AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರ ಹಿತಶತ್ರುಗಳು ನಿಮ್ಮ ವರ್ಚಸ್ಸಿಗೆ ಧಕ್ಕೆ ತರಬಹುದು-ಎಚ್ಚರ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಮಾರ್ಚ್​​​​​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರ ಹಿತಶತ್ರುಗಳು ನಿಮ್ಮ ವರ್ಚಸ್ಸಿಗೆ ಧಕ್ಕೆ ತರಬಹುದು-ಎಚ್ಚರ
ದಿನಭವಿಷ್ಯ
TV9 Web
| Edited By: |

Updated on: Mar 01, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:16 ರಿಂದ 12:45ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:19 ರಿಂದ 09:48ರ ವರೆಗೆ.

ಧನು ರಾಶಿ : ಇಂದು ನೀವು ಮಹತ್ತರವಾದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಹಿಂದೇಟು ಹಾಕುವಿರಿ. ಹೆಚ್ಚಿನ ಪ್ರತಿಫಲಾಪೇಕ್ಷೆ ಇಲ್ಲದೆ ನೀವು ಈ ಕೆಲಸವನ್ನು ಮಾಡುವ ಇಚ್ಛೆ ಇರುವುದು. ಹಿತಶತ್ರುಗಳು ನಿಮ್ಮ ವರ್ಚಸ್ಸಿಗೆ ಧಕ್ಕೆ ತರಬಹುದು. ಬಹಳ ಕಾಲದ ಕಳೆದಮೇಲೆ ಗೆಳೆಯರ ಭೇಟಿಯಿಂದ‌ ಸಂತೋಷವು ಸಿಗಲಿದೆ. ಆತ್ಮಸಂತೋಷವು ನಿಮ್ಮ ಕಾರ್ಯಕ್ಕೆ ಇನ್ನಷ್ಟು ಉತ್ಸಾಹವನ್ನು ಕೊಡುವುದು. ಸಂಗಾತಿಯ ಆರೋಗ್ಯದ ಸಮಸ್ಯೆಯನ್ನು ನೀವು ಬಗೆಹರಿಸುವುದು ಕಷ್ಟವಾದೀತು. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಅನಬಾರದ್ದನ್ನು ಬಾಯ್ತಪ್ಪಿನಿಂದ ಹೇಳಿ ಬೇಸರ ಮಾಡಿಸುವಿರಿ. ಗುರುಚರಿತ್ರೆಯ ಪಾರಾಯಣ ಮಾಡಿ.

ಮಕರ ರಾಶಿ : ಇಂದು ನಿಮ್ಮವರು ನಿಮ್ಮ ದಿಕ್ಕನ್ನು ತಪ್ಪಿಬಹುದು. ಸಭ್ಯರಂತೆ ನೀವು ಕಾಣಿಸುವಿರಿ. ಬಂಧುಗಳು ನಿಮಗೆ ಬೇಸರವಾಗುವ ಮಾತುಗಳನ್ನು ಆಡಬಹುದು. ನಿಮ್ಮಿಂದಾ ಸಾಧ್ಯವಾದಲ್ಲಿ ಅಗತ್ಯ ಇರುವ ಒಬ್ಬರಿಗೆ ಸಹಾಯ ಮಾಡಿ. ಸಂಗಾತಿ ಮತ್ತು ಮಕ್ಕಳ ಮಾತಿನ ಬಗ್ಗೆ ನಿರ್ಲಕ್ಷ್ಯ ಇರುವುದು. ಸಾಹಸಕ್ಕೆ ಹೆಚ್ಚು ಒತ್ತು ಬೇಡ. ಸಿದ್ಧವಸ್ತುಗಳ ಮಾರಾಟದಿಂದ ಲಾಭವನ್ನು ಕಾಣುವಿರಿ. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಇನ್ನೊಬ್ಬರ ಸಂಕಷ್ಟವನ್ನು ನಿವಾರಿಸಲು ಉತ್ಸಾಹದಿಂದ ಇರುವಿರಿ. ಶನೈಶ್ಚರನಿಗೆ ಎಳ್ಳೆಣ್ಣೆಯ ದೀಪವನ್ನು ಬೆಳಗಿಸಿ.

ಕುಂಭ ರಾಶಿ : ನಿಮ್ಮ ಯೋಜನೆಯನ್ನು ಕ್ರಮಬದ್ಧವಾಗಿ ರೂಪಿಸಿಕೊಳ್ಳುವಿರಿ. ನಿಮ್ಮ ಸ್ವಾವಲಂಬಿ ಬದುಕು ಇತರರಿಗೆ ಆದರ್ಶವಾದೀತು. ಆರ್ಥಿಕತೆಯಲ್ಲಿ ನೀವು ಸಾಲ ಮಾಡಬೇಕಾದೀತು. ಸ್ವಂತ ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಲ್ಪ ಹಿನ್ನಡೆ. ಉತ್ಪನ್ನಗಾರರಿಗೆ ಸಂತೋಷದ ದಿನವು ಇದಾಗಲಿದೆ. ನೂತನ ಗೃಹನಿರ್ಮಾಣದ ಬಗ್ಗೆ ಮನೆಯವರ ಜೊತೆ ಮಾತನಾಡುವಿರಿ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಶಿವಾರ್ಚನೆಯನ್ನು ಮಾಡಿ.

ಮೀನ ರಾಶಿ : ಇಂದು ನಿಮ್ಮ ಮಾತಿಗೆ ಎಲ್ಲರ ಒಪ್ಪಿಗೆ ಸಿಗುವುದಹ.‌ ಮಕ್ಕಳಿಂದ ವ್ಯಾಪಾರ- ವ್ಯವಹಾರಕ್ಕೆ ಆರ್ಥಿಕ ನೆರವನ್ನು ನೀವು ನಿರೀಕ್ಷಿಸಬಹುದು. ಹಳೆಯ ವಾಹನಗಳ ಮಾರಾಟ ಮಾಡುವ ಬಗ್ಗೆ ಆಲೋಚನೆ ಇರುವುದು. ಹೂಡಿಕೆಯ ಬಗ್ಗೆ ನಿಮಗೆ ಅಸಮಾಧಾನ ಬರಬಹುದು. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು. ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಹನುಮಾನ್ ಚಾಲೀಸ್ ಪಠಣವನ್ನು ಬಿಡುವುದು ಬೇಡ.

-ಲೋಹಿತ ಹೆಬ್ಬಾರ್ – 8762924271 (what’s app only)

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ