Horoscope Today 28 April: ಈ ರಾಶಿಯವರು ಸರಿಯಾಗಿ ಮಾಡದ ಕೆಲಸವನ್ನೇ ಮತ್ತೆ ಮತ್ತೆ ಮಾಡುವರು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ, ಸೋಮವಾರ ಆರ್ಥಿಕ ನಷ್ಟದ ಗೌಪ್ಯತೆ, ಉದ್ಯೋಗದಲ್ಲಿ ಭೀತಿ, ಕುಟುಂಬದ ಮೇಲೆ ಪ್ರೀತಿ ಇದೆಲ್ಲ ಇಂದಿನ ವಿಶೇಷ. ಈ ದಿನದ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ ತಿಥಿ: ಪ್ರತಿಪತ್ ನಿತ್ಯನಕ್ಷತ್ರ: ಭರಣೀ, ಯೋಗ: ಪ್ರೀತಿ / ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 12 am, ಸೂರ್ಯಾಸ್ತ – 06 : 47 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:47 – 09:21, ಯಮಘಂಡ ಕಾಲ 10:56 – 12:30, ಗುಳಿಕ ಕಾಲ 14:05 – 15:39
ಮೇಷ ರಾಶಿ: ಸಾಹಸ ಮಾಡುವ ಬದಲು ಸಹನೆಯಿಂದ ಗೆಲ್ಲಲು ಸಾಧ್ಯವಿದೆ. ನಿಮ್ಮ ವಿವಾಹಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವಿರಿ. ಬೇಡದ ವಿಚಾರಕ್ಕೆ ಮೂಗು ತೂರಿಸುವುದು ಬೇಡ. ಸಾಮಾಜಿಕ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಎಲ್ಲ ಬೇಸರಕ್ಕೂ ಅನ್ಯರೇ ಕಾರಣವಾಗಿರಲು ಸಾಧ್ಯವಿಲ್ಲ. ಹಣದ ಅಭಾವವನ್ನು ಹೇಳಿಕೊಳ್ಳಲಾರಿರಿ. ನಿಮ್ಮನ್ನು ಯಾರಾದರೂ ಬಂಧುಗಳು ಮಾತನಾಡಸಲು ಬರಬಹುದು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಇಂದು ಉತ್ತಮವಾಗಿದೆ. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು. ಸೌಂದರ್ಯ ಇಂದು ಪ್ರಜ್ಞೆ ಹೆಚ್ಚು. ಹೂಡಿಕೆಯಲ್ಲಿ ನಿಮಗೆ ನಷ್ಟವಾಗಲಿದೆ. ಹೊಸ ವಸ್ತುಗಳನ್ನು ಖರೀದಸಲು ಹೋಗಿ ಸಮಯ ವ್ಯರ್ಥವಾಗುವುದು. ಆರೋಗ್ಯವನ್ನು ಆಹಾರದಿಂದ ಹಾಳು ಮಾಡಿಕೊಳ್ಳುವಿರಿ.
ವೃಷಭ ರಾಶಿ: ನಿಮ್ಮ ಕನಸನ್ನು ನನಸಾಗಿಸುವ ಸಾಮರ್ಥ್ಯದ ಸಂಗಾರಿಯನ್ನು ಹುಡುಕುವಿರಿ. ಎಲ್ಲದಕ್ಕೂ ವಿರೋಧ ಮಾಡುವುದು ನಿಮಗೇ ಸರಿ ಕಾಣದು. ಮಾತನ್ನು ನಿಯಂತ್ರಿಸುವುದು ನಿಮಗೆ ಕಷ್ಟವಾಗುವುದು. ನಿಮ್ಮ ಬುದ್ಧಿವಂತಿಕೆ ಹಾಗೂ ಪ್ರಬುದ್ಧತೆಯ ಕಾರಣಕ್ಕೆ ಹಲವು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೀರಿ. ವ್ಯಥೆಗಳನ್ನು ಕಳೆಯಲು ಹೊಸ ಮಾರ್ಗವನ್ನು ಅನ್ವೇಷಿಸುವಿರಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಉದ್ಯಮದಲ್ಲಿ ಹಿನ್ನಡೆ ಇರಲಿದೆ. ಮರೆವಿನಿಂದ ನಿಮ್ಮ ವಸ್ತುಗಳು ಕಷ್ಟವಾಗಬಹುದು. ಅಪರಿಚಿತರ ವ್ಯವಹಾರವನ್ನು ಕಡಿಮೆ ಮಾಡಿ. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ನಿಮ್ಮನ್ನು ಅರ್ಥಮಾಡಿಕೊಳ್ಳಲು ಸ್ನೇಹಿತರಿಗೆ ಕಷ್ಟವಾದೀತು. ನಿಮಗೆ ನಿಮ್ಮ ಸ್ವಭಾವವು ಬದಲಾಗಬೇಕಾದಂತೆ ಅನ್ನಿಸುವುದು. ಅನೇಕ ಲಾಭದ ಅವಕಾಶಗಳು ಸಿಗುತ್ತವೆ. ನಿಮ್ಮ ರಹಸ್ಯವನ್ನು ಬಿಟ್ಟುಕೊಡಲಾರಿರಿ.
ಮಿಥುನ ರಾಶಿ: ವೈಯಕ್ತಿಕ ಜೀವನಕ್ಕೆ ಯಾರೂ ಬರುವುದು ಇಷ್ಡವಾಹದು. ಇಂದು ಸಂಗಾತಿಯ ಜೊತೆ ಸಂತೋಷದ ಸಮಯವನ್ನು ಕಳೆಯುವಿರಿ. ಆಪ್ತರ ಜೊತೆ ವಿವಾದ ಆಗಲಿದೆ. ನಾನು ಮಾಡಿದ್ದೇ ಸರಿ ಎಂಬ ಹುಂಬುತನ ಇರಲಿದೆ. ಸ್ವಂತ ವಿಮರ್ಶೆ ಮಾಡಿಕೊಂಡು, ಅಂತಿಮ ನಿರ್ಧಾರಕ್ಕೆ ಬನ್ನಿ. ತಪ್ಪುಗಳನ್ನು ತಿದ್ದಿಕೊಂಡು ಒಳ್ಳೆಯವರಾಗುವಿರಿ. ನಿಮ್ಮನ್ನು ನೀವೇ ಬೈದುಕೊಳ್ಳುವ ಸ್ಥಿತಿ ಬರಬಹುದು. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ಏಕಾಂತದಲ್ಲಿ ಇರಲು ಇಷ್ಟವಾಗುವುದು. ಇನ್ನೊಬ್ಬರ ಭಾವಕ್ಕೆ ಸ್ಪಂದಿಸುವ ಗುಣವಿರುವುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ನೀವು ತೊಡಗಿರಿ. ಮನಸ್ತಾಪದ ಕಾರಣ ದೂರ ಉಳಿಯಲು ಇಷ್ಟಪಡುವಿರಿ. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ನಿಮ್ಮ ಲಾಭಕ್ಕೆ ಪೂರಕವಾದ ಅವಕಾಶಗಳು ಸಿಗುತ್ತವೆ.
ಕರ್ಕಾಟಕ ರಾಶಿ: ಅಸೂಯೆಯು ನಿಮ್ಮನ್ನು ಸುಮ್ಮನೆ ಕುಳಿತುಕೊಳ್ಳುವಂತೆ ಮಾಡದು. ಇಂದು ಹೆಚ್ಚಿನ ಸಮಯವನ್ನು ದೇವತಾರಾಧನೆಗೆ ಕಳೆಯುವಿರಿ. ಅಧ್ಯಾತ್ಮ ಚಿಂತನೆಗೆ ಇನ್ನೊಬ್ಬರ ಜೊತೆಯಾಗುವರು. ಯಾವುದಾದರೂ ಮುಖ್ಯ ದಾಖಲೆಯನ್ನು ಎತ್ತಿಟ್ಟು, ಅದಕ್ಕಾಗಿ ವಿಪರೀತ ಹುಡುಕುವಂಥ ಸನ್ನಿವೇಶ ಸೃಷ್ಟಿಯಾಗುತ್ತದೆ. ನಿಮಗೆ ನಿಮ್ಮದೇ ಸರಿ ಎನಿಸುವುದು ಸಹಜ. ವಿದ್ಯುತ್ ಉಪಕರಣವನ್ನು ಹೆಚ್ಚು ಬಳಸುವಿರಿ. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಿಮ್ಮ ಮಾರ್ಗವನ್ನು ಯಾವುದೇ ಕಾರಣಕ್ಕೂ ಬದಲಿಸಲಾರಿರಿ. ಸಂಗಾತಿಯನ್ನು ದೂರಿದ ಮಾತ್ರಕ್ಕೆ ಯಾವ ವ್ಯತ್ಯಾಸವೂ ಆಗದು. ನಿಮ್ಮ ಸೋಮಾರಿತನವೇ ನಿಮ್ಮ ದೊಡ್ಡ ಶತ್ರುವಾಗಲಿದೆ. ಒಂಟಿತನದ ಆಲೋಚನೆಯು ಪೂರ್ಣವಾಗದು. ಅನಾರೋಗ್ಯದ ಕಾರಣದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆಗುವುದು. ಇಂದಿನ ಆರ್ಥಿಕತೆಯಿಂದ ನಿಮಗೆ ತೃಪ್ತಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ.
ಸಿಂಹ ರಾಶಿ: ಅಭಿವೃದ್ಧಿಗೆ ಅತಿಯಾದ ಬುದ್ಧಿವಂತಿಕೆಯೂ ಅಡ್ಡಲಾದೀತು. ಇಂದು ಎಷ್ಟು ಪ್ರಯತ್ನ ಪಟ್ಟರೂ ಹೆಚ್ಚಿನ ಖರ್ಚನ್ನು ತಡೆಯುವುದಕ್ಕೆ ಆಗುವುದಿಲ್ಲ. ಯಾವುದೋ ನಿಶ್ಚಿತ ಮೂಲದಿಂದ ಹಣ ಬರುವ ಖಾತ್ರಿ ಸಿಕ್ಕು, ಹೆಚ್ಚಿನ ಖರ್ಚು ಮಾಡಲು ಮುಂದಾಗುತ್ತೀರಿ. ಎಲ್ಲವನ್ನೂ ನಿಮ್ಮ ನೇರಕ್ಕೇ ಆಗಬೇಕು ಎನ್ನುವುದು ಆಗದು. ನಿಮ್ಮ ಕಾರಣದಿಂದ ಕುಟುಂಬವು ಸಂಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ಎಲ್ಲಾ ಕೆಲಸಗಳನ್ನು ಮಾಡಿದರೂ ಯಶಸ್ಸಿನಲ್ಲಿ ವಿಳಂಬವಾಗಬಹುದು. ಕೆಲವು ಅನಾರೋಗ್ಯಕ್ಕೆ ಅತಿಯಾದ ಆರೈಕೆಯೇ ತೊಂದರೆ ನೀಡೀತು. ಮಕ್ಕಳ ವಿಚಾರದಲ್ಲಿ ದುಂದು ವೆಚ್ಚ ಮಾಡಬೇಕಾದೀತು. ಕಲಾವಿದರಿಗೆ ಹೊಸ ಅವಕಾಶಗಳು ತೆರೆಯುವುದು. ನಿಮ್ಮ ಉಡುಗೊರೆಯಿಂದ ಸಂತೋಷವಾಗಲಿದೆ. ಬಂಧುಗಳು, ಸ್ನೇಹಿತರು ನಿಮ್ಮ ಸಮಯಪ್ರಜ್ಞೆಯನ್ನು ಮೆಚ್ಚುತ್ತಾರೆ. ಕಣ್ಣು ನೋವು ನಿಮ್ಮನ್ನು ಕಾಡಬಹುದು. ಕೆಲವನ್ನು ಅನುಭವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು. ಸಮಯಕ್ಕಾಗಿ ನೀವು ಕಾಯುವುದು ಅನಿವಾರ್ಯವಾದೀತು. ಸ್ವಯಂಕೃತ ಅಪರಾಧದಿಂದ ನಿಮಗೆ ಕಿಂಚಿತ್ತೂ ಬೇಸರವಾಗದು.
ಕನ್ಯಾ ರಾಶಿ: ಯಾರೇ ಬಂದರೂ ಜೊತೆ ಸ್ವಲ್ಪ ದೂರ ಬರುತ್ತಾರೆ. ಸ್ವತಂತ್ರವಾಗಿ ನಡೆಯುವುದು ನೀವೇ. ನಿಮ್ಮ ಆಸೆಗಳಿಗೆ ಪೂರಕವಾದ ಸನ್ನಿವೇಶಗಳನ್ನು ತಾನಾಗಿಯೇ ಬರುವುದು. ಯಾವುದೋ ಆತಂಕ ಇಡೀ ದಿನ ನಿಮ್ಮನ್ನು ಕಾಡಲಿದೆ. ಕುಟುಂಬದ ಹಿರಿಯರ ಸಲಹೆ ಪಡೆದು, ಮುಖ್ಯ ಕೆಲಸಗಳಲ್ಲಿ ಮುಂದುವರಿಯಿರಿ. ಯಾರ ಜೊತೆಗೂ ವಾಗ್ವಾದ ನಡೆಸದಿರಿ. ಮಕ್ಕಳ ಭವಿಷ್ಯದ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಿರಿ. ನಿಮ್ಮ ಬಗ್ಗೆ ಇರುವ ಆಕ್ಷೇಪಗಳು ಎಲ್ಲವು ಮುರಿದು ಬೀಳಬಹುದು. ನ್ಯಾಯ ನೀತಿಯ ವಿರುದ್ಧ ನಡೆಯುವುದು ಬೇಡ. ಎಲ್ಲವನ್ನೂ ಸಮರಸದಿಂದ ಮಾಡುವಿರಿ. ಸ್ಥಿರಾಸ್ತಿಯ ನಷ್ಟದಿಂದ ಬೇಸರವಾಗುವುದು. ಯಾರೋ ತೆಗೆದ ಆಳದಲ್ಲಿ ನೀವು ಬೀಳುವಿರಿ. ವಾಹನ ಚಾಲನೆ ಮಾಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ವಿದ್ಯಾಭ್ಯಾಸದಲ್ಲಿ ಅಸ್ಥಿರತೆ ಕಾಡಬಹುದು. ನಿಮ್ಮ ವರ್ತನೆಗಳ ಬಗ್ಗೆ ಆಕ್ಷೇಪ ಬರಬಹುದು. ನಿಮ್ಮ ಜವಾಬ್ದಾರಿ ಅನ್ಯರ ಪಾಲಾದರೂ ನೀವು ಮಾತ್ರ ನೀಡಲು ಸಿದ್ಧರಾಗುವುದಿಲ್ಲ.
ತುಲಾ ರಾಶಿ: ನಿಮಗೆ ಅನುಕೂಲವಾಗಬೇಕಾದರೆ ಸಮಯ ನೋಡಿ ವಿಷಯವನ್ನು ಪ್ರಸ್ತಾಪಿಸಬೇಕು. ನಿಮ್ಮ ಪಟ್ಟ ಶ್ರಮಕ್ಕೆ ಈಗ ಗೌರವ ದೊರೆಯಲಿದೆ. ಹಣಕಾಸಿನ ಸಂಗತಿಗಳನ್ನು ಸಂಗಾತಿ ಜತೆಗೆ ಚರ್ಚಿಸಿ, ಆ ನಂತರ ಮುಂದಿನ ತೀರ್ಮಾನ ಕೈಗೊಳ್ಳಿ. ಅನಿವಾರ್ಯ ಸಂದರ್ಭದಲ್ಲೂ ಸುಳ್ಳು ಹೇಳಬೇಡಿ. ಶತ್ರುಗಳು ನಿಮ್ಮ ನೆಮ್ಮದಿಯನ್ನು ಹಾಳುಮಾಡಬಹುದು. ಮಕ್ಕಳನ್ನು ನೋಡಬೇಕೆನಿಸುವುದು. ಎಲ್ಲವನ್ನೂ ನೀವು ನಿಶ್ಚಯ ಮಾಡಿಕೊಳ್ಳಲು ಆಗದು. ಎಂದೋ ಮಾಡಿದ ಕಾರ್ಯಕ್ಕೆ ಇಂದು ಪಶ್ಚಾತ್ತಾಪಪಡಬೇಕಾದೀತು. ನಿಮ್ಮ ದಿನಚರಿ ನಿಧಾನವಾಗಿರುತ್ತದೆ. ಪ್ರತಿಯೊಂದು ಕ್ರಿಯೆಯನ್ನು ನಿಧಾನಗತಿಯಲ್ಲಿ ಸಾಗುವುದು. ವೈವಾಹಿಕ ತೀರ್ಮಾನಕ್ಕೆ ಕುಟುಂಬ ಜೊತೆ ಪ್ರಯಾಣ. ಸಿಕ್ಕುಬಿದ್ದು ಅವಮಾನದ ಪಾಲಾಗುತ್ತೀರಿ. ಆಲಸ್ಯದಿಂದ ಹೊರಬರುವ ಮನಸ್ಸಾಹುವುದು. ಎರಡು ಮನಸ್ಸನ್ನು ಮಾಡಿಕೊಂಡು ಮುಂದುವರಿಯುವುದು ಬೇಡ. ಒತ್ತಡದಿಂದ ಕ್ರಿಯಾತ್ಮಕತೆಗೆ ಪೆಟ್ಟುಬೀಳಬಹುದು. ಆಯ್ಕೆಗಳನ್ನು ಆರಿಸಲಾಗದು. ಭಾವನಾತ್ಮಕ ಚಿಂತನೆಗಳು ನಿಮ್ಮ ಮೇಲೆ ಸಕಾರಾತ್ಮಕ ಪರಿಣಾಮವನ್ನು ನೀಡಬಹುದು.
ವೃಶ್ಚಿಕ ರಾಶಿ: ಕಲ್ಪನಾಶಕ್ತಿ ಬಹಳ ವೇಗದಲ್ಲಿ ಇದ್ದರೂ ವಾಸ್ತವಕ್ಕೆ ದೂರವಾದುದು. ಇಂದು ನಿಮ್ಮ ಬಾಕಿ ಉಳಿದ ಸಾಲಗಳನ್ನು ಪೂರ್ಣ ಮಾಡಿ. ಅಧಿಕಾರವನ್ನು ಹೆಚ್ಚಿಸಿಕೊಳ್ಳಲು ಸಂಬಂಧಪಟ್ಟರ ಜೊತೆ ಮಾತನಾಡುವಿರಿ. ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಒಂದು ಒಪ್ಪಂದಕ್ಕೆ ಬರುವ ಸಾಧ್ಯತೆ ಇದೆ. ನಿರೀಕ್ಷೆ ಮಾಡಿದಂತೆ ಆದಾಯ ಬರುವುದಿಲ್ಲ. ಆಲಸ್ಯದಿಂದ ಎಲ್ಲ ಕಾರ್ಯದಲ್ಲಿಯೂ ನಿರಾಸಕ್ತಿ ಇರಲಿದೆ. ಉದ್ಯೋಗದ ಹೊಸ ಸ್ಥಳದಲ್ಲಿ ಸ್ನೇಹಿತರಾಗುವರು. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು. ಹಿರಿಯರ ಆಶೀರ್ವಾದವು ನಿಮಗೆ ಖುಷಿ ಕೊಡುವುದು. ಇತರರ ಮೇಲೆ ದೋಷಾರೋಪ ಮಾಡಬೇಡಿ. ಹಿರಿಯರ ಮಾತುಗಳು ನಿಮ್ಮನ್ನು ಕಾಡಬಹುದು. ನಿಮ್ಮ ಯೋಜನೆಯು ಒಂದು ಎತ್ತರಕ್ಕೆ ಏರಿರುವುದು ಆತ್ಮಸಂತೋಷವಾಗುಬುದು. ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು.
ಧನು ರಾಶಿ: ಸಾಧನೆಯ ಪರಿಣಾಮವು ಇಂದು ಗೊತ್ತಾಗಲಿದೆ. ನಿಮಗೆ ಮಹತ್ತರವಾದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಾಗದು. ಹೆಚ್ಚಿನ ಪ್ರತಿಫಲಾಪೇಕ್ಷೆ ಇಲ್ಲದೆ ನೀವು ಈ ಕೆಲಸವನ್ನು ಮಾಡಬೇಕಾಗುತ್ತದೆ. ಪ್ರಾಮಾಣಿಕತೆಯನ್ನು ಬಿಟ್ಟು ವ್ಯವಹಾರ ಮಾಡುವುದು ಬೇಡ. ಯಾವುದೇ ಆಕ್ಷೇಪ ಮಾಡಬೇಡಿ. ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗಬಹುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಸಂಗಾತಿಯ ಎದುರು ಏನನ್ನೂ ಹೇಳದೇ ಸುಮ್ಮನಿರುವಿರಿ. ಸಮಯದ ಅನಂತರ ಹಳೇ ಗೆಳೆಯರ ಭೇಟಿ ಅಥವಾ ಮಾತುಕತೆ ಸಾಧ್ಯತೆ ಇದೆ. ಮೋಜಿಗಾಗಿ ಹಣವನ್ನು ವ್ಯರ್ಥ ಮಾಡಿದರೆ ಮರಳಿಬಾರದು ಎಂಬುದು ಗೊತ್ತಿರಲಿ. ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ಶಿಸ್ತಿನಿಂದ ನೀವು ವ್ಯವಹಾರವನ್ನು ಇಟ್ಟುಕೊಳ್ಳುವಿರಿ. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ಪಾಲುದಾರಿಕೆಯಲ್ಲಿ ಉಂಟಾದ ವಿವಾದವನ್ನು ದೊಡ್ಡ ಮಾಡಿಕೊಳ್ಳುವಿರಿ.
ಮಕರ ರಾಶಿ: ಉದ್ಯಮಕ್ಕೆ ಬೇಕಾದ ಸ್ಥಳವಿಕ್ಷಣೆ ಮಾಡುವಿರಿ. ನಿಮ್ಮವರು ಎಂದು ಯಾರನ್ನು ನೀವು ಭಾವಿಸಿದ್ದೀರೋ ಅವರಿಂದಲೋ ಬಹಳ ನೋವು ಪಡುತ್ತೀರಿ. ನಿಮ್ಮಿಂದಾ ಸಾಧ್ಯವಾದಲ್ಲಿ ಅಗತ್ಯ ಇರುವ ಒಬ್ಬರಿಗೆ ಊಟದ ವ್ಯವಸ್ಥೆ ಮಾಡಿ. ಸಂಗಾತಿ ಮಕ್ಕಳ ಮಾತನ್ನು ಸರಿಯಾಗಿ ಕೇಳಿಸಿಕೊಳ್ಳಿ. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ಹಣಕಾಸಿನ ವಿಚಾರದಲ್ಲಿ ಸಹೋದರನಿಂದ ಅಪವಾದ ಸಾಧ್ಯತೆ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ನಿಮ್ಮ ಗುಣವನ್ನು ಅಪಾರ್ಥ ಮಾಡಿಕೊಂಡಾರು. ಮಕ್ಕಳ ಜೊತೆ ಸೌಹಾರ್ದ ಇರಲಿದೆ. ಆತುರದ ನಡಿಗೆಯಿಂದ ನೀವು ಎಡವುವಿರಿ. ದೀರ್ಘಕಾಲದ ರೋಗದಿಂದ ಬಳಲಿಕೆಯು ನಿಮಗೆ ಅಭ್ಯಾಸವಾಗಲಿದೆ. ಶತ್ರುಗಳ ಕಾಟಗಳು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ದೈವದ ಭೀತಿಯು ನಿಮ್ಮನ್ನು ಕಾಡಬಹುದು. ರಾಜಕಾರಣಿಗಳಿಂದ ನಿಮ್ಮ ಕೆಲಸವು ಪೂರ್ಣವಾಗಲಿದೆ. ದುಃಸ್ವಪ್ನಗಳು ಬೀಳಬಹುದು.
ಕುಂಭ ರಾಶಿ: ವ್ಯವಸಾಯದ ಬಗ್ಗೆ ಅಧಿಕ ಒಲವು. ನಿಮ್ಮ ಸ್ವತಂತ್ರ ಆಲೋಚನೆಯು ಇತರರಿಗೆ ಮಾದರಿ ಆಗಬಹುದು. ಹಣದ ಅಗತ್ಯ ಕಂಡುಬಂದು, ಸಾಲ ಮಾಡಬೇಕಾಗಿ ಬರುವುದು. ಸ್ವಂತ ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಲ್ಪ ಹಿನ್ನಡೆ. ಪ್ರಯಾಣದಿಂದ ಆಗಬೇಕಾದ ಕೆಲಸವಾದರೂ ಆಯಾಸ ಕಾಡಬಹುದು. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಹಳೆಯ ಸ್ನೇಹವು ಮತ್ತೆ ಒಂದಾಗುವುದು. ದಾಂಪತ್ಯದಲ್ಲಿ ನಿರಾಸಕ್ತಿ ಉಂಟಾಗಬಹುದು. ಹೂಡಿಕೆಯ ಕಡೆ ಸರಿಯಾಗಿ ಇರಲಿ. ಮನಸ್ಸಿಗೆ ಹಿಡಸದ್ದನ್ನು ನೀವು ಮಾಡಲಾರಿರಿ. ಪಾಲುದಾರಿಕೆಯಲ್ಲಿ ಸಮಸ್ಯೆ ಕಾಣಿಸುವುದು. ಉದ್ಯಮದಲ್ಲಿ ಪ್ರಗತಿಯನ್ನು ಕಂಡು ಖುಷಿಯಾಗುವುದು. ನಿಮಗೆ ಯಾರಿಂದಲೋ ರಕ್ಷಣೆ ಇದೆ ಎನ್ನಿಸಬಹುದು. ಮನೆಯಲ್ಲೂ ತಾಳ್ಮೆಯನ್ನು ಇಟ್ಟುಕೊಳ್ಳಿ. ನಂಬಿಕೆಯು ಹುಸಿಯಾಗುವುದು. ಯಾರೊಬ್ಬರ ಮಾತುಗಳಿಗೆ ತ್ವರಿತ ಪ್ರತಿಕ್ರಿಯೆ ಕೊಡುವುದು ಬೇಡ.
ಮೀನ ರಾಶಿ: ನ್ಯಾಯ ಮಾರ್ಗದಲ್ಲಿ ಇದ್ದವರು ನಿಂದನೆಯನ್ನು ಎದುರಿಸಬೇಕಾದೀತು. ನಿಮ್ಮ ಮಾತಿನ ಮೋಡಿಗೆ ಇತರರು ಒಳಗಾಗುವರು. ಮಕ್ಕಳ ವ್ಯವಹಾರಕ್ಕೆ ಹಣಕಾಸು ನೆರವು ನೀಡಲು ಪ್ರಯತ್ನಿಸುತ್ತೀರಿ. ರಾಜಕೀಯದ ಪ್ರೇರಣೆಪಡೆಯುವ ಸಾಧ್ಯತೆ ಇದೆ. ಹಳೆಯ ವಾಹನಗಳ ಮಾರಾಟ ಮಾಡುವ ಬಗ್ಗೆ ಆಲೋಚನೆ ಬರುತ್ತದೆ. ಈ ಹಿಂದೆ ಷೇರು ಪೇಟೆಯಲ್ಲಿ ಮಾಡಿದ್ದ ಹೂಡಿಕೆಯನ್ನು ಹಿಂಪಡೆಯಲಿದ್ದೀರಿ. ಮಾನಸಿಕ ನೆಮ್ಮದಿಯು ನಿಮ್ಮ ಹಲವು ಕೆಲಸಗಳನ್ನು ಮಾಡಲು ಸಹಾಯ ಆಗುವುದು. ವಾಹನದ ತೊಂದರೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ. ಸ್ವಂತ ವ್ಯಾಪಾರದಲ್ಲಿ ಹಿನ್ನಡೆಯಾಗುವುದು. ಹೇಗಾದರೂ ಮಾಡಿ ಭಯವನ್ನು ದೂರ ಮಾಡಿಕೊಳ್ಳುವಿರಿ. ತೆಗಳಿಕೆಯನ್ನು ಛಲವಾಗಿ ತೆಗೆದುಕೊಳ್ಳುವಿರಿ. ಯಾರ ಮೇಲೂ ಅವಮಾನ ಬೇಡ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು. ಹಿಂದಿನ ತಪ್ಪುಗಳು ಪಾಠವಾಗುವುದು.
-ಲೋಹಿತ ಹೆಬ್ಬಾರ್ – 8762924271 (what’s app only)