AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 24ರ ದಿನಭವಿಷ್ಯ

ಸ್ಫಟಿಕದ ಮಾಲೆ ಧಾರಣೆ ಮಾಡುವುದರಿಂದ ಮಾನಸಿಕ- ದೈಹಿಕ ಒತ್ತಡಗಳು ದೂರವಾಗಲಿವೆ. ಕೆಲಸ- ಕಾರ್ಯಗಳಲ್ಲಿ ನಿರಾಸಕ್ತಿ ಕಾಡುತ್ತಾ ಇದ್ದಲ್ಲಿ ಅದರಿಂದಲೂ ಹೊರಗೆ ಬರುವುದಕ್ಕೆ ಅನುಗ್ರಹ ಆಗಲಿದೆ. ಒಂದು ವೇಳೆ ಆರ್ಥಿಕವಾಗಿಯೂ ಒತ್ತಡ ಇದ್ದಲ್ಲಿ ಸ್ಫಟಿಕ ಧಾರಣೆಯಿಂದ ಆ ಒತ್ತಡ ನಿವಾರಣೆ ಆಗುತ್ತದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 24ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 24, 2026 | 1:20 AM

Share

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮಲ್ಲಿ ಕೆಲವರಿಗೆ ಹಳೇ ಗೆಳೆಯ ಅಥವಾ ಗೆಳತಿಯ ನೆನಪು ವಿಪರೀತ ಕಾಡುವಂಥ ದಿನ ಇದಾಗಿರಲಿದೆ. ಅಥವಾ ಅಚಾನಕ್ ಆಗಿ ಭೇಟಿ ಆಗುವುದೋ ಅಥವಾ ಕಾಲ್ ಮಾಡುವುದೋ ಇಂಥದ್ದು ಕೂಡ ಆಗಬಹುದು. ಹೀಗೆ ಆಗುವುದರಿಂದ ನಿಮ್ಮ ಏಕಾಗ್ರತೆ ಕಳೆದುಕೊಳ್ಳುವಂತೆ ಆಗಲಿದೆ. ಹೊಸ ವಾಹನ ಖರೀದಿ ಮಾಡಿದ್ದೀರಿ ಅಂತಾದಲ್ಲಿ ಚಾಲನೆ ವೇಳೆ ಮುಂಜಾಗ್ರತೆ ವಹಿಸಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಕ್ರೀಡಾಪಟುಗಳಿಗೆ ಬಹಳ ಉತ್ತಮವಾದ ದಿನ ಇದಾಗಿರಲಿದೆ. ಹೆಚ್ಚಿನ ತರಬೇತಿಗಾಗಿ ವಿದೇಶಗಳಿಗೆ ಅಥವಾ ನೀವು ಇರುವ ಸ್ಥಳದಲ್ಲಿಯೇ ಅತ್ಯುತ್ತಮ ತರಬೇತಿ ಸಂಸ್ಥೆಗಳಿಗೆ ತೆರಳುವ ಅವಕಾಶ ಸೃಷ್ಟಿ ಆಗಲಿದೆ. ನಿಮ್ಮಲ್ಲಿ ಯಾರಿಗೆ ಸೋದರ- ಸೋದರಿಯರು ಇದ್ದಾರೋ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಮಾಡುವುದು ಒಳ್ಳೆಯದು. ಈ ದಿನ ಅವರಿಗೆ ನಿಮ್ಮ ನೆರವಿನ ಅಗತ್ಯ ಕಂಡುಬರಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನೀವು ಯಾವುದನ್ನು ಕನಿಷ್ಠ ಪ್ರಮಾಣದ ಶಿಸ್ತು ಎಂದು ಭಾವಿಸಿರುತ್ತೀರೋ ಇತರರಿಗೆ ಅದು ಕಿರಿಕಿರಿಯಾಗಿ ಪರಿಣಮಿಸಲಿದೆ. ಅದರಲ್ಲೂ ನೀವು ಸ್ವಂತ ವ್ಯವಹಾರ- ವ್ಯಾಪಾರ ಮಾಡುವಂಥವರು ಆಗಿದ್ದಲ್ಲಿ ಸನ್ನಿವೇಶಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಲೇ ಬೇಕು. ನಿಮಗೆ ಹಿರಿಯರಿಂದ ಬಂದಂಥ ಒಡವೆ, ಆಸ್ತಿ ಇಂಥವುಗಳನ್ನು ಮಾರಾಟ ಮಾಡುವ ಆಲೋಚನೆ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!