Horoscope: ಇಂದು ನಿಮ್ಮ ಮಾತಿನಿಂದಾಗಿ ತೊಂದರೆಗಳು ಬರಬಹುದು-ಎಚ್ಚರ
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಮಾರ್ಚ್ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಶಿವ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:44 ರಿಂದ 11:14 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:42 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:15 ರಿಂದ 08:15ರ ವರೆಗೆ.
ಧನು ರಾಶಿ : ಇಂದು ಭೂಮಿಯ ವ್ಯವಹಾರದಲ್ಲಿ ಮಾತ್ರ ತೊಡಗಿದರಿಗೆ ಲಾಭವಾಗುವಂತೆ ಅನ್ನಿಸುವುದು. ಯಾರನ್ನೂ ನಂಬುವುದು ಎಂಬ ಗೊಂದಲ ಇರುವುದು. ಸರ್ಕಾರೇತರ ಸಂಸ್ಥೆಗಳಿಂದ ಉನ್ನತ ಸ್ಥಾನಕ್ಕೆ ಅವಕಾಶ ಬರಬಹುದು. ದೂರದಲ್ಲಿರುವವರೆಗೆ ಮನೆಯ ನೆನಪು ಕಾಡಬಹುದು. ನೀವು ಇಂದು ಎಲ್ಲರಿಂದ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಮಂಗಲ ಕಾರ್ಯಗಳಿಂದ ನೆಮ್ಮದಿ ಇರುವುದು. ಸ್ಥಿರಾಸ್ತಿಯನ್ನು ವ್ಯವಹಾರ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಯುಕ್ತಿಯಿಂದ ಕೆಲಸ ಮಾಡುವುದು ಒಳಿತು. ಮಿತ್ರರ ಮನಸ್ತಾಪವನ್ನು ನೀವು ಬಗೆಹರಿಸಿಕೊಳ್ಳುವಿರಿ. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾಗಿ ಇರುವುದಿಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ ಇರುಬುದು. ಸಾಹಿತ್ಯದಲ್ಲಿ ಆಸಕ್ತಿ ಮೂಡುವ ಸಾಧ್ಯತೆ ಇದೆ.
ಮಕರ ರಾಶಿ : ನಿಮ್ಮ ಆದಾಯದ ಬಗ್ಗೆ ಸ್ಪಷ್ಟ ಮಾಹಿತಿಯು ಯಾರ ಬಳಿಯೂ ಹೇಳುವುದು ಬೇಡ. ಉದ್ಯಮದ ವಿಚಾರದಲ್ಲಿ ಯಾರಿಗಾದರೂ ಅಸೂಯೆ ಬಂದು ಏನಾದರೂ ಮಾಡಬಹುದು. ಉದ್ಯೋಗಕ್ಕೆ ಸಂಬಂಧಿಸಿದಂತೆ ಕಿರಿಕಿರಿಯನ್ನು ಅನುಭವಿಸಿದರೂ ಅದನ್ನು ವ್ಯಕ್ತ ಮಾಡುವುದು ಬೇಡ. ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ನಿಮ್ಮ ಸರಿಯಾದ ಕೆಲಸವನ್ನು ಮಾಡಿ. ಹಳೆಯ ಮನೆಯ ದುರಸ್ತಿ ಕಾರ್ಯವು ಜರುಗಲಿದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದಾಂಪತ್ಯಕ್ಕೆ ಹೆಚ್ಚು ಒತ್ತು ಕೊಡುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಿ ಹುಡುಕಾಟ ಮಾಡುವಿರಿ.
ಕುಂಭ ರಾಶಿ : ಇಂದು ಮನೆಯಲ್ಲಿ ಶುಭ ಕಾರ್ಯವನ್ನು ಮಾಡುವ ಬಗ್ಗೆ ಇತರರ ಜೊತೆ ಚರ್ಚಿಸುವಿರಿ. ಪಾಲುದಾರಿಕೆಯಲ್ಲಿ ಎಚ್ಚರ ತಪ್ಪಿಸಿಕೊಳ್ಳುವುದು ಬೇಡ. ಬಂಧುಗಳ ಮಾತು ನಿಮಗೆ ಕಿರಿಕಿರಿ ಅನಿಸಬಹುದು. ಸಿಟ್ಟು ಮಾಡಿಕೊಂಡು ಮನೆಯಿಂದ ಹೊರಟರೂ ವ್ಯವಹಾರದಲ್ಲಿ ಲಾಭ ಬರುವ ಕಾರಣ ಅನಿವಾರ್ಯವಾಗಿ ಶಾಂತರಾಗಬೇಕಾದೀತು. ಮನೆಯ ಬಗ್ಗೆಯೆರ ಹೆಚ್ಚು ಯೋಚಿಸುವಿರಿ. ಅನಾರೋಗ್ಯವು ಉತ್ಸಾಹವನ್ನು ಕಡಿಮೆ ಮಾಡುವುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಛೇರಿಯಲ್ಲಿ ಅನಗತ್ಯವಾಗಿ ಮಾತನಾಡಿ ಸುಮ್ಮನೇ ವ್ಯಕ್ತಿತ್ವವನ್ನು ಹಾಳುಮಾಡಿಕೊಳ್ಳುವುದು ಬೇಡ. ಯಾರಾದರೂ ವ್ಯಕ್ತಿತ್ವನ್ನು ಅನುಸರಿಸುವ ಮೊದಲು ನಿಮ್ಮ ಬಗ್ಗೆ ಅರಿವು ಇರಲಿ. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕಾಗುವುದು. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು. ಆಪ್ತರ ಮಾತಿನ ಮೇಲೆ ಭರವಸೆ ಇಡಿ.
ಮೀನ ರಾಶಿ : ಇಂದು ನಿಮ್ಮ ವಾಹನದಿಂದ ಲಾಭವು ಕಾಣಿಸಿಕೊಳ್ಳುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಬೇಕಾದ ಅನುಕೂಲತೆಗಳು ಸಹಜವಾಗಿ ನಿರ್ಮಾಣವಗಲಿದೆ. ಆಲಸ್ಯದಿಂದ ನಿಮ್ಮ ವ್ಯಾಪರದಲ್ಲಿ ಹಿನ್ನಡೆ ಇರಲಿದೆ. ಸಾಲದ ಚಿಂತೆಯಲ್ಲಿ ನೀವು ಎಲ್ಲವನ್ನೂ ಮರೆಯುವಿರಿ. ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಎಲ್ಲರ ಜೊತೆಗೂ ವಾಗ್ವಾದಕ್ಕೆ ಹೋಗುವುದು ಬೇಡ. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಕಳೆದುಕೊಂಡ ವಸ್ತುವನ್ನು ಬೇರೆ ರೀತಿಯಲ್ಲಿ ಪಡೆದುಕೊಳ್ಳುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು. ಉದ್ಯೋಗದ ಬಗ್ಗೆ ಯಾರ ಬಳಿಯಾದರೂ ಚರ್ಚಿಸುವಿರಿ.
-ಲೋಹಿತ ಹೆಬ್ಬಾರ್ – 8762924271 (what’s app only)




