AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shukra Gochar 2023: ಕರ್ಕಾಟಕ ರಾಶಿ ಪ್ರವೇಶಿಸಲಿರುವ ಶುಕ್ರ; ಈ 5 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ!

Mangal Shukra Yuti; ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೇ 30 ರಂದು ಶುಕ್ರನು ಕಟಕ (ಕರ್ಕಾಟಕ) ರಾಶಿಯನ್ನು ಪ್ರವೇಶಿಸುತ್ತಾನೆ. ಮೇ 30 ರಂದು ರಾತ್ರಿ 7.39 ಕ್ಕೆ ಶುಕ್ರನು ಕರ್ಕಾಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಜುಲೈ 7 ರವರೆಗೆ ಶುಕ್ರ ಈ ರಾಶಿಯಲ್ಲಿ ಇರುತ್ತಾನೆ. ಮಂಗಳ ಗ್ರಹವು ಈಗಾಗಲೇ ಕರ್ಕಾಟಕದಲ್ಲಿ ಇರುವುದರಿಂದ, ಕರ್ಕಾಟಕ ರಾಶಿಯಲ್ಲಿ ಮಂಗಳ ಮತ್ತು ಶುಕ್ರ ಸಂಯೋಗ ಆಗಲಿದೆ.

Shukra Gochar 2023: ಕರ್ಕಾಟಕ ರಾಶಿ ಪ್ರವೇಶಿಸಲಿರುವ ಶುಕ್ರ; ಈ 5 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ!
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 23, 2023 | 5:45 AM

Share

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೇ 30 ರಂದು ಶುಕ್ರನು ಕಟಕ (ಕರ್ಕಾಟಕ) ರಾಶಿಯನ್ನು ಪ್ರವೇಶಿಸುತ್ತಾನೆ. ಮೇ 30 ರಂದು ರಾತ್ರಿ 7.39 ಕ್ಕೆ ಶುಕ್ರನು ಕರ್ಕಾಟಕ ರಾಶಿಯನ್ನು ಪ್ರವೇಶಿಸುತ್ತಾನೆ. ಜುಲೈ 7 ರವರೆಗೆ ಶುಕ್ರ ಈ ರಾಶಿಯಲ್ಲಿ ಇರುತ್ತಾನೆ. ಮಂಗಳ ಗ್ರಹವು ಈಗಾಗಲೇ ಕರ್ಕಾಟಕದಲ್ಲಿ ಇರುವುದರಿಂದ, ಕರ್ಕಾಟಕ ರಾಶಿಯಲ್ಲಿ ಮಂಗಳ ಮತ್ತು ಶುಕ್ರ ಸಂಯೋಗ ಆಗಲಿದೆ. ಮಂಗಳ ಮತ್ತು ಶುಕ್ರನ ಸಂಯೋಜನೆಯು ಜನರ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಶುಕ್ರನ ಸಂಚಾರದಿಂದ ಉಂಟಾಗುವ ಶುಕ್ರ ಮತ್ತು ಮಂಗಳ ಸಂಯೋಜನೆಯು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಅದೃಷ್ಟವನ್ನು ತರುತ್ತದೆ. ಉದ್ಯೋಗಿಗಳಿಗೆ ಹಠಾತ್ ನಗದು ಲಾಭ ಮತ್ತು ಬಡ್ತಿಯಂತಹ ಪ್ರಯೋಜನಗಳು ಸಿಗಲಿವೆ. ಯಾವ ರಾಶಿಗಳಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಮೇಷ ರಾಶಿ

ಮಂಗಳ ಮತ್ತು ಶುಕ್ರ ಸಂಯೋಗವು ಈ ರಾಶಿಯವರಿಗೆ ಕುಟುಂಬದಲ್ಲಿ ಬಹಳಷ್ಟು ಸಂತೋಷ ಮತ್ತು ಶಾಂತಿಯನ್ನು ನೀಡಲಿದೆ. ಮೋಜಿನಲ್ಲಿ ಸಮಯ ಕಳೆಯಲಿದ್ದೀರಿ. ವೃತ್ತಿ ಜೀವನದಲ್ಲಿ ಪ್ರಗತಿ ಕಾಣಲಿದೆ. ನಿಮ್ಮ ಸಂಗಾತಿಯು ಕೆಲಸದಲ್ಲಿ ಹೊಸ ಅವಕಾಶಗಳನ್ನು ಪಡೆಯುವ ಸಾಧ್ಯತೆಯಿದೆ. ಪ್ರೀತಿಯ ಜೀವನ ಅದ್ಭುತವಾಗಿರಲಿದೆ.

ಮಿಥುನ ರಾಶಿ

ಮಿಥುನ ರಾಶಿಯವರಿಗೆ ಆರ್ಥಿಕ ಲಾಭವಾಗಲಿದೆ. ಆರ್ಥಿಕ ಸ್ಥಿತಿ ಸದೃಢವಾಗಿರುತ್ತದೆ. ವ್ಯಾಪಾರದಲ್ಲಿ ಅಧಿಕ ಲಾಭವಿದೆ. ಈ ಸಮಯದಲ್ಲಿ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬಹುದು. ಹೂಡಿಕೆಯಿಂದ ಲಾಭವಾಗಲಿದೆ. ಆಸ್ತಿ ಮೂಲಕ ಲಾಭವಾಗಲಿದೆ. ಸಮಾಜದಲ್ಲಿ ಗೌರವವೂ ಹೆಚ್ಚುತ್ತದೆ.

ಕಟಕ

ಶುಕ್ರನ ಸಂಚಾರದಿಂದ ಉಂಟಾಗುವ ಮಂಗಳ-ಶುಕ್ರ ಸಂಯೋಗವು ಕರ್ಕಾಟಕ ರಾಶಿಯವರ ವ್ಯಕ್ತಿತ್ವವನ್ನು ಹೆಚ್ಚಿಸುತ್ತದೆ. ಅವರ ಸಂಗಾತಿಯೊಂದಿಗಿನ ಬಾಂಧವ್ಯ ಬಲವಾಗಿರುತ್ತದೆ. ಅವಿವಾಹಿತರಿಗೆ ಮದುವೆ ಆಗುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಜನರು ನಿಮ್ಮ ಮಾತಿಗೆ ಬೆಲೆ ಕೊಡುತ್ತಾರೆ. ಗೌರವ ಹೆಚ್ಚುತ್ತದೆ. ಕೆಲಸ ಉತ್ತಮವಾಗಿರಲಿದೆ.

ಕನ್ಯಾರಾಶಿ

ಯಾವುದೇ ದೊಡ್ಡ ಆಸೆಗಳು ಈಡೇರುತ್ತವೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅವಿವಾಹಿತರು ಸಂಗಾತಿಯನ್ನು ಹುಡುಕಬಹುದು. ವೃತ್ತಿ ಜೀವನದಲ್ಲಿ ಪ್ರಗತಿ ಕಾಣಲಿದೆ. ಹಿರಿಯ ಅಧಿಕಾರಿಗಳು ನಿಮ್ಮನ್ನು ಮೆಚ್ಚುವರು. ವ್ಯಾಪಾರದಲ್ಲಿ ಲಾಭ ಇರುತ್ತದೆ. ಪ್ರೇಮಿಗಳಿಗೆ ಶುಭಫಲವಿದೆ.

ಮಕರ

ಇತರರೊಂದಿಗೆ ಉತ್ತಮ ಸಂಬಂಧ ಹೊಂದಲಿದ್ದೀರಿ. ಸಂಗಾತಿ ಮತ್ತು ಪ್ರೇಮಿಯೊಂದಿಗಿನ ಸಂಬಂಧವು ಗಟ್ಟಿಯಾಗುತ್ತದೆ. ರೋಮ್ಯಾನ್ಸ್ ಜೀವನವನ್ನು ಉತ್ತಮಗೊಳಿಸುತ್ತದೆ. ವೃತ್ತಿಪರರ ಜೀವನವೂ ಅದ್ಭುತವಾಗಿರಲಿದೆ. ನೀವು ಹೊಸ ಉದ್ಯೋಗ ಪ್ರಸ್ತಾಪವನ್ನು ಪಡೆಯಬಹುದು. ವ್ಯಾಪಾರವು ವೇಗವಾಗಿ ವೃದ್ಧಿಯಾಗಲಿದೆ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?