AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸಗಳಲ್ಲಿನ ಅಡೆತಡೆಗಳು ಕೊನೆಗೊಳ್ಳುತ್ತವೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಚತುರ್ದಶೀ ತಿಥಿ, ಭಾನುವಾರ ಮರೆವು ಅಧಿಕ, ವಿದೇಶದಲ್ಲಿ ಸಂಕಷ್ಟ, ಆಯ್ಕೆಯಲ್ಲಿ ಗೊಂದಲ ಎಲ್ಲವೂ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಕೆಲಸಗಳಲ್ಲಿನ ಅಡೆತಡೆಗಳು ಕೊನೆಗೊಳ್ಳುತ್ತವೆ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: May 11, 2025 | 1:20 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವಜ್ರ, ಕರಣ: ಕೌಲವ, ಸೂರ್ಯೋದಯ – 06 : 07 am, ಸೂರ್ಯಾಸ್ತ – 06 : 50 pm, ಇಂದಿನ ಶುಭಾಶುಭಕಾಲ: ರಾಹು ಕಾಲ 09:18 – 10:54, ಯಮಘಂಡ ಕಾಲ 14:04 – 15:40, ಗುಳಿಕ ಕಾಲ 06:08 – 07:43

ತುಲಾ ರಾಶಿ: ಸಂಗಾತಿಯ ಜೊತೆ ಭವಿಷ್ಯದ ಮಾತುಕತೆಯಾಡಲಿದ್ದೀರಿ. ಇಂದು ನೀವು ಅನ್ಯರಿಂದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಆದ್ದರಿಂದ ಅವರ ಅಭಿಪ್ರಾಯವನ್ನು ಗೌರವಿಸಿ ಮತ್ತು ಅವರಿಗೆ ಸ್ವಲ್ಪ ಜಾಗವನ್ನು ನೀಡಿ. ನಿಮಗೆ ಉತ್ತೇಜನ ನೀಡುವವರ ಕೊರತೆ ಇರುವುದು. ಸಮರ್ಪಣೆಯನ್ನು ಕಾಪಾಡಿಕೊಳ್ಳುವುದರಿಂದ ಕೆಲಸವು ಸಮಯಕ್ಕೆ ಪೂರ್ಣಗೊಳ್ಳುತ್ತದೆ. ಇದು ಹಣದ ವಿಷಯದಲ್ಲಿ ಪ್ರಗತಿಯ ಸಮಯ, ನಿಮ್ಮ ಪ್ರಯತ್ನಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ಉದ್ಯಮಿಗಳಿಗೆ ಪ್ರಮುಖ ವ್ಯವಹಾರಗಳಲ್ಲಿ ಯಶಸ್ಸು ಸಿಗುತ್ತದೆ. ಇಲ್ಲದಿದ್ದರೆ ನಿಮ್ಮ ಹುಂಬುತನ ಸ್ವಭಾವದಿಂದ ಸಮಸ್ಯೆಗಳು ಉಂಟಾಗಬಹುದು. ನೌಕರರನ್ನು ಚೆನ್ನಾಗಿ ಇಟ್ಟುಕೊಳ್ಳುವುದು ಮುಖ್ಯವಾಗುವುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ನಿಮ್ಮ ವೇತನದ ಬಗ್ಗೆ ಹೇಳಬೇಕಾಗಿಬರಬಹುದು. ಬಂದ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಉತ್ತಮ.

ವೃಶ್ಚಿಕ ರಾಶಿ: ನಿಮ್ಮ ಸಹಾಯಕ್ಕೆ ಪ್ರತಿಫಲವಿಲ್ಲದೇ ಬೇಸರವಾಗಲಿದೆ. ಯಾವುದನ್ನಾದರೂ ಒಪ್ಪಿಕೊಳ್ಳುವ ಮೊದಲು ನಿಮ್ಮ ಒತ್ತಡವನ್ನು ಗಮನಿಸಿಕೊಳ್ಳಿ. ನೀವು ಪ್ರೇಮ ಸಂಬಂಧದಲ್ಲಿ ಬೇಸರವನ್ನು ಅನುಭವಿಸಬಹುದು, ಕೆಲಸವನ್ನು ಪೂರ್ಣಗೊಳಿಸುವ ಸಮಯ ಬಂದಿದೆ. ಆಸ್ತಿ ವಿವಾದ ದಿಡೀರನೆ ಏಳುವುದು. ಕುಟುಂಬದ ಅಗತ್ಯಗಳನ್ನು ಪೂರೈಸುವಲ್ಲಿ ನೀವು ಸಂತೋಷವನ್ನು ಕಾಣುವಿರಿ. ಸಮಯಕ್ಕೆ ಸರಿಯಾಗಿ ಒಳ್ಳೆಯ ಅವಕಾಶಗಳನ್ನು ಬಳಸಿಕೊಳ್ಳಲು ಪ್ರಯತ್ನಿಸಿ. ಮನಸ್ಸಿಲ್ಲದೇ ಇದ್ದರೂ ಅವರ ಜೊತೆ ಕೆಲಸ ಮಾಡಬೇಕಾಗುವುದು. ಮಾತನಾಡುವಾಗ ಸರಿಯಾದ ಪದಗಳನ್ನು ಬಳಸಿ, ಇಲ್ಲದಿದ್ದರೆ ಸ್ವಲ್ಪ ಅಜಾಗರೂಕತೆಯು ನಿಮಗೆ ಹಾನಿ ಮಾಡಬಹುದು. ವೈಯಕ್ತಿಕ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಿ, ತಪ್ಪಿಸಿಕೊಳ್ಳಬೇಡಿ. ವೈರಿಗಳನ್ನು ನೀವೇ ಸ್ವತಃ ಸೃಷ್ಟಿಸಿಕೊಳ್ಳುವಿರಿ. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಮನೆಯ ಮುಂದೆ ಬಂದವರನ್ನು ಖಾಲಿ ಕೈಯಲ್ಲಿ ಕಳುಹಿಸುವುದು ಬೇಡ.

ಧನು ರಾಶಿ: ನೀವು ನಂಬಿದವರಿಂದ ನಿಮ್ಮ ಕಾರ್ಯವಾಗಲಿದೆ. ಸುಮ್ಮನೇ ಇನ್ನೊಬ್ಬರ ಭವಿಷ್ಯದ ಬಗ್ಗೆ ಮಾರ್ಗದರ್ಶನ ಮಾಡುವುದು ಬೇಡ. ನೀವು ಎಂದಿಗಿಂತಲೂ ನಿಮ್ಮ ಸಂಗಾತಿಗೆ ಹತ್ತಿರವಾಗಲಿದ್ದೀರಿ. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಆರ್ಥಿಕ ವ್ಯವಹಾರ ಮಾಡಲು ನಿಖರತೆಯನ್ನು ಇಟ್ಟುಕೊಳ್ಳಿ. ಅತಿಯಾದ ಉತ್ಸಾಹವು ನಷ್ಟಗಳಿಗೆ ಕಾರಣವಾಗಬಹುದು. ಎಚ್ಚರಿಕೆಯಿಂದ ಮುಂದುವರಿಯಿರಿ. ಆತ್ಮವಿಶ್ವಾಸ ಮತ್ತು ಉತ್ಸಾಹವು ವೃತ್ತಿಪರ ಅವಕಾಶಗಳನ್ನು ಪಡೆಯಲು ಸಹಾಯ ಮಾಡುತ್ತದೆ. ನ್ಯಾಯಾಲಯದ ಮೇಲೆ ನಂಬಿಕೆ ಬಲವಾಗಿ ಉಳಿಯುತ್ತದೆ. ನಿಮಗೆ ಹೊಸ ಜವಾಬ್ದಾರಿಗಳು ಸಿಗಬಹುದು. ದೂರದರ್ಶಿತ್ವದ ಜೊತೆ ಕೆಲಸ‌ಮಾಡಿ. ಯಶಸ್ಸು ಖಂಡಿತ ಸಿಗುತ್ತದೆ. ಬುದ್ಧಿವಂತಿಕೆಯಿಂದ ಕೆಲಸವನ್ನು ಮಾಡಿ ನಿಭಾಯಿಸಿಕೊಳ್ಳಿ. ಪರಿಚಿತ ಜನರನ್ನು ಭೇಟಿಯಾಗುವ ಸಂತೋಷವನ್ನು ಹಂಚಿಕೊಳ್ಳುವಿರಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ.

ಮಕರ ರಾಶಿ: ಎದುರಿಸಲು ಸಾಧ್ಯವಾದರೆ ಮಾತ್ರ ವಾಕ್ಸಮರಕ್ಕೆ ಆಹ್ವಾನಿಸಿ.‌ ಇಲ್ಲವಾದರೆ ಸುಮ್ಮನಿರಿ. ಇಂದು ನಿಮಗೆ ಪ್ರೇಮವು ಸಂತೋಷವನ್ನು ಕೊಡದೇಹೊಇಗಬಹುದು. ನಿಮ್ಮ ಸಂಗಾತಿಗೆ ಈ ವಾರ ಸ್ಥಳಾವಕಾಶ ಬೇಕಾಗುತ್ತದೆ, ಅವರ ಅಭಿಪ್ರಾಯವನ್ನು ಗೌರವಿಸಿ. ನಿಮ್ಮ ಪ್ರಮುಖ ಕೆಲಸವನ್ನು ಯೋಜಿಸಿ. ಅನಂತರ ಪರಿಸ್ಥಿತಿ ತುಂಬಾ ಚೆನ್ನಾಗಿರುತ್ತದೆ ಮತ್ತು ಈ ಒಳ್ಳೆಯ ಸಮಯದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಿ. ಮನೆಯಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣ ಇರುತ್ತದೆ. ನಿರ್ಧಾರಗಳನ್ನು ಬುದ್ದಿವಂತಿಕೆಯಿಂದ ತೆಗೆದುಕೊಳ್ಳಿ, ಎಲ್ಲದೂ ನಿಮ್ಮದೇ ಎಂಬ ಮನೋಭಾವ ಬೇಡ. ಕಾಳಜಿ ವಹಿಸುವುದನ್ನು ನೋಡುವುದು ನಿಮ್ಮನ್ನು ಉತ್ತಮ ಮನಸ್ಥಿತಿಯಲ್ಲಿ ಇರಿಸುತ್ತದೆ. ಪಾಲುದಾರಿಕೆಯಲ್ಲಿ ನಿಮ್ಮ ಪಾಲುದಾರಿಕೆಯೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಹಂಚಿಕೊಳ್ಳುವ ಬಗ್ಗೆ ಸಮಾಧಾನ ಇರದು. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳುವಿರಿ.

ಕುಂಭ ರಾಶಿ: ಬಂಧುಗಳ ವರ್ತನೆಯಿಂದ ಅಪಮಾನವಾಗಲಿದೆ. ದಿನದ ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವಿರಿ. ಮನೆಯಲ್ಲಿಯೇ ಇದ್ದು ಮಕ್ಕಳ ಜೊತೆ ಕಾಲವನ್ನು ಕಳೆಯುವಿರಿ. ಮನೆಯ ನವೀಕರಣದ ಬಗ್ಗೆ ಯಾರನ್ನಾದರೂ ಸಂಪರ್ಕಿಸಿ ಮುಂದುವರಿಯುವಿರಿ. ಮನೆಯ ದುರಸ್ತಿಗೆ ಹಣ ಕಡಿಮೆಯಾಗಲಿದೆ. ನಿಮ್ಮವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿಯನ್ನು ತೋರಿಸಲಿದ್ದಾರೆ. ಕೆಲಸಗಳಲ್ಲಿನ ಅಡೆತಡೆಗಳು ಕೊನೆಗೊಳ್ಳುತ್ತವೆ. ಭೂ ಸಂಬಂಧಿತ ಕೆಲಸ ಮಾಡುವ ಜನರಿಗೆ ಲಾಭವಾಗುತ್ತದೆ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯುವ ಸಾಧ್ಯತೆಗಳಿವೆ. ಆದರೆ ಸಾಲ ಪಡೆದು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅತಿಯಾದ ಖರ್ಚು ಮುಂದುವರಿಯುತ್ತದೆ. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಓಡಾಟದ ಕೆಲಸಕ್ಕೆ ನಿಮ್ಮನ್ನು ಬಳಸಿಕೊಳ್ಳಬಹುದು. ಉತ್ಸಾಹವೂ ಇರಲಿದೆ. ಯಾರನ್ನೋ ನಿಂದಿಸುವುದು ಅಭ್ಯಾಸ ಮಾಡಿಕೊಳ್ಳುವುದು ಬೇಡ.‌ ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು.

ಮೀನ ರಾಶಿ: ಕುಟುಂಬದ ಬಗೆಹರಿಸುವ ಸಮಸ್ಯೆಗಳಿಗೆ ಗಮನಕೊಡುವಿರಿ. ವೃತ್ತಿಜೀವನಕ್ಕೆ ಬೇಕಾದ ಸಿದ್ಧತೆ ಮಾಡುವಿರಿ. ಕೆಲಸದಲ್ಲಿ ಪೂರ್ವಭಾವಿಯಾಗಿ ತಿಳಿದುಕೊಳ್ಳಲು ಹೋದರೆ, ಕೆಲಸಗಳನ್ನು ಅನಾಯಸವಾಗಿ ನಡೆಸಬಹುದು. ಸ್ವಂತ ಸಾಮರ್ಥ್ಯ ಪರಿಣಾಮಕಾರಿಯಾಗುವುದು. ಇತರರಿಂದ ಪಡೆಯುವ ಸಹಾಯವೂ ಫಲಪ್ರದವಾಗುತ್ತದೆ. ಅಡೆತಡೆಗಳು ನಿವಾರಣೆಯಾಗಿ, ಗೌರವ ಸಿಗುತ್ತದೆ. ಧಾರ್ಮಿಕ ಪ್ರವಾಸಗಳಿಗೆ ಹೋಗುವ ಸಾಧ್ಯತೆಯಿದ್ದು, ಸಮಯ ಅನುಕೂಲಕರವಾಗಿರುತ್ತದೆ‌. ಯಾವುದೇ ತೊಂದರೆಯಾಗುವ ಸಾಧ್ಯತೆ ಇಲ್ಲ. ಅದನ್ನು ಗಮನಿಸಿಕೊಂಡು ಕಾರ್ಯದಲ್ಲಿ ಮುಂದಡಿಯಿಡಿ. ದೂರದೂರಿಗೆ ಪ್ರವಾಸಕ್ಕೆ ಹೋಗುವ ಮನಸ್ಸು ಮಾಡಲಿದ್ದೀರಿ. ನಿಮ್ಮನ್ನು ನೀವು ದುರ್ಬಲ ಮಾಡಿಕೊಳ್ಳುವುದು ಬೇಡ. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಯಾರದೋ ಬೇಸರವನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳುವಿರಿ.