Astrology: ಈ ರಾಶಿಯವರು ಇಂದು ವಾಹನ ಚಲಿಸುವಾಗ ಜಾಗರೂಕರಾಗಿರಿ

ರಾಶಿ ಭವಿಷ್ಯ ಗುರುವಾರ(ಸೆ. 12): ಸಂಶೋಧನಾ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗುವುದು. ಯಾರ ಯೋಗ್ಯತೆಯನ್ನೂ ಅಳೆಯಲು ಸಾಧ್ಯವಾಗದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಜಾಣತನ ಇಂದು ನಿಮ್ಮ ಉಪಯೋಗಕ್ಕೆ ಬಾರದು. ಹಾಗಾದರೆ ಸೆಪ್ಟೆಂಬರ್​ 12ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯವರು ಇಂದು ವಾಹನ ಚಲಿಸುವಾಗ ಜಾಗರೂಕರಾಗಿರಿ
ಈ ರಾಶಿಯವರು ಇಂದು ವಾಹನ ಚಲಿಸುವಾಗ ಜಾಗರೂಕರಾಗಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 12, 2024 | 12:15 AM

ಜ್ಯೋತಿಷ್ಯದಿಂದ ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಆಯುಷ್ಮಾನ್, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:35 ಗಂಟೆ, ರಾಹು ಕಾಲ ಮಧ್ಯಾನ್ನ 02:00 ರಿಂದ 03:32, ಯಮಘಂಡ ಕಾಲ ಬೆಳಿಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:26 ರಿಂದ 10:57ರ ವರೆಗೆ.

ಧನು ರಾಶಿ: ನಿಮ್ಮನ್ನು ಅಗೌರವದಿಂದ ಕಾಣುವವರ ಮೇಲೆ‌ ಕೋಪ ಬರುವುದು. ಇಂದು ನಿಮ್ಮ ಮನೆಯ ದುರಸ್ತಿಯ ಕಡೆ ಯೋಚಿಸುಬಿರಿ. ಸಂಗಾತಿಯನ್ನು ನೀವು ಅವಮಾನಸಲಿದ್ದೀರಿ. ಇದರಿಂದ ನಿಮಗೆ ಮುಂದೆ ತೊಂದರೆಯಾಗಬಹುದು. ಅತಿಥಿ ಸತ್ಕಾರವು ನಿಮಗೆ ಸಂತೋಷ ಕೊಡುವುದು. ಆರ್ಥಿಕಸ್ಥಿತಿಯು ನಿಮಗೆ ಸಮಾಧಾನವನ್ನು ಕೊಡುವುದು. ಕುಟುಂಬದಲ್ಲಿ ಐಕಮತ್ಯವಿರಲಿ. ಆತ್ಮೀಯರ ಜೊತೆ ನಿಮ್ಮ ಸಂಬಂಧವು ಚೆನ್ನಾಗಿರಲಿದೆ. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವಿರಿ. ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದು ಉತ್ತಮ. ನಿಮ್ಮ ಕುರಿತು ತಂದೆ ತಾಯಿಯರು ಚಿಂತಿಸುವರು. ಭೂಮಿಯನ್ನು ವಶ ಮಾಡಿಕೊಳ್ಳಲು ಪ್ರಭಾವಿಗಳ ಸಂಗವನ್ನು ಮಾಡಬೇಕಾದೀತು. ಭೂಮಿಯ ಪ್ರಕರಣವು ನಿಮ್ಮನ್ನು ಚಿಂತೆಗೀಡುಮಾಡೀತು. ನೌಕರರ ಮೇಲೆ ಕಿಡಿಕಾರುವಿರಿ. ಸಂಶೋಧನಾ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗುವುದು. ಯಾರ ಯೋಗ್ಯತೆಯನ್ನೂ ಅಳೆಯಲು ಸಾಧ್ಯವಾಗದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಜಾಣತನ ಇಂದು ನಿಮ್ಮ ಉಪಯೋಗಕ್ಕೆ ಬಾರದು.

ಮಕರ ರಾಶಿ: ಒಳ್ಳೆಯ ವ್ಯವಸ್ಥೆಯನ್ನು ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು. ನಿಮ್ಮ ಪ್ರಮುಖ ದಾಖಲೆಗಳನ್ನು ಯಾರಿಗೂ ಹಸ್ತಾಂತರಿಸುವುದು ಬೇಡ. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಲಿದೆ. ಸಮಾಜಮುಖೀ ಕೆಲಸದಿಂದ ನಿಮಗೆ ಗೌರವವು ಸಿಗಲಿದೆ. ಮಕ್ಕಳ ಯಶಸ್ಸಿನಿಂದ ಪೋಷಕರಿಗೆ ಸಂತಸವಾಗಲಿದೆ. ವಾಹನ ಚಲಿಸುವಾಗ ಜಾಗರೂಕತೆ ಮುಖ್ಯವಾಗಲಿದೆ. ಶತ್ರುಗಳು ವ್ಯವಹಾರದಲ್ಲಿ ಮಧ್ಯವರ್ತಿಗಳಾಗಿ ಇರುವರು. ಮೋಸದ ಜಾಲಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ನೀವು ನಿಮ್ಮ ಬಗ್ಗೆ ಜನರ ಅಭಿಪ್ರಾಯವನ್ನು ಪಡೆಯಲು ಇಚ್ಛಿಸುವಿರಿ. ವಿದೇಶದಲ್ಲಿ ಇದ್ದರೆ ನಿಮಗೆ ಸಂಕಷ್ಟವು ಬರಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಪೂಜಾಯೋಗ್ಯರಿಗೆ ಆತಿಥ್ಯವನ್ನು ನೀಡಿ. ಕೆಲವು ಉದ್ಯಮದ ರಿಸ್ಕ್ ನ್ನು ತೆಗೆದುಕೊಳ್ಳಬೇಕಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ.

ಕುಂಭ ರಾಶಿ: ಒಂದಾದ ಮೇಲೆ‌ ಒಂದರಂತೆ ಒತ್ತಡ ಕಾಣಿಸಿಕೊಳ್ಳುವುದು. ಇಂದು ಯಾವುದನ್ನೂ ಅತಿಯಾಗಿ ಹಚ್ಚಿಕೊಳ್ಳದೇ ಕಾರ್ಯತತ್ಪರರಾಗುವಿರಿ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ವಿವಾಹದ ಮಾತುಕತೆಗಳು ಬಿರುಸಿನಿಂದ ನಡೆಯಲಿದೆ. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಪತ್ನಿಯ ಬಗ್ಗೆ ನಿಮಗೆ ಗೌರವವು ಕಡಿಮೆ ಆಗಬಹುದು. ಇನ್ನೊಬ್ಬರ ನೋವಿಗೆ ಸ್ಪಂದಿಸಲು ಹೋಗಿ ಸಿಕ್ಕಿಬೀಳಬೇಕಾದೀತು. ನಿಮ್ಮ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ಕೋಪಕ್ಕೆ ಕಾರಣವನ್ನು ನೀವು ವ್ಯಕ್ತಿಪಡಿಸಲು ಇಚ್ಛಿಸುವುದಿಲ್ಲ. ಸಂಪತ್ತಾಗಿ ಅನ್ಯ ವೃತ್ತಿಯನ್ನು ಆಶ್ರಯಿಸಬೇಕಾದೀತು. ಹೂಡಿಕೆಯನ್ನು ಅಲ್ಪ ಮೊತ್ತದಲ್ಲಿ ಮಾಡಿ. ನಿಮ್ಮನ್ನು ನೀವೇ ರೂಪಿಸಿಕೊಳ್ಳುವ ಅನಿವಾರ್ಯತೆ ಬರಬಹುದು. ಅತಿಥಿಗಳ ಆಗಮನವಾಗಲಿದೆ. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಬಾಂಧವ್ಯ ಗಟ್ಟಿಯಾಗುವ ತನಕ ಕಾಯಬೇಕು.

ಮೀನ ರಾಶಿ: ನಿಮ್ಮ‌ಸಾಮಾಜಿಕ‌ ಕಾರ್ಯಗಳಿಗೆ ಉತ್ತಮ‌ ಜನಸ್ಪಂದ ಸಿಗಬಹುದು. ನೀವು ಉದ್ಯಮಿಗಳ ಜೊತೆ ಹೊಸ ಯೋಜನೆಯನ್ನು ಪಡೆಯುವ ತವಕದಲ್ಲಿ ಇರುವಿರಿ. ಸರ್ಕಾರದ ಕೆಲಸವಾಗದೇ ಅಧಿಕ ಓಡಾಟವಾದೀತು. ಆರ್ಥಿಕ ನೆರವನ್ನು ನೀವು ಬಯಸುವಿರಿ. ಸಮಾಧಾನ ಚಿತ್ತದಿಂದ ನಿಮ್ಮ ಸಮಸ್ಯೆಗಳನ್ನು ಸರಿ ಮಾಡಿಕೊಳ್ಳುವಿರಿ. ವೈವಾಹಿಕ ಜೀವನವು ಹಿರಿಯರ ಮಾರ್ಗದರ್ಶನದಲ್ಲಿ ಆಗುವುದು. ಮಕ್ಕಳಿಗೆ ಸಂಪತ್ತನ್ನು ಹಂಚುವ ಯೋಚನೆ ಇರಲಿದೆ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನಗತ್ಯ ವಿಚಾರವನ್ನು ಪ್ರಸ್ತಾಪಿಸಿ ವಿವಾದವಾಗುವಂತೆ ಮಾಡುವಿರಿ. ನಿಮ್ಮ ಆದಾಯವು ಅಧಿಕವಾಗಿದ್ದು ನಿಮಗೆ ಸಂತೋಷವನ್ನು ಕೊಡುವ ವಿಚಾರವು ಇದಾಗಿದೆ. ನೀವು ಯಾವುದನ್ನೂ ಪರೀಕ್ಷಿಸದೇ ಒಪ್ಪಿಕೊಳ್ಳುವುದು ಬೇಡ. ಶಿಸ್ತಿಗೆ ಹೆಚ್ಚು ಒತ್ತನ್ನು ಇಂದು ಕೊಡುವಿರಿ. ಇದು ಸಹೋದ್ಯೋಗಿಗಳಿಗೆ ಕಿರಿಕಿರಿಯಾದೀತು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಇಂದು ನಿಮಗೆ ಗೊತ್ತಿಲ್ಲದೇ ದುಷ್ಟರ ಸಹವಾಸ ಸಿಗಬಹುದು.

ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ