AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯ ಮಾರ್ಗದಲ್ಲಿ ಇದ್ದವರು ನಿಂದನೆಯನ್ನು ಎದುರಿಸಬೇಕಾದೀತು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ, ಸೋಮವಾರ ಆರ್ಥಿಕ ನಷ್ಟದ ಗೌಪ್ಯತೆ, ಉದ್ಯೋಗದಲ್ಲಿ ಭೀತಿ, ಕುಟುಂಬದ ಮೇಲೆ ಪ್ರೀತಿ ಇದೆಲ್ಲ ಇಂದಿನ ವಿಶೇಷ. ಈ ದಿನದ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ನ್ಯಾಯ ಮಾರ್ಗದಲ್ಲಿ ಇದ್ದವರು ನಿಂದನೆಯನ್ನು ಎದುರಿಸಬೇಕಾದೀತು
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 28, 2025 | 1:12 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ ತಿಥಿ: ಪ್ರತಿಪತ್ ನಿತ್ಯನಕ್ಷತ್ರ: ಭರಣೀ, ಯೋಗ: ಪ್ರೀತಿ / ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 12 am, ಸೂರ್ಯಾಸ್ತ – 06 : 47 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:47 – 09:21, ಯಮಘಂಡ ಕಾಲ 10:56 – 12:30, ಗುಳಿಕ ಕಾಲ 14:05 – 15:39

ತುಲಾ ರಾಶಿ: ನಿಮಗೆ ಅನುಕೂಲವಾಗಬೇಕಾದರೆ ಸಮಯ ನೋಡಿ ವಿಷಯವನ್ನು ಪ್ರಸ್ತಾಪಿಸಬೇಕು. ನಿಮ್ಮ ಪಟ್ಟ ಶ್ರಮಕ್ಕೆ ಈಗ ಗೌರವ ದೊರೆಯಲಿದೆ. ಹಣಕಾಸಿನ ಸಂಗತಿಗಳನ್ನು ಸಂಗಾತಿ ಜತೆಗೆ ಚರ್ಚಿಸಿ, ಆ ನಂತರ ಮುಂದಿನ ತೀರ್ಮಾನ ಕೈಗೊಳ್ಳಿ. ಅನಿವಾರ್ಯ ಸಂದರ್ಭದಲ್ಲೂ ಸುಳ್ಳು ಹೇಳಬೇಡಿ. ಶತ್ರುಗಳು ನಿಮ್ಮ ನೆಮ್ಮದಿಯನ್ನು ಹಾಳುಮಾಡಬಹುದು. ಮಕ್ಕಳನ್ನು ನೋಡಬೇಕೆನಿಸುವುದು. ಎಲ್ಲವನ್ನೂ ನೀವು ನಿಶ್ಚಯ ಮಾಡಿಕೊಳ್ಳಲು ಆಗದು. ಎಂದೋ ಮಾಡಿದ ಕಾರ್ಯಕ್ಕೆ ಇಂದು ಪಶ್ಚಾತ್ತಾಪಪಡಬೇಕಾದೀತು. ನಿಮ್ಮ ದಿನಚರಿ ನಿಧಾನವಾಗಿರುತ್ತದೆ. ಪ್ರತಿಯೊಂದು ಕ್ರಿಯೆಯನ್ನು ನಿಧಾನಗತಿಯಲ್ಲಿ ಸಾಗುವುದು. ವೈವಾಹಿಕ ತೀರ್ಮಾನಕ್ಕೆ ಕುಟುಂಬ ಜೊತೆ‌ ಪ್ರಯಾಣ. ಸಿಕ್ಕುಬಿದ್ದು ಅವಮಾನದ ಪಾಲಾಗುತ್ತೀರಿ. ಆಲಸ್ಯದಿಂದ ಹೊರಬರುವ ಮನಸ್ಸಾಹುವುದು. ಎರಡು ಮನಸ್ಸನ್ನು ಮಾಡಿಕೊಂಡು ಮುಂದುವರಿಯುವುದು ಬೇಡ. ಒತ್ತಡದಿಂದ ಕ್ರಿಯಾತ್ಮಕತೆಗೆ ಪೆಟ್ಟುಬೀಳಬಹುದು. ಆಯ್ಕೆಗಳನ್ನು ಆರಿಸಲಾಗದು. ಭಾವನಾತ್ಮಕ ಚಿಂತನೆಗಳು ನಿಮ್ಮ ಮೇಲೆ‌ ಸಕಾರಾತ್ಮಕ ಪರಿಣಾಮವನ್ನು ನೀಡಬಹುದು.

ವೃಶ್ಚಿಕ ರಾಶಿ: ಕಲ್ಪನಾಶಕ್ತಿ ಬಹಳ ವೇಗದಲ್ಲಿ ಇದ್ದರೂ ವಾಸ್ತವಕ್ಕೆ ದೂರವಾದುದು. ಇಂದು ನಿಮ್ಮ ಬಾಕಿ ಉಳಿದ ಸಾಲಗಳನ್ನು ಪೂರ್ಣ ಮಾಡಿ. ಅಧಿಕಾರವನ್ನು ಹೆಚ್ಚಿಸಿಕೊಳ್ಳಲು ಸಂಬಂಧಪಟ್ಟರ ಜೊತೆ ಮಾತನಾಡುವಿರಿ. ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಒಂದು ಒಪ್ಪಂದಕ್ಕೆ ಬರುವ ಸಾಧ್ಯತೆ ಇದೆ. ನಿರೀಕ್ಷೆ ಮಾಡಿದಂತೆ ಆದಾಯ ಬರುವುದಿಲ್ಲ. ಆಲಸ್ಯದಿಂದ ಎಲ್ಲ ಕಾರ್ಯದಲ್ಲಿಯೂ ನಿರಾಸಕ್ತಿ ಇರಲಿದೆ. ಉದ್ಯೋಗದ ಹೊಸ ಸ್ಥಳದಲ್ಲಿ ಸ್ನೇಹಿತರಾಗುವರು. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಅವಮಾನ ಎನಿಸುವುದು. ಹಿರಿಯರ ಆಶೀರ್ವಾದವು ನಿಮಗೆ ಖುಷಿ ಕೊಡುವುದು. ಇತರರ ಮೇಲೆ ದೋಷಾರೋಪ ಮಾಡಬೇಡಿ. ಹಿರಿಯರ ಮಾತುಗಳು ನಿಮ್ಮನ್ನು ಕಾಡಬಹುದು. ನಿಮ್ಮ ಯೋಜನೆಯು ಒಂದು ಎತ್ತರಕ್ಕೆ ಏರಿರುವುದು ಆತ್ಮಸಂತೋಷವಾಗುಬುದು. ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು.

ಧನು ರಾಶಿ: ಸಾಧನೆಯ ಪರಿಣಾಮವು ಇಂದು ಗೊತ್ತಾಗಲಿದೆ. ನಿಮಗೆ ಮಹತ್ತರವಾದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಾಗದು. ಹೆಚ್ಚಿನ ಪ್ರತಿಫಲಾಪೇಕ್ಷೆ ಇಲ್ಲದೆ ನೀವು ಈ ಕೆಲಸವನ್ನು ಮಾಡಬೇಕಾಗುತ್ತದೆ. ಪ್ರಾಮಾಣಿಕತೆಯನ್ನು ಬಿಟ್ಟು ವ್ಯವಹಾರ ಮಾಡುವುದು ಬೇಡ. ಯಾವುದೇ ಆಕ್ಷೇಪ ಮಾಡಬೇಡಿ. ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗಬಹುದು. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಸಂಗಾತಿಯ ಎದುರು ಏನನ್ನೂ ಹೇಳದೇ ಸುಮ್ಮನಿರುವಿರಿ. ಸಮಯದ ಅನಂತರ ಹಳೇ ಗೆಳೆಯರ ಭೇಟಿ ಅಥವಾ ಮಾತುಕತೆ ಸಾಧ್ಯತೆ ಇದೆ. ಮೋಜಿಗಾಗಿ ಹಣವನ್ನು ವ್ಯರ್ಥ ಮಾಡಿದರೆ ಮರಳಿಬಾರದು ಎಂಬುದು ಗೊತ್ತಿರಲಿ. ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ಬಂಗಾರದ ಮೇಲೆ ಹೂಡಿಕೆ ಮಾಡುವಿರಿ. ಶಿಸ್ತಿನಿಂದ ನೀವು ವ್ಯವಹಾರವನ್ನು ಇಟ್ಟುಕೊಳ್ಳುವಿರಿ. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ಪಾಲುದಾರಿಕೆಯಲ್ಲಿ ಉಂಟಾದ ವಿವಾದವನ್ನು ದೊಡ್ಡ ಮಾಡಿಕೊಳ್ಳುವಿರಿ.

ಮಕರ ರಾಶಿ: ಉದ್ಯಮಕ್ಕೆ ಬೇಕಾದ ಸ್ಥಳವಿಕ್ಷಣೆ ಮಾಡುವಿರಿ. ನಿಮ್ಮವರು ಎಂದು ಯಾರನ್ನು ನೀವು ಭಾವಿಸಿದ್ದೀರೋ ಅವರಿಂದಲೋ ಬಹಳ ನೋವು ಪಡುತ್ತೀರಿ. ನಿಮ್ಮಿಂದಾ ಸಾಧ್ಯವಾದಲ್ಲಿ ಅಗತ್ಯ ಇರುವ ಒಬ್ಬರಿಗೆ ಊಟದ ವ್ಯವಸ್ಥೆ ಮಾಡಿ. ಸಂಗಾತಿ ಮಕ್ಕಳ ಮಾತನ್ನು ಸರಿಯಾಗಿ ಕೇಳಿಸಿಕೊಳ್ಳಿ. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ಹಣಕಾಸಿನ‌ ವಿಚಾರದಲ್ಲಿ ಸಹೋದರನಿಂದ ಅಪವಾದ ಸಾಧ್ಯತೆ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ನಿಮ್ಮ ಗುಣವನ್ನು ಅಪಾರ್ಥ ಮಾಡಿಕೊಂಡಾರು. ಮಕ್ಕಳ ಜೊತೆ ಸೌಹಾರ್ದ ಇರಲಿದೆ. ಆತುರದ ನಡಿಗೆಯಿಂದ ನೀವು ಎಡವುವಿರಿ. ದೀರ್ಘಕಾಲದ ರೋಗದಿಂದ ಬಳಲಿಕೆಯು ನಿಮಗೆ ಅಭ್ಯಾಸವಾಗಲಿದೆ. ಶತ್ರುಗಳ ಕಾಟಗಳು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ದೈವದ ಭೀತಿಯು ನಿಮ್ಮನ್ನು ಕಾಡಬಹುದು. ರಾಜಕಾರಣಿಗಳಿಂದ ನಿಮ್ಮ ಕೆಲಸವು ಪೂರ್ಣವಾಗಲಿದೆ. ದುಃಸ್ವಪ್ನಗಳು ಬೀಳಬಹುದು.

ಕುಂಭ ರಾಶಿ: ವ್ಯವಸಾಯದ ಬಗ್ಗೆ ಅಧಿಕ ಒಲವು. ನಿಮ್ಮ ಸ್ವತಂತ್ರ ಆಲೋಚನೆಯು ಇತರರಿಗೆ ಮಾದರಿ ಆಗಬಹುದು. ಹಣದ ಅಗತ್ಯ ಕಂಡುಬಂದು, ಸಾಲ ಮಾಡಬೇಕಾಗಿ ಬರುವುದು. ಸ್ವಂತ ವ್ಯಾಪಾರ, ವ್ಯವಹಾರ ಮಾಡುವವರಿಗೆ ಅಲ್ಪ ಹಿನ್ನಡೆ. ಪ್ರಯಾಣದಿಂದ ಆಗಬೇಕಾದ ಕೆಲಸವಾದರೂ ಆಯಾಸ ಕಾಡಬಹುದು. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ಹಳೆಯ ಸಾಲವನ್ನು ಮರುಪಡೆಯಲು ಸಾಧ್ಯವಾಗದು. ಹಳೆಯ ಸ್ನೇಹವು ಮತ್ತೆ ಒಂದಾಗುವುದು. ದಾಂಪತ್ಯದಲ್ಲಿ ನಿರಾಸಕ್ತಿ ಉಂಟಾಗಬಹುದು. ಹೂಡಿಕೆಯ ಕಡೆ ಸರಿಯಾಗಿ ಇರಲಿ. ಮನಸ್ಸಿಗೆ ಹಿಡಸದ್ದನ್ನು ನೀವು ಮಾಡಲಾರಿರಿ. ಪಾಲುದಾರಿಕೆಯಲ್ಲಿ ಸಮಸ್ಯೆ ಕಾಣಿಸುವುದು. ಉದ್ಯಮದಲ್ಲಿ ಪ್ರಗತಿಯನ್ನು ಕಂಡು ಖುಷಿಯಾಗುವುದು. ನಿಮಗೆ ಯಾರಿಂದಲೋ ರಕ್ಷಣೆ ಇದೆ ಎನ್ನಿಸಬಹುದು. ಮನೆಯಲ್ಲೂ ತಾಳ್ಮೆಯನ್ನು ಇಟ್ಟುಕೊಳ್ಳಿ. ನಂಬಿಕೆಯು ಹುಸಿಯಾಗುವುದು. ಯಾರೊಬ್ಬರ ಮಾತುಗಳಿಗೆ ತ್ವರಿತ ಪ್ರತಿಕ್ರಿಯೆ ಕೊಡುವುದು ಬೇಡ.

ಮೀನ ರಾಶಿ: ನ್ಯಾಯ ಮಾರ್ಗದಲ್ಲಿ ಇದ್ದವರು ನಿಂದನೆಯನ್ನು ಎದುರಿಸಬೇಕಾದೀತು. ನಿಮ್ಮ ಮಾತಿನ ಮೋಡಿಗೆ ಇತರರು ಒಳಗಾಗುವರು. ಮಕ್ಕಳ ವ್ಯವಹಾರಕ್ಕೆ ಹಣಕಾಸು ನೆರವು ನೀಡಲು ಪ್ರಯತ್ನಿಸುತ್ತೀರಿ. ರಾಜಕೀಯದ ಪ್ರೇರಣೆಪಡೆಯುವ ಸಾಧ್ಯತೆ ಇದೆ. ಹಳೆಯ ವಾಹನಗಳ ಮಾರಾಟ ಮಾಡುವ ಬಗ್ಗೆ ಆಲೋಚನೆ ಬರುತ್ತದೆ. ಈ ಹಿಂದೆ ಷೇರು ಪೇಟೆಯಲ್ಲಿ ಮಾಡಿದ್ದ ಹೂಡಿಕೆಯನ್ನು ಹಿಂಪಡೆಯಲಿದ್ದೀರಿ. ಮಾನಸಿಕ ನೆಮ್ಮದಿಯು ನಿಮ್ಮ ಹಲವು ಕೆಲಸಗಳನ್ನು ಮಾಡಲು ಸಹಾಯ ಆಗುವುದು. ವಾಹನದ ತೊಂದರೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ. ಸ್ವಂತ ವ್ಯಾಪಾರದಲ್ಲಿ ಹಿನ್ನಡೆಯಾಗುವುದು‌. ಹೇಗಾದರೂ ಮಾಡಿ ಭಯವನ್ನು ದೂರ ಮಾಡಿಕೊಳ್ಳುವಿರಿ. ತೆಗಳಿಕೆಯನ್ನು ಛಲವಾಗಿ ತೆಗೆದುಕೊಳ್ಳುವಿರಿ. ಯಾರ ಮೇಲೂ ಅವಮಾನ ಬೇಡ. ವಾಣಿಜ್ಯದಲ್ಲೂ ಕೆಲಸ ಸುಗಮವಾಗಿ ನಡೆಯುವುದು.‌ ಹಿಂದಿನ ತಪ್ಪುಗಳು ಪಾಠವಾಗುವುದು.

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ