Astrology: ಈ ರಾಶಿಯವರ ಜೀವನದಲ್ಲಿ ಪ್ರೇಮವು ಬಹು ಕಾಲ ಉಳಿಯದು

ರಾಶಿ ಭವಿಷ್ಯ ಶನಿವಾರ(ಸೆ.28): ತಪ್ಪು ಕೆಲಸದಿಂದ ಅಧಿಕಾರಿಗಳು ಗದರಿಸುವರು.‌ ನಿಮ್ಮಿಂದ ಸ್ವಲ್ಪ ಉದಾಸೀನತೆಯೂ ಸಮಸ್ಯೆಯನ್ನು ಹೆಚ್ಚಾಗುವಂತೆ ಮಾಡುವುದು. ನೀವು ಪ್ರೀತಿಯಿಂದ ನೋವನ್ನು ಅನುಭವಿಸಬಹುದು. ಹಾಗಾದರೆ ಸೆಪ್ಟೆಂಬರ್​ 28ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯವರ ಜೀವನದಲ್ಲಿ ಪ್ರೇಮವು ಬಹು ಕಾಲ ಉಳಿಯದು
ಈ ರಾಶಿಯವರ ಜೀವನದಲ್ಲಿ ಪ್ರೇಮವು ಬಹು ಕಾಲ ಉಳಿಯದು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 28, 2024 | 12:15 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:23 ರಿಂದ 10:53, ಯಮಘಂಡ ಕಾಲ ಮಧ್ಯಾಹ್ನ 01:53ರಿಂದ ಸಂಜೆ 03:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:23 ರಿಂದ 07:53 ರ ವರೆಗೆ.

ಧನು ರಾಶಿ: ಇಂದು ನೀವು ಭಾವಪರವಶರಾಗುವ ಸಾಧ್ಯತೆ ಇದೆ. ನಿಮಗೆ ಇಷ್ಟವಿಲ್ಲದ ವಿಚಾರದಲ್ಲಿ ಚರ್ಚೆ ನಾಡೆಯುವುದು. ಪ್ರೀತಿ ಪಾತ್ರರನ್ನು ನೀವು ದೂರಮಾಡಿಕೊಳ್ಳುವಿರಿ. ನಿರಂತರ ಕೆಲಸವನ್ನು ಮಾಡದೇ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಭೂಮಿಯ ದಾಖಲೆಗಳನ್ನು ಸರಿಮಾಡಿಕೊಳ್ಳಲು ಶ್ರಮಿಸಬೇಕಾದೀತು. ನಿಮಗೆ ಮನ್ನಣೆ ಸಿಗದೇ ಇರುವುದಕ್ಕೆ ಸಿಟ್ಟಗುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಿಮುಖರಾಗುವ ಸಾಧ್ಯತೆ ಇದೆ. ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಪರೂಪದ ಸ್ಥಳಕ್ಕೆ ಹೋಗಲಿದ್ದೀರಿ. ಎಲ್ಲ ಸಂದರ್ಭದಲ್ಲಿ ನಿಮ್ಮ ವರ್ತನೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಹಣವನ್ನು ಕಳೆದುಕೊಳ್ಳಬಹುದು. ಸಂಗಾತಿಯ ಮೇಲೆ ಸಿಟ್ಟುಗೊಳ್ಳಲಿದ್ದೀರಿ. ಸಂಗಾತಿಯು ನಿಮ್ಮನ್ನು ಬೆರಗುಗೊಳಿಸಬಹುದು. ದೂರದ ಬಂಧುಗಳ ಸಮಾಗಮವಾಗಬಹುದು. ಬೇಡವೆಂದರೂ ಕೆಲವು ಮಾತನ್ನು ಆಡುವ ಸಂದರ್ಭವು ಬರುತ್ತದೆ. ನಿಮ್ಮ ಮೆಚ್ಚುಗೆಯನ್ನು ನಿರೀಕ್ಷಿಸಿಯಾರು.

ಮಕರ ರಾಶಿ: ಇಂದು ನಿಮ್ಮ‌ ಬಗ್ಗೆ ಬರುವ ಅಪವಾದವನ್ನು ನೀವು ಜೀರ್ಣಿಸಿಕೊಳ್ಳಲು ಕಷ್ಟವಾದೀತು. ಸಂಗಾತಿಯ ವಿಚಾರದಲ್ಲಿ ನಿಮಗೆ ಸಂಪೂರ್ಣ ತೃಪ್ತಿ ಇರದು. ಕೋಪ ಅಲ್ಪಾವಧಿಯಾದರು ಅದು ಹೆಚ್ಚು ಸಮಯವನ್ನು ಹಾಳುಮಾಡುವುದು.‌ ಪ್ರೇಮ ಸಂಬಂಧವು ಆಕರ್ಷಕವಾಗಿದ್ದರೂ ಬಹು ಕಾಲ ಉಳಿಯದು. ಇಂದು ನೀವು ಎದುರಾಳಿಯನ್ನು ಎದುರಿಸುವುದು ಕಷ್ಟವಾದೀತು. ವೃತ್ತಿಯಲ್ಲಿ ಖುಷಿಯಿಂದ ಈ ದಿನವನ್ನು ಕಳೆಯುವಿರಿ. ಅನ್ಯರಿಂದ ಅಪಹಾಸ್ಯಕ್ಕೆ ಒಳಗಾಗುವಿರಿ. ಅಪರಿಚಿತ ದೂರವಾಣಿ‌‌ ಕರೆಗಳು ನಿಮ್ಮನ್ನು ಮೋಸ ಮಾಡಬಹುದು. ಆಹಾರದ ವ್ಯಾಪಾರವನ್ನು ನೀವು ನಡೆಸುತ್ತಿದ್ದರೆ ಎಂದಿಗಿಂತ ಅಧಿಕ ಲಾಭವು ಆಗಬಹುದು. ಮಾತಗಳನ್ನು‌ ಇಂದು ಕಡಿಮೆ ಆಡಲಿದ್ದೀರಿ. ಅನಧಿಕೃತ ಮಾಹಿತಿಯನ್ನು ಹಂಚಿ ಎಲ್ಲರ‌ ಕೆಂಗಣ್ಣಿಗೆ ಗುರಿಯಾಗುವಿರಿ. ನಿಮ್ಮ ಮೇಲೆ ದೋಷಪೂರಿತ ಕಣ್ಣು ಬೀಳಬಹುದು. ಪ್ರಭಾವಿ ವ್ಯಕ್ತಿಗಳಿಂದ ತೊಂದರೆಯು ದೂರಾಗಬಹುದು. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು.

ಕುಂಭ ರಾಶಿ: ನೀವು ಉದ್ಯಮದಲ್ಲಿ ಅನಿರೀಕ್ಷಿತ ಬದಲಾವಣೆ ತರುವಿರಿ. ಅಪ್ತರ ಮೇಲಿನ ನಂಬಿಕೆಯು ನಷ್ಟವಾಗುವುದು. ನಿಮ್ಮ ಇಂದಿನ ಸಮಯ ಹಾಗೂ ಶಕ್ತಿಯು ಇತರರಿಗೆ ಮೀಸಲಾದೀತು. ನಿಮಗೆ ಸಂಬಂಧಪಡದ ವಿಚಾರದಲ್ಲಿ ತೊಡಗಿಸಿಕೊಳ್ಳಬೇಡಿ. ನಿಮ್ಮ ಸಂಗಾತಿಯ ಜೊತೆ ಇಂದು ಏನನ್ನೂ ಹಂಚಿಕೊಳ್ಳದೇ, ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.‌ ಸಂಗಾತಿಯ ಮಾತಗಳು ನಿಮಗೆ ಕಿರಿಕಿರಿ ಎನಿಸಿದರೂ ಮಾತನ್ನೇ ಅನುಸರಿಸುವಿರಿ. ಖರ್ಚಿನ ಮಾರ್ಗಗಳು ಒಂದೊಂದೇ ತೆರೆದುಕೊಂಡು ನಿಮಗೆ ಬೇಸರವನ್ನು ಉಂಟುಮಾಡಬಹುದು. ಹೊಸ ಯೋಜನೆಯನ್ನು ನೀವು ಇಂದು ಆರಂಭಿಸುವಿರಿ. ಬೆಂಬಲವು ಚೆನ್ನಾಗಿರಲಿದೆ. ನಿಮ್ಮನ್ನೇ ನೀವು ಪ್ರಶಂಸಿಸಿಕೊಳ್ಳುವಿರಿ. ಹಲವು ತೊಡಕುಗಳಿಂದ ನೀವು ಮುಕ್ತರಾಗಲು ಬಯಸುವಿರಿ. ನಿಮ್ಮ ಕೆಲಸವು ನ್ಯಾಯ ಸಮ್ಮತವಾಗಿ ಇರಿ. ನೀವು ಕಾಲ್ಪನಿಕ ಪ್ರಪಂಚಕ್ಕೆ ಪ್ರಯಾಣಿಸುವಿರಿ. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ.

ಮೀನ ರಾಶಿ: ಮಕ್ಕಳ ಜೀವನವನ್ನು ಕಂಡು ಇಂದು ದುಃಖವಾಗಬಹುದು. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡಲಾಗದು. ತಪ್ಪು ಕೆಲಸದಿಂದ ಅಧಿಕಾರಿಗಳು ಗದರಿಸುವರು.‌ ನಿಮ್ಮಿಂದ ಸ್ವಲ್ಪ ಉದಾಸೀನತೆಯೂ ಸಮಸ್ಯೆಯನ್ನು ಹೆಚ್ಚಾಗುವಂತೆ ಮಾಡುವುದು. ನೀವು ಪ್ರೀತಿಯಿಂದ ನೋವನ್ನು ಅನುಭವಿಸಬಹುದು. ಸಹೋದ್ಯೋಗಿಗಳು ಇಂದಿನ ನಿಮ್ಮ ಕೆಲಸಗಳನ್ನು ಪೂರ್ಣಗೊಳಿಸಲು ಸಹಾಯ ಮಾಡಬಹುದು. ಏಕಾಗ್ರತೆಯಿಂದ ಮಾಡುವ ಕೆಲಸವನ್ನು ಮಾಡಲು ಕಷ್ಟವಾದೀತು. ಸಂಗಾತಿಯಿಂದ ನಿಮಗೆ ಸಲಹೆಯಂತೆ ಮುಂದುವರಿಯಿರಿ. ಆಗಬೇಕಾದ ಕೆಲಸಕ್ಕೆ ಇಂದಿನ ಸುತ್ತಾಟವು ವ್ಯರ್ಥವಾಗಲಿದೆ. ಮನೆಯ ನಿರ್ಮಾಣದ ಕಾರ್ಯವನ್ನು ಮಾಡುವುದು ಕಷ್ಟವಾಗಲಿದೆ. ಏಕಾಂತದಲ್ಲಿ ಇರಲು ಇಷ್ಟವಾಗುವುದು. ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿರದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ.

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​