Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಈ ರಾಶಿಯವರಿಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 31 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ; ಈ ರಾಶಿಯವರಿಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ
ದಿನಭವಿಷ್ಯImage Credit source: freepik
Follow us
Rakesh Nayak Manchi
|

Updated on: Mar 31, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್​​​​​ 31) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ಉತ್ತರಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸಾಧ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಸಂಜೆ 05:12 ರಿಂದ 06:44ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:37 ರಿಂದ 02:08ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:12ರ ವರೆಗೆ.

ಧನು ರಾಶಿ: ನಿಮಗೆ ಇಂದು ಆರ್ಥಿಕತೆಯ ಬಗ್ಗೆ ಹೆಚ್ಚು ಉತ್ತವಾಗುವ ಅವಕಾಶಗಳು ಇದ್ದರೂ ಅದನ್ನು ಬಿಡುವಿರಿ. ಸಂಗಾತಿಯ ಮಾತಿನಿಂದ ನಿಮಗೆ ಪ್ರೇರಣೆ ಸಿಗಬಹುದು. ಇಂದು ಅವಿವಾಹಿತರು ವಿವಾಹದ ಬಗ್ಗೆ ಅಧಿಕ ಚಿಂತಿತರಾಗುವರು. ನಿಮ್ಮ ವೇತನದ ಬಗ್ಗೆ ಮೇಲಧಿಕಾರಿಗಳ ಜೊತೆ ಚರ್ಚೆ ಮಾಡುವಿರಿ. ನಿಮ್ಮ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಿ ಸಂತೋಷಪಡುವಿರಿ. ಉದ್ಯಮದ ವಿಚಾರವು ಕುಟುಂಬದವರೆಗೂ ಬರಬಹುದು. ಆರ್ಥಿಕವಾದ ಸಂತೃಪ್ತಿಯು ನಿಮ್ಮ ಮುಖದಲ್ಲಿ ಇರಲಿದೆ. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ಇಷ್ಟವಾಗದು. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು. ನಿಮ್ಮ ಮಾತಿಗೆ ಬೆಂಬಲವಿರುವುದು. ಹಳೆಯ ನೆನಪುಗಳು ನಿಮ್ಮ ಕಾಡುವುವು. ಇಂದು ನೀವು ಆಕರ್ಷಕ ವ್ಯಕ್ತಿಗಳಾಗಿ ಕಾಣುರುವಿರಿ.

ಮಕರ ರಾಶಿ: ಇಂದು ನೀವು ದೈನಂದಿನ ಚಟುವಟಿಕೆಯಿಂದ ಮುಕ್ತರಾಗಿ ಬಹಳ ಸಂತೋಷದಿಂದ ಇರುವಿರಿ. ಕ್ರೀಡೆಯಲ್ಲಿ ಆಸಕ್ತಿ ಹೆಚ್ಚಿರುವುದು. ನಿಮ್ಮ ಕಾರ್ಯವನ್ನು ಅಸಹಜವಾಗಿ ಪೂರ್ಣ ಮಾಡುವಿರಿ. ನಿಮ್ಮ ವೈಯಕ್ತಿಕ ಸಂಬಂಧಗಳಲ್ಲಿ ಆಪ್ತತೆಯು ದೂರವಾಗಬಹುದು. ನಿಮ್ಮ ಬಗ್ಗೆ ನೀವು ಹೆಚ್ಚು ಗಮನ ಕೊಡುವಿರಿ. ಅಪರಿಚಿತರ ಮಾತು ನಿಮಗೆ ಸಮಾಧಾನವನ್ನು ಕೊಡಬಹುದು. ಯಾರ ಮಾತನ್ನೂ ನೀವು ಕೇಳಲಾರಿರಿ. ಸಂಶೋಧನೆಯಲ್ಲಿ ಹೊಸ ಮಾರ್ಗವು ಕಾಣಿಸಿಕೊಳ್ಳುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ರಾಜಕೀಯ ವ್ಯಕ್ತಿಗಳ ಸಂಪರ್ಕ ಆಗಬಹುದು.

ಕುಂಭ ರಾಶಿ: ನೀವು ಇಂದು ಸ್ನೇಹಿತರ ಸಹಾಯಕ್ಕೆ ಹೋಗುವುದು ನಿಮ್ಮ ಬಗ್ಗೆ ಇರುವ ಭಾವವು ಬದಲಾಗುವುದು. ಇಂದಿನ ದೂರ ಪ್ರಯಾಣವು ನಿಮಗೆ ಆಯಾಸವನ್ನು ಕೊಡದೇಹೋಗಬಹುದು. ಆರ್ಥಿಕತೆಯಲ್ಲಿ ದುಡುಕಿ ನಿರ್ಧಾರ ತೆಗೆದುಕೊಳ್ಳಬೇಕಾಗುವುದು. ಭೂವ್ಯವಹಾರವು ನೀವಂದುಕೊಂಡಷ್ಟು ವೇಗವಾಗಿ ಮುನ್ನಡೆಯದು. ನಿಮ್ಮ ಪ್ರಮುಖ ವ್ಯಾಪಾರ ಸಂಪರ್ಕಗಳನ್ನು ಅಭಿವೃದ್ಧಿ ಮಾಡಿಕೊಳ್ಳುವಿರಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವರ್ತನೆಯು ಇತರರಿಗೆ ಅಸಮಾಧಾನಗೊಳಿಸಬಹುದು. ನಿಮ್ಮ ತಂದೆಯ ಜೊತೆ ಸ್ನೇಹದ ಸಂಬಂಧವನ್ನು ಇಟ್ಟುಕೊಳ್ಳುವಿರಿ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಜವಾಬ್ದಾರಿಗಳಿಂದ ನೀವು ಮುಕ್ತರಾಗಿ ಸಂತೋಷಿಸುವಿರಿ. ಅಪರಿಚಿತರು ನಿಮಗೆ ಸಮಸ್ಯೆಯನ್ನು ಕೊಡುವರು.

ಮೀನ ರಾಶಿ: ಇಂದು ನಿಮ್ಮ ನಿರೀಕ್ಷಿತ ಲಾಭವು ವ್ಯಾಪಾರದಲ್ಲಿ ಕಾಣಿಸದೇ ಇರುವುದು ಬೇಸರವಾಗುವುದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾಗುವುದು. ಧಾರ್ಮಿಕ‌ ಕಾರ್ಯಕ್ಕೆ ಖರ್ಚು ಮಾಡುವುದು ನಿಮಗೆ ಇಷ್ಟದ ಸಂಗತಿಯಾಗಲಿದೆ. ನೀವು ಇಂದು ನಿಮ್ಮ ಪ್ರತಿಸ್ಪರ್ಧಿಗಳ ಎದುರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ಇಂದಿನ ನಿಮ್ಮ ಆಲಸ್ಯದಿಂದ ಪ್ರಮುಖ ಕಾರ್ಯಗಳು ಪೂರ್ಣವಾಗದೇ ಹಾಗೆಯೇ ಉಳಿದುಕೊಳ್ಳಬಹುದು. ನಿಮ್ಮ ತಾಯಿಯ ಕಡೆ ಯಾರಿಗಾದರೂ ಅನಾರೋಗ್ಯವು ಅಧಿಕವಾಗಬಹುದು. ವಾಹನಕ್ಕಾಗಿ ಖರ್ಚು ಮಾಡಬೇಕಾಗುವುದು. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು. ನಿಮಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ. ಇಷ್ಟವಿಲ್ಲದಿದ್ದರೂ ನೀವು ಹಿರಿಯರ ಮಾತನ್ನು ಕೇಳಬೇಕಾಗುವುದು. ಪ್ರೇಮಜೀವನವು ನಿಮಗೆ ಬಂಧನದಂತೆ ಅನ್ನಿಸಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ