ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ, ಬುಧವಾರ ಪ್ರತೀಕ್ಷೆಗಳಿಂದ ಅಸಫಲತೆ, ಹಿರಿಯರಿಂದ ನಿಂದನೆ, ಪರೋಪಕಾರ, ಸಾಮಾಜಿಕ ಕಾರ್ಯದಲ್ಲಿ ತೊಡಗುವಿಕೆ ಇವೆಲ್ಲ ಈ ದಿನದ ವಿಶೇಷ. ಈ ದಿನದ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ
ದಿನ ಭವಿಷ್ಯ
Edited By:

Updated on: Apr 30, 2025 | 1:23 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ತೃತೀಯಾ ನಿತ್ಯನಕ್ಷತ್ರ: ರೋಹಿಣೀ, ಯೋಗ: ಶೋಭನ ಕರಣ: ಕೌಲವ, ಸೂರ್ಯೋದಯ – 06 : 11 am, ಸೂರ್ಯಾಸ್ತ – 06 : 48 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:30 – 14:04, ಯಮಘಂಡ ಕಾಲ 07:46 – 09:21, ಗುಳಿಕ ಕಾಲ 10:55 – 12:30

ಮೇಷ ರಾಶಿ: ನಿಮ್ಮನ್ನೇ ಕೇಳಿ ಬಂದವರಿಗೆ ಇಲ್ಲವೆನುವುದು ಬೇಡ. ಮುಂದಿನ ಬದುಕಿಗೆ ಯೋಜನೆ ಮಾಡುವಿರಿ. ಕೆಲವು ಸಂಗತಿಗಳನ್ನು ನೀವು ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಇಂದು ನಿಮ್ಮ ಪರೀಕ್ಷೆಯ ಕಾಲ. ಅದಕ್ಕೆ ಯೋಗ್ಯವಾದ ಉತ್ತರವನ್ನು ಕೊಡುವ ಭರದಲ್ಲಿ ಅವಘಡಗಳು ಆಗಬಹುದು. ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಕರಕುಶಲದಿಂದ ಅಲ್ಪ ಆದಾಯವನ್ನು ಪಡೆಯುವಿರಿ. ಹಳೆಯ ಸ್ನೇಹಿತರ ಭೇಟಿ. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ.

ವೃಷಭ ರಾಶಿ: ಸಂಕಷ್ಟದ ಕುರಿತು ದೀರ್ಘವಾದ ಆಲೋಚನೆ ಬೇಡ. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವಿರಿ. ಎಲ್ಲವೂ ಇದ್ದರೂ ಕೊರತೆ ಕಾಣಿಸುವುದು. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು ಸುಮ್ಮನಿರಿಸುವರು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ಇಂದು ಮನಸ್ಸನ್ನು ಏಕಾಗ್ರ ಮಾಡುವುದು ಕಷ್ಟವಾದೀತು. ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಪ್ರಯಾಣದ ಸುಖವೂ ಇರಲಿದೆ. ನಿಮ್ಮ ವಿಶ್ರಾಂತಿಯ ಸಮಯವು ಬದಲಾಗಿ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವುದು. ಬಹಳ ದಿನಗಳಿಂದ ಕೆಟ್ಟಿದ್ದ ಆರೋಗ್ಯವು ಸರಿಯಾದರೂ ಆರೋಗ್ಯ ಪೂರ್ಣ ಮನಸ್ಸು ಸರಿಯಾಗಲು ಸಮಯು ಬೇಕು. ತಾಯಿಗೆ ಪ್ರಿಯವಾದುದನ್ನು ಮಾಡುವಿರಿ. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ಹೊಂದಾಣಿಕೆಯು ನಿಮಗೆ ಅನಿವಾರ್ಯವಾದೀತು.

ಮಿಥುನ ರಾಶಿ: ಮಕ್ಕಳಿಗೆ ಬೇಕಾದ ಅನುಕೂಲವಾದ ವ್ಯವಸ್ಥೆ ಮಾಡುವಿರಿ. ನೀವಿಂದು ಬದಲಾವಣೆಯನ್ನು ಇಷ್ಟಪಡುತ್ತೀರಿ. ಮಕ್ಕಳ ವಿಚಾರದಲ್ಲಿ ನಿಮಗೆ ಬೇಸರವಾಗಲಿದೆ. ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಎಂದೋ‌ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಸಂಗಾತಿಗೆ ತಿಳಿಸಬೇಕಾದ ಸತ್ಯವನ್ನು ಮುಚ್ಚಿಡಲು ಹೋಗಬೇಡಿ. ಮುಂದೆ ಅದೇ ದೊಡ್ಡ ಕಂಟಕವಾದೀತು. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಮಾತಿಗೆ ಕಟ್ಟು ಬೀಳುವ ಅಗತ್ಯವಿಲ್ಲ. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ. ವಾಹನದ ವಿಚಾರಕ್ಕೆ ಹೊಂದಾಣಿಕೆ ಕಷ್ಟವಾಗಬಹುದು.

ಕರ್ಕಾಟಕ ರಾಶಿ: ಉನ್ನತ ಪದವೀಧರರಾಗಿ ಕುಟುಂಬಕ್ಕೆ ಹೆಮ್ಮೆ ತರುವಿರಿ. ನಿಮಗೆ ಅವಶ್ಯಕ ವಸ್ತುಗಳ ಬಗ್ಗೆ ಅತಿಯಾದ ಹಂಬಲವಿರುವುದು. ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಅವಸರದಲ್ಲಿ ಅನಾಹುತವಾದೀತು. ಸಮಾರಂಭದಲ್ಲಿ ದೂರದ ಬಂಧುಗಳ ಸಮಾಗಮ. ನಿಮ್ಮ ಜವಾಬ್ದಾರಿಗಳು ಹೆಚ್ಚಾಗಿ ಅದನ್ನು ಕಳೆದುಕೊಳ್ಳುವ ಆಲೋಚ‌ನೆ‌ಮಾಡುವಿರಿ. ಧಾರ್ಮಿಕ‌ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಸಲಹೆಗಳನ್ನು ಕೊಡಲು ಬರಬಹುದು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸಮಾಧಾನದಿಂದ ಆಲೋಚಿಸಿ. ನಿಮಗೆ ಅವಶ್ಯಕವಾದವೂ ಇರುತ್ತವೆ. ನಿಮ್ಮ ಸಹಾಯ ಪಡೆದವರಿಂದ ಪ್ರತ್ಯುಪಕಾರವಾಗಲಿದೆ. ಉಯಾರದೋ ವೈಯಕ್ತಿಕ ವಿಚಾರಗಳು ನಿಮ್ಮ ದಾಂಪತ್ಯದಲ್ಲಿ ಒಡಕು ತರಬಹುದು. ಅತಿಥಿಗಳ ಆಗಮನದಿಂದ ನಿಮಗೆ ಸಂತೋಷವಾಗಲಿದೆ. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ.

ಸಿಂಹ ರಾಶಿ: ಹೊಸ ಯಂತ್ರಗಳನ್ನು ಖರೀದಿಸುವಿರಿ. ಪರಿಚಿತರ ಮನೆಗೆ ಅತಿಥಿಯಾಗಿ ಹೋಗುವಿರಿ. ವಿವಾಹವು ಯೋಜನೆಗೊಳ್ಳದೇ ಬೇಸರವಾಗಿ ಮನೆಯಲ್ಲಿ ಕಲಹಗಳು ಆಗಬಹುದು. ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಲಿದೆ‌. ಧಾರ್ಮಿಕ ಮುಖಂಡರ ಜೊತೆ ಕಲಹ ಮಾಡಿಕೊಳ್ಳುವಿರಿ. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವು ಆಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಆಹಾರ ಸೇವಿಸುವಾಗ ಆರೋಗ್ಯದ ಬಗ್ಗೆಯೂ ಗಮನವಿರಲಿ. ಹತ್ತಿರದವರ ವಿಯೋಗವಾಗಲಿದೆ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಗೊತ್ತಿಲ್ಲದೇ ಕೆಟ್ಟ ಮಾರ್ಗವನ್ನು ನೀವು ಅನುಸರಿಸಬಹುದು. ನಿಮ್ಮ ಪ್ರಾಮಾಣಿಕತೆಗೆ ಸಿಗುವ ಗೌರವ ಇಲ್ಲವೆನಿಸುವುದು. ಹೂಡಿಕೆಗೆ ನಿಮ್ಮದಾದ ತಂತ್ರವನ್ನು ಬಳಸುವಿರಿ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು.

ಕನ್ಯಾ ರಾಶಿ: ಕೃಷಿಯ ಮೇಲೆ ಹೆಚ್ಚು ಗಮನ, ಆದಾಯಕ್ಕಾಗಿ ಪ್ರಯತ್ನ. ನಿಮ್ಮ ಮೇಲೆ ಕಳ್ಳತನದ ಅಪವಾದವು ಬರಬಹುದು. ನಿಮ್ಮ ಮೇಲಧಿಕಾರಿಗಳನ್ನು ನಿಮ್ಮ ಕಡೆಗೆ ಇರುವಂತೆ ನೋಡಿಕೊಳ್ಳುವಿರಿ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ಪಾಲುದಾರಿಕಯಲ್ಲಿ ಕೆಲವನ್ನು ಮುಚ್ಚಿಡುವಿರಿ. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗುವುದು. ಆಂತರಿಕ ಕಲಹವು ಬಹಿರಂಗವಾಗಲಿದೆ. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಟ್ಟುಬಿಡಿ. ಆಂತರಿಕ ಕಲಹವು ಇಂದು ಜಗಜ್ಜಾಹಿರವು ಆಗಬಹುದು. ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತೋಷ. ವಸ್ತ್ರಗಳ ಖರೀದಿಯಲ್ಲಿ ನೀವು ಮಗ್ನರಾಗಿರುತ್ತೀರಿ. ನಿಮ್ಮ ಬೆಳವಣಿಗೆಯನ್ನು ಕಂಡು ಮನೆಯಲ್ಲಿ ಸಂತಸಗೊಳ್ಳಬಹುದು. ಕೆಲವು ತೀರ್ಮಾನದ ವಿಚಾರದಲ್ಲಿ ಮನಸ್ಸು ಗೊಂದಲವಾಗಿ ಇರುವುದು. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಯಾರನ್ನೂ ದೂರದಿಂದಲೇ ನಿರ್ಣಯಿಸುವುದು ಬೇಡ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಅಟ್ಟಕ್ಕೇರಿಸಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ.