Horoscope: ರಾಶಿ ಭವಿಷ್ಯ; ಅಪರಿಚಿತರ ಜೊತೆ ಜಗಳವಾಗುವುದು-ಎಚ್ಚರ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ಅಪರಿಚಿತರ ಜೊತೆ ಜಗಳವಾಗುವುದು-ಎಚ್ಚರ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶನಿವಾರ (ಜೂನ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:50ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:08 ರಿಂದ 07:45ರ ವರೆಗೆ.

ಧನು ರಾಶಿ: ಇಂದು ನಿಮ್ಮ ನಡತೆಯು ಸಾಮಾನ್ಯರಂತೆ ಕಂಡರೂ ಪ್ರಭಾವವು ಅಧಿಕವಾಗಿರುತ್ತದೆ‌. ಸಾಮಾಜಿಕವಾಗಿ ನಿಮ್ಮ ಕಾರ್ಯವನ್ನು ಗುರುತಿಸಿ ಸಮ್ಮಾನಿಸಬಹುದು. ಹೂಡಿಕೆಯನ್ನು ಮಾಡಿ ಹಣವನ್ನು ಉಳಿಸಿಕೊಳ್ಳುವುದು ಉತ್ತಮ. ಇಂದಿನ ಒತ್ತಡವನ್ನು ಚೆನ್ನಾಗಿ ನಿಭಾಯಿಸಬಲ್ಲಿರಿ. ಉದ್ಯೋಗವನ್ನು ಬಿಡುವ ಮನಸ್ಸಾಗಬಹುದು. ರಮಣೀಯವಾದ ಪ್ರದೇಶಕ್ಕೆ ಹೋಗಬೇಕೆನ್ನುವ ಆಸೆ ಬರಬಹುದು. ಚಂಚಲವಾದ ಮನಸ್ಸಿಗೆ ಧ್ಯಾನ ಪರಿಹಾರವಾಗಲಿದೆ. ನಿಮ್ಮ ಕಷ್ಟಕ್ಕೆ ಬಂದವರು ಆಪ್ತರಾಗಬಹುದು. ಮನೆಯ ಕೆಲಸವು ನಿಧಾನವಾಗಿ ಸಾಗಬಹುದು. ಯಾವುದನ್ನೇ ಆದರೂ ಸಾಮರ್ಥ್ಯದಷ್ಟೇ ಸೇವಿಸಿ. ಇಲ್ಲವಾದರೆ ಅಜೀರ್ಣವಾದೀತು. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಪ್ರೇಮವು ಕೊನೆಗೂ ನಿಮ್ಮ ಇಚ್ಛೆಯಂತೆ ಆಗಲಿದೆ.

ಮಕರ ರಾಶಿ: ನಿಮ್ಮ ಕಾರ್ಯದ ದಕ್ಷತೆಯಿಂದ ಉನ್ನತ ಸ್ಥಾನವು ಸಿಗುವುದು. ಕೆಲವರಿಗೆ ವೃತ್ತಿಯನ್ನು ಬದಲಿಸಬೇಕಾಗಿ ಬರಬಹುದು. ಮನೆಯಲ್ಲಿ ಮಕ್ಕಳ ಜೊತೆ ಸುಂದರ ವಾತಾವರಣವಿರುತ್ತದೆ. ಸಂಗಾತಿಯಿಂದ ದೂರ ಉಳಿಯಬೇಕಾದ ಸ್ಥಿತಿ ಬರಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಆಡಿಕೊಂಡಾರು. ಸಹೋದ್ಯೋಗಿಗಳು ನಿಮ್ಮ ಮೇಲೆ ಕೆಲಸದ ಭಾರವನ್ನು ಹೊರಿಸಬಹುದು. ನಿಮ್ಮ ನೋವನ್ನು ಸಂಗಾತಿಯ ಜೊತೆ ಹಂಚಿಕೊಳ್ಳಿ. ಮನೆಗೆ ಬಂದ ಅತಿಥಿಗಳ ಜೊತೆ ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳು ಶಿಕ್ಷಕರ ಸಹಾಯವನ್ನು ಪಡೆದು ಮುಂದಿನ ಓದಿನ ಬಗ್ಗೆ ಗಮನಹರಿಸಬಹುದು. ಕೆಲಸವು ಅಪೂರ್ಣವಾಗಿ ನೀವು ಆದಷ್ಟು ಬೇಗ ಮುಗಿಸುವ ತವಕದಲ್ಲಿ ಇರುವಿರಿ. ದಾಂಪತ್ಯದ ವಿರಸವು ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಕಠೋರ ಮಾತಿನಿಂದ ವಿಚಲಿತವಾಗುವುದು.

ಕುಂಭ ರಾಶಿ: ಇಂದು ನಿಮ್ಮವರ ಅವಶ್ಯಕತೆ ತಿಳಿಯುವುದು. ಮನೆಯವರ ನೆನಪು ನಿಮ್ಮನ್ನು ಬಹಳ ಕಾಡಬಹುದು. ಸಹೋದರರ ಜೊತೆ ಕಲಹವಾಗಿ ಕೆಲವು ಕಾಲ ಮೌನವಹಿಸುವಿರಿ. ಕೆಟ್ಟವರ ಸಹವಾಸದಿಂದ ಕೆಟ್ಟ ಹೆಸರೇ ಬರಲಿದೆ.‌ ಮನೆಯ ಕಾರ್ಯದಲ್ಲಿ ನೀವು ಭಾಗಿಯಾಗುವಿರಿ. ನಿಗದಿತ ಸಮಯಕ್ಕೆ ನಿಮ್ಮ ಕೆಲಸಗಳು ಮುಗಿಯದು. ಮುಂದೆ ಮಾಡಿದರಾಯಿತು ಎಂಬ ಮಾನಸಿಕ ಸ್ಥಿತಿಯನ್ನು ಬಿಡುವುದು ಒಳ್ಳೆಯದು. ತಂದೆಯಿಂದ ಹಿತವಚನವು ಸಿಗಬಹುದು. ಹಳೆಯ ಸ್ನೇತರು ದೂರವಾಣಿಯ ಮೂಲಕ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಾರು.‌ ತಾಳ್ಮೆಯಿಂದ ಎಲ್ಲವನ್ನೂ ಆಲಿಸಿ. ಅವರಿಗೆ ಪರಿಹಾರ ಸಿಗದಿದ್ದರೂ ಸಮಾಧಾನವಂತೂ ಸಿಗಲಿದೆ. ಅವರಿಗೆ ಬೇಸರವಾಗುವಂತೆ ನೋಡಿಕೊಳ್ಳಬೇಡಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ.

ಮೀನ ರಾಶಿ: ಇಂದು ನೀವು ಭೂಮಿಯ ವಿಚಾರವಾಗಿ ಕಲಹವನ್ನು ಮಾಡಬೇಕಾಗಿಬರಬಹುದು. ನೀವು ಪ್ರಯತ್ನಿಸಿದ ಕಾರ್ಯಗಳು ಫಲಿಸುವುದು ಎಂಬ ನಂಬಿಕೆ ಇರುವುದು. ವಾಹನವನ್ನು ಓಡಿಸುವ ಎಚ್ಚರಿಕೆಯಿಂದ ಇರಿ. ನೀವು ಮಾಡಲು ಹೊರಟ ಕೆಲಸದ ಮೇಲೇ ಹೆಚ್ಚು ಗಮನವಿರಲಿ. ಅನ್ಯ ವಿಚಾರದಲ್ಲಿ ನೀವು ತಲೆ ಹಾಕಿ ಮುಖ್ಯ ಕೆಲಸವನ್ನು ಮರೆಯಬಹುದು. ತಪ್ಪು ನಡೆಯದೇ ಇದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸುಲಭಗೊಳಿಸುವ ವಿಧಾನವನ್ನು ಕಂಡುಕೊಳ್ಳಿ. ಸ್ನೇಹಿತರ ಜೊತೆ ಆಪ್ತಸಮಾಲೋಚನೆ ನಡೆಯಲಿದೆ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಮನೆಯ ಸಮಸ್ಯೆಗೆ ಪರಿಹಾರ ಕಾಣುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವು ಇರುವದು.

ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?