AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಹಬ್ಬದ ವಾತಾವರಣದಿಂದ ನೋವನ್ನು ಮರೆಯುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಹಬ್ಬದ ವಾತಾವರಣದಿಂದ ನೋವನ್ನು ಮರೆಯುವಿರಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Nov 12, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 12 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಆಯುಷ್ಮಾನ್, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ. ರಾಹು ಕಾಲ ಮಧ್ಯಾಹ್ನ 04:34 ರಿಂದ 06:00, ಯಮಘಂಡ ಕಾಲ ಮಧ್ಯಾಹ್ನ 12:17 ರಿಂದ 01:43ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:08 ರಿಂದ 04:34ರ ವರೆಗೆ.

ಮೇಷ ರಾಶಿ: ಪಾಲುದಾರಿಕೆಯ ಮಾತುಕತೆಗಳನ್ನು ಮುಂದೂಡಿ. ಸಾಲಕ್ಕಾಗಿ ಯಾರಾದರೂ ಪ್ರೇರೇಪಿಸಬಹುದು. ಸಂದರ್ಭೋಚಿತ ಮಾತುಗಳಿಂದ ಗೆಲುವುದು ಸಿಗಬಹುದು. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನ್ಯರಿಗೆ ಅಸಾಧ್ಯವಾದ ಕೆಲಸವು ನಿಮ್ಮಿಂದ ಸಾಧ್ಯವಾಗಬಹುದು. ನೇರ ಮಾತಿನಿಂದ ನಿಮ್ಮ ಅಭಿಪ್ರಾಯವನ್ನು ತಿಳಿಸಿ.

ವೃಷಭ ರಾಶಿ: ರಹಸ್ಯ ವಿಚಾರವನ್ನು ನೀವು ಅರಿವಿಲ್ಲದೇ ಹೇಳುವಿರಿ. ಕೆಲವು ಸಂದರ್ಭಗಳನ್ನು ನಿಭಾಯಿಸುವುದು ಕಷ್ಟಕರವೆನಿಸುವುದು. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಪತ್ನಿಯ ಬಗ್ಗೆ ದಾಮದೃಷ್ಟಿಯು ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ಹಬ್ಬದ ವಾತಾವರಣದಿಂದ ನೋವನ್ನು ಮರೆಯುವಿರಿ.

ಮಿಥುನ ರಾಶಿ: ನೂತನ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಪ್ರಾಪ್ತವಾಗುವುದು. ಬಂಧುಗಳ ವಿಚಾರದಲ್ಲಿ‌ ತೃಪ್ತಿ‌ ಇರದು. ತಾತ್ಕಾಲಿಕವಾಗಿ ನಿಮ್ಮ ಸಮಸ್ಯೆಗಳು ನಿವಾರಣೆಯಾಗಲಿದ್ದು ಸ್ವಲ್ಪ ಉಸಿರಾಡುವುದಕ್ಕೆ ಅನುವುಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಅಪರಿಚಿತರ ಪರಿಚಯ ಮಾತ್ರದಿಂದ ಎಲ್ಲವನ್ನೂ ತಿಳಿಸುವವರೆಗೂ ಮುಂದುವರಿಯುವುದು ಬೇಡ.

ಕಟಕ ರಾಶಿ: ತಂದೆಯ ಆರೋಗ್ಯವು ಕ್ಷೀಣಿಸಬಹುದು. ದುಷ್ಕೃತ್ಯದಲ್ಲಿ ಮನಸ್ಸು ಇರಲಿದೆ. ಆಹಾರ ಉದ್ಯಮದಿಂದ ಉತ್ತಮ ಆದಾಯ ಸಿಗಬಹುದು.‌ ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ಮಿತವಾದ ಮಾತು ಇರಲಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ