AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಿನ ಅನುಗ್ರಹದಿಂದ ಉದ್ಯಮಕ್ಕೆ ಬಲ ಸಿಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ, ಸೋಮವಾರ ವಾಗ್ದಾಳಿಗೆ ಪ್ರತಿ ದಾಳಿ, ಬಂಧುಗಳ ಆಗಮನ, ಹಿರಿಯರ ಆಶೀರ್ವಾದ, ಧಾರ್ಮಿಕ ಕಾರ್ಯದಲ್ಲಿ ಭಾಗಿ ಇದೆಲ್ಲ ಇರುವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಗುರುವಿನ ಅನುಗ್ರಹದಿಂದ ಉದ್ಯಮಕ್ಕೆ ಬಲ ಸಿಗಲಿದೆ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: May 05, 2025 | 1:37 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ : ಅಷ್ಟಮೀ ನಿತ್ಯನಕ್ಷತ್ರ : ಆಶ್ಲೇಷಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ – 06 : 09 am, ಸೂರ್ಯಾಸ್ತ – 06 : 49 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:45 – 09:19, ಯಮಘಂಡ ಕಾಲ 10:54 – 12:29, ಗುಳಿಕ ಕಾಲ 14:04 – 15:39

ಮೇಷ ರಾಶಿ: ದೀರ್ಘಾಲೋಚನೆಯಿಂದ ಮಾಡಬಹುದದಾ ಕಾರ್ಯ ಆಗದು. ಭೂಮಿಗೆ ಸಂಬಂಧಿಸಿದ ಕಲಹಗಳು ಇಂದಿಗೆ ಮುಕ್ತಾಯಗೊಳ್ಳಬಹುದು. ತಾಯಿಯು ನಿಮಗೆ ಬೇಕಾದ ಸಹಾಯವನ್ನು ಮಾಡುವಳು. ತುರಿ, ನವೆ ಮುಂತಾದ ಚರ್ಮಕ್ಕೆ ಸಂಬಂಧಪಟ್ಟ ಖಾಯಿಲೆಗಳಿಗೆ ಖರ್ಚುಮಾಡಬೇಕಾಗಿ ಬರಬಹುದು. ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಇದು ನಿಮಗೆ ಬೇಸರ ತರಿಸುವ ಕೆಲಸವಾಗಿರುತ್ತದೆ. ಹೊಸ ಯೋಜನೆಗಳು ಸಿಗಲಿದೆ. ಸಂಬಂಧಗಳು ಸುಧಾರಿಸುವ ಹಂತಕ್ಕೆ ಹೋಗಲಿವೆ. ವಾಹನ ಚಾಲನೆಯನ್ನು ಎಚ್ಚರಿಕೆಯಿಂದ ಮಾಡಿ. ಸದಾಕಾಲ ಸಂತೋಷದಿಂದ ಇರಲು ನೀವೇ ಏನಾದರೂ ಕ್ರಮವನ್ನು ಅನುಸರಿಸುವಿರಿ. ಶ್ರೇಷ್ಠ ವ್ಯಕ್ತಿಗಳ ಭೇಟಿಯು ಆಗಸ್ಮಿಕವಾಗಿ ಆಗಲಿದೆ. ಅವರ ಒಡನಾಟವನ್ನು ಇಟ್ಟುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ.

ವೃಷಭ ರಾಶಿ: ಮಕ್ಕಳನ್ನು ಉನ್ನತ ಮಟ್ಟಕ್ಕೆ ಏರುವಂತೆ ಪ್ರೋತ್ಸಾಹಿಸುವಿರಿ. ನಿಮ್ಮ ವಿದೇಶದ ಪ್ರಯಾಣವು ಕೆಲವು ದಾಖಲೆಗಳ ಕೊರತೆ, ಅಸ್ಪಷ್ಟತೆಯ ಕಾರಣದಿಂದ ಮುಂದೂಡಲ್ಪಡಬಹುದು. ಅತಿಯಾದ ದೇಹಾಲಸ್ಯದಿಂದ ಕಾರ್ಯಗಳು ಸಮಯಕ್ಕೆ ಸರಿಯಾಗಿ ಆಗದೇ ವಿಳಂಬವಾಗಲಿದೆ. ನಿಮ್ಮ‌ಅಜ್ಞಾನವನ್ನು ನೀವೇ ಪ್ರದರ್ಶಿಸುವಿರಿ‌. ನೀವು ನಿರ್ಮಿಸಿಕೊಂಡ ನೂತನ ಗೃಹದಲ್ಲಿ ವಾಸವು ಆರಂಭವಾಗಲಿದೆ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬೇಕಾದಷ್ಟೇ ಮಾತುಗಳನ್ನಾಡಿ ಎಲ್ಲರಿಂದ ಪ್ರಶಂಸೆ ಪಡೆಯವಿರಿ. ಹತ್ತಿರ ಬಂಧುಗಳನ್ನು ಕಳೆದುಕೊಳ್ಳಬಹುದು. ಬೇಸರಿಸದೇ ಸಹಜವಾಗಿ ಸ್ವೀಕರಿಸಿ. ಶ್ವಾಸಕೋಶದ ತೊಂದರೆಯು ಕಾಣಸಿಗಬಹುದು. ಅತಿಯಾದ ಆಹಾರವು ಅಜೀರ್ಣವಾಗಿ ತೊಂದರೆ ಕೊಡುವುದು. ಸಂಗಾತಿಯ ಹಳೆಯ ಸ್ನೇಹಿತನ ಭೇಟಿಯಾಗಲಿದೆ. ದಾಂಪತ್ಯದಲ್ಲಿ ಕೆಲವು ಕಹಿ ಮಾತುಗಳು ಬರಬಹುದು. ನೀವು ಇಂದು ಕೈಲಾಗದೇ ಇರುವ ಅಬಲರು.

ಮಿಥುನ ರಾಶಿ: ವೃತ್ತಿಯಲ್ಲಿ ಅನುಭವಿಗಳ ಜೊತೆ ಕೆಲಸ ಅಸಾಧ್ಯ. ಎಲ್ಲದಕ್ಕೂ ಮಾಡುವ ನಿಂದನೆಯನ್ನು ಸಹಿಸಲಾರಿರಿ. ಇಂದು ಶತ್ರುಗಳ ಬಗ್ಗೆ ಬಹಳ ಕುತೂಹಲವಿರಲಿದೆ. ಜೋಪಾನವಾಗಿ ನಿಮ್ಮ‌ ಯೋಜನೆಯನ್ನು ಸಿದ್ಧಮಾಡಿಕೊಳ್ಳುವುದು ಸೂಕ್ತ. ನೀವು ಸುಳ್ಳನ್ನು ಆಡುವವರು ಎನ್ನುವ ಹಣೆಪಟ್ಟಿ ಬೀಳಲಿದೆ. ನಿಮ್ಮ ಮಾತಿಗೆ ಬಿಡಿಗಾಸಿನಷ್ಟೂ ಬೆಲೆ ಇಲ್ಲದೇ ಕಡಿಮೆಯಾಗಬಹುದು. ನೀರಿಗೆ ಸಂಬಂಧಿಸಿದ ಉದ್ಯೋಗಾವಕಾಶಗಳು ಹೆಚ್ಚು ಸಿಗಬಹುದು. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ. ಪ್ರೀತಿಯ ಉಡುಗೊರೆಯನ್ನು ಖಷಿಯಿಂದ ಪಡೆಯುವಿರಿ. ಹೇಳಿಕೆಗಳು ಬಹಳ ಹರಿತವಾಗಿ ಇರುವುದು. ಕೃಷಿಗೆ ಸಂಬಂಧಿಸಿದ ವಸ್ತುಗಳ ವ್ಯಾಪಾರ ಅಧಿಕವಾಗಲಿದೆ‌. ಊರಿನಿಂದ ಹೊರಹೋಗುವ ಸಾಧ್ಯತೆ ಇದೆ. ಕಲಾವಿದರು ಹೆಚ್ಚಿನ ಪ್ರಶಂಸೆಯನ್ನು ಗಳಿಸುವರು. ಆಪ್ತರು ನೀಡಿದ ವಸ್ತುವನ್ನು ಕಳೆದುಕೊಳ್ಳುವಿರಿ.

ಕರ್ಕಾಟಕ ರಾಶಿ: ರಾಜಕೀಯದಲ್ಲಿ ಶಕ್ತಿಪ್ರದರ್ಶನ ಬಹಳ ಮುಖ್ಯ ಘಟ್ಟವಾಗಬಹುದು. ಇಂದು ನಿಮಗೆ ಅಧ್ಯಾತ್ಮದ ಕಡೆ ಓಲೈಕೆ ಹೆಚ್ಚು ಇರಲಿದೆ‌. ಶತ್ರುಗಳು ಮಿತ್ರರಾಗಲು ಬರಬಹುದು. ನಿಮ್ಮ ಪ್ರಭಾವೀ ವ್ಯಕ್ತಿತ್ವವನ್ನು ಜನಕ್ಕೆ ತಿಳಿಸುವಿರಿ. ನೀವಿಡುವ ಹೆಜ್ಜೆಯು ಗುರುತಾಗಲಿದೆ. ಎಂತಹ ಹೆಜ್ಜೆಗಳನ್ನು ಇಡಬೇಕು ಎನ್ನುವುದನ್ನು ತೀರ್ಮಾನಿಸಿಕೊಳ್ಳಿ. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನಿಮ್ಮನ್ನು ನಿಂದಿಸುವವರನ್ನು ನೀವು ದೂರವಿರಿಸುವಿರಿ. ಆಡಿದ ಮಾತನ್ನು ತಿರುಚುವ ಕೆಲಸ ಮಾಡುವುದು ಬೇಡ. ಉದ್ಯೋಗದ ಕಾರಣಕ್ಕೆ ವಿದೇಅಸಕ್ಕೆ ಹೋಗಬೇಕಾಗಿ ಬರಬಹುದು. ಬಂಧುಗಳ ಭೇಟಿ ಸುಖದಾಯಕ ಆಗುವುದು. ಒಂದನ್ನು ಪಡೆಯಲು ಮತ್ತೊಂದನ್ನು ಬಿಡಬೇಕಾದೀತು. ಯಾವುದೋ ಒಪ್ಪಂದಗಳಿಗೆ ಸಹಿ ಹಾಕಿಬಿಡಬೇಡಿ. ಅನುಭವಿಗಳ ಜೊತೆ ಚರ್ಚೆಗಳನ್ನು ಮಾಡಿ. ಧಾರ್ಮಿಕ ಕೆಲಸಗಳಲ್ಲಿ ಭಾಗವಹಿಸುವಿರಿ. ಹಿಂದೊಮ್ಮೆ ಆಲೋಚಿಸಿದ್ದ ಕೆಲಸಗಳನ್ನು ಪುನಃ ಆರಂಭಿಸುವಿರಿ. ಬಂದಿದ್ದನ್ನು ಬಂದಂತೆ ಸ್ವೀಕರಿಸಲು ಕಷ್ಟವಾಗದು. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ಕತ್ತಲೆಯನ್ನು ಶಪಿಸುವುದಕ್ಕಿಂತ ಬೆಳಕನ್ನು ಹುಡುಕುವುದು ಉತ್ತಮ.

ಸಿಂಹ ರಾಶಿ: ಇಂದು ದಾನದಿಂದ ನಿಮಗೆ ಹೆಸರು ಬರುಬುದು. ನಿಮ್ಮವರ ಕೆಲವು ವರ್ತನೆಗಳು ಬೇಸರವನ್ನೂ ತರಿಸಬಹುದು. ಇದರಿಂದ ಸಿಟ್ಟುಕೊಂಡ ದೂರ ಸರಿಯುವ ನಿರ್ಧಾರಗಳನ್ನೂ ತೆಗಕೊಳ್ಳುವ ಸಾಧ್ಯತೆ ಇದೆ. ಉದ್ವೇಗಕ್ಕೆ ಒಳಗಾಗದೇ ತಾಳ್ಮೆಯಿಂದ ವರ್ತಿಸುವುದು ಉಚಿತ. ಕಬ್ಬಿಣಕ್ಕೆ ಸಂಬಂಧಿಸಿದ ಕಾರ್ಯದಲ್ಲಿ ಹೆಚ್ಚು ಒತ್ತಡ. ದಾಂಪತ್ಯದಲ್ಲಿ ಮಾತಿನ ಸಣ್ಣ ಬಿಸಿ ಉಂಟಾಗಬಹುದು. ಮನಸ್ಸಿನಲ್ಲಿ ಒಡಕುಗಳು ಮೂಡಬಹುದು. ಆದಷ್ಟು ಮುಂದುವರಿಯದೇ ನಿಲ್ಲಿಸಲು ಪ್ರಯತ್ನಿಸಿ. ಮುಂದೆ ಅದು ವಿಚ್ಛೇದನಕ್ಕೆ ಕಾರಣವಾಗಬಹುದು. ಎಲ್ಲವನ್ನೂ ಸಿಟ್ಟಿನಿಂದ ಗೆಲ್ಲಲು ಸಾಧ್ಯವಾಗದು. ಗೃಹಬಳಕೆಯ ವಸ್ತುಗಳಿಂದ ಖರ್ಚು ಹೆಚ್ಚಾಗಬಹುದು ಭೂಮಿಯ ವ್ಯವಹಾರಸ್ಥಾರಿಗೆ ಲಾಭವಿದೆ. ನಿಮಗೆ ಗೌರವಕ್ಕೆ ತೊಂದರೆ ಆಗಬಹುದು. ಉತ್ತಮ ಭೋಜನವನ್ನು ಮಾಡುವಿರಿ. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು.

ಕನ್ಯಾ ರಾಶಿ: ದೈವಭಕ್ತಿ ಕಡಿಮೆಯಾದಂತೆ ನಿಮಗೆ ಅನಿಸುವುದು. ಇಂದು ನಿಮಗಾದ ಅಪಮಾನವು ದ್ವೇಷವಾಗಿ ಬದಲಾಗುವುದು. ಬಂಧುಗಳು ನಿಮ್ಮನ್ನು ನೋಡಿ ಆಡಿಕೊಳ್ಳುವರು. ನಿಮ್ಮೆದುರು ಮಾತನಾಡದೇ ಹಿಂಬದಿಯಿಂದ ಮಾತನಾಡಲಿದ್ದಾರೆ. ಗುರುವಿನ ಅನುಗ್ರಹದಿಂದ ಉದ್ಯಮಕ್ಕೆ ಬಲ ಸಿಗಲಿದೆ. ಕೃಷಿಯ ಬಗ್ಗೆ ಆಸಕ್ತಿ ಇರುವ ನೀವು ಕೃಷಿಯನ್ನು ಮಾಡಿ ಸ್ವಲ್ಪಮಟ್ಟಿನ ಲಾಭವನ್ನು ಗಳಿಸುವಿರಿ. ತಂದೆಯು ನಿಮ್ಮ ಕೆಲಸಕ್ಕೆ ಧನಸಹಾಯವನ್ನು ಮಾಡಲಿದ್ದಾರೆ. ಸಹೋದರನು ನಿಮಗೆದುರಾದ ತೊಂದರೆಯನ್ನು ಪರಿಹರಿಸಿಕೊಳ್ಳಲು ನಿಮ್ಮ ಸಹಾಯಕ್ಕೆ ಬರಲಿದ್ದಾನೆ. ಕೆಲಸಗಳು ವಿಘ್ನಗಳ ನಿಧಾನವಾಗಲಿದೆ. ಮಾತಿನಲ್ಲಿ ಹಿಡಿತಬೇಕು ಎನಿಸಬಹುದು. ಯಾರಿಗೂ ಹೇಳಿಕೊಳ್ಳದೇ ನೀವೊಬ್ಬರೇ ರೋಗವನ್ನು ಅನುಭವಿಸುವಿರಿ. ಕೆಲವರ ಸಹವಾಸದಿಂದ ನಿಮ್ಮ ದಿಕ್ಕು ತಪ್ಪಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ಅಲ್ಪಾವಧಿಯಲ್ಲಿ ಅಧಿಕ ಲಾಭಕ್ಕಾಗಿ ಹೂಡಿಕೆ ಮಾಡುವಿರಿ. ವಿದೇಶೀಯ ವ್ಯಾಪಾರವು ಹೆಸರಿಗಷ್ಟೇ ಇರುವುದು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು.