AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಠಿಣ ಸವಾಲನ್ನು ಜಯಿಸುವ ನಿಮ್ಮ ನಿರ್ಧಾರಕ್ಕೆ ಮೆಚ್ಚುಗೆ ಸಿಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಏಕಾದಶೀ ತಿಥಿ, ಗುರುವಾರ ಸ್ಪಷ್ಟ ನಿಲುವು, ಪರರಿಂದ ಒಲವು, ಸ್ಪರ್ಧೆಯಲ್ಲಿ ಗೆಲವು ಇವೆಲ್ಲ ಈ ದಿನಸ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಕಠಿಣ ಸವಾಲನ್ನು ಜಯಿಸುವ ನಿಮ್ಮ ನಿರ್ಧಾರಕ್ಕೆ ಮೆಚ್ಚುಗೆ ಸಿಗಲಿದೆ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: May 08, 2025 | 1:39 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಏಕಾದಶೀ ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ – 06 : 08 am, ಸೂರ್ಯಾಸ್ತ – 06 : 50 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:04 – 15:40, ಯಮಘಂಡ ಕಾಲ 06:08 – 07:44, ಗುಳಿಕ ಕಾಲ 09:19 – 10:54

ತುಲಾ ರಾಶಿ: ಭೂಸ್ವಾಧೀನವನ್ನು ಅರಗಿಸಿಕೊಳ್ಳಲಾಗದು. ಗೌರವ ಸಿಗಲೆಂದೇ ಇಂದು ಕಾರ್ಯವನ್ನು ಮಾಡುವಿರಿ. ಅವಿವಾಹಿತರಿಗೆ ವಿವಾಹವಾಗುವ ಸೂಚನೆಯು ಗೊತ್ತಾಗಬಹುದು. ಬಂಧುಗಳ ಭೇಟಿಯಾಗಲಿದ್ದೀರಿ. ಸಂವಾದಿ ಕಡೆಯವರಿಂದ ಮಾನಸಿಕ ಕಿರಿಕಿರಿ ಹೆಚ್ಚಾಗಲಿದೆ. ಇಂದು ನಿಮ್ಮ ‌ಮುಂದಿನ ಕಾರ್ಯಕ್ಕೆ ಅನುಕೂಲಕರವಾಗಿರಲಿದೆ. ಸರ್ಜನಾತ್ಮಕ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ವೃತ್ತಿ ಜೀವನದಲ್ಲಿ ಅಡಚಣೆಗಳು ಪರಿಹಾರವಾಗುತ್ತವೆ. ಸಂಬಂಧಗಳಲ್ಲಿ ಸಹಕಾರ ಮತ್ತು ಮನವಿ ಮುಖ್ಯ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರುತ್ತದೆ. ವ್ಯಕ್ತಿ ಅವನ ಯೋಗ್ಯತೆಗೆ ಅನುಸಾರವಾಗಿ ಅಭಿವೃದ್ಧಿಯನ್ನು ಹೊಂದುವನು. ಕಛೇರಿಯಲ್ಲಿ ನಿಮ್ಮ ವರ್ತನೆಯ ಬಗ್ಗೆ ಸಂದೇಹ ಬರಬಹುದು. ನಿಮ್ಮ ಮೇಲೆ ಯಾರಾದರೂ ಕಣ್ಣಿಟ್ಟಾರು. ಬಾಂಧವರ ನಡುವೆ ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ನಿಮ್ಮ ವರ್ತನೆಗಳು ಯಾರ ಮೇಲಾದರೂ ಪ್ರಭಾವ ಬೀರಬಹುದು. ಮೇಲಧಿಕಾರಿಗಳ ಜೊತೆ ಸಭ್ಯತೆಯಿಂದ ವರ್ತಿಸಿ.

ವೃಶ್ಚಿಕ ರಾಶಿ: ನಿಮ್ಮ ಏಕಾಗ್ರತೆಗೆ ಜೊತೆಗಾರರು ಭಂಗ ತರಬಹುದು. ಇಂದು ನೀವು ಬಹಳ ನಿಧಾನವಾಗಲಿದೆ. ನಿಮ್ಮ‌ಮೇಲೆ ಅಪವಾದವನ್ನು ತರಲಿದ್ದಾರೆ. ನಿಃಸ್ವಾರ್ಥವಾಗಿ ಇಚಮಷ್ಟಪಡುವವರನ್ನು ಸಂಶಯಿಸಬೇಡಿ.‌ ನಿಮ್ಮ ಜೊತೆಗಿರುವವರು ಯಾರು ಯಾವ ರೀತಿಯವರು ಎಂಬುದು ಗೊತ್ತಾಗುತ್ತದೆ. ಸಹನೆ ಮೀರದಂತೆ ನೀವೇ ನೋಡಿಕೊಳ್ಳಬೇಕು. ವ್ಯಾಪಾರದಲ್ಲಿ ಲಾಭದಾಯಕ ಹೊಣೆಗಾರಿಕೆ ಬರುತ್ತದೆ. ಸ್ನೇಹಿತರಿಂದ ಉತ್ತಮ ಸಹಕಾರ ಲಭ್ಯ. ತೀವ್ರ ಪರಿಶ್ರಮದಿಂದ ನಿರೀಕ್ಷಿತ ಫಲ ಪಡೆಯುವಿರಿ. ಹಣಕಾಸಿನ ವಿಷಯಗಳಲ್ಲಿ ಜಾಗೃತವಾಗಿರಿ. ಆರೋಗ್ಯಕ್ಕೆ ಸಂಬಂಧಿಸಿದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಅನಿರೀಕ್ಷಿತ ಗೆಲುವಿನಿಂದ ಖುಷಿ ಸಿಗುವುದು. ಇಂದು ನಿಮ್ಮ ಪ್ರೀತಿಪಾತ್ರರ ಭೇಟಿಯಾಗಲಿದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಮಕ್ಕಳ ನಿರೀಕ್ಷೆಯಲ್ಲಿ ಇರುವವರಿಗೆ ಶುಭಸುದ್ದಿಯು ಸಿಗಬಹುದು. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು.

ಧನು ರಾಶಿ: ದಾಂಪತ್ಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಸರಿಯಾಗಿ ತೆಗೆದುಕೊಳ್ಳಲು ಸೋಲುವಿರಿ. ಇನ್ನೊಬ್ಬರ ನಡತೆ ಇಷ್ಟವಾಗದೇ ಇದ್ದರೆ ಅದನ್ನು ಹೇಳುವ ಕ್ರಮದಲ್ಲಿ ಹೇಳಿ. ಇಲ್ಲವಾದರೆ ಕಲಹವಾಗುವುದು. ವಿದೇಶಿ ವಸ್ತುಗಳ ವ್ಯವಹಾರ ಮಾಡುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು. ವಿವೇಕದಿಂದ ಸಂಕಷ್ಟಗಳನ್ನು ಪರಿಹರಿಸುವಿರಿ. ಆರ್ಥಿಕ ವ್ಯವಹಾರವನ್ನು ಅರ್ಥಮಾಡಿಕೊಂಡು ನಡೆಸಲಾಗದು. ಉದ್ಯೋಗದಲ್ಲಿ ಅಲ್ಪ ಸಮಸ್ಯೆ ಎದುರಾಗಬಹುದು, ಧೈರ್ಯದಿಂದ ಮುನ್ನಡೆಯಿರಿ. ಹಣಕಾಸಿನ ನಿರ್ವಹಣೆಯಲ್ಲಿ ಎಚ್ಚರಿಕೆಯಿಂದಿರಬೇಕು. ಕುಟುಂಬದವರು ಬೆಂಬಲ ನೀಡುತ್ತಾರೆ. ಸಂಗಾತಿಯೇ ನಿಮ್ಮ ಕೆಲಸಗಳಿಗೆ ಮುನ್ನುಗ್ಗಿ ಸಹಾಯ ಮಾಡುವರು. ಸರ್ಕಾರಿ ಕಚೇರಿಯ ಕೆಲಸಗಳಲ್ಲಿ ಸ್ವಲ್ಪ ಚುರುಕುತನ ಕಾಣಬಹುದು. ಧಾರ್ಮಿಕ ಕೆಲಸವನ್ನು ಮಾಡುವವರಿಗೆ ಸಮಾಜದಿಂದ ಸಾಕಷ್ಟು ಸಹಾಯ ದೊರೆಯುತ್ತದೆ. ಯಾರದ್ದಾದರೂ ಮನವೊಲಿಸುವ ಕೆಲಸವು ನಿಮಗೆ ಬರಬಹುದು. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ಸಾಲವನ್ನು ಸ್ವಲ್ಪವೂ ಉಳಿಯದಂತೆ ಮುಗಿಸಿ. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು.

ಮಕರ ರಾಶಿ: ಒಮ್ಮೆಲೆ ಬರುವ ಹೊಣೆಗಾರಿಕೆಯನ್ನು ನಿರ್ವಹಿಸಲು ಸೋಲಬಹುದು. ನಿಮ್ಮನ್ನು ವಿರೋಧಿಸುವವರು ನಿಮ್ಮ ಬಗ್ಗೆ ಬೇಡದ ಸಂಗತಿಗಳನ್ನು ಹರಿದುಬಿಡುವರು. ಸಂಗಾತಿಯೊಂದಿಗೆ ಸ್ನೇಹದಿಂದ ವರ್ತಿಸಿ. ಇಲ್ಲವಾದರೆ ಭಿನ್ನಾಭಿಪ್ರಾಯಗಳು ಸವಕಾಶ ಸಿಗುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮ ಫಲ ನೀಡಲಿದೆ. ಅನಾರೋಗ್ಯದಿಂದ ಮಾಡುವ ಕಾರ್ಯ ಅರ್ಧಕ್ಕೆ ಸ್ಥಗಿತ. ಸಹೋದ್ಯೋಗಿಗಳ ಸಹಕಾರ ದೊರೆಯಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಸಂಯಮ ಇರಲಿ. ಬಹುಜನರ ಅಭಿಪ್ರಾಯವನ್ನು ಹೆಚ್ಚಿಗೆ ಗೌರವಿಸುವುದು ಒಳ್ಳೆಯದು. ಮಾತಿನಲ್ಲಿ ಹೆಚ್ಚಿನ ಎಚ್ಚರವಿರಲಿ, ಯಾರ ವಿರುದ್ಧವೂ ಕುಹುಕ ಮಾಡುವುದು ಬೇಡ. ವಿವಾಹದ ಬಗ್ಗೆ ಬೇಸರವುಂಟಾಗುವುದು. ಹಣದ ಹರಿವು‌ ಕಡಿಮೆ ಇರುವುದರಿಂದ ಖರ್ಚನ್ನು ಸರಿಯಾಗಿ ನಿಭಾಯಿಸುವುದು ಒಳ್ಳೆಯದು. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಕೊಡುಕೊಳ್ಳುವ ವ್ಯವಹಾರದಲ್ಲಿ ದಾಖಲೆಗಳು ಸರಿಯಾಗಿರಲಿ.

ಕುಂಭ ರಾಶಿ: ಕಠಿಣ ಸವಾಲನ್ನು ಜಯಿಸುವ ನಿಮ್ಮ ನಿರ್ಧಾರಕ್ಕೆ ಮೆಚ್ಚುಗೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಎಲ್ಲರಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತದೆ. ವ್ಯವಹಾರಗಳ ಬಗ್ಗೆ ಪಾಲುದಾರರ ಜೊತೆ ತಕ್ಷಣದಲ್ಲಿ ಮಾತನಾಡಬೇಕಾದ ಹಾಗೂ ತೀರ್ಮಾನ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಸಹೋದ್ಯೋಗಿಗಳ ಬೆಂಬಲ ನಿಮ್ಮ ಮನೋಬಲ ಹೆಚ್ಚಿಸುತ್ತದೆ. ಆರ್ಥಿಕ ವಿಷಯಗಳಲ್ಲಿ ವ್ಯರ್ಥ ವೆಚ್ಚ ತಪ್ಪಿಸಿ. ಆರೋಗ್ಯದತ್ತ ಗಮನ ಹರಿಸುವುದು ಸೂಕ್ತ. ಸಂಬಂಧಗಳಲ್ಲಿ ಸಮಾಲೋಚನೆ ಮಾಡಿ ನಿರ್ಧಾರ ಕೈಗೊಳ್ಳಿ. ಹೊಸ ಆಲೋಚನೆಗಳನ್ನು ಅನುಷ್ಠಾನಗೊಳಿಸುವ ಮೊದಲು ಚೆನ್ನಾಗಿ ಪರಿಶೀಲಿಸಿ. ಗೃಹ ನಿರ್ಮಾಣದ ಕೆಲಸದಲ್ಲಿ ಅತಿ ಆತುರ ಬೇಡ. ಆರೋಪ ಪ್ರತ್ಯಾರೋಪವೇ ಹೆಚ್ಚಾಗಿತ್ತದೆ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ಆಕಸ್ಮಿಕವಾಗಿ ತೊಂದರೆ ಆಗಬಹುದು.

ಮೀನ ರಾಶಿ:  ಇಂದು ಕರ್ತವ್ಯದ ಲೋಪದಕ್ಮೆ ತಕ್ಕ ಶಿಕ್ಷೆಯನ್ನು ಅನುಭವಿಸಬೇಕಾಗುವುದು. ಇಂದು ಕೆಲವು ವಿಷಯಗಳಲ್ಲಿ ಕಠಿಣ ನಿರ್ಧಾರ ಬೇಕಾಗುತ್ತದೆ. ನೀವು ಅಪೇಕ್ಷಿಸಿದ್ದ ಯಾತ್ರೆಗೆ ಸಿದ್ಧತೆ ಮಾಡಿಕೊಳ್ಳುವಿರಿ. ವೃತ್ತಿರಂಗದಲ್ಲಿ ನಿಮ್ಮ ಸ್ಥಾನವು ಹೆಚ್ಚಾಗುವುದಿಲ್ಲ. ಆತ್ಮವಿಶ್ವಾಸ ಮತ್ತು ದೃಢ ನಿರ್ಧಾರಗಳಿಂದ ಯಶಸ್ಸು. ಹೊಸ ಕಾರ್ಯಗಳ ಯೋಜನೆ ಸಕಾರಾತ್ಮಕ ಫಲ ನೀಡುವುದು. ಕುಟುಂಬದಲ್ಲಿ ಸಂಧಾನ ಮತ್ತು ಸಮರ್ಪಣೆ ಮುಖ್ಯ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಅಗತ್ಯ. ಪ್ರೀತಿಯ ಸಂಬಂಧಗಳಲ್ಲಿ ನಿಷ್ಠೆ ಮತ್ತು ನಿಷ್ಠುರತೆಯ ಮಧ್ಯೆ ಸಮತೋಲನ ಕಾಯ್ದುಕೊಳ್ಳಿ. ಎಲ್ಲದಕ್ಕೂ ನಿಮ್ಮನ್ನು ಕೇಳಬೇಕು ಎನ್ನುವುದು ಅಸಾಧ್ಯವಾದುದು. ಸ್ಥಿರಾಸ್ತಿ ವಿಚಾರಗಳನ್ನು ತೀರ್ಮಾನ ಮಾಡಲು ಹೋದ ನಮಗೆ ನಮ್ಮ ಗೋಜಲುಗಳನ್ನು ಕಂಡು ಗಾಬರಿಯಾಗುವುದು ಬೇಡ. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿಗಾಗಿ ಪ್ರಯತ್ನಿಸುವಿರಿ. ಬೆರೆಯುವುದು ಕಷ್ಟವಾದೀತು. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ.