Astrology: ಸಂಗಾತಿಯ ಮಾತು ನಿಮಗೆ ನೋವುಂಟಾಗುವುದು, ತಾಳ್ಮೆಯಿಂದ ಇರುವಿರಿ

ರಾಶಿ ಭವಿಷ್ಯ, ಮಂಗಳವಾರ(ಅಕ್ಟೋಬರ್: 22): ಸೌಂದರ್ಯಕ್ಕೆ ಇಂದು ಬೆಲೆಕೊಡಲಿದ್ದೀರಿ. ನಿಮ್ಮಿಂದ ಉಪಕಾರವನ್ನು ಪಡೆದು ಶತ್ರಗಳಾಗುವರು. ನಿಮ್ಮ ಕಾರ್ಯಕ್ಕೆ‌ ಅಡ್ಡಿಬಂದರೆ ಆ ಕಾರ್ಯವನ್ನು ಮುಂದೂಡಿ. ಹಾಗಾದರೆ ಅಕ್ಟೋಬರ್: 22ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಸಂಗಾತಿಯ ಮಾತು ನಿಮಗೆ ನೋವುಂಟಾಗುವುದು, ತಾಳ್ಮೆಯಿಂದ ಇರುವಿರಿ
ಸಂಗಾತಿಯ ಮಾತು ನಿಮಗೆ ನೋವುಂಟಾಗುವುದು, ತಾಳ್ಮೆಯಿಂದ ಇರುವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 22, 2024 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಪರಿಘ​​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ  06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 07 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:12 ರಿಂದ ಸಂಜೆ 04:40 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:22 ರಿಂದ 10:49ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:17 ರಿಂದ 01:45 ರವರೆಗೆ.

ಧನು ರಾಶಿ: ಸಾಲವನ್ನು ವಸೂಲಿ ಮಾಡಲು ಯಾರನ್ನಾದರೂ ಸಾಲ ಕೊಟ್ಟವರು ಕಳುಹಿಸಬಹುದು. ಯಾವದೂ ನೀವಂದುಕೊಂಡಷ್ಟು ಸುಲಭವಾಗಿ ಆಗದು ಎಂಬುದರ ಮನವರಿಕೆ ಆಗುವುದು. ಬೇರೆಯವರ ಮೇಲೆ ದೋಷಗಳ ಪಟ್ಟಿಯನ್ನೇ ಮಾಡುವಿರಿ. ನಿಮ್ಮ ಮಾತುಗಳೇ ನಿಮಗೆ ಪುನಃ ಬರಲಿದೆ. ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಮನೆಯ ಬಾಗಿಲಿಗೆ ಅಪರಿಚಿತರ ಹಾವಳಿ ಹೆಚ್ಚಾಗುವುದು. ಸಂಗಾತಿಯ ಮಾತು ನಿಮ್ಮೊಳಗೆ ನಾಟಬಹುದು. ಹೆಚ್ಚಿನ ವಿದ್ಯಾಭ್ಯಾಸಕ್ಕೆ ತಂದೆಯಿಂದ ಸಹಾಯವನ್ನು ಪಡೆಯುವಿರಿ. ಸಾಲದ ವಿಚಾರದಲ್ಲಿ ಹೆಚ್ಚಿನ ತಿಳಿವಳಿಕೆ ಅಗತ್ಯ. ದೂರ‌ಪ್ರಯಾಣವು ಸುಖ ಎನಿಸಬಹುದು. ಸುಲಭವೆಂದು ಕೆಲಸವು ಕಷ್ಟವೆನಿಸಬಹುದು. ನಿಮಗೆ ಬೇಕಾದವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ನೀವು ವಹಿಸಿಕೊಂಡ ಕಾಮಗಾರಿಯ ಬಗ್ಗೆ ಪೂರ್ಣ ವಿಶ್ವಾಸ ಬರದು. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು.

ಮಕರ ರಾಶಿ; ನಿಮ್ಮ‌ದೇಹದ ಸೂಕ್ಷ್ಮಪ್ರದೇಶಗಳ ಬಗ್ಗೆ ಎಚ್ವರಿಕೆ ಇರಲಿ.‌ ಶಸ್ತ್ರಗಳಿಂದ ಘಾಸಿಯಾಗುವ ಸಾಧ್ಯತೆ ಇರಲಿದೆ. ಪ್ರೇಮಕ್ಕೆ ಮಿತ್ರರಿಂದ‌ ಸಹಕಾರವು ಸಿಗಲಿದೆ. ಸಹೋದ್ಯೋಗಿಗಳಿಂದಲೂ ಸಾಲಾವನ್ನು ಪಡೆಯಬೇಕಾಗಬಹುದು. ಸ್ನೇಹ ಸಂಬಂಧವನ್ನು ಹೆಚ್ಚು ಆಪ್ತವಾಗಸಿಕೊಳ್ಳುವಿರಿ. ನಿಮ್ಮ ಪರಿಶ್ರಮಕ್ಕೆ ಯೋಗ್ಯವಾದ ಗೌರವವು ಸಿಗಬಹುದು. ಕೆಟ್ಟ ಕೆಲಸಕ್ಕೆ ಯಾರಾದರೂ ಪ್ರೇರಣೆ ಕೊಡಬಹುದು. ತಂದೆ ತಾಯಿಯರನ್ನು ಇಂದು ಸಂತೋಷಪಡುಸುವಿರಿ. ಏಕಾಂಗಿ ಇರುವುದು ನಿಮಗೆ ಇಷ್ಟವಾಗದೇ ಇರಬಹುದು. ಸಮಾರಂಭಗಳಿಗೆ ಭಾಗವಹಿಸುವಿರಿ. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಬಹಳ ದಿನಗಳಿಂದ ಹೋಗಬೇಕು ಎಂದುಕೊಂಡಲ್ಲಿಗೆ ಹೋಗಬಹುದು.

ಕುಂಭ ರಾಶಿ; ಎಲ್ಲೇ ಇದ್ದರೂ ಕಾರ್ಯದ ಪ್ರಗತಿಯನ್ನು ಪಡೆದುಕೊಳ್ಳಿ.‌ ಒಂದೇ ಉದ್ದೇಶ ಹೊಂದಿದ ಹಲವರನ್ನು ಭೇಟಿ ಮಾಡುವಿರಿ. ಕಛೇರಿಯ ಕೆಲಸವು ನಿಮಗೆ ಸಾಕೆನಿಸಬಹುದು. ಸಮಾಧಾನದ ಚಿತ್ತವು‌ ಅನೇಕ ಸಂಗತಿಗಳಿಗೆ ಪೂರಕವಾಗಲಿದೆ. ಆರೋಗ್ಯದ ವಿಚಾರದಲ್ಲಿ‌ ನಿರ್ಲಕ್ಷಿಸುವುದು ಸೂಕ್ರವಲ್ಲ. ನಿಮ್ಮ‌ ಬಲದ ಪ್ರದರ್ಶನವನ್ನು ಮಾಡಬೇಕಾದೀತು. ಕಾರ್ಯಸ್ಥಾನದಲ್ಲಿ ಯಾವುದೇ ಕಾರಣಕ್ಕೂ ಸಡಿಲಿಕೆ ಬೇಡ. ನಿಮ್ಮ ಗುರಿಯು ಬದಲಾಗಬಹುದು. ‌ಪ್ರಾಣಿಗಳಿಂದ ನಿಮಗೆ ಭೀತಿಯು ಬರಬಹುದು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ. ಎಲ್ಲದಕ್ಕೂ ಕೂಡಲೇ ಫಲ ಸಿಗಬೇಕು ಎಂಬ ಮಾನಸಿಕತೆಯಿಂದ ಹೊರಬರಬೇಕಾಗಬಹುದು. ವೃತ್ತಿಶೀಲರು ತಮ್ಮನ್ನು ಅತಿಮಾನುಷರಂತೆ ತೋರ್ಪಡಿಸುವರು. ಅಚ್ಚುಕಟ್ಟಾದ ಕಾರ್ಯದಿಂದ ಅಧಿಕಾರಿಗಳ ಮನಸ್ಸನ್ನು ಗೆಲ್ಲುವಿರಿ.

ಮೀನ ರಾಶಿ: ನಿಮ್ಮನ್ನು ಕಂಡರೆ ಆಗದವರ ಎದುರೇ ನೀವು ಗರ್ವದಿಂದ ಇರುವಿರಿ. ನೀವು ಇಂದು ಅಕಾರಣವಾಗಿ ಚಿಂತೆ ಮಾಡುವಿರಿ. ಉನ್ನತ ಶಿಕ್ಷಣಕ್ಕಾಗಿ ಮನೆಯಿಂದ ಹೊರಗೆ ಇರಬೇಕಾಗುವುದು. ನಿಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಸೃಷ್ಟಿಸುವರು. ಸೌಂದರ್ಯಕ್ಕೆ ಇಂದು ಬೆಲೆಕೊಡಲಿದ್ದೀರಿ. ನಿಮ್ಮಿಂದ ಉಪಕಾರವನ್ನು ಪಡೆದು ಶತ್ರಗಳಾಗುವರು. ನಿಮ್ಮ ಕಾರ್ಯಕ್ಕೆ‌ ಅಡ್ಡಿಬಂದರೆ ಆ ಕಾರ್ಯವನ್ನು ಮುಂದೂಡಿ. ನಿಮ್ಮ ಸಮಯವನ್ನು ವ್ಯರ್ಥ ಮಾಡುವ ಸಂಗತಿಗಳು ಬರಬಹುದು. ಸ್ವಂತ ವಾಹನದಿಂದ ದೂರ ಪ್ರಯಾಣವನ್ನು ಮಾಡುವಿರಿ. ನಿಮ್ಮ ಹಾಸ್ಯ ಸ್ವಭಾವವು ಕೆಲವರಿಗೆ ಇಷ್ಟವಾಗದು. ಮಾತು ನೇರವಾಗಿದ್ದರೂ ಮೃದುವಾಗಿರಲಿ. ಹಿರಿತನದ ಆಧಾರದ ಮೇಲೆ ಅಧಿಕಾರ ಪ್ರಾಪ್ತಿಯಾಗುವುದು. ವ್ಯವಹಾರದಲ್ಲಿ ಇಂದು ನಿಮಗೆ ತುಂಬಾ ಒತ್ತಡದ ದಿನವಾಗಿರುತ್ತದೆ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ.

ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್