AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ನಿಮ್ಮ ದಾಂಪತ್ಯ ಜೀವನ ಇಂದು ಅತ್ಯಂತ ಸುಂದರವಾಗಿದೆ ಅನಿಸುವುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಫೆಬ್ರವರಿ​​​​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ; ನಿಮ್ಮ ದಾಂಪತ್ಯ ಜೀವನ ಇಂದು ಅತ್ಯಂತ ಸುಂದರವಾಗಿದೆ ಅನಿಸುವುದು
ರಾಶಿ ಭವಿಷ್ಯ
ಆಯೇಷಾ ಬಾನು
|

Updated on: Feb 24, 2024 | 7:05 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಮಘಾ, ಯೋಗ : ಅತಿಗಂಡ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:50 ರಿಂದ 11:18ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:54 ರಿಂದ 08:22ರ ವರೆಗೆ.

ಧನು ರಾಶಿ: ನಿಮ್ಮ ಚಿಂತನೆಯು ಸಕಾರಾತ್ಮಕವಾಗಿರಲಿ. ಅವಶ್ಯಕತೆ ಇರುವ ವಸ್ತುಗಳನ್ನೇ ಇಂದು ಖರೀದಿಸಲು ಯೋಚಿಸಿ. ನಿಗದಿತ ಪ್ರವಾಸದ ಯೋಜನೆಗಳು ವ್ಯತ್ಯಾಸವಾಗಬಹುದು. ನೀವು ಇಂದು ಕೆಲಸದಲ್ಲಿ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸುವಿರಿ. ನಿಮ್ಮ ಬಿಡುವಿನ ಸಮಯವನ್ನು ಉತ್ತಮವಾಗಿ ಬಳಸಿಕೊಳ್ಳುವಿರಿ. ನಿಮ್ಮ ದಾಂಪತ್ಯ ಜೀವನ ಇಂದು ಅತ್ಯಂತ ಸುಂದರವಾಗಿ ಅನಿಸುವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಸಮಾರಂಭದಲ್ಲಿ ಹಳೆಯ ಸ್ನೇಹಿತರ ಭೇಟಿಯಾಗುವುದು. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ನಿಮ್ಮ ಮನಸ್ಸಿಗೆ ಪೂರ್ಣವಾಗಿ ಒಪ್ಪಿಗೆ ಆದರೆ ಮಾತ್ರ ಯಾವ ಕೆಲಸಕ್ಕಾದರೂ ಮುಂದುವರಿಯಿರಿ.

ಮಕರ ರಾಶಿ: ಎಂತಹ ಸಂದರ್ಭದಲ್ಲಿಯೂ ನೀವು ಧೈರ್ಯ ಕಳೆದುಕೊಳ್ಳದೆ ಪ್ರಯತ್ನಿಸಿ. ಬಯಸಿದ ಫಲವನ್ನು ಪಡೆಯಲು ಶ್ರಮಿಸುವಿರಿ. ಸಂಕಷ್ಟದ ಸಮಯದಲ್ಲಿ ನಿಮ್ಮ ಆಪ್ತರು ಸಹಾಯ ಮಾಡುವರು. ಇಂದು ಹಣಕಾಸಿನ ನಷ್ಟ ಸಂಭವಿಸಬಹುದು. ವ್ಯವಹಾರಗಳಲ್ಲಿ ನೀವು ಎಚ್ಚರಿಕೆಯಿಂದಿರಿ. ನಿಮಗೆ ಅನುಕೂಲಕರವಾಗಿರುತ್ತದೆ. ಕುಟುಂಬದ ಸ್ಥಿತಿಗತಿಗಳು ಇಂದು ನೀವು ಊಹಿಸಿದಂತೆ ಇರದು. ಕೆಲವು ಸನ್ನಿವೇಶಗಳಲ್ಲಿ ನಿಯಂತ್ರಣ ಅವಶ್ಯಕ. ಇಂದು ನೀವು ಇತರರಿಗೆ ಹೇಳುವ ಉತ್ಸಾಹವನ್ನು ಮಾಡುವುದಿಲ್ಲ. ನಿಮ್ಮ ಜೀವನಸಂಗಾತಿ ಇಂದು ನಿಮಗೆ ಪೂರ್ಣ ಬಲ ಮತ್ತು ಪ್ರೀತಿಯನ್ನು ನೀಡುವರು. ಎಲ್ಲರ ಜೊತೆಗಿದ್ದರೂ ಒಂಟಿಯಂತೆ ಅನ್ನಿಸುವುದು.‌ ಇಂದು ಸ್ತ್ರೀಯರಿಗೆ ಮಾನಿಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು.

ಕುಂಭ ರಾಶಿ: ನಿಮಗಿರುವ ಭಯವು ಅನೇಕ ವಿಷಯಗಳಿಗೆ ಹಿನ್ನಡೆಯನ್ನು ಉಂಟುಮಾಡುವುದು. ನಿಮ್ಮ ಚಿಂತನೆಗಳು ಮತ್ತು ಕಲ್ಪನೆಗೆ ಉತ್ತಮ ಪ್ರತಿಕ್ರಿಯೆ ಬರಬಹುದು‌. ಅದು ಸಹಜತೆಯನ್ನು ಹಾಳುಮಾಡುವುದು. ನಿಮ್ಮ ಸಾಮರ್ಥ್ಯವು ದುರ್ಬಲಯಾಗಬಹುದು. ಅದು ನಿಮ್ಮನ್ನು ಭೀತಿಗೊಳಿಸುವ ಮೊದಲು ಮೂಲದಲ್ಲೇ ನಿವಾರಿಸುವುದು ಉತ್ತಮ. ನೀವು ಸಾಲ ಪಡೆಯಲು ಯೋಜನೆ ಮಾಡಿದ್ದರೆ ದೀರ್ಘಕಾಲ‌ ಅದನ್ನು ಇಟ್ಟುಕೊಳ್ಳುವುದು ಬೇಡ. ನಿಮ್ಮ ಪ್ರೀತಿಯು ನಿಜವಾಗಿಯೂ ಅದ್ಭುತ ಎನಿಸಬಹುದು. ನಿಮ್ಮ ಅಂದಾಜು ಮೀರಬಹುದು. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಬೇಕಾಗುವುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು.

ಮೀನ ರಾಶಿ: ಇಂದು ನೀವು ಬೇರೆಯವರ ಸಹಾಯ ಇಲ್ಲದೇ ಧನಾರ್ಜನೆ ಮಾಡಬಹುದು. ನಿಮ್ಮ‌ ಮೇಲೆ‌ ನಿಮಗೆ ನಂಬಿಕೆ ಇದ್ದರೆ ಸಾಕು. ಆಪ್ತವಾದ ಮಾತು ನಿಮ್ಮ ಸಂಗಾತಿಯ ಜೊತೆಗಿನ ನಂಟನ್ನು ಬಲಪಡಿಸುತ್ತದೆ. ಪ್ರೀತಿಪಾತ್ರರಿಗೆ ಪವಿತ್ರ ಮತ್ತು ನಿಷ್ಕಳಂಕ ಪ್ರೇಮವನ್ನು ತೋರಿಸಿ. ಇಂದು ನೀವು ಕೆಲಸದಿಂದ ಒಂದು ವಿರಾಮ ಪಡೆಯಲು ಯೋಚಿಸಬಹುದು. ನಿಮ್ಮ ಜೀವನ ಸಂಗಾತಿಗೆ ಇಂದು ಶುಭವಾರ್ತೆ ಲಭಿಸಲಿದೆ. ವೈವಾಹಿಕ ಜೀವನವನ್ನು ನಡೆಸುವ ಬಗ್ಗೆ ನಿಮಗೆ ಸಲಹೆಗಳು ಸಿಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ನಿಮ್ಮ ಕೆಲಸವು ಬದಲಾವಣೆಯಾಗಬಹುದು. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ