Astrology: ಈ ರಾಶಿಯವರಿಗೆ ಇಂದು ಸ್ನೇಹಿತರಿಂದ ಲಾಭ ಉಂಟಾಗಲಿದೆ

ರಾಶಿ ಭವಿಷ್ಯ ಶುಕ್ರವಾರ(ಸೆ.27): ಗೊಂದಲವನ್ನು ಮಾಡಿಕೊಳ್ಳದೇ ಸರಳವಾಗಿ ಕೆಲಸಗಳನ್ನು ಮಾಡುವುದು ಒಳ್ಳೆಯದು. ಅಲ್ಪ ಹೂಡಿಯತ್ತ ಗಮನವಿರಲಿದೆ. ಒಂದಕ್ಕಿಂತ ಹೆಚ್ಚು ಕೆಲಸವನ್ನು ಒಟ್ಟಿಗೇ ಮಾಡಲು ಹೋಗುವಿರಿ. ದಾನ ಮಾಡಲು ಮನಸ್ಸು ಹಿಂಜರಿಯಲಿದೆ. ಹಾಗಾದರೆ ಸೆಪ್ಟೆಂಬರ್​ 27ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯವರಿಗೆ ಇಂದು ಸ್ನೇಹಿತರಿಂದ ಲಾಭ ಉಂಟಾಗಲಿದೆ
ಈ ರಾಶಿಯವರಿಗೆ ಇಂದು ಸ್ನೇಹಿತರಿಂದ ಲಾಭ ಉಂಟಾಗಲಿದೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 27, 2024 | 12:12 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಶಿವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:53 ರಿಂದ ಮಧ್ಯಾಹ್ನ 12:23, ಯಮಘಂಡ ಕಾಲ ಮಧ್ಯಾಹ್ನ 03:24ರಿಂದ ಸಂಜೆ 04:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ 09:23 ರ ವರೆಗೆ.

ಧನು ರಾಶಿ: ಸಾಮಾಜಿಕ ಕಾರ್ಯದಲ್ಲಿ ತೊಡಗುವುದಷ್ಟೇ ಅಲ್ಲ, ಆರ್ಥಿಕ ಸಹಾಯವನ್ನೂ ನೀವು ಮಾಡಬೇಕಾಗುವುದು. ಇಂದು ವಿದ್ಯಾರ್ಥಿಗಳಿಗೆ ತಾಯಿಯಿಂದ ತಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವರು. ಗಂಡಾಂತರದಿಂದ ಪಾರಾಗಿ ನೆಮ್ಮದಿಯ ನಿಟ್ಟುಸಿರು ಬಿಡುವಿರಿ. ಮನೆಗೆ ಬೇಕಾದ ಉಪಕರಣಗಳನ್ನು ಖರೀದಿಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಹೆಚ್ಚಿನ ಆತಂಕ ಇರಲಿದೆ. ದೊಡ್ಡ ವ್ಯವಹಾರಸ್ಥರ ಜೊತೆ ಸಂವಾದ ಮಾಡುವ ಸನ್ನಿವೇಶ ಬರುವುದು. ಕಳೆದುಕೊಂಡದ್ದರೆ ಬಗ್ಗೆ ಹೆಚ್ಚು ಮೋಹ ಉಂಟಾಗುವುದು. ಗೊಂದಲವನ್ನು ಮಾಡಿಕೊಳ್ಳದೇ ಸರಳವಾಗಿ ಕೆಲಸಗಳನ್ನು ಮಾಡುವುದು ಒಳ್ಳೆಯದು. ಅಲ್ಪ ಹೂಡಿಯತ್ತ ಗಮನವಿರಲಿದೆ. ಒಂದಕ್ಕಿಂತ ಹೆಚ್ಚು ಕೆಲಸವನ್ನು ಒಟ್ಟಿಗೇ ಮಾಡಲು ಹೋಗುವಿರಿ. ದಾನ ಮಾಡಲು ಮನಸ್ಸು ಹಿಂಜರಿಯಲಿದೆ. ಮಾನಸಿಕ ಅಸಮತೋಲನವು ನಿಮ್ಮನ್ನು ಭ್ರಾಂತಗೊಳಿಸಬಹುದು.‌ ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ನಿಮ್ಮ ಪ್ರತಿಕ್ರಿಯೆ ಯೋಗ್ಯವಾಗಿರಲಿ. ನಿಮಗೆ ಬೇಕಾದ ಯಾವುದನ್ನೂ ಸುಲಭವಾಗಿ ಪಡೆಯಲಾಗದು.

ಮಕರ ರಾಶಿ: ಕುಟುಂಬದಲ್ಲಿ ಸಲ್ಲದ ಮಾತುಗಳು ಬರಬಹುದು. ಅದನ್ನು ತೆಗೆದುಕೊಂಡು ಹೋಗುವುದು ನಿಮ್ಮದೇ ಕಾರ್ಯವಾಗಬಹುದು. ಇಂದು ನೀವು ಸಲ್ಲದ ಯೋಚನೆಗಳಿಂದ ಮನಸ್ಸು ಹಾಳಾಗುವುದು. ಹೊಸ ಉದ್ಯಮವನ್ನು ಆರಂಭಿಸಲು ಧೈರ್ಯವು ಸಾಲದು. ಇನ್ನೊಬ್ಬರ ಜೊತೆ ಸೇರಿ ಮುಂದುವರಿಸುವುದು ನಿಮ್ಮ ಉತ್ತಮ ಆಯ್ಕೆ ಆಗಬಹುದು. ಮಕ್ಕಳಿಂದ ನಿಮ್ಮ ಉದ್ಯಮಕ್ಕೆ ಸಹಾಯವು ಸಿಗಬಹುದು. ಅಂದುಕೊಂಡಮಾತ್ರಕ್ಕೆ ಎಲ್ಲವೂ ಆಗುತ್ತದೆ ಎಂಬುದಿಲ್ಲ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾಗಿ ಇರಲಿದೆ. ಹೊಂದಾಣಿಕೆಯ ಮನೋಭಾವವು ಮುಖ್ಯವಾಗುವುದು. ಹಣವನ್ನು ಉಳಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಮಾಡುವಿರಿ. ಇಂದಿನ ನಿಮ್ಮ ವರ್ತನೆಯು ಗಾಂಭೀರ್ಯದಿಂದ ಇರಲಿದೆ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ಮಕ್ಕಳೆದುರು ನಿಮ್ಮ ನಡವಳಿಕೆ ಸರಿಯಾಗಿ ಇರಲಿ.

ಕುಂಭ ರಾಶಿ: ನಿಮ್ಮ ಕಾರ್ಯದ ಅನುಭವದ ಮೇಲೆ ಉತ್ತಮ ಸ್ಥಾನವು ಪ್ರಾಪ್ತವಾಗುವುದು. ಮನೆಯಿಂದ ದೂರವಿರುವ ನಿಮಗೆ ಕುಟುಂಬದವರ ನೆನಪಾಗುವುದು. ನೋವನ್ನು ನುಂಗಿ ಬದುಕುವ ಕಲೆಯನ್ನು ನೀವು ಅರ್ಥಮಾಡಿಕೊಂಡಿರುವಿರಿ. ಸ್ವಂತ ಉದ್ಯಮವನ್ನು ನಡೆಸುವವರು ಪ್ರಸಾರದ ಕಡೆಗೆ ಗಮನ ಕೊಡುವಿರಿ.‌ ಯಾರನ್ನೂ ನೋಯಿಸುವುದು ನಿಮಗೆ ಇಷ್ಟವಾಗದು. ನೂತನ ವಸ್ತುಗಳನ್ನು ಪಡೆಯಲಿದ್ದೀರಿ. ಮನೋರಂಜನೆಯಲ್ಲಿ ನಿಮ್ಮ ಹೆಚ್ಚಿನ ಸಮಯವು ಇಂದು ಕಳೆಯಲಿದೆ. ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಕಛೇರಿಯ ಕೆಲಸವನ್ನು ಕಾರಣಾಂತರಗಳಿಂದ ಮುಂದು ಹಾಕಲಿದ್ದೀರಿ. ನಿಮ್ಮ ಸ್ವಭಾವವನ್ನು ಸರಿ ಮಾಡಿಕೊಳ್ಳಬೇಕು ಎಂದನಿಸಬಹುದು. ಬಲವಂತದಿಂದ ನೀವು ಯಾರಬಳಿಯೂ ಕೆಲಸವನ್ನು ಮಾಡಿಸಲು ಹೋಗಬೇಡಿ, ಅದು ಆಗದು. ಕೆಲವು ಅವಕಾಶಗಳನ್ನು ನೀವೇ ಬಿಟ್ಟು ಹಾಳು ಮಾಡಿಕೊಳ್ಳುವಿರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ.

ಮೀನ ರಾಶಿ: ನಿಮ್ಮ ಉದ್ಯಮಕ್ಕೆ ಮನೆಯಿಂದ ಪ್ರೋತ್ಸಾಹ ಸಹಾಯಗಳು ಸಿಗದಿದ್ದರೂ ಬಂಧುಗಳಿಂದ ಸಿಗುವುದು. ಇಂದು ನಿಮಗೆ ಎಲ್ಲ ಕಾರ್ಯದಲ್ಲಿಯೂ ಉತ್ಸಾಹವು ಕಡಿಮೆ ಇರುವುದು. ನಿಮ್ಮ ಚರ ಸಂಪತ್ತನ್ನು ಜೋಪಾನ ಮಾಡಿಕೊಳ್ಳಿ. ಸ್ನೇಹಿತರಿಂದ ಲಾಭವು ನಿಮಗೆ ಸಿಗಲಿದೆ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಆರಾಮಾಗಿ ಇರಲು ಹೆಚ್ಚು ಇಷ್ಟಪಡುವಿರಿ. ಅತಿಯಾದ ಆಯಾಸವನ್ನು ಮಾಡಿಕೊಳ್ಳಲು ಹೋಗುವುದು ಬೇಡ. ಕಛೇರಿಯಲ್ಲಿ ಸಹೋದ್ಯೋಗಿಗಳ ಸಹಾನುಭೂತಿಯು ಸಿಗಲಿದೆ. ವೃತ್ತಿಯನ್ನು ನೀವು ಆನಂದಿಸುತ್ತ ಮಾಡುವಿರಿ. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ಆರ್ಥಿಕತೆಯ ವಿಚಾರವು ನಿಮಗೆ ಪೂರ್ಣವಾಗಿ ತಿಳಿಯದು. ನಿಮ್ಮ ಅಜ್ಞಾನವನ್ನು ಪ್ರದರ್ಶಿಸುವುದು ಬೇಡ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಪರರ ಕಷ್ಟದ ಬಗ್ಗೆಯೂ ನಿಮಗೆ ಅರಿವಿರಲಿ. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯಬಾರದು.

ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!