Astrology: ಈ ರಾಶಿಯವರ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ದೊರೆಯುವುದು

ರಾಶಿ ಭವಿಷ್ಯ, ಮಂಗಳವಾರ(ಅಕ್ಟೋಬರ್: 08): ವಾಹನದಿಂದ ಅಪಘಾತವು ಆಗಬಹುದು. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ನಿಮಗೆ ಯಾರ ಮಾತಿನ ಮೇಲೂ ಪೂರ್ಣ ನಂಬಿಕೆ ಇರದು. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಹಾಗಾದರೆ ಅಕ್ಟೋಬರ್: 08ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯವರ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ದೊರೆಯುವುದು
ಈ ರಾಶಿಯವರ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ದೊರೆಯುವುದು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 08, 2024 | 12:12 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸೌಭಾಗ್ಯ​, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:18 ರಿಂದ 04:47, ಯಮಘಂಡ ಕಾಲ ಬೆಳಗ್ಗೆ 09:22ರಿಂದ 10:51ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:20 ರಿಂದ 01:49 ರವರೆಗೆ.

ಧನು ರಾಶಿ: ಇಂದು ಅನಾರೋಗ್ಯದಿಂದ ಚೇತರಿಕೆಯು ನಿಮ್ಮಲ್ಲಿ‌ ಕಾಣಿಸುವುದು. ಮಾನಸಿಕ ಅಸ್ಥಿರತೆಯಿಂದ ಜೊತೆಗಾರರಿಗೆ ಕಷ್ಟವಾಗಲಿದೆ. ವಾಹನದಿಂದ ಅಪಘಾತವು ಆಗಬಹುದು. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ನಿಮಗೆ ಯಾರ ಮಾತಿನ ಮೇಲೂ ಪೂರ್ಣ ನಂಬಿಕೆ ಇರದು. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸ್ವಲ್ಪ ಸಮಸ್ಯೆ ಆಗಬಹುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಯಾರ‌ ಮಾತನ್ನೋ ಕೇಳಿ ನೀವು ಸಮಸ್ಯೆಯನ್ನು ತಂದುಕೊಳ್ಳಬಹುದು. ಕಣ್ಣಿನ ಸಮಸ್ಯೆಯು ಹೆಚ್ಚಾದೀತು. ವಿವಾಹ ಸಂಬಂಧದಿಂದ ನಿಮಗೆ ತೊಂದರೆಯಾಗಬಹುದು. ಕೆಲಸದಲ್ಲಿ ಮಂದಗತಿಯಲ್ಲಿ ಇರುವಿರಿ. ಬಂಧುಗಳನ್ನು ನೀವು ದೂರ ಮಾಡಿಕೊಳ್ಳುವಿರಿ. ಗತಿಸಿ ಹೋದವರ ನೆನಪನ್ನು ಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ಅಧ್ಯಯನದಿಂದ ದೂರವಾಗುತ್ತಾರೆ. ವ್ಯಾಪಾರವನ್ನು ಹೆಚ್ಚಿಸಲು ಸೂಕ್ತ ವಿಧಾನಗಳನ್ನು ಅಳವಡಿಸಿಕೊಳ್ಳಿ.

ಮಕರ ರಾಶಿ: ಸಹೋದರರಿಂದ ನಿಮಗೆ ಧೈರ್ಯವು ಸಿಗುವುದು. ದಾಂಪತ್ಯದಲ್ಲಿ ಸಂತೋಷವಿರಲು ಹೊಸತನ ಬೇಕಾದೀತು. ಮಾನಸಿಕ ಖಿನ್ನತೆಯಿಂದ ಹೊರಬರಲು ಸ್ನೇಹಿತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದವು ವಿಕೋಪಕ್ಕೆ ಹೋಗಬಹುದು. ನೀವು ಅಂದುಕೊಂಡ ಕಾರ್ಯವನ್ನು ಮಾಡಲು ಸಮಯವೇ ಸಿಗದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗಿ ಇರದು. ನಿಮ್ಮ‌ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ದೊರೆಯುವುದು. ವಾಹನ ಸಂಚಾರದಲ್ಲಿ ನಿಮಗೆ ಭಯವಾಗಬಹುದು. ಆರ್ಥಿಕವಾಗಿ ನೀವು ಬಲವಾಗಿತ್ತಿರುವುದು ನಿಮಗೆ ಹೆಮ್ಮೆಯ ವಿಚಾರವಾಗುವುದು. ಪ್ರೇಯಸಿಯ ಜೊತೆ ಕಾಲಹರಣ ಮಾಡಬಹುದು. ವಿಶ್ವಾಸ ಗಳಿಕೆಯು ನಿಮ್ಮ ಇಂದಿನ ಉದ್ದೇಶವಾಗಲಿದೆ. ಕಠಿಣ ಪರಿಶ್ರಮದ ಹೊರತಾಗಿ ಸರಿಯಾದ ಫಲಿತಾಂಶವನ್ನು ಸಾಧಿಸಲಾಗುವುದಿಲ್ಲ. ಸಂಶೋಧನೆಯ ಚಟುವಟಿಕೆಗಳಲ್ಲಿ ಯಶಸ್ಸಿದೆ.

ಕುಂಭ ರಾಶಿ: ಅನಾಯಾಸದಿಂದ ಬರುವ ಹಣವನ್ನು ದುರುಪಯೋಗ‌ ಮಾಡುವಿರಿ.‌ ಒತ್ತಡದಿಂದ ಕಾರ್ಯವನ್ನು ಮಾಡುವುದು ನಿಮಗೆ ಅಭ್ಯಾಸವಾಗಿದೆ. ಆತ್ಮೀಯರಿಂದ ನೀವು ಸಹಾಯವನ್ನು ಪಡೆಯುವಿರಿ. ನೀವು ಕಾರ್ಯದಲ್ಲಿ ತದೇಕಚಿತ್ತದಿಂದ ಇರುವಿರಿ. ಕೂಡಿಟ್ಟ ಹಣದಿಂದ ನಿಮಗೆ ಇಂದು ಪ್ರಯೋಜನವು ಸಿಗುವುದು. ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು. ಕಛೇರಿಯಲ್ಲಿ ಅನ್ಯ ಕಾರಣಗಳಿಂದ ನಿಮ್ಮ ಕೆಲಸಗಳು ನಿಧಾನವಾಗಿ ಸಾಗಬಹುದು. ಅನಿರೀಕ್ಷಿತ ಸುದ್ದಿಯು ನಿಮ್ಮ‌ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ‌ಜಟಿಲ ಸಮಸ್ಯೆಯನ್ನು ಬಿಡಿಸಿಕೊಳ್ಳಲು ಕಷ್ಟವಾದೀತು. ಆರ್ಥಿಕ‌ಭದ್ರತೆಯ ಕಡೆ ಅಧಿಕ ಗಮನವನ್ನು ಕೊಡುವಿರಿ. ಮನಸ್ಸಿಗೆ ನಕಾರಾತ್ಮಕ ಆಲೋಚನೆಯು ಬರದಂತೆ ನೋಡಿಕೊಳ್ಳಿ. ಇಂದು ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅತಿಯಾಗಿ ನಂಬಬೇಡಿ. ನಿಮ್ಮ ಅಸಹಾಯಕತೆಯನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳುವಿರಿ.

ಮೀನ ರಾಶಿ: ಅಸಾಧಾರಣ ಸೋಲೂ ನಿಮಗೆ ಹೆಮ್ಮೆಯನ್ನು ತರಬಹುದು. ಇಂದು ನಿಮ್ಮ ಕುಟುಂಬವು ಸಂತೋಷವಾಗಿ ಇರುವುದನ್ನು ಕಣ್ತುಂಬಿಕೊಳ್ಳುವಿರಿ. ಕೆಲಸದಲ್ಲಿ ಸಾವಧಾನತೆ ಇರಲಿ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು.‌ ಯಾವುದನ್ನೂ ಕಲ್ಪಿಸಿಕೊಂಡು ದುಃಖಿಸುವುದು ಬೇಡ. ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಯಾರದೋ ಒತ್ತಡದಿಂದ ನಿಮ್ಮ ದಿನಚರಿಯನ್ನು ವ್ಯತ್ಯಾಸ‌ ಮಾಡಿಕೊಳ್ಳುವಿರಿ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ಬೇಡ. ನೀರೀಕ್ಷಿಸಿದಂತೆ ಎಲ್ಲವೂ ನಡೆಯದೇ ಇರಬಹುದು. ನಿಮಗೆ ಬರುವ ಎಚ್ಚರಿಕೆಯ ಕರೆಯನ್ನು ಗಮನಿಸದೇ ಮುನ್ನಡೆಯುವಿರಿ. ಉತ್ತಮ‌ವಾದ ಸಮಯವನ್ನು ಎದುರು ನೋಡುವಿರಿ. ಹಣದ ಒಳ ಹರಿವು ನಿಮಗೆ ನೆಮ್ಮದಿಯನ್ನು ಕೊಟ್ಟೀತು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ.

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ