Horoscope: ರಾಶಿ ಭವಿಷ್ಯ: ಆರೋಗ್ಯದ ಮೇಲೆ ಅಲಕ್ಷ್ಯ ಬೇಡ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜುಲೈ. 04 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
![Horoscope: ರಾಶಿ ಭವಿಷ್ಯ: ಆರೋಗ್ಯದ ಮೇಲೆ ಅಲಕ್ಷ್ಯ ಬೇಡ](https://images.tv9kannada.com/wp-content/uploads/2024/06/daily-astrology-7.jpg?w=1280)
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಜುಲೈ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 14:14 ರಿಂದ 15:51ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:10 ರಿಂದ ಬೆಳಿಗ್ಗೆ07:46ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 11:00ರ ವರೆಗೆ.
ಧನು ರಾಶಿ :ನೀವು ಅನಿರೀಕ್ಷಿತವಾಗಿ ಎದುರಾದ ಪರಿಸ್ಥಿತಿಯನ್ನು ನಿಭಾಯಿಸುವ ವಿಧಾನವನ್ನು ಕಲಿಯುವುದು ಯೋಗ್ಯ. ಹೊಸ ಅಭ್ಯಾಸವನ್ನು ಕಲಿಯಲು ಪ್ರಯತ್ನಿಸಿ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದರೆ ನಿಮಗೆ ಹಿನ್ನಡೆಯಾದಂತೆ ತೋರುವುದು. ವಿದ್ಯಾರ್ಥಿಗಳು ಸಂತೋಷದಿಂದ ಈ ದಿನವನ್ನು ಕಳೆಯುವರು. ನಿಮಗೆ ಯಾರಾದರೂ ಕೆಟ್ಟವರು ಎಂದು ಅನಿಸಿದರೆ ಅವರ ಸಹವಾಸದಿಂದ ದೂರವಿರಿ. ಇಲ್ಲವಾದರೆ ಅಪತ್ತು ತಂದುಕೊಳ್ಳಬಹುದು. ನಿಮ್ಮ ಕೆಲಸಗಳಲ್ಲಿ ನೀವು ನಿಷ್ಠೆಯಿಂದ ತೊಡಗಿಕೊಳ್ಳಿ. ತಂದೆಯ ಆರೋಗ್ಯವೂ ದೃಢವಾಗುವುದು. ಕಾನೂತ್ಮಕವಾದ ಹೋರಾಟದಲ್ಲಿ ಜಯವಿದೆ. ನಿಂತ ಕೆಲಸಗಳು ಪುನಃ ಆರಂಭ ಮಾಡಲು ಮನಸ್ಸು ಮಾಡುವಿರಿ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ನೀರಿನ ವಿಚಾರದಲ್ಲಿ ಜಾಗರೂಕತೆ ಬೇಕು. ಯಾರನ್ನೂ ಒತ್ತಾಯದಿಂದ ಇರಿಕೊಳ್ಳುವುದು ಸರಿಯಲ್ಲ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರಯತ್ನವು ನಡೆಯುವುದು. ಸಂಗಾತಿಯ ಬೆಂಬಲವು ನಿಮ್ಮ ಕಾರ್ಯಗಳಿಗೆ ಸಿಗಲಿದೆ.
ಮಕರ ರಾಶಿ :ಇಂದು ನೀವು ಅತಿಯಾದ ಹಿಂಸೆಯನ್ನು ಅನುಭವಿಸಬೇಕಾದ ಸ್ಥಿತಿಯು ಬರಬಹುದು. ಹೊಸ ಗೆಳೆತನ ನಿಮಗೆ ಬಹಳ ಇಷ್ಟವಾಗುವುದು. ನಿಮ್ಮಿಂದ ಉಪಕಾರ ಪಡೆದವರು ಗೌರವಿಸುವರು. ನೀವು ಇಷ್ಟಪಡುವ ಜನರು ನಿಮಗೆ ಸಹಾಯ ಮಾಡುವರು. ಇಂದು ನಿಮಗೆ ಕೋಪಗೊಳ್ಳಲು ಕಾರಣ ಸಿಗದು. ಸಾಲವನ್ನು ಮಾಡಲು ಹಿಂಜರಿದರೂ ಅನಿವಾರ್ಯವಾಗಿ ಮಾಡಬೇಕಾಗಬಹುದು. ನಿದ್ರೆ ಸರಿಯಾಗಿ ಇಲ್ಲದೇ ಕಿರಿಕಿರಿಯನ್ನು ಕಾರ್ಯದಲ್ಲಿ ಅನುಭವಿಸುವಿರಿ. ಬೇಕಾದ ವಸ್ತುಗಳ ಖರೀದಿಯನ್ನು ನೀವಿಂದು ಮಾಡಲಿದ್ದೀರಿ. ಮಕ್ಕಳು ನಿಮ್ಮಿಂದ ಪ್ರೀತಿಯನ್ನು ಬಯಸಿಯಾರು. ಅವರು ಕೇಳಿದ ವಸ್ತುಗಳನ್ನು ಇಲ್ಲ ಎನ್ನದೇ ಕೊಡಿಸಿ. ಹೆಚ್ಚಿನ ಆದಾಯದಿಂದ ದುರಭ್ಯಾಸವು ಹೆಚ್ಚಾಗಬಹುದು. ಉದ್ಯೋಗದಲ್ಲಿ ಅಧಿಕ ವೇತನದ ನಿರೀಕ್ಷೆ ಇರುವುದು. ಕೆಲವನ್ನು ನೀವು ಅನಗತ್ಯವಾಗಿ ತೆಗೆದುಕೊಳ್ಳುವಿರಿ. ನೀವು ಮಕ್ಕಳ ಉತ್ಸಾಹವನ್ನು ಕುಗ್ಗಿಸುವುದು ಬೇಡ.
ಕುಂಭ ರಾಶಿ :ನಿಮ್ಮ ದುರಭ್ಯಾಸದಿಂದ ಇಂದಿನ ಸಮಯವನ್ನು ನಷ್ಟಮಾಡಿಕೊಳ್ಳುವಿರಿ. ನಿಮ್ಮನ್ನು ಸರಿ ದಾರಿಗೆ ತರುವ ಪ್ರಯತ್ನದಲ್ಲಿ ಮನೆಯವರು ಇರುವರು. ಎಲ್ಲವನ್ನೂ ಶಕ್ತಿಮೀರಿ ಪ್ರಯತ್ನಿಸುವಿರಿ. ಅತಿಯಾದ ನಿದ್ರೆಯಯನ್ನು ಮಾಡುವ ಮನಸ್ಸು ಮಾಡುವಿರಿ. ಆಲಸ್ಯವು ಒಳ್ಳೆಯದಲ್ಲ. ಬಾಕಿ ಇರುವ ಕೆಲಸಗಳನ್ನು ಇಂದು ಮಾಡಿ ಮುಗಿಸುವಿರಿ. ಓದಿನಲ್ಲಿ ಆಸಕ್ತಿಯು ಕಡಿಮೆಯಾದೀತು. ಹಾಳಾದ ವಸ್ತುವಿನ ಮೇಲೆ ಮೋಹ ಕಡಿಮೆ ಆಗದು. ತಂದೆಯ ಆರೋಗ್ಯವು ಹದ ತಪ್ಪಬಹುದು. ಹಿತಶತ್ರುಗಳ ಭೀತಿಯು ಇರಲಿದೆ. ಕಾನೂನಿನ ಸಮರದಲ್ಲಿ ಜಯದ ನಿರೀಕ್ಷೆಯಲ್ಲಿ ಇರುವಿರಿ. ದೈಹಿಕ ಶ್ರಮವು ಇಂದು ಅಧಿಕವಾಗಬಹುದು. ಸಾಮಾಜಿಕ ಕಾರ್ಯದಲ್ಲಿ ಉತ್ಸಾಹದಿಂದ ಇರುವಿರಿ. ನಿಮ್ಮ ಬದುಕಿನ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಿಕೊಳ್ಳಬೇಕಾಗಬಹುದು. ಸಹೋದ್ಯೋಗಿಗಳಿಗೆ ಸಹಕರಿಸುವ ಮನಸ್ಸಾಗುವುದು.
ಮೀನ ರಾಶಿ :ಇಂದು ನಿಮ್ಮ ಸಲ್ಲದ ಯೋಚನೆಗಳಿಂದ ಮನಸ್ಸು ಹಾಳಾಗುವುದು. ಇತರರು ನಿಮ್ಮ ಕುರಿತು ಬೇಡದ ಮಾತುಗಳನ್ನು ಆಡುವ ಸಾಧ್ಯತೆಯೂ ಹೆಚ್ಚು. ತಪ್ಪುಗಳ ಮಾಡದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯೂ ಇಲ್ಲ. ಆರ್ಥಿಕವಾದ ತೊಂದರೆಯಲ್ಲಿ ಇರುವಾಗ ಅಕಸ್ಮಾತ್ ಸಂಪತ್ತು ನಿಮ್ಮ ಕೈ ಸೇರಬಹುದು. ಎಲ್ಲಿಗಾದರೂ ದೂರ ಹೋಗಲು ಮನಸ್ಸು ಮಾಡುವಿರಿ. ತಾಯಿಯ ಕಡೆಯಿಂದ ನಿಮಗೆ ಸಹಾಯ ಸಿಗಬಹುದು. ಧಾರ್ಮಿಕ ಕಾರ್ಯದಲ್ಲಿ ನೀವಿಂದು ತೊಡಗಿಕೊಳ್ಳಬಹುದು. ನಿಮಗೆ ಬರಬೇಕಾದ ಆಸ್ತಿಯ ಬಗ್ಗೆ ಮಾತು ನಡೆಯುವುದು. ಆರೋಗ್ಯದ ಮೇಲೆ ಅಲಕ್ಷ್ಯ ಬೇಡ. ಕೆಲವು ಸಂಗತಿಗಳನ್ನು ನಿರೀಕ್ಷಿಸದೇ ಬರಬಹುದು. ನಿಮ್ಮನ್ನು ಕೆಲವರು ಅನಾದರ ಮಾಡಿದಂತೆ ಕಾಣಿಸೀತು. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಮಕ್ಕಳ ವಿದ್ಯಾಭ್ಯಾಸದ ಖರ್ಚು ಅಧಿಕವಾಗಿ ತೋರುವುದು. ವ್ಯಾಪಾರದಲ್ಲಿ ಹೆಚ್ಚಿನ ಲಾಭ ಬರಬಹುದು.
-ಲೋಹಿತ ಹೆಬ್ಬಾರ್ – 8762924271 (what’s app only)