AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ಏಕಾದಶೀ ತಿಥಿ, ಗುರುವಾರ ಅನ್ಯ ಕ್ಷೇತ್ರದಿಂದ ನೆರವು, ಹಣಕಾಸಿನ ಹರಿವು, ಆಗಬೇಕಾದ ಕೆಲಸದ ಮರೆವು, ಹೊಸ ಯೋಜನೆಯ ಅರಿವು ಇರುವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 24, 2025 | 1:37 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ : ಚೈತ್ರ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಬ್ರಹ್ಮ, ಕರಣ: ಭದ್ರ, ಸೂರ್ಯೋದಯ – 06:14 am, ಸೂರ್ಯಾಸ್ತ – 06 : 46 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:05 – 15:39, ಯಮಘಂಡ ಕಾಲ 06:15 – 07:49, ಗುಳಿಕ ಕಾಲ 09:23 – 10:57

ತುಲಾ ರಾಶಿ: ನಿಮ್ಮ ಅಭಿವೃದ್ಧಿ ಇತರರಿಗೆ ಇಷ್ಟವಾಗದೇ ಇರಬಹುದು. ಅಸೂಯೆಯಿಂದ ಎಲ್ಲವನ್ನೂ ಹಾಳು ಮಾಡಬಹುದು. ನಿಮ್ಮ ಕಾರ್ಯದಕ್ಷತೆಗೆ ಉನ್ನತವಾದ ಸ್ಥಾನಮಾನಗಳು ಪ್ರಾಪ್ತವಾಗುವುವು. ಮಾನಸಿಕ ತೊಂದರೆಯನ್ನು ಅನುಭವಿಸುವಿರಿ. ಅವಕಾಶಗಳು ನಿಮ್ಮ ಕೈತಪ್ಪುವ ಸಾಧ್ಯತೆ ಇದೆ. ಯಾರ ವಿರೋಧವನ್ನೂ ನೀವು ಸಹಿಸಲಾರಿರಿ. ಪರೀಕ್ಷೆಯ ಭಯವು ನಿಮ್ಮನ್ನು ಅತಿಯಾಗಿ ಕಾಡುವುದು. ಭೂವ್ಯವಹಾರದಲ್ಲಿ ನಷ್ಟವಾಗುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ. ನಿಮ್ಮ ಸಾಮರ್ಥ್ಯವನ್ನು ವರ್ಧಿಸಲು ಕೌಶಲವೂ ಇರಲಿ. ಸ್ತ್ರೀಯರು ತಮ್ಮ ಕೌಶಲವನ್ನು ತೋರಿಸುವರು. ಪಾಲುದಾರಿಕೆಯ ಭೂ ಸಂಬಂಧದ ಕಾರ್ಯದಿಂದ ಲಾಭವಾಗಲಿದೆ. ದಾಂಪತ್ಯವು ಪರಸ್ಪರ ಸೌಹಾರ್ದದ ಮಾತುಗಳಿಂದ ನೆಮ್ಮದಿ ಸಿಗುವುದು.‌ ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ. ಯಾರಾದರೂ ನಿಮ್ಮ ಬಗ್ಗೆ ಅಸತ್ಯವನ್ನು ಆಡಿದರೆ ಅದನ್ನು ಕಂಡು ಹಿಡಿಯುವಿರಿ.‌

ವೃಶ್ಚಿಕ ರಾಶಿ: ಅಧಿಕಾರದಲ್ಲಿ ವಿವೇಚನೆ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು. ನಿಮ್ಮ ಸಾಮಾಜಿಕವಾಗಿ ಮನ್ನಣೆಯನ್ನು ಕಂಡು ಅಸೂಯೆಪಡಬಹುದು. ಬಂಗಾರದ ವ್ಯಾಪರಿಗಳಿಗೆ ಲಾಭವಾಗಲಿದೆ. ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಲಿದ್ದೀರಿ. ಕುಟುಂಬದಿಂದ ಅಶುಭವಾದ ಸುದ್ದಿಯು ನಿಮಗೆ ತಿಳಿಯಲಿದೆ‌. ನಿಮ್ಮ ಉಪಾಯವು ಸರಳವಾಗಿದ್ದು, ಉಚಿತವೂ ಆಗಿರಲಿದೆ‌. ಪ್ರಾಮಾಣಿಕತೆಯು ಇಂದು ನಿಮಗೆ ವರವಾಗಿ ಅನೇಕರ ಪ್ರಶಂಸೆಗೆ ಕಾರಣವಾಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ಇಂದು ಸಂತಾನದ ಸುಖವು ಸಿಗುವುದು. ಪ್ರೀತಿಪಾತ್ರರ ಆಗಮನದಿಂದ ಮನಸ್ಸು ಸಂತೋಷಗೊಳ್ಳಲಿದೆ‌. ನಿಮ್ಮನ್ನು ಖುಷಿಪಡಿಸಲು ನಿಮ್ಮ ಜೀವನ ಸಂಗಾತಿ ಇಂದು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ನಿಮ್ಮ ಕೆಲವು ವರ್ತನೆಯನ್ನು ಮಿತ್ರರು ವಿರೋಧಿಸುವರು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ. ನಿಮ್ಮ‌ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು.

ಧನು ರಾಶಿ: ಮಿತ್ರರು ನಿಮ್ಮ ಬಗ್ಗೆ ಸಲ್ಲದ್ದನ್ನು ಹೇಳಬಹುದು. ನಿಮ್ಮ ದಾಂಪತ್ಯದಲ್ಲಿ ಉಂಟಾದ ವಿರಸವು ನ್ಯಾಯಾಲಯದ ಮೆಟ್ಟಿಲೇರಬಹುದು. ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು. ನಿಮ್ಮ ಬಗ್ಗೆ ಅಪಪ್ರಚಾರಗಳು ಕೇಳಿ ಬರಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು. ಸ್ನೇಹಿತರ ಜೊತೆ ಇಂದು ಕಾಲವನ್ನು ಕಳೆಯುವಿರಿ. ಇತರ ನೋವಿಗೆ ನೀವಾಗಿಯೇ ಸ್ಪಂದಿಸುವಿರಿ. ಸಂಗಾತಿಯ ಯೋಚನೆಗಳಿಗೆ ಪ್ರತಿಸ್ಪಂದನೆಯು ಸಿಗಲಿದೆ. ಹಳೆಯ ನೋವುಗಳು ಕಾಡಬಹುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಮಧ್ಯವರ್ತಿಗಳಿಗೆ ನಷ್ಟವಾಗಬಹುದು. ಸಮಾರಂಭದಲ್ಲಿ ಹಳೆಯ ಸ್ನೇಹಿತರ ಭೇಟಿಯಾಗುವುದು. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ.

ಮಕರ ರಾಶಿ: ಅನಾರೋಗ್ಯದ ಕಾರಣ ಮಾತೂ ಕಠೋರವೆನಿಸಬಹುದು. ನಿಮ್ಮನ್ನು ನೀವು ಸಜ್ಜನರೆಂದುಕೊಳ್ಳುವಿರಿ. ಇಂದು ನೀವು ಮೌಲ್ಯಯುತವಾದ ವಸ್ತುಗಳನ್ನು ಆಸೆಪಟ್ಟು ಖರೀದಿಸುವಿರಿ. ಹಣದ ಪ್ರಾಮುಖ್ಯವನ್ನು ತಿಳಿದುಕೊಳ್ಳುವ ಸಮಯವಿಂದು. ದಾಂಪತ್ಯದಲ್ಲಿ ಶತ್ರುತ್ವ ಕೆಲಸಮಾಡಬಹುದು. ನಿಮ್ಮ ವಿದ್ಯುದುಪಕರಣದಿಂದ ನಿಮಗೆ ನಷ್ಟವಾಗಲಿದೆ. ಅಗತ್ಯವಿದ್ದಷ್ಟು ಮಾತ್ರ ಮಾತನಾಡಿ. ನಿಮ್ಮ ಅಸೂಯಾಗುಣದಿಂದ ನಿಮಗೇ ತೊಂದರೆಯಾದೀತು. ಹಿರಿಯರ ಅನಾರೋಗ್ಯದಲ್ಲಾಗುವ ವ್ಯತ್ಯಾಸದಿಂದ ಆತಂಕವು ಸೃಷ್ಟಿಯಾದೀತು. ಕೆಲವು ಸನ್ನಿವೇಶಗಳಲ್ಲಿ ನಿಯಂತ್ರಣ ಅವಶ್ಯಕ. ಇಂದು ನೀವು ಇತರರಿಗೆ ಹೇಳುವ ಉತ್ಸಾಹವನ್ನು ಮಾಡುವುದಿಲ್ಲ. ಚಂಚಲ ಮನಸ್ಸು ಸ್ಥಿರವಾಗುವ ತನಕ ಯಾವ ವಿವಾದಕ್ಕೂ ಆಸ್ಪದ ಬೇಡ. ನಿಮ್ಮ ಜೀವನಸಂಗಾತಿ ಇಂದು ನಿಮಗೆ ಪೂರ್ಣ ಬಲ ಮತ್ತು ಪ್ರೀತಿಯನ್ನು ನೀಡುವರು. ಎಲ್ಲರ ಜೊತೆಗಿದ್ದರೂ ಒಂಟಿಯಂತೆ ಅನ್ನಿಸುವುದು.‌ ಇಂದು ಸ್ತ್ರೀಯರಿಗೆ ಮಾನಿಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು.

ಕುಂಭ ರಾಶಿ: ನಿಮ್ಮ ಆಲೋಚನೆಯ ಕ್ರಮ ದಿಕ್ಕು ತಪ್ಪಬಹುದು. ಪುಣ್ಯಸ್ಥಳಗಳ ಭೇಟಿಗೆ ಆಸಕ್ತಿಯನ್ನು ಹೊಂದುವಿರಿ. ಆಪ್ತರ ಜೊತೆ ಸಮಾಲೋಚನೆ ನಡೆಸುವಿರಿ. ಸಂಗಾತಿಯಿಂದ ಹಣವನ್ನು ನಿರೀಕ್ಷಿಸುವಿರಿ. ಹಿರಿಯ ಆಶೀರ್ವಾದವೇ ನಿಮ್ಮ ಕಾರ್ಯಗಳಿಗೆ ಬೆಂಬಲವಾಗಲಿದೆ. ಹಣದ ವ್ಯಯವು ನಿಮ್ಮನ್ನು ಆತಂಕಕ್ಕೆ ತಳ್ಳಬಹುದು. ವಿವೇಚನೆ ಇರಲಿ. ಅಚಲವಾದ ನಂಬಿಕೆಯೇ ನಿಮ್ಮ ಕಾರ್ಯವನ್ನು ಸರಿಯಾಗಿ ಆಗುವಂತೆ ಮಾಡುವುದು. ದಂಪತಿಗಳ ನಡುವೆ ನಡೆದ ಮಾತುಕತೆಗಳು ಮುಂದಿನ ಹಂತಕ್ಕೂ ಹೋಗಬಹುದು. ನೀವು ಸಾಲ ಪಡೆಯಲು ಯೋಜನೆ ಮಾಡಿದ್ದರೆ ದೀರ್ಘಕಾಲ‌ ಅದನ್ನು ಇಟ್ಟುಕೊಳ್ಳುವುದು ಬೇಡ. ನಿಮ್ಮ ಪ್ರೀತಿಯು ನಿಜವಾಗಿಯೂ ಅದ್ಭುತ ಎನಿಸಬಹುದು. ನಿಮ್ಮ ಅಂದಾಜು ಮೀರಬಹುದು. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಾಯಿಸಲು ಪ್ರಯತ್ನಿಸುವಿರಿ.

ಮೀನ ರಾಶಿ: ಕೋಪವು ಇಂದು ಸಕಾರಣವಗಿದ್ದು, ಮನೆಯವರು ಶಾಂತ ಮಾಡುವರು. ಇಂದು ಒತ್ತಡದ ನಡುವೆಯೂ ನಿಮ್ಮ ಕಾರ್ಯನಿರ್ವಹಣೆಗೆ ಪ್ರಂಶಸೆಗಳು ಸಿಗಲಿವೆ. ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ಅನೇಕ ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ. ವೈದ್ಯವೃತ್ತಿಯನ್ನು ಆರಿಸಿಕೊಂಡ ನಿಮಗೆ ಗೌರವಾದರಗಳು ಸಿಗಲಿವೆ. ಪರೋಪಕಾರದಿಂದ ಆತ್ಮತೃಪ್ತಿ ಆಗಲಿದೆ. ಕೃಷಿ ಉತ್ಪನ್ನಗಳ ಉದ್ಯಮದವರಿಗೆ ಹೆಚ್ಚು ಲಾಭವಾಗಲಿದೆ‌. ಉನ್ನತ ಉದ್ದೇಶಗಳು ಸಾಕಾರಗೊಳ್ಳುವ ದಿನವಾಗಿದೆ. ಹಬ್ಬದ ವಾತಾವರಣವು ಚೆನ್ನಾಗಿರಲಿದೆ‌. ಅಲ್ಪ ಆದಾಯವೂ ಉತ್ತೇಜನ ನೀಡುವುದು. ವೈವಾಹಿಕ ಜೀವನವನ್ನು ನಡೆಸುವ ಬಗ್ಗೆ ನಿಮಗೆ ಸಲಹೆಗಳು ಸಿಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸಕ್ಕಾಗಿ ಹೊರಗಡೆ ವಾಸಮಾಡಬೇಕಾಗುವುದು. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ನಿಮ್ಮ ಕೆಲಸವು ಬದಲಾವಣೆಯಾಗಬಹುದು.

ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು