ ಕೊಡದೇ ಇರುವುದು ನಿಮಗೆ ಬೇಸರವಾಗುವುದು. ಖುಷಿಪಡುವ ಸಂಗತಿಗಳಿದ್ದರೂ ದುಃಖಿಗಳಾಗುವ ಸಾದ್ಯತೆ ಇದೆ. ಶತ್ರುಗಳು ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಬಹುದು.

ಮಕರ ರಾಶಿ: ಇಂದು ಸಹೋದರರ ಜೊತೆ ಪ್ರೀತಿಯಿಂದ ಇರುವಿರಿ. ಬದಲಾಗಬೇಕು ಎನ್ನುವ ಹಂಬಲವು ನಿಮ್ಮಲ್ಲಿ ಅತಿಯಾಗಿರಬಹುದು. ಸರಿಯಾದ ಬದಲಾವಣೆಯನ್ನು ಹೊಂದಿರಿ. ಯಾರನ್ನೂ ಸಾಧರಣ‌ ಮನುಷ್ಯ ತಿಳಿದುಕೊಳ್ಳಬೇಡಿ. ಅವರ ಯೋಗ್ಯತೆಯನ್ನು ಅವರ ಬಟ್ಟೆಯಿಂದ, ಮಾತಿನಿಂದ ಅಳೆಯಲು ನೀವಿಂದು ಅಶಕ್ಯರು. ಒಂದೊಂದೇ ಖರ್ಚನ್ನು ನೀವು ನಿಭಾಯಿಸುವಾಗ ಅದೊಂದು ದೊಡ್ಡ ಮೊತ್ತವಾಗಿ ಕಾಣಬಹುದು. ನಿಮ್ಮಷ್ಟಕ್ಕೇ ನೀವು ಹೊಸತನವನ್ನು ಸೃಷ್ಟಿಸಿಕೊಂಡು ಅಪಮಾನಕ್ಕೆ ಒಳಗಾಗುವಿರಿ. ಸ್ವಾವಲಂಬಿಯಾಗಲು ಶ್ರಮಿಸಿಸುವಿರಿ. ಮೇಲೆಧಿಕಾರಿಗಳ ದಯಾಪಾಶವು ನಿಮ್ಮನ್ನು ವೃತ್ತಿಯಲ್ಲಿ ಉಳಿಸಬಹುದು. ಸಂಕಷ್ಟ‌ ಬಂದಾದ ಎಲ್ಲದಕ್ಕೂ ಏನೋ‌ ಒಂದು ಕಾರಣವಿರಬಹುದು ಎಂದು ಸಮಾಧಾನವನ್ನು ತಂದುಕೊಳ್ಳುವಿರಿ. ಗೃಹನಿರ್ಮಾಣದ ಪ್ರಸ್ತಾಪವು ಇರಲಿದೆ. ವಾಹನವನ್ನು ನಿಧಾನವಾಗಿ ಚಲಾಯಿಸಿ. ಬೇರೆಯವರ ತಪ್ಪಿನಿಂದ ನಿಮಗೆ ತೊಂದರೆಗಳು ಆಗಬಹುದು.

ಕುಂಭ ರಾಶಿ: ನಿಮ್ಮ ಯಶಸ್ಸು ಕಂಡು ನಿಮ್ಮವರೇ ಸಂಕಟ ಪಡುತ್ತಾರೆ. ಅವರನ್ನು ದೂರವಿಟ್ಟು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ. ಹತ್ತಿರದ ಊರಿಗೆ ಪ್ರಯಾಣವನ್ನು ಮಾಡಲಿದ್ದೀರಿ. ಹಳೆಯ ವಿಚಾರಗಳನ್ನು ಪತಿಯಿಂದ ಕೇಳುವ ಸಂದರ್ಭ ಬರಬಹುದು. ಸಾಮಾಜಿಕವಾದ ಕೆಲಸವನ್ನು ಮಾಡುವವರಿಗೆ ತಾಳ್ಮೆ ಮುಖ್ಯವಾಗಿ ಬೇಕಾಗಿದೆ. ಸ್ವಭಾವವನ್ನು ತಿದ್ದಿಕೊಳ್ಳಲು ಇಷ್ಟಪಟ್ಟರೂ ನಿಮ್ಮ ಜೊತೆಗಿರುವವರು ಅದನ್ನು ಬಿಡಲಾರರು. ನಿಮ್ಮನ್ನು ಛೇಡಿಸುತ್ತ ಹಾಸ್ಯ ಮಾಡುವರು. ಸಾಲವನ್ನು ಮಾಡಬೇಕಾಗಿ ಬಂದರೆ ಬಹಳ ಎಚ್ಚರಿಕೆಯಿಂದ ಜನರನ್ನು ನೋಡಿ ಮಾಡಿ. ನಿರುತ್ಸಾಹಕ್ಕೆ ಮದ್ದು ಅವಶ್ಯಕ. ಯಾವುದಾದರೂ ಘಟನೆಯು ನಿಮ್ಮನ್ನು ಇಂದು ಹೆಚ್ಚು ಕಾಡಬಹುದು. ಯಾರನ್ನೂ ನಿರ್ಲಕ್ಷ್ಯದಿಂದ ನೋಡುವುದು ಬೇಡ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ವ್ಯಾಪರದಲ್ಲಿ ಸ್ವಲ್ಪ ನಷ್ಟವನ್ನು ಕಾಣುವಿರಿ. ಕೃಷಿಕರು ತಮ್ಮ ಮುಂದಿನ ಯೋಚನೆಗಳನ್ನು ಮಾಡುವರು.

ಮೀನ ರಾಶಿ: ಇಂದು ನಿಮ್ಮನ್ನು ಭೇಟಿಯಾಗಲು ಬಂದವರನ್ನು ಅಗೌರವದಿಂದ ಕಾಣುವುದು ಬೇಡ. ನಿಮ್ಮ ಹತ್ತಾರು ಕನಸುಗಳಲ್ಲಿ ಒಂದನ್ನು ನನಸು ಮಾಡಿಕೊಳ್ಳುವಿರಿ. ಬಂಧುಗಳ ವಿಯೋಗವಾರ್ತೆಯು ಬರಬಹುದು. ನೀವಂದು ಅಶಕ್ತರಿಗೆ ಸಹಾಯ ಮಾಡುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳಲೇ ಬೇಕು ಎಂಬ ದೃಢನಿರ್ಧಾರದಿಂದ ಜೀವನ ಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನವನ್ನು ಆರಂಭಿಸುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳು ಕೇಳಿ ಬರಬಹುದು. ಒಲಿಸಿಕೊಳ್ಳಲು ಸ್ತ್ರೀಯರು ನಿಮ್ಮನ್ನು ಪ್ರಶಂಸಿಸಿಯಾರು. ನಿಮ್ಮ ಕೈಲಾದ ಸಹಾಯವನ್ನು ಮಾಡಿ. ಸಾಧ್ಯವಾದರೆ ನಿತ್ಯವೂ ಅನ್ನದಾನ ನಡೆಯುವ ಸ್ಥಳಕ್ಕೆ ಹೋಗಿ ಸುವಸ್ತುವನ್ನು ಕೊಡಿ. ಸುಳ್ಳಾಡುವವರ ಬಗ್ಗೆ ಅತಿಯಾದ ಕೋಪವಿರಲಿದೆ. ನಿಮ್ಮ ಯೋಜನೆಗಳು ಎಣಿಸಿದಂತೆ ಆಗದೇ ಇರಬಹುದು. ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ. ಅಪರಿಚಿತಸ್ಥಳವು ಆಪ್ತವೂ ಆಗಲಿದೆ.

ತಾಜಾ ಸುದ್ದಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು