AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 05 May: ಈ ರಾಶಿಯವರು ಪ್ರತಿಕೂಲ ಸಂದರ್ಭವನ್ನು ಎದುರಿಸಲು ತಡಕಾಡುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ, ಸೋಮವಾರ ವಾಗ್ದಾಳಿಗೆ ಪ್ರತಿ ದಾಳಿ, ಬಂಧುಗಳ ಆಗಮನ, ಹಿರಿಯರ ಆಶೀರ್ವಾದ, ಧಾರ್ಮಿಕ ಕಾರ್ಯದಲ್ಲಿ ಭಾಗಿ ಇದೆಲ್ಲ ಇರುವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 05 May: ಈ ರಾಶಿಯವರು ಪ್ರತಿಕೂಲ ಸಂದರ್ಭವನ್ನು ಎದುರಿಸಲು ತಡಕಾಡುವರು
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: May 05, 2025 | 1:34 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ : ಅಷ್ಟಮೀ ನಿತ್ಯನಕ್ಷತ್ರ : ಆಶ್ಲೇಷಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ – 06 : 09 am, ಸೂರ್ಯಾಸ್ತ – 06 : 49 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:45 – 09:19, ಯಮಘಂಡ ಕಾಲ 10:54 – 12:29, ಗುಳಿಕ ಕಾಲ 14:04 – 15:39

ಮೇಷ ರಾಶಿ: ದೀರ್ಘಾಲೋಚನೆಯಿಂದ ಮಾಡಬಹುದದಾ ಕಾರ್ಯ ಆಗದು. ಭೂಮಿಗೆ ಸಂಬಂಧಿಸಿದ ಕಲಹಗಳು ಇಂದಿಗೆ ಮುಕ್ತಾಯಗೊಳ್ಳಬಹುದು. ತಾಯಿಯು ನಿಮಗೆ ಬೇಕಾದ ಸಹಾಯವನ್ನು ಮಾಡುವಳು. ತುರಿ, ನವೆ ಮುಂತಾದ ಚರ್ಮಕ್ಕೆ ಸಂಬಂಧಪಟ್ಟ ಖಾಯಿಲೆಗಳಿಗೆ ಖರ್ಚುಮಾಡಬೇಕಾಗಿ ಬರಬಹುದು. ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಇದು ನಿಮಗೆ ಬೇಸರ ತರಿಸುವ ಕೆಲಸವಾಗಿರುತ್ತದೆ. ಹೊಸ ಯೋಜನೆಗಳು ಸಿಗಲಿದೆ. ಸಂಬಂಧಗಳು ಸುಧಾರಿಸುವ ಹಂತಕ್ಕೆ ಹೋಗಲಿವೆ. ವಾಹನ ಚಾಲನೆಯನ್ನು ಎಚ್ಚರಿಕೆಯಿಂದ ಮಾಡಿ. ಸದಾಕಾಲ ಸಂತೋಷದಿಂದ ಇರಲು ನೀವೇ ಏನಾದರೂ ಕ್ರಮವನ್ನು ಅನುಸರಿಸುವಿರಿ. ಶ್ರೇಷ್ಠ ವ್ಯಕ್ತಿಗಳ ಭೇಟಿಯು ಆಗಸ್ಮಿಕವಾಗಿ ಆಗಲಿದೆ. ಅವರ ಒಡನಾಟವನ್ನು ಇಟ್ಟುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ.

ವೃಷಭ ರಾಶಿ: ಮಕ್ಕಳನ್ನು ಉನ್ನತ ಮಟ್ಟಕ್ಕೆ ಏರುವಂತೆ ಪ್ರೋತ್ಸಾಹಿಸುವಿರಿ. ನಿಮ್ಮ ವಿದೇಶದ ಪ್ರಯಾಣವು ಕೆಲವು ದಾಖಲೆಗಳ ಕೊರತೆ, ಅಸ್ಪಷ್ಟತೆಯ ಕಾರಣದಿಂದ ಮುಂದೂಡಲ್ಪಡಬಹುದು. ಅತಿಯಾದ ದೇಹಾಲಸ್ಯದಿಂದ ಕಾರ್ಯಗಳು ಸಮಯಕ್ಕೆ ಸರಿಯಾಗಿ ಆಗದೇ ವಿಳಂಬವಾಗಲಿದೆ. ನಿಮ್ಮ‌ಅಜ್ಞಾನವನ್ನು ನೀವೇ ಪ್ರದರ್ಶಿಸುವಿರಿ‌. ನೀವು ನಿರ್ಮಿಸಿಕೊಂಡ ನೂತನ ಗೃಹದಲ್ಲಿ ವಾಸವು ಆರಂಭವಾಗಲಿದೆ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬೇಕಾದಷ್ಟೇ ಮಾತುಗಳನ್ನಾಡಿ ಎಲ್ಲರಿಂದ ಪ್ರಶಂಸೆ ಪಡೆಯವಿರಿ. ಹತ್ತಿರ ಬಂಧುಗಳನ್ನು ಕಳೆದುಕೊಳ್ಳಬಹುದು. ಬೇಸರಿಸದೇ ಸಹಜವಾಗಿ ಸ್ವೀಕರಿಸಿ. ಶ್ವಾಸಕೋಶದ ತೊಂದರೆಯು ಕಾಣಸಿಗಬಹುದು. ಅತಿಯಾದ ಆಹಾರವು ಅಜೀರ್ಣವಾಗಿ ತೊಂದರೆ ಕೊಡುವುದು. ಸಂಗಾತಿಯ ಹಳೆಯ ಸ್ನೇಹಿತನ ಭೇಟಿಯಾಗಲಿದೆ. ದಾಂಪತ್ಯದಲ್ಲಿ ಕೆಲವು ಕಹಿ ಮಾತುಗಳು ಬರಬಹುದು. ನೀವು ಇಂದು ಕೈಲಾಗದೇ ಇರುವ ಅಬಲರು.

ಮಿಥುನ ರಾಶಿ: ವೃತ್ತಿಯಲ್ಲಿ ಅನುಭವಿಗಳ ಜೊತೆ ಕೆಲಸ ಅಸಾಧ್ಯ. ಎಲ್ಲದಕ್ಕೂ ಮಾಡುವ ನಿಂದನೆಯನ್ನು ಸಹಿಸಲಾರಿರಿ. ಇಂದು ಶತ್ರುಗಳ ಬಗ್ಗೆ ಬಹಳ ಕುತೂಹಲವಿರಲಿದೆ. ಜೋಪಾನವಾಗಿ ನಿಮ್ಮ‌ ಯೋಜನೆಯನ್ನು ಸಿದ್ಧಮಾಡಿಕೊಳ್ಳುವುದು ಸೂಕ್ತ. ನೀವು ಸುಳ್ಳನ್ನು ಆಡುವವರು ಎನ್ನುವ ಹಣೆಪಟ್ಟಿ ಬೀಳಲಿದೆ. ನಿಮ್ಮ ಮಾತಿಗೆ ಬಿಡಿಗಾಸಿನಷ್ಟೂ ಬೆಲೆ ಇಲ್ಲದೇ ಕಡಿಮೆಯಾಗಬಹುದು. ನೀರಿಗೆ ಸಂಬಂಧಿಸಿದ ಉದ್ಯೋಗಾವಕಾಶಗಳು ಹೆಚ್ಚು ಸಿಗಬಹುದು. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ. ಪ್ರೀತಿಯ ಉಡುಗೊರೆಯನ್ನು ಖಷಿಯಿಂದ ಪಡೆಯುವಿರಿ. ಹೇಳಿಕೆಗಳು ಬಹಳ ಹರಿತವಾಗಿ ಇರುವುದು. ಕೃಷಿಗೆ ಸಂಬಂಧಿಸಿದ ವಸ್ತುಗಳ ವ್ಯಾಪಾರ ಅಧಿಕವಾಗಲಿದೆ‌. ಊರಿನಿಂದ ಹೊರಹೋಗುವ ಸಾಧ್ಯತೆ ಇದೆ. ಕಲಾವಿದರು ಹೆಚ್ಚಿನ ಪ್ರಶಂಸೆಯನ್ನು ಗಳಿಸುವರು. ಆಪ್ತರು ನೀಡಿದ ವಸ್ತುವನ್ನು ಕಳೆದುಕೊಳ್ಳುವಿರಿ.

ಕರ್ಕಾಟಕ ರಾಶಿ: ರಾಜಕೀಯದಲ್ಲಿ ಶಕ್ತಿಪ್ರದರ್ಶನ ಬಹಳ ಮುಖ್ಯ ಘಟ್ಟವಾಗಬಹುದು. ಇಂದು ನಿಮಗೆ ಅಧ್ಯಾತ್ಮದ ಕಡೆ ಓಲೈಕೆ ಹೆಚ್ಚು ಇರಲಿದೆ‌. ಶತ್ರುಗಳು ಮಿತ್ರರಾಗಲು ಬರಬಹುದು. ನಿಮ್ಮ ಪ್ರಭಾವೀ ವ್ಯಕ್ತಿತ್ವವನ್ನು ಜನಕ್ಕೆ ತಿಳಿಸುವಿರಿ. ನೀವಿಡುವ ಹೆಜ್ಜೆಯು ಗುರುತಾಗಲಿದೆ. ಎಂತಹ ಹೆಜ್ಜೆಗಳನ್ನು ಇಡಬೇಕು ಎನ್ನುವುದನ್ನು ತೀರ್ಮಾನಿಸಿಕೊಳ್ಳಿ. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನಿಮ್ಮನ್ನು ನಿಂದಿಸುವವರನ್ನು ನೀವು ದೂರವಿರಿಸುವಿರಿ. ಆಡಿದ ಮಾತನ್ನು ತಿರುಚುವ ಕೆಲಸ ಮಾಡುವುದು ಬೇಡ. ಉದ್ಯೋಗದ ಕಾರಣಕ್ಕೆ ವಿದೇಅಸಕ್ಕೆ ಹೋಗಬೇಕಾಗಿ ಬರಬಹುದು. ಬಂಧುಗಳ ಭೇಟಿ ಸುಖದಾಯಕ ಆಗುವುದು. ಒಂದನ್ನು ಪಡೆಯಲು ಮತ್ತೊಂದನ್ನು ಬಿಡಬೇಕಾದೀತು. ಯಾವುದೋ ಒಪ್ಪಂದಗಳಿಗೆ ಸಹಿ ಹಾಕಿಬಿಡಬೇಡಿ. ಅನುಭವಿಗಳ ಜೊತೆ ಚರ್ಚೆಗಳನ್ನು ಮಾಡಿ. ಧಾರ್ಮಿಕ ಕೆಲಸಗಳಲ್ಲಿ ಭಾಗವಹಿಸುವಿರಿ. ಹಿಂದೊಮ್ಮೆ ಆಲೋಚಿಸಿದ್ದ ಕೆಲಸಗಳನ್ನು ಪುನಃ ಆರಂಭಿಸುವಿರಿ. ಬಂದಿದ್ದನ್ನು ಬಂದಂತೆ ಸ್ವೀಕರಿಸಲು ಕಷ್ಟವಾಗದು. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ಕತ್ತಲೆಯನ್ನು ಶಪಿಸುವುದಕ್ಕಿಂತ ಬೆಳಕನ್ನು ಹುಡುಕುವುದು ಉತ್ತಮ.

ಸಿಂಹ ರಾಶಿ: ಇಂದು ದಾನದಿಂದ ನಿಮಗೆ ಹೆಸರು ಬರುಬುದು. ನಿಮ್ಮವರ ಕೆಲವು ವರ್ತನೆಗಳು ಬೇಸರವನ್ನೂ ತರಿಸಬಹುದು. ಇದರಿಂದ ಸಿಟ್ಟುಕೊಂಡ ದೂರ ಸರಿಯುವ ನಿರ್ಧಾರಗಳನ್ನೂ ತೆಗಕೊಳ್ಳುವ ಸಾಧ್ಯತೆ ಇದೆ. ಉದ್ವೇಗಕ್ಕೆ ಒಳಗಾಗದೇ ತಾಳ್ಮೆಯಿಂದ ವರ್ತಿಸುವುದು ಉಚಿತ. ಕಬ್ಬಿಣಕ್ಕೆ ಸಂಬಂಧಿಸಿದ ಕಾರ್ಯದಲ್ಲಿ ಹೆಚ್ಚು ಒತ್ತಡ. ದಾಂಪತ್ಯದಲ್ಲಿ ಮಾತಿನ ಸಣ್ಣ ಬಿಸಿ ಉಂಟಾಗಬಹುದು. ಮನಸ್ಸಿನಲ್ಲಿ ಒಡಕುಗಳು ಮೂಡಬಹುದು. ಆದಷ್ಟು ಮುಂದುವರಿಯದೇ ನಿಲ್ಲಿಸಲು ಪ್ರಯತ್ನಿಸಿ. ಮುಂದೆ ಅದು ವಿಚ್ಛೇದನಕ್ಕೆ ಕಾರಣವಾಗಬಹುದು. ಎಲ್ಲವನ್ನೂ ಸಿಟ್ಟಿನಿಂದ ಗೆಲ್ಲಲು ಸಾಧ್ಯವಾಗದು. ಗೃಹಬಳಕೆಯ ವಸ್ತುಗಳಿಂದ ಖರ್ಚು ಹೆಚ್ಚಾಗಬಹುದು ಭೂಮಿಯ ವ್ಯವಹಾರಸ್ಥಾರಿಗೆ ಲಾಭವಿದೆ. ನಿಮಗೆ ಗೌರವಕ್ಕೆ ತೊಂದರೆ ಆಗಬಹುದು. ಉತ್ತಮ ಭೋಜನವನ್ನು ಮಾಡುವಿರಿ. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು.

ಕನ್ಯಾ ರಾಶಿ: ದೈವಭಕ್ತಿ ಕಡಿಮೆಯಾದಂತೆ ನಿಮಗೆ ಅನಿಸುವುದು. ಇಂದು ನಿಮಗಾದ ಅಪಮಾನವು ದ್ವೇಷವಾಗಿ ಬದಲಾಗುವುದು. ಬಂಧುಗಳು ನಿಮ್ಮನ್ನು ನೋಡಿ ಆಡಿಕೊಳ್ಳುವರು. ನಿಮ್ಮೆದುರು ಮಾತನಾಡದೇ ಹಿಂಬದಿಯಿಂದ ಮಾತನಾಡಲಿದ್ದಾರೆ. ಗುರುವಿನ ಅನುಗ್ರಹದಿಂದ ಉದ್ಯಮಕ್ಕೆ ಬಲ ಸಿಗಲಿದೆ. ಕೃಷಿಯ ಬಗ್ಗೆ ಆಸಕ್ತಿ ಇರುವ ನೀವು ಕೃಷಿಯನ್ನು ಮಾಡಿ ಸ್ವಲ್ಪಮಟ್ಟಿನ ಲಾಭವನ್ನು ಗಳಿಸುವಿರಿ. ತಂದೆಯು ನಿಮ್ಮ ಕೆಲಸಕ್ಕೆ ಧನಸಹಾಯವನ್ನು ಮಾಡಲಿದ್ದಾರೆ. ಸಹೋದರನು ನಿಮಗೆದುರಾದ ತೊಂದರೆಯನ್ನು ಪರಿಹರಿಸಿಕೊಳ್ಳಲು ನಿಮ್ಮ ಸಹಾಯಕ್ಕೆ ಬರಲಿದ್ದಾನೆ. ಕೆಲಸಗಳು ವಿಘ್ನಗಳ ನಿಧಾನವಾಗಲಿದೆ. ಮಾತಿನಲ್ಲಿ ಹಿಡಿತಬೇಕು ಎನಿಸಬಹುದು. ಯಾರಿಗೂ ಹೇಳಿಕೊಳ್ಳದೇ ನೀವೊಬ್ಬರೇ ರೋಗವನ್ನು ಅನುಭವಿಸುವಿರಿ. ಕೆಲವರ ಸಹವಾಸದಿಂದ ನಿಮ್ಮ ದಿಕ್ಕು ತಪ್ಪಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ಅಲ್ಪಾವಧಿಯಲ್ಲಿ ಅಧಿಕ ಲಾಭಕ್ಕಾಗಿ ಹೂಡಿಕೆ ಮಾಡುವಿರಿ. ವಿದೇಶೀಯ ವ್ಯಾಪಾರವು ಹೆಸರಿಗಷ್ಟೇ ಇರುವುದು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು.

ತುಲಾ ರಾಶಿ: ಆದಾಯದ ಆಸೆಯಿಂದ ಹೂಡಿಕೆ ಮಾಡುವಿರಿ. ನಿಮ್ಮ ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆಗಳು ನಡೆಯುವುದು. ಗೌರವ ಹಾಗೂ ಸಮ್ಮಾನಗಳು ನಿಮಗೆ ಸಿಗಲಿವೆ. ಕಛೇರಿಯಲ್ಲಿ ನೀವು ಸಿದ್ಧಪಡಿಸಿರುವ ಯೋಜನೆಗಳಿಗೆ ಪ್ರಶಂಸೆ ಸಿಗುವುದು. ಒತ್ತಡಗಳನ್ನು ನಿವಾರಿಸುವ ವಿದ್ಯೆಯು ಕರಗತವಾಗಿದ್ದು ಅನಾಯಾಸದಿಂದ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ಮಾತುಗಾರಿಕೆಯಿಂದ ಆಗದ ಕೆಲಸವನ್ನೂ ಆಗಿಸಿಕೊಳ್ಳುವಿರಿ. ಹೊಸ ಕೆಲಸವನ್ನು ಆರಂಭಿಸುವವರು ಆರಂಭಿಸಲು ಯೋಗ್ಯವಾದ ಸಮಯವಾಗಿದೆ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ರಾಜಕೀಯದಲ್ಲಿ ವಿವಾದಸ್ಪದ ಮಾತುಗಳು ಆಡಿ ಎಲ್ಲರ ಕೆಂಗಣ್ಣಿಗೆ ಸಿಲುಕುವಿರಿ. ಮುಖಂಡರ ಜೊತೆ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಭೂವಿವಾದಿಂದ ನಿಮ್ಮ ಪರಿಚಯಾದೀತು. ಅಮೂಲ್ಯವಾದ ವಸ್ತುಗಳು ಪಡೆದುಕೊಳ್ಳುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ. ಕೆಲಸಗಳಲ್ಲಿ ನೀವು ಜಯವನ್ನು ಸಾಧಿಸಬಹುದು.

ವೃಶ್ಚಿಕ ರಾಶಿ: ರಾಜಕೀಯ ಮುಖಂಡರ ಭೇಟಿಯಿಂದ ನಿಮ್ಮ ಕಾರ್ಯ ವೇಗವನ್ನು ಪಡೆಯುವುದು. ಇಂದು ಹಿಡಿದ ಕೆಲಸವನ್ನು ಬಿಡದೇ ಮುಗಿಸುವ ಸ್ವಭಾವವಿರಲಿದೆ. ನೀವು ಬಹಳ ದಿನಗಳಿಂದ ಮಾಡುತ್ತಿರುವ ಕಾರ್ಯಗಳು ಮುಂದೆ ಹೋಗುತ್ತಿದ್ದು ಇಂದು ಅದನ್ನು ಪೂರೈಸುವಿರಿ. ಇಂದು ಮನಸ್ಸು ನಿರಾಳವಾಗಿ ಯಾವದೇ ಒತ್ತಡಕ್ಕೆ ಸಿಲುಕದೇ ಇರುವುದು. ನಿಮ್ಮ ಯಾರಾದರೂ ಕೆಣಕಬಹುದು. ಸರ್ಕಾರದ ಕಾರ್ಯದಲ್ಲಿ ಸರಿಯಾದ ಮಾಹಿತಿ ಕೊರತೆ. ದುರಭ್ಯಾಸವು ಮನೆಯವರಿಗೆ ಗೊತ್ತಾಗಲಿದೆ. ಉದ್ವೇಗಕ್ಕೆ ಒಳಗಾಗಿ ಸ್ನೇಹಿತರ ಅಪಹಾಸ್ಯಕ್ಕೆ ಸಿಲುಕಬೇಡಿ. ಆಯಾಸದ ಪ್ರಯಾಣವನ್ನು ಮಾಡುವಿರಿ. ಅತಿಯಾದ ಭಾರವನ್ನು ಎತ್ತುವ ಕೆಲಸಕ್ಕೆ ಹೋಗಬೇಡಿ. ನಿಮ್ಮ ಇಂದಿನ ಗಂಭೀರ ಮೌನಕ್ಕೂ ಅರ್ಥವು ಇರಲಿದೆ. ಮಕ್ಕಳ‌ ಜೊತೆ ಅನ್ಯೋನ್ಯ ಸಂಬಂಧವು ಕಾಣಿಸಿಕೊಂಡೀತು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಆರ್ಥಿಕ ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು.

ಧನು ರಾಶಿ: ಇನ್ನೊಬ್ಬರಿಂದ ಬೇಡದ ವಿಚಾರಕ್ಕೆ ಪ್ರೇರಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಿ ತುರ್ತು ಚಿಕಿತ್ಸೆಯನ್ನೂ ಪಡೆಯಬೇಕಾಗುವುದು. ಆರ್ಥಿಕವಾಗಿ ಸಬಲರಾದವರು ಖರ್ಚನ್ನು ಹೆಚ್ಚು ಮಾಡುವರು. ಅನಗತ್ಯ ಕಾರ್ಯಹಳ ಪಟ್ಟಿಯೇ ದೊಡ್ಡದಾಗುವುದು. ಅವಶ್ಯಕತೆಗಳನ್ನು ಮಾತ್ರ ನೀಗಿಸಿಕೊಳ್ಳುವ ಪ್ರಯತ್ನವನ್ನು ಮಾಡಿ. ಯಾವುದೇ ಸಾಹಸಕ್ಕೆ ಕೈ ಹಾಕಲು ಹೋಗುವುದು ಬೇಡ‌. ವಿದೇಶದ ವಿದ್ಯಾಭ್ಯಾಸಕ್ಕೆ ಅವಕಾಶ ಸಿಗಲಿದೆ. ನಿಮಗೆ ಭವಿಷ್ಯದ ಚಿಂತೆ‌ ಇರಲಿದೆ. ನೀರಿನ‌ ಪ್ರದೇಶಗಳಿಗೆ ಹೋಗುವ ಮನಸ್ಸು ನಿಮ್ಮದಾಗಲಿದೆ. ದೂರದ ಊರಿಗೆ ಪ್ರಯಾಣ ಹೋಗುವಿರಿ. ಕುಳಿತಲ್ಲೇ ಕುಳಿತು ದೇಹ ಮತ್ತು ಮನಸ್ಸು ಜಡವಾಗಿದೆ ಎಂದು ಅನ್ನಿಸಲಿದೆ. ಮಕ್ಕಳ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವೈದ್ಯಕೀಯ ವೃತ್ತಿಯಲ್ಲಿ ತುರ್ತು‌ ಕಾರ್ಯಗಳು ಬರುವುದು. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು.

ಮಕರ ರಾಶಿ: ಆಕಸ್ಮಿಕವಾಗಿ ಹಳೆಯ ಮಿತ್ರರ ಭೇಟಿ. ಇಂದು ಅನ್ಯ ಮಾರ್ಗವಿಲ್ಲದೆ ಉದ್ಯೋಗವನ್ನೇ ನಂಬಿದವರಿಗೆ ಸ್ವಲ್ಪ ಆರ್ಥಿಕವಾಗಿ ಹಿನ್ನಡೆಯಾಗಲಿದೆ. ಕಛೇರಿಯಲ್ಲಿ ನಿಮ್ಮನ್ನು ಹಿಮ್ಮೆಟ್ಟಲು ಕಾಯುತ್ತಿರುವರು. ಅವರಿಗೆ ನೀವು ಆಹಾರವಾಗಲಿದ್ದೀರಿ. ಇಂದು ನಿಮ್ಮ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವಿರಿ. ಎದೆಗುಂದುವ ಸ್ಥಿತಿ ಇಂದು ಬರಬಹುದು. ನಿಮ್ಮ ಅನಂತರ ಕೆಲಸ ಮಾಡುವವರಿಂದ ನಿಮಗೆ ಕೆಲವು ಮಾತುಗಳು ಸಿಗಬಹುದು. ಮಾತಿನ ಮೇಲೆ ಹಿಡಿತವನ್ನು ಇಟ್ಟು, ಆಲೋಚಿಸಿ ಮಾತನಾಡಿ. ಯಾವುದೇ ನಿರ್ಧಾರಗಳನ್ನು ಆ ಕ್ಷಣದಲ್ಲಿಯೇ ತೆಗೆದುಕೊಂಡು ಆಮೇಲೆ ಚಿಂತೆಗೆ ಒಳಗಾಗುವಂತೆ ಮಾಡಿಕೊಳ್ಳಬೇಡಿ. ಸಾಮಾಜಿಕವಾದ ನಿಮ್ಮ ಕಾರ್ಯಗಳು ಪ್ರಶಂಸೆಯನ್ನು ಪಡೆಯುತ್ತವೆ.‌ ಯಾವ ಬಲವನ್ನು ನಂಬದೇ ಸ್ವಪ್ರಯತ್ನದಿಂದ ಎಲ್ಲವನ್ನೂ ಮಾಡಲು ಬಯಸುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು. ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ.

ಕುಂಭ ರಾಶಿ: ಸಾಮಾಜಿಕ ಕಾರ್ಯಗಳಿಂದ ಗೌರವ ಸಾಧ್ಯತೆ‌. ನಿಮ್ಮ ಮೇಲೆ ಇಂದು ಎಂದೂ ಮಾಡದ ಕೆಲಸಕ್ಕೆ ಅಪವಾದಗಳು ಬರಲಿವೆ. ಅದನ್ನು ನ್ಯಾಯಸಮ್ಮತವಾಗಿ ದೃಷ್ಟಾಂತ ಸಹಿತ ಅಲ್ಲಗಳೆಯುವಿರಿ. ನಿಮಗೆ ಸಿಗಬೇಕಾದ ಜವಾಬ್ದಾರಿ ಮತ್ತೊಬ್ಬರಿಗೆ ಸಿಗಲಿದೆ. ದೂರದ ಊರಿಗೆ ವೈಯಕ್ತಿಕ ಕಾರ್ಯದ ನಿಮಿತ್ತ ಪ್ರಯಾಣ ಮಾಡಲಿದ್ದೀರಿ. ಸ್ನೇಹಿತ ಮಾತುಗಳು ನಿಮಗೆ ಕಸಿವಿಸಿ ವಾತಾವರಣವನ್ನು ಉಂಟುಮಾಡಲಿದೆ. ಉನ್ನತ ವಿದ್ಯಾಭ್ಯಾಸವನ್ನು ಮಾಡುವವರಿಗೆ ವಿದೇಶಗಳಲ್ಲಿ ಅವಕಾಶವು ದೊರೆಯಲಿದೆ. ಇನ್ನೊಬ್ಬರಿಗೆ ತೊಂದರೆ ಕೊಡುವ ಕಾರ್ಯದಲ್ಲಿ ಹಿಂದೇಟು ಹಾಕುವಿರಿ. ಸಾಲವನ್ನು ಮಾಡುವುದಿದ್ದರೆ ಅವಶ್ಯಕತೆಗೆ ತಕ್ಕಂತೆ ಮಾಡಬಹುದು. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ನಿಮ್ಮ ಇಂದಿನ ನಡೆಯು ಅನೂಹ್ಯವಾಗಿರುವುದು. ರಾಜಕೀಯದಲ್ಲಿ ಬದಲಾವಣೆಯನ್ನು ತರಿಸುವುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು.

ಮೀನ ರಾಶಿ: ಯಾರಿಂದಲೂ ಯಾವ ಸಹಾಯವನ್ನು ಬಯಸಲು ಮನಸ್ಸಾಗದು. ಇಂದು ಗುರುತು ಪರಿಚಯವಿಲ್ಲದ ವ್ಯಕ್ತಿಗಳಿಂದ ಜೀವನಕ್ಕೆ ಬೇಕಾದ ಉಪದೇಶವು ಸಿಗಲಿವೆ. ಜೀವನ ನಿರ್ವಹಣೆ ನಿಮಗೆ ಇಂದು ಕಷ್ಟವಾಗುವುದು. ಖುಷಿಯಾಗಿರಲು ಕೆಲವು ಸಂಗತಿಗಳು ನಿಮ್ಮ ಪಾಲಿಗೆ ಇರಲಿವೆ. ವಿನಾಕಾರಣ ಸಂಗಾತಿಯ ನಡುವೆ ಸಣ್ಣ ಕಲಹಗಳು ಹುಟ್ಟಿಕೊಳ್ಳಬಹುದು. ಅನಿವಾರ್ಯವಾಗಿ ಹೊರಗಿನ ತಿಂಡಿಯನ್ನು ತಿನ್ನಬೇಕಾದೀತು. ಉದರಕ್ಕೆ ಸಂಬಂಧಿಸಿದ ರೋಗವು ಬಂದು ಆರೋಗ್ಯವು ಕೆಡುವುದು. ನಿಮಗೆ ಕೆಲವು ಶುಭ ಶಕುನಗಳು ಕಾಣಿಸಿಕೊಳ್ಳಲಿದ್ದು ಅದರಂತೆ ನಿಮ್ಮ ನಡಿಗೆ ಇರಲಿ. ಸಹನೆಯ ಪರೀಕ್ಷೆಯಲ್ಲಿ ನೀವು ಗೆಲ್ಲುವಿರಿ. ವಿನಾಕಾರಣ ನೆಮ್ಮದಿಯನ್ನು ಹಾಳುಮಾಡಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ನಿಮ್ಮನ್ನು ನಗಿಸುವ ಪ್ರಯತ್ನ ಮಾಡಿದರೂ ನೀವು ಯಾವುದೋ ಆಲೋಚನೆಯಲ್ಲಿಯೇ ಇರುವಿರಿ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಎಲ್ಲರ ಮಾತನ್ನು ಧಿಕ್ಕರಿಸುವ ಉದ್ಧಟತನ ಬೇಡ.

-ಲೋಹಿತ ಹೆಬ್ಬಾರ್ – 8762924271 (what’s app only)

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ