Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯ ಧಾನ್ಯ ವ್ಯಾಪಾರದವರಿಗೆ ಇಂದು ಹೆಚ್ಚಿನ ಲಾಭವಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ, ಬುಧವಾರದಂದು ಸತ್ಯದ ಅರಿವು, ವಿಶ್ರಾಂತಿಗೆ ಮನಸ್ಸು, ಉದ್ಯಮದಲ್ಲಿ ಕ್ರಿಯಾಶೀಲತೆ ಇವೆಲ್ಲ ಇರುವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಈ ರಾಶಿಯ ಧಾನ್ಯ ವ್ಯಾಪಾರದವರಿಗೆ ಇಂದು ಹೆಚ್ಚಿನ ಲಾಭವಿದೆ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 16, 2025 | 1:39 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಅನುರಾಧ, ಯೋಗ: ವ್ಯತಿಪಾತ್, ಕರಣ: ಭದ್ರ, ಸೂರ್ಯೋದಯ – 06:19 am, ಸೂರ್ಯಾಸ್ತ – 06:45 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:32 – 14:06, ಯಮಘಂಡ ಕಾಲ 07:53 – 09:26, ಗುಳಿಕ ಕಾಲ 10:59 – 12:32

ತುಲಾ ರಾಶಿ: ನಿಮಗೆ ಕಷ್ಟವಾದರೂ ಕುಟುಂಬವನ್ನು ಮೆಚ್ಚಿಸುವಿರಿ. ಇಂದು ನಿಮ್ಮ ಬಳಿ ವಿವಾಹದ ಬಗ್ಗೆಯೂ ಮಾತನಾಡಬಹುದು. ಸ್ತ್ರೀಯರು ಇಂದು ತಾಳ್ಮೆಯನ್ನು ಕಳೆದುಕೊಂಡು ದುಃಖಿಸಬೇಕಾದ ಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಎಲ್ಲದಕ್ಕೂ ಮಿತಿಯಿದೆ ಎಂದು ಅಂದುಕೊಂಡು ಸಮಾಧಾನವನ್ನು ಪಡೆಯುವಿರಿ. ವೈಷಮ್ಯವನ್ನು ನಾಜೂಕಿನಿಂದ ದೂರಮಾಡಬೇಕು. ನೀವಂದುಕೊಂಡ ಯೋಚನೆಗೆ‌ ಸರಿಯಾದ ಯೋಜನೆಯಾಗದೆ ತಲೆಕೆಡಿಕೊಳ್ಳುವಿರಿ. ಅತಿಯಾದ ಮಾತು ನಿಮ್ಮ ಜೊತೆಗಿರುವವರಿಗೆ ಅಸಹ್ಯವಾದೀತು. ನಿಮ್ಮ ವಿರೋಧಿಗಳನ್ನು ಸ್ತಬ್ಧಗೊಳಿಸೀತು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗಿಸಿ. ಮಕ್ಕಳ ವಿಚಾರದಲ್ಲಿ ನಿಮಗೆ ಬಹಳ ಮೃದು ಸ್ವಭಾವವಿರುವುದು. ನಿಮ್ಮ ಮನಃಸ್ಥಿತಿಯನ್ನು ಯಾರಾದರೂ ದುರುಪಯೋಗ ಮಾಡಿಕೊಳ್ಳಬಹುದು. ಸಹವಾಸದ ಕಾರಣ ನಿಮ್ಮ ಮೇಲೆ ಸಲ್ಲದ ಆರೋಪಗಳು ಕೇಳಿಬರಬಹುದು.

ವೃಶ್ಚಿಕ ರಾಶಿ: ನಿಮ್ಮ ಆಯ್ಕೆ ಕ್ಷೇತ್ರದಲ್ಲಿ ಹೊಸ ಪ್ರಯತ್ನ ನಿರಂತರವಾಗಿರುವುದು. ಇಂದು ಮಕ್ಕಳ ಜೊತೆ ಬಹಳ ಸಂತೋಷದಿಂದ ಕಳೆಯುವಿರಿ. ಧಾನ್ಯ ವ್ಯಾಪಾರದವರಿಗೆ ಹೆಚ್ಚಿನ ಲಾಭವಿದೆ. ಸಂಗಾತಿಯ ಜೊತೆ ಇಂದು ಹಣದ ವಿಚಾರದಲ್ಲಿ ವೈಮನಸ್ಯ ಉಂಟಾಗಲಿದೆ. ಸುಮ್ಮನಿರುವವರ ಬಾಯಿಗೆ ಕೋಲುಹಾಕಿ ಹಾಳುಮಾಡಿಲೊಳ್ಳುವಿರಿ. ನಿಮ್ಮ ಪ್ರಭಾವವು ಅಷ್ಟಾಗಿ‌ ನಡೆಯದು. ಸಹೋದರನ ಜೊತೆ ನಿಮ್ಮ ಕಲಹವಿರಲಿದೆ. ಮನೆಯ ಸಂತೋಷದಿಂದ ಕಾಲವನ್ನು ಕಳೆಯುವಿರಿ. ಹೊಸ ವಸ್ತ್ರಗಳ ಖರೀದಿಯನ್ನು ಮಾಡಲಿದ್ದೀರಿ. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಕುಟುಂಬಕ್ಕಾಗಿ ಮಾಡಿದ ಸಾಲವನ್ನು ನೆನೆಸಿಕೊಂಡು ಸಂಕಟಪಡುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗೆ ಸ್ಪಂದಿಸುವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಅಗತ್ಯ ಬಹಳ ಇರಲಿದೆ. ನೀವು ಉದ್ಯೋಗವನ್ನು ಪಡೆಯಲು ಮಾಡಿದ ಪ್ರಯತ್ನದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ.

ಧನು ರಾಶಿ: ಕಾರ್ಯದ ಮೇಲೆ ಇಟ್ಟ ಶ್ರದ್ಧೆಯು ನಿಮ್ಮನ್ನು ಸುಸ್ಥಳಕ್ಕೆ ಕೊಂಡೊಯ್ಯುವುದು. ಇಂದು ನಿಮಗೆ ದೂರದ ಪ್ರಯಾಣ ಅನಿವಾರ್ಯವಾದರೆ ಮಾತ್ರ ಮಾಡಿ. ಇಲ್ಲವಾದರೆ ಇರುವ ಸ್ಥಳವೇ ನಿಮ್ಮ ಇಂದಿನ ಸ್ಥಿತಿಗೆ ಯೋಗ್ಯವಾಗಿದೆ. ನಿಮ್ಮ ಬಗ್ಗೆ ಇಲ್ಲದ ಆಪಾದನೆಗಳು ಬರಬಹುದು. ಸ್ತ್ರೀಯರಿಗೆ ಶತ್ರು ಬಾಧೆ ಹೆಚ್ಚಾಗುವುದು. ಯಂತ್ರಾಗಾರದಲ್ಲಿ ಕೆಲಸ ಮಾಡುವವರಿಗೆ ಶುಭವಿದೆ. ಮಾನಸಿಕ ತುಮುಲಗಳು ಇಂದಿರಲಿವೆ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸಬಹುದು. ಮನೆಗೆ ಬಂದ ಹಿರಿಯರಿಗೆ ಯಥೋಚಿತ ಗೌರವ ನೀಡುವಿರಿ. ನಿಮ್ಮ ಹಾರಿಕೆಯ ಮಾತುಗಳು ನಿಮ್ಮ ಬಗ್ಗೆ ನಂಬಿಕೆಯು ಇರದಂತೆ ಮಾಡುವುದು. ವ್ಯಾಪಾರದ ಉದ್ದೇಶಕ್ಕೆ ಹೊರ ನಿಮ್ಮ ವಿದೇಶ ಪ್ರವಾಸವು ಶುಭವನ್ನು ತರಲಿದೆ. ಕಠಿಣ ವ್ಯಾಯಾಮವನ್ನು ಮಾಡುವ ಮುಂಚೆ ದೇಹದ ಸಾಮರ್ಥ್ಯವನ್ನು ತಿಳಿಯಲು ವೈದ್ಯರನ್ನು ಭೇಟಿಯಾಗಿ.

ಮಕರ ರಾಶಿ: ಬಂಧುಗಳ ಕಷ್ಟಕ್ಕೆ ಸ್ಪಂದಿಸುವುದು ಅನಿವಾರ್ಯ. ಇಂದು ನಿಮಗೆ ಅನೇಕರು ನೀಡಿದ ಆರೋಗ್ಯದ ಸಲಹೆಯಿಂದ ಗೊಂದಲವಾಗಬಹುದು. ಗೃಹಬಳಕೆಯ ವಸ್ತುಗಳನ್ನು ಖರೀದಿಸುವ ಕೆಲಸಕ್ಕೆ ಹೋಗುವಿರಿ. ವಿವೇಚನೆ ಇಲ್ಲದೇ ಬೇಗನೆ ಕೋಪಗೊಳ್ಳುವಿರಿ. ಕಬ್ಬಿಣದ ವ್ಯಾಪಾರದಲ್ಲಿ ನಷ್ಟವಾಗಬಹುದು. ಇಂದಿನ ಬೆಳಗಿನ ನಿಮ್ಮ ಮನಃಸ್ಥಿತಿಯೇ ಇಂದಿನ ದಿನವನ್ನು ಹೇಳುತ್ತದೆ. ಸ್ನೇಹಿತರು ನಿಮ್ಮನ್ನು ಹಾಸ್ಯದ ವ್ಯಕ್ತಿಯಾಗಿ ಕಾಣುವರು. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ನಿಮ್ಮ ನೋವನ್ನು ಮಕ್ಕಳಿಗೆ ದಾಟಿಸಲಾರಿರಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವನ್ನು ನಿರೀಕ್ಷಿಸುವಿರಿ. ಪ್ರೇಯಸಿಯನ್ನು ದೂರಮಾಡಿಕೊಂಡು ದುಃಖಿಸುವ ಸಾಧ್ಯತೆ ಇದೆ. ನಿಮ್ಮ ಸಾಮರ್ಥ್ಯವನ್ನು ಸುಧಾರಿಸಲು ಒಂದು ಅವಕಾಶ ಸಿಗಲಿದೆ. ಯಾರಾದರೂ ನಿಮಗೆ ಉತ್ತಮ ಮಾರ್ಗದರ್ಶನವನ್ನು ಮಾಡಬಹುದು.

ಕುಂಭ ರಾಶಿ: ಆತ್ಮವಿಶ್ವಾಸದಿಂದ ಗುರಿಯನ್ನು ಸೇರಲು ಸಾಧ್ಯ. ಆದರೆ ಅದರ ಮುಂದಿನ ಹಂತದ ಬಗ್ಗೆಯೂ ಗಮನ ಬೇಕು. ಒತ್ತಡದಿಂದ ಉದ್ವೇಗಗೊಳ್ಳುವ ಸಾಧ್ಯತೆ ಇದೆ. ಇದರಿಂದ ಯಾರಾದರೂ ನಿಮ್ಮೊಡನೆ ಮಾತನಾಡಲು ಬಂದರೆ ಸಿಟ್ಟಗುವಿರಿ. ಮಾತು ಕಿರಿಕಿರಿ ಎನಿಸಿ ಕೇಳಲಾಗದು. ಸ್ನೇಹಿತರ ಭೇಟಿಯಿಂದ ಸಂತಸವಾಗಲಿದೆ. ಆರ್ಥಿಕವಾಗಿ ಗಟ್ಟಿ ಇದ್ದರೂ, ಅಕಸ್ಮಾತ್ ಆದ ಖರ್ಚು ನಿಮ್ಮನ್ನು ಕಂಗೆಡಿಸುವುದು. ನಿಮಗೆ ಬದಲಾವಣೆ ದೀರ್ಘಕಾಲ ಉಳಿಸಿಕೊಳ್ಳಲಾಗದು. ಹೊಸ ಉದ್ಯೋಗದ ಕಡೆಗೆ ಮನಸ್ಸು ಮಾಡುವಿರಿ. ಮನೋರಂಜನೆಯ ಕಾರ್ಯಕ್ರಮವನ್ನು ವೀಕ್ಷಿಸುವ ಮನಸ್ಸು ಮಾಡುವಿರಿ. ಕುಟುಂಬದವ ಹೆಚ್ಚು ಸಮಯವನ್ನು ಕಳೆಯುವಿರಿ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಭಯವು ಇರಲಿದೆ. ವ್ಯಾಪಾರದ ಗುಣಮಟ್ಟ ಹೆಚ್ಚಿಸಲು ಖರ್ಚು ಮಾಡಬೇಕಾಗುತ್ತದೆ. ಪ್ರಯತ್ನಪಟ್ಟು ಮಾಡುವ ಕೆಲಸವು ನಿಮಗೆ ಅನುಕೂಲವನ್ನು ಮಾಡುವುದು. ಉದ್ವಿಗ್ನತೆಯು ಉಂಟಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಅವಿವಾಹಿತರು ಯೋಗ್ಯವಾದ ಸಂಗಾತಿಯನ್ನು ಪಡೆಯುವರು.

ಮೀನ ರಾಶಿ: ಸ್ವಾಪರಾಧದಿಂದ ಪಶ್ಚಾತ್ತಾಪ ಮೂಡಬಹುದು. ಇಂದು ನೀವು ಯಾರನ್ನಾದರೂ ದ್ವೇಷಿಸುತ್ತಿದ್ದರೆ ತೋರಿಸಿಕೊಳ್ಳಬೇಡಿ. ಮಕ್ಕಳ ವಿದ್ಯಾಭ್ಯಾಸಕ್ಕೆ ತಿರುಗಾಟ ಮಾಡುವಿರಿ. ಆರ್ಥಿಕ ಹಿನ್ನಡೆಯನ್ನು ನೀವು ಸಹಿಸಲಾರಿರಿ. ಸಿಟ್ಟಿನ ಕೈಗೆ ಬುದ್ಧಿಯನ್ನು ಕೆಲಸವನ್ನು ಕೆಡಿಸಿಕೊಳ್ಳುವ ಅಗತ್ಯವು ಬರಬಹುದು. ನಿಮ್ಮನ್ನು ನಡತೆಯನ್ನು ಪ್ರಶ್ನಿಸಬಹುದು. ಮೌನವನ್ನೇ ಉತ್ತರವಾಗಿ ನೀಡಿ. ಸಮಯ ಬಂದಾಗ ತಾನಾಗಿಯೇ ಉತ್ತರವು ಅವರಿಗೆ ಗೋಚರಿಸುವುದು. ಅನುಕಂಪಕ್ಕೆ ಕರುಗುವಿರಿ. ನಿಮ್ಮವರ ಜೊತೆ ದೀರ್ಘಕಾಲದಿಂದ ಬಿಟ್ಟಿದ್ದ ಮಾತುಗಳನ್ನು ಇಂದಿನಿಂದ ಮುಂದುವರಿಸುವಿರಿ. ಸ್ವಂತ ವಾಹನದಿಂದ ನಿಮಗೆ ತೊಂದರೆಯಾಗಲಿದೆ. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ಏಕತಾನತೆಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಹೂಡಿಕೆಗೆ ಮನಸ್ಸು ಮಾಡುವಿರಿ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು.

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ