Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಾಧನೆಗೆ ಸಮಾಜದಿಂದ ಗೌರವ ಸಿಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ, ಸೋಮವಾರ ಒತ್ತಾಯದಿಂದ ಕೆಲಸ, ಅನಪೇಕ್ಷಿತರ ಜೊತೆ ಮಾತು, ಮಿತ್ರರ ಜೊತೆ ಯಾತ್ರೆ ಇವೆಲ್ಲ ಈ ದಿನ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿಮ್ಮ ಸಾಧನೆಗೆ ಸಮಾಜದಿಂದ ಗೌರವ ಸಿಗಲಿದೆ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 14, 2025 | 1:08 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ – 06 – 20 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:54 – 09:27, ಯಮಘಂಡ ಕಾಲ 10:59 – 12:33, ಗುಳಿಕ ಕಾಲ 14:06 – 15:39

ತುಲಾ ರಾಶಿ: ನಿಮ್ಮ ಸಾಧನೆಗೆ ಸಮಾಜದಿಂದ ಗೌರವ ಸಿಗಲಿದೆ. ಸೌಂದರ್ಯದ ಬಗ್ಗೆ ಅಧಿಕ ಅಭ್ಯಾಸ ಮಾನವಿರುವುದು. ಯಾರ ಭಾವನೆಗಳನ್ನು ಕ್ಷುಲ್ಲಕವಾಗಿ ಕಾಣುವುದು ಬೇಡ. ಸಂಪಾದನೆಗೆ ಉತ್ತಮಮಾರ್ಗವು ನಿಮಗೆ ಗೊತ್ತಾಗಲಿದೆ. ಕ್ರೀಡೆಗಳನ್ನು ಮನೋರಂಜನೆಗೆ ಆಡಿ, ದ್ವೇಷ ಅಸೂಯೆಗಳಿಗೆ ಅವಕಾಶ ಬೇಡ. ನಿಮ್ಮ ಕಾರ್ಯವನ್ನು ಕೆಲವರು ಆಡಿಕೊಳ್ಳಬಹುದು. ಸಂಗಾತಿಯ ಮಾತುಗಳಿಂದ ಸಿಟ್ಟಾಗುವ ಸಾಧ್ಯತೆ ಇದೆ. ಇನ್ನೊಬ್ಬರ ವ್ಯಕ್ತಿತ್ವವನ್ನು ಅನುಕರಣೆ ಮಾಡುವಿರಿ. ನೌಕರರ ವಿಚಾರಕ್ಕೆ ನೀವು ಸಿಟ್ಟುಗೊಳ್ಳುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಮಂದಿರಗಳಿಗೆ ಭೇಟಿ ನೀಡಿ ಸ್ವಲ್ಪ ಸಮಯವನ್ನು ಅಲ್ಲಿ ಕಳೆದು ಬರುವುದು ಒಳಿತು. ಅಲ್ಲಿನ ಸಕಾರಾತ್ಮಕ ವಾತಾವರಣವು ನಿಮ್ಮ ಮನೋಬಲವನ್ನು ಹೆಚ್ಚಿಸುವುದು. ಕಛೇರಿಯ ಸ್ಥಳಾಂತರದಿಂದ ನಿಮ್ಮ ಓಡಾಟ ಕಷ್ಟ. ಇಂದು ಶುಭವನ್ನು ನೀವು ನಿರೀಕ್ಷಿಸಿದರೂ ನಿಮಗೆ ಹತಾಶೆಯು ಬರಬಹುದು. ಇಂದು ನೀವು ನಿಮ್ಮ ಕುಟುಂಬದ ಜೊತೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವಿರಿ. ಅನಪೇಕ್ಷಿತ ಚರ್ಚೆಯು ನಿಮ್ಮ ನೆಮ್ಮದಿಯನ್ನು ಹಾಳುಮಾಡೀತು.

ವೃಶ್ಚಿಕ ರಾಶಿ: ಸಾಹಿತ್ಯ ಲೋಕ ನಿಮ್ಮನ್ನು ಕರೆಯಬಹುದು. ಆಸಕ್ತಿ ಇದ್ದರೂ ತೊಡಗಿಕೊಳ್ಳುವ ಮುಜುಗರ. ಇಂದು ಯಾವುದಾದರೂ ಹೊಸ ವಿಚಾರಗಳು ನಿಮ್ಮ ಗಮನ ಸೆಳೆಯಬಹುದು. ಆನಾರೋಗ್ಯದಿಂದ ವ್ಯತ್ಯಾಸವಾದ ನಿಮ್ಮ ದೇಹ, ಮನಸ್ಸುಗಳು ಸ್ವಸ್ಥವಾಗುವ ಕಡೆಗೆ ಹೋಗುತ್ತಿವೆ. ಅಪ್ರಿಯಾವಾದ ಆಪಾದನೆಗಳು ಬರಬಹುದು. ಹಠದ ಸ್ವಭಾವವು ನಿಮ್ಮನ್ನು ಒಂಟಿಗನನ್ನಾಗಿ ಮಾಡುತ್ತದೆ‌. ನಿಮಗೆ ಆಗಬೇಕಾದ ಕಾರ್ಯಕ್ಕೆ ಹಣವೂ ಓಡಾಟವೂ ಅತಿಯಾಯಿತು ಎಂದು ಅನ್ನಿಸುವುದು. ಪ್ರಯಾಣದ ಸಮಯದಲ್ಲಿ ನಿಮ್ಮ ವಸ್ತುಗಳು ಕಳೆದುಹೋಗಬಹುದು. ಆಭರಣ ಕೊಳ್ಳಲು ಉತ್ಸಾಹವಿದ್ದು ಹೂಡಕೆಯ ದೂರದೃಷ್ಟಿ ಉದ್ದೇಶವಾಗಿದೆ. ಉದ್ಯೋಗಿಗಳಿಗೆ ಉನ್ನತ ಪದವಿಗೆ ಆಹ್ವಾನ ಬರಬಹುದು. ಸಜ್ಜನರ ಸಂಯೋಗದಿಂದ ಮನಸ್ಸಿಗೆ ಸಂತೋಷವಾಗುತ್ತದೆ. ವ್ಯಾಪಾರ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಅನೇಕ ಅನುಭವಗಳನ್ನು ನೀವು ಪಡೆಯುತ್ತೀರಿ. ಪ್ರತಿಭೆಯ ಖ್ಯಾತಿಯನ್ನು ನೀವು ಪಡೆಯಬಹುದು.

ಧನು ರಾಶಿ: ಅನಧಿಕೃತ ವ್ಯವಹಾರದಿಂದ ತೊಂದರೆ. ಆರ್ಥಿಕ ನಷ್ಟವಾಗುವ ಸಾಧ್ಯತೆ ಇದೆ. ಆಗದವರನ್ನು ದ್ವೇಷಿಸುವ ಸ್ವಭಾವವು ನಿಮ್ಮ ಮಾನಸಿಕತೆಯನ್ನು ತೋರಿಸುತ್ತದೆ. ಇದು ನಿಮ್ಮನ್ನು ಉದ್ವೇಗಕ್ಕೆ ತಳ್ಳಬಹುದು. ಗೊತ್ತಿಲ್ಲದೇ ನಿಮ್ಮ ಸಮಯವು ವ್ಯರ್ಥವಾಗಬಹುದು. ವಿದೇಶದ ವ್ಯಕ್ತಿಗಳಿಂದ ತೊಂದರೆ. ಸಂಗಾತಿಯ ಜೊತೆಗೆ ಸಣ್ಣ ಕಲಹವು ಆಗಬಹುದು. ನಿಮ್ಮ ಭಾವನೆಗಳಿಗೆ ಬೆಲೆಯು ಇಲ್ಲದೇ ಹೋಗಬಹುದು. ಕೃಷಿಯಲ್ಲಿ ನೆಮ್ಮದಿಯನ್ನು ಕಾಣುವಿರಿ. ನೀವು ದೂರ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಬರಬಹುದು. ಹೂಡಕೆಯ ಬಗ್ಗೆ ಕಲ್ಪನೇ ಇಲ್ಲದೇ ಅತಿಯಾಸೆಯಿಂದ ಧನನಷ್ಟ. ಕೆಲವು ಅಹಿತಕರ ಘಟನೆಯಿಂದ ಮನಸ್ಸು ಅತೃಪ್ತವಾಗಿರುತ್ತದೆ. ಸುಖ-ದುಃಖಗಳನ್ನು ಸಮಾನವಾಗಿ ಪರಿಗಣಿಸಿ, ಎಲ್ಲವನ್ನೂ ವಿಧಿಗೆ ಬಿಟ್ಟುಬಿಡಿ. ಉಚಿತ ಸಲಹೆಯನ್ನು ಯಾರಿಗೂ ನೀಡುವುದು ಬೇಡ. ನೀವೇ ಸಣ್ಣವರಾಗುವುದು. ನಿಮ್ಮ ಪಾಲಿನ ಕರ್ತವ್ಯಗಳನ್ನು ಮುಂದುವರಿಸಿ. ಪ್ರೇಮವು ವಿಪರೀತ ಹೊದಲದಲ್ಲಿ ಸಿಕ್ಕಿಕೊಂಡಿದ್ದು ಇದು ಅದೇ ಚಿಂತೆಯು ನಿಮ್ಮನ್ನು ಕಾಡುವುದು.

ಮಕರ ರಾಶಿ: ಎಂತಹ ತೊಂದರೆಗಳು ಬಂದರೂ ಮಾಡಬೇಕಾದುದನ್ನು ನಿಲ್ಲಿಸಲಾರಿರಿ. ಇಂದು ನಿಮಗೆ ನೀವು ದುರ್ಬಲರಂತೆ ಕಾಣಿಸಬಹುದು. ಅದಕ್ಕಾಗಿ ದೇಹವನ್ನು ದೃಢವಾಗಿಸಿಕೊಳ್ಳುವ ಕುರಿತು ಪ್ರಯತ್ನಿಸುವಿರಿ. ಸಾಲವನ್ನು ಮಾಡಿ ವಾಹನವನ್ನೋ, ಭೂಮಿಯನ್ನೋ, ಮನೆಯನ್ನೋ ಖರೀದಿಸಲು ಹೋಗಬೇಡಿ. ನಿಮ್ಮವರಿಗೆ ನಿಮ್ಮನ್ನು ನೋಡಿ ಮಾತನಾಡಬೇಕು ಎನ್ನಿಸಬಹುದು. ಅದಕ್ಕೆ ಇಲ್ಲವೆನ್ನಬೇಡಿ. ಸುರಕ್ಷತೆಯ ಗಮನಾಗಮನ ಇಂದು ಬಹಳ ಮುಖ್ಯ. ನಿಮಗೆ ಇಂದು ಗೌರವವನ್ನು ಪಡೆಯುವ ದಿನವಾಗಿರುತ್ತದೆ. ಎಲ್ಲವೂ ನಿಮಗೆ ಅನಿರೀಕ್ಷಿತವಾಗಿ ಘಟಿಸುವುದು. ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಯಾವುದೇ ತಪ್ಪು ನಿರ್ಧಾರ ತೆಗೆದುಕೊಂಡು ಕಷ್ಟಪಡುವಿರಿ. ಸಾಲ ಮಾಡುವ ವಿಚಾರವು ನಿಮಗೆ ಕಹಿಯಾಗಬಹುದು. ಯಾರ ಸಹಕಾರವೂ ನಿಮ್ಮನ್ನು ಏನೂ ಮಾಡಲಾಗದು. ಜೊತೆಗಾರರನ್ನು ಆತ್ಮೀಯವಾಗಿ ಕಾಣುವಿರಿ. ಕುಟುಂಬಕ್ಕೆ ನಿಮ್ಮಿಂದ ಆಗಬೇಕಾದ ಕಾರ್ಯಗಳ ಬಗ್ಗೆ ತಿಳಿದುಕೊಳ್ಳುವಿರಿ. ನಿಮ್ಮ ವಿದೇಶ ಪ್ರವಾಸವು ಕಾರಣಾಂತರಗಳಿಂದ ರದ್ದಾಗುವುದು. ನಿರೀಕ್ಷಿತ ಬಂಧುಗಳ ಆಗಮನದಿಂದ ಸಂತೋಷವಾಗುವುದು.

ಕುಂಭ ರಾಶಿ: ಕಾನೂನಾತ್ಮಕ ಹೋರಾಟದ ದಿಕ್ಕು ಬದಲು. ನ್ಯಾಯಸಮ್ಮತವಾದದನ್ನು ಮಾಡಲು ಹಲವರಿಂದ ಒತ್ತಡ. ಇಂದು ಕೆಲವು ವಿಚಾರಗಳು ಶತ್ರುಗಳು ರಾಜಿಯಾಗಲು ಬರಬಹುದು. ಹಿರಿಯರ ಮಧ್ಯಸ್ಥಿಕೆಯಲ್ಲಿ ಕಾರ್ಯವು ಮುನ್ನಡೆದರೆ ಸೊಗಸು. ನ್ಯಾಯಾಲಯದಲ್ಲಿ ವಾದ-ವಿವಾದಗಳನ್ನು ಮಾಡಲಿದ್ದೀರಿ. ದೂರಪ್ರಯಾಣವನ್ನು ಮಾಡಿ ಆಯಾಸಗೊಳ್ಳಬೇಡಿ. ಸ್ಥಿರಾಸ್ತಿಯ ಮಾಹಿತಿಯನ್ನು ಕೊಡಬೇಕಾಗುವುದು. ಎಲ್ಲರೂ ನಿಮ್ಮ ನಗುಮೊಗವನ್ನು ಕಂಡು ಖುಷಿಪಡಲಿದ್ದಾರೆ. ಇಂದಿನ‌ ನಿಮ್ಮ ಅತಿಯಾದ ಉತ್ಸಾಹ ಮತ್ತು ಆತುರವು ಕೆಲಸವನ್ನು ಹಾಳುಮಾಡಬಹುದು. ಅನಗತ್ಯ ಅನುಮಾನಗಳನ್ನು ತಪ್ಪಿಸಿ. ತಪ್ಪು ಮಾರ್ಗಗಳಿಂದ ಹಣ ಸಂಪಾದನೆಯು ಬೇಡ. ಸಂತೃಪ್ತಿಯಿಂದ ನೀವು ನಿಮ್ಮ ಹಳೆಯ ಎಲ್ಲವನ್ನೂ ಮರೆಯುವಿರಿ. ಹಣದ ಅನಿವಾರ್ಯತೆಯು ಬರಲಿದ್ದು, ಹೇಗೋ ಹೊಂದಿಕೆಯಾಗಲಿದೆ. ಸಂಗಾತಿಯ ಬಗ್ಗೆ ಪೂರ್ವಾಗ್ರಹವು ಇರುವ ಕಾರಣ ಯಾವ ಇಷ್ಟವಾಗದು.

ಮೀನ ರಾಶಿ: ನಿಮ್ಮ ವಾಸ್ತವಿಕತೆ ಬಹಿರಂಗವಾಗಿ ಅಪಮಾನವಾಗಬಹುದು. ಇಂದು ದಿನದ ಆರಂಭದಿಂದ ಅಂತ್ಯದವರೆಗೂ ಉತ್ಸಾಹದಿಂದಲೇ ಇರುವಿರಿ. ಗೊತ್ತಿಲ್ಲ ವಿಚಾರಗಳನ್ನು ಅನುಭವಿಗಳಿಂದ, ಹಿರಿಯರಿಂದ ತಿಳಿದುಕೊಳ್ಳುವಿರಿ. ನೀವಿಂದು ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದೀರಿ. ನಿಮ್ಮ ಮಾತಿಗೆ ಮನ್ನಣೆ ಸಿಗಲಿಲಿದೆ. ಶ್ರಮದ ಫಲವನ್ನು ಉಣ್ಣುವ ಕಾಲ ಬಂದಿರುತ್ತದೆ. ಇಂದು ನೀವು ಅಪರಿಚಿತರಿಂದ ಬೆಂಬಲ ಪಡೆಯಬಹುದು. ಲಾಭದ ಹಾದಿಯು ಅಡ್ಡಿಯಿಂದ ಚಿಂತೆ ಕಾಡಬಹುದು. ನಿಮಗೆ ಸೋಲನ್ನು ಒಪ್ಪಿಕೊಳ್ಳಲು ಸಾಧ್ಯವಾಗದು. ಕಠಿಣ ಪರಿಶ್ರಮ ಅಗತ್ಯವಾಗಿ ಬೇಕಾಗುವುದು. ಕೆಲವು ಒಳ್ಳೆಯ ಸುದ್ದಿಗಳು ನಿಮ್ಮ ಉತ್ಸಾಹವನ್ನು ಹೆಚ್ಚಿಸುತ್ತವೆ. ನಿಮ್ಮ ಹೊಸ ಪ್ರಯತ್ನಕ್ಕೆ ಕುಟುಂಬದ ಬೆಂಬಲವು ಸಿಗುವುದು. ಅಲ್ಪಾವಧಿಯಲ್ಲಿ ಹೆಚ್ಚು ಪಡೆಯಬೇಕು ಎನ್ನುವ ಅತಿಯಾದ ಆಸೆ ಬೇಡ. ಸಂಗಾತಿಯ ಜೊತೆ ಕಲಹವಾಡಿ ಯಾವ ಕಾರ್ಯವನ್ನೂ ಮಾಡಲು ಹೋಗುವುದು ಬೇಡ.

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!