AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಈ ರಾಶಿಯವರಿಗೆ ಮಾಡದ ಕಾರ್ಯಕ್ಕೆ ಅಪವಾದ ಬರುವುದು-ಎಚ್ಚರ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಫೆಬ್ರವರಿ​​​​ 11) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Nitya Bhavishya: ಈ ರಾಶಿಯವರಿಗೆ ಮಾಡದ ಕಾರ್ಯಕ್ಕೆ ಅಪವಾದ ಬರುವುದು-ಎಚ್ಚರ
ರಾಶಿ ಭವಿಷ್ಯ
TV9 Web
| Edited By: |

Updated on: Feb 11, 2024 | 12:29 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರಾ, ಯೋಗ: ಪರಿಘ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 05:08 ರಿಂದ 06:34ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:47 ರಿಂದ 02:14 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:41 ರಿಂದ 05:08ರ ವರೆಗೆ.

ಸಿಂಹ ರಾಶಿ : ಇಂದು ಮನೋರಂಜನೆಗಾಗಿಯೇ ಸಮಯವನ್ನು ಮೀಸಲಿಟ್ಟರೂ ಅದನ್ನು ಯಾರಾದರೂ ಹಾಳುಮಾಡಿಯಾರು. ಆರೋಗ್ಯದ ವ್ಯತ್ಯಾಸವನ್ನು ನೀವು ನಿರ್ಲಕ್ಷಿಸಿ ಬೇರೆ ಏನನ್ನಾದರೂ ತಂದುಕೊಳ್ಳುವಿರಿ. ಇಂದು ಅತಿಯಾದ ಜಾಡ್ಯವು ಬರಲಿದ್ದು, ಯಾರ ಮಾತನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ನಿಮ್ಮಷ್ಟಕ್ಕೆ ಇರುವಿರಿ. ದೈಹಿಕ ಶ್ರಮವು ಇಂದು ಹೆಚ್ಚಿರುವುದು. ನಿಮ್ಮ ಶಿಷ್ಯರಿಂದ ನಿಮಗೆ ಉಡುಗೊರೆ ಸಿಗುವ ಸಾಧ್ಯತೆ ಇದೆ. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಬಹುದು. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ನೀವು ಕೇಳಬೇಕಾದೀತು. ಎಂದಿನಂತೆ ಇರುವ ಹಠದ ಸ್ವಭಾವಕ್ಕೆ ನಿಮ್ಮನ್ನು ನಿರ್ಲಕ್ಷಿಸಬಹುದು.‌ ಭವಿಷ್ಯದ ಬಗ್ಗೆ ಅತಿಯಾದ ಕಲ್ಪನೆ ಬೇಡ.

ಕನ್ಯಾ ರಾಶಿ : ಇಂದು ಬಿಟ್ಟು ಹೋದ ಆಪ್ತರ ಬಗ್ಗೆ ಹೆಚ್ಚು ಆಲೋಚಿಸುವಿರಿ. ಸಣ್ಣ ವ್ಯವಹಾರ ಮತ್ತು ಕೆಲಸವನ್ನು ಮಾಡುವವರಿಗೆ ಶ್ರಮವು ಅಧಿಕವಿರುವುದು. ಬರುವ ಒತ್ತಡವನ್ನು ನೀವು ಯಾವುದಾದರೂ ವಿಧಾನದ ಮೂಲಕ ಸರಿ ಮಾಡಿಕೊಳ್ಳುವಿರಿ. ಧ್ಯಾನ ಮತ್ತು ಯೋಗವು ನಿಮ್ಮ ಹಲವು ಮಾನಸಿಕ ಸಮಸ್ಯೆಗಳಿಗೆ ಉತ್ತರವಾಗುವುದು. ಇಂದಿನ ಕಾರ್ಯವು ನಿಮಗೆ ಸಮಾಧಾನ ಕೊಡದೇ ಇರಬಹುದು. ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸುವಿರಿ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು. ಸಣ್ಣ ಉಳಿತಾಯಕ್ಕೆ ಇಂದು ಬೆಲೆಯು ಬಂದಂತಾಗುವುದು. ಜೀವನದ ಲಕ್ಷ್ಯವು ಬೇರೆ ಕಡೆಗೆ ಯಾರಾದರೂ ಬದಲಿಸಬಹುದು. ಏನಾದರೂ ಮಾಡುತ್ತ ನಿಮ್ಮ ಮನಸ್ಸಿಗೆ ಕೆಲಸವನ್ನು ಕೊಡುವಿರಿ. ಜಾಣ್ಮೆಯಿಂದ ಇಂದು ನೀವು ಪ್ರಶಂಸೆಯನ್ನು ಪಡೆಯುವಿರಿ. ನಿಮಗೆ ಕೊಟ್ಟಿದ್ದನ್ನು ಮರಳಿಕೊಡುವ ಸ್ವಭಾವವು ಇರಲಿ.

ತುಲಾ ರಾಶಿ : ಇಂದು ನಿಮ್ಮ ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳದೇ ಅವರೊಡನೆ ಜಗಳವಾಡುವಿರಿ. ಆದಾಯದ ಗುಟ್ಟನ್ನು ಎಷ್ಟೇ ಒತ್ತಾಯ ಮಾಡಿದರೂ ಹೇಳಲಾರಿರಿ. ಇಂದಿನ ಎಲ್ಲ ಕಾರ್ಯದಲ್ಲಿಯೂ ಜಯವನ್ನು ಪಡೆದ ಸಂತೋಷವಿದ್ದರೂ ಅದನ್ನು ಅನುಭವಿಸುವ ಸಾಮರ್ಥ್ಯವು ಕಡಿಮೆ ಇರುವುದು. ಆರ್ಥಿಕಸ್ಥಿತಿಯು ಸುಧಾರಿಸಿದ್ದು ನಿಮಗೆ ಸ್ವಲ್ಪ ನೆಮ್ಮದಿ ಇರುವುದು. ಹಿರಿಯರಲ್ಲಿ ಭಕ್ತಿಯನ್ನು ತೋರಿಸುವಿರಿ. ಸಮಸ್ಯೆಯನ್ನು ಬರುವ ಮೊದಲೇ ಯೋಚಿಸಿ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಇರಿ. ನಿರೋದ್ಯೋಗ ಸಮಸ್ಯೆಯಿಂದ ಮಾನಸಿಕ ಹಿಂಸೆಯನ್ನು ಅನುಭವಿಸುವಿರಿ. ಸಹೋದರರ ಸಂಪತ್ತನ್ನು ಕಂಡು ನೀವು ಹೊಟ್ಟೆಕಿಚ್ಚು ಪಡುವಿರಿ. ನೆಚ್ಚಿನ ತಾಣವು ನಿಮಗೆ ಹೊಸ ಉತ್ಸಾಹವನ್ನು ನೀಡುವುದು. ಸಿಕ್ಕ ಸಣ್ಣ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಿ.

ವೃಶ್ಚಿಕ ರಾಶಿ : ಇಂದು ನಿಮಗೆ ಸಹಾಯ ಮಾಡುವ ಸ್ವಭಾವವು ಇರುವುದು. ಉದ್ಯಮದ ಕಾರ್ಯಕ್ಕೆ ನೀವು ಪ್ರಯಾಣ‌ ಮಾಡುವ ಸಾಧ್ಯತೆ ಇದೆ.‌ ಮಕ್ಕಳಿಂದ ನಿಮಗೆ ಸಂತೋಷವು ಸಿಗಲಿದೆ. ಕುಟುಂಬದ ಹಿರಿಯರ ಬಗ್ಗೆ ಇರುವ ನಿಮ್ಮ ಕಲ್ಪನೆಯು ಬದಲಾಗುವುದು. ಇಂದು ಕಛೇರಿಯನ್ನು ಮಹಿಳೆಯರು ನಿರ್ವಹಿಸಬೇಕಾಗುವುದು. ನೂತನ ವಸ್ತುಗಳನ್ನು ಖರೀದಿಸಲಿದ್ಸೀರಿ. ಮಾಡದ ಕಾರ್ಯಕ್ಕೆ ಅಪವಾದ ಬರುವುದು. ನಿರಂತರ ಕೆಲಸವು ನಿಮಗೆ ಬೇಸರ ತಂದೀತು. ಯಾರಿಗಾದರೂ ಧನಸಹಾಯವನ್ನು ಮಾಡಬೇಕು ಎಂದು ಅನ್ನಿಸಬಹುದು. ಇಂದು ವೃತ್ತಿಯಲ್ಲಿ ಆತಂಕವು ಬರಬಹುದು. ಪ್ರಾಣಿಗಳಿಂದ ಭೀತರಾಗುವ ಸಾಧ್ಯತೆ ಇದೆ. ನಿಮ್ಮ ಇಷ್ಟದವರ ಭೇಟಿಯಾಗುವಿರಿ. ಎದುರಿನವರ ಇಂಗಿತವನ್ನು ತಿಳಿದುಕೊಳ್ಳಲು ಕಷ್ಟವಾದೀತು. ನಿಮ್ಮ ಅನಾರೋಗ್ಯವನ್ನು ಯಾರ ಬಳಿಯೂ ಹೇಳಿಕೊಳ್ಳಲಾರಿರಿ. ನಿಮ್ಮ ಸಾಮರ್ಥ್ಯಕ್ಕೆ ಯೋಗ್ಯವಾದ ಕೆಲಸವನ್ನು ಮಾಡಿ.

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ