AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಆತುರದ ನಿರ್ಧಾರವನ್ನು ತೆಗದುಕೊಳ್ಳಬೇಡಿ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 25 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಆತುರದ ನಿರ್ಧಾರವನ್ನು ತೆಗದುಕೊಳ್ಳಬೇಡಿ
ರಾಶಿ ಭವಿಷ್ಯ
TV9 Web
| Edited By: |

Updated on: Apr 25, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ವ್ಯತಿಪಾತ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:14 ರಿಂದ 07:48 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:22 ರಿಂದ  10:57ರ ವರೆಗೆ.

ಧನು ರಾಶಿ : ಮನೆಯಲ್ಲಾಗಲಿ ಕಛೇರಿಯಲ್ಲಾಗಲಿ ನಿಮ್ಮ ಮಾತನ್ನು ಬೆಂಬಲಿಸತ್ತಾರೆ. ಅನಿರೀಕ್ಷಿತ ಸಂಪತ್ತು ಸಿಗುವ ಸಾಧ್ಯತೆ ಇದೆ. ಇಂದು ಬಂದ ಅತಿಥಿಯ ಜೊತೆ ಹರಟೆಯನ್ನು ಹೊಡೆಯುತ್ತೀರಿ. ಕಲಾತ್ಮಕ ಮತ್ತು ಸೃಜನಶೀಲವ್ಯಕ್ತಿತ್ವಕ್ಕೆ ಬಹಳಷ್ಟು ಮೆಚ್ಚುಗೆ ಬರಲಿದೆ. ನಿರೀಕ್ಷೆಗಿಂತಲೂ ಹೆಚ್ಚಿನ ಫಲವು ಸಿಗಲಿದೆ. ಪ್ರೇಮ ವ್ಯವಹಾರಗಳಲ್ಲಿ ಹೊಂದಾಣಿಕೆ ಬೇಕೆನಿಸುವುದು. ಅದೃಷ್ಟ ನಿಮ್ಮ ಕಡೆ ಇದ್ದರೂ ಅದನ್ನು ಅನುಭವಿಸುವ ಮನೋಭಾವ ಇರಲಿ. ನಿಮ್ಮ ಸಹೋದರರ ಸಹಯೋಗವು ಇಂದು ಆರ್ಥಿಕ ಲಾಭಕ್ಕೆ ಕಾರಣವಾಗುತ್ತದೆ. ಅತ್ಯಂತ ಸಂಭ್ರಮ ಪಡುವಿರಿ. ಕಾನೂನಿನ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಆಸ್ತಿಯನ್ನು ಮಾಡುವ ಚಿಂತನೆ ಅಧಿಕವಾಗಿರುವುದು. ಹಠದ ಸ್ವಭಾವವು ಎಲ್ಲರ ಪ್ರೀತಿಯಿಂದ ನಿಮ್ಮನ್ನು ದೂರಮಾಡಬಹುದು. ಇಂದು ಹಣಕಾಸಿನ ವ್ಯವಹಾರ ಮಾಡಲು ಧೈರ್ಯವು ಸಾಕಾಗದು. ಮಕ್ಕಳ ಒತ್ತಾಯಕ್ಕೆ ಇಂದು ಪ್ರಯಾಣವನ್ನು ಮಾಡುವಿರಿ.

ಮಕರ ರಾಶಿ : ನಿಮಗೆ ನಿಸ್ಸ್ವಾರ್ಥ ಸೇವೆಯಲ್ಲಿ ಸಂತೋಷ ಇರಲಿದೆ. ಅನೇಕ ಶುಭ ಸೂಚನೆಗಳನ್ನು ನೀವು ಗಮನಿಸಿಕೊಂಡಾಗ ನಿಮ್ಮ ನೀವು ನಿಮ್ಮ ಸನ್ಮಾರ್ಗವನ್ನು ಬಿಡಬೇಡಿ. ಹಣದಕ್ಕೆ ಸಂಬಂಧಿಸಿದ ತೊಂದರೆಗೆ ಮನೆಯಿಂದ ಸಹಾಯ ದೊರೆಯಬಹುದು. ನಿಮ್ಮವರನ್ನು ಮಾತನಾಡಿಸಿ, ಅವರೊಂದಿಗೆ ಕೆಲವು ಮಾತನಾಡಿ. ಸಂಬಂಧಗಳು ಸುಂದರವಾಗಿರಲಿ. ವಿದ್ಯಾರ್ಥಿಗಳು ಯಶಸ್ಸು ಸಾಧಿಸುವರು. ಹಿರಿಯ ಪ್ರಬುದ್ಧ ವ್ಯಕ್ತಿಯಿಂದ ನೀವು ಮಾರ್ಗದರ್ಶನ ಮತ್ತು ಬೆಂಬಲವನ್ನು ಸ್ವೀಕರಿಸುತ್ತೀರಿ. ಕುಟುಂಬದ ಕಡೆಯಿಂದ ಸಂತೋಷದ ಮಾತುಗಳು ಇರುವುದು. ಹಳೆಯ ವಾಹನದ ಮಾರಾಟ ಮಾಡಿ ಹೊಸ ವಾಹನವನ್ನು ಖರೀದಿಸುವಿರಿ. ಉನ್ನತ ಶಿಕ್ಷಣವನ್ನು ಪಡೆಯಲು ನೀವು ಸಫಲರಾಗಬಹುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ಜವಾಬ್ದಾರಿ ಆಗಿರುವಿರಿ. ಭೂಮಿಯ ವ್ಯವಹಾರದಲ್ಲಿ ಸುಮ್ಮನೆ ಕೆಲವನ್ನು ನಿಮ್ಮ ಮೇಲೆ ಬರುವಂತೆ ಮಾಡಿಕೊಳ್ಳುವಿರಿ.

ಕುಂಭ ರಾಶಿ : ಆತುರದ ನಿರ್ಧಾರವನ್ನು ತೆಗದುಕೊಳ್ಳಬೇಡಿ. ಪ್ರತ್ಯಕ್ಷವಾಗಿ ಕಂಡಿದ್ದು ಮಾತ್ರ ಸತ್ಯವಲ್ಲವೆಂಬುದನ್ನು ನೀವು ಅರಿತುಕೊಳ್ಳಬೇಕು. ಎಷ್ಟೋ ದಿನದ ಸಾಲಗಳು ಇಂದು ಮುಕ್ತಾಯಗೊಳ್ಳುವುವು‌. ಆಫೀಸ್ ನಲ್ಲಿ ಒತ್ತಡದ ವಾತಾವರಣವಿರುವುದು. ಸಮಾಧಾನದಿಂದ ನಿಭಾಯಿಸಿ. ಅದೃಷ್ಟ ನಿಮ್ಮ ಕಡೆ ಇರುತ್ತದೆ. ಇಂದು ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಹಣವನ್ನು ಹೂಡಿಕೆ ಮಾಡುವುದನ್ನು ಪರಿಗಣಿಸಿ, ಇದು ಮಾನಸಿಕ ಶಾಂತಿ ಮತ್ತು ಸ್ಥಿರತೆಗೆ ಕಾರಣವಾಗಬಹುದು. ಪ್ರೀತಿಪಾತ್ರರ ಜೊತೆ ವಾದಗಳನ್ನು ಹುಟ್ಟುಹಾಕುವ ವಿಷಯಗಳಿಂದ ದೂರವಿರಿ. ನಿಮಗೆ ನಿಮ್ಮವರ ಭಾವವನ್ನು ಸರಿಯಾಗಿ ಅಂದಾಜು ಮಾಡಲಾಗದು. ಸುಮ್ಮನೇ ಯಾರ ಬೆಂಬಲಕ್ಕೂ ನಿಲ್ಲಲು ಹೋಗುವುದು ಬೇಡ. ಬಂಧುಗಳನ್ನು ನೀವು ಆಡಿಕೊಳ್ಳುವಿರಿ. ಯಾರ ಮೇಲಾದರೂ ದೋಷಾರೋಪ ಮಾಡುವ ಸಂಭವವಿದೆ. ಬರುವ ಆದಾಯಕ್ಕೆ ವಿಘ್ನವು ಬರಬಹುದು. ಅಂತರ್ಜಾಲದಿಂದ ನಿಮಗೆ ಕೆಲಸಕ್ಕೆ ಕರೆ ಬರಬಹುದು.

ಮೀನ ರಾಶಿ : ಧಾರ್ಮಿಕ ಕಾರ್ಯಗಳಿಂದ ನಿಮ್ಮ ಹಣವು ವ್ಯಯವಾಗುವ ಸಾಧ್ಯತೆ ಇದೆ. ಇದು ನಿಮ್ಮ ಮನಸ್ಸಿಗೆ ಶಾಂತಿಯನ್ನೂ ನೆಮ್ಮದಿಯನ್ನೂ ನೀಡುತ್ತದೆ. ಹಾಸ್ಯದಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ಹಿರಿಯ ಹಾಗೂ ಪ್ರಮುಖವ್ಯಕ್ತಿಗಳನ್ನು ಇಂದು ಭೇಟಿಯಾಗುತ್ತೀರಿ. ನೀವು‌ ಮಾಡುವ ಕಾರ್ಯಕ್ಕೆ ಇತರರ ಸಹಾಯವೂ ಲಭ್ಯವಾಗಲಿದೆ. ನಿಮ್ಮ ಹಾಸ್ಯ ಪ್ರಜ್ಞೆಯು ಇತರರಿಗೆ ಬೇಸರ ತರಿಸೀತು. ನಿಜವಾದ ಸಂತೋಷವು ಭೌತಿಕ ಆಸ್ತಿಯಲ್ಲಿ ಕಂಡುಬರುವುದಿಲ್ಲ. ವೃತ್ತಿಯ ಸ್ಥಳದಲ್ಲಿ ಬದಲಾವಣೆಯನ್ನು ಬಯಸುವಿರಿ. ನಿಮ್ಮ ವಸ್ತುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಉತ್ತಮ. ಶತ್ರುಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರಲಿದೆ. ಕಛೇರಿಗೆ ವಿರಾಮವಿದ್ದರೂ ಅನಿರೀಕ್ಷಿತ ಮೀಟಿಂಗ್ ಗೆ ಹಾಜಾರಾಗಬೇಕಾದೀತು. ನಿಮ್ಮ ಪ್ರಾಮಾಣಿಕತೆಯ ಮಾರ್ಗವನ್ನು ಬಿಡುವುದು ಬೇಡ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಪೂರ್ಣ ಮಾಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ