Horoscope Today June 30, 2024: ಮಾನಸಿಕ ಹಿಂಸೆ ಅನುಭವಿಸುವಿರಿ, ನಕಾರಾತ್ಮಕ ಮಾತುಗಳಿಂದ ದೂರವಿರಿ

2024 ಜೂನ್ 30 ದಿನ ಭವಿಷ್ಯ: ಭಾನುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today June 30, 2024: ಮಾನಸಿಕ ಹಿಂಸೆ ಅನುಭವಿಸುವಿರಿ, ನಕಾರಾತ್ಮಕ ಮಾತುಗಳಿಂದ ದೂರವಿರಿ
ಮಾನಸಿಕ ಹಿಂಸೆ ಅನುಭವಿಸುವಿರಿ, ನಕಾರಾತ್ಮಕ ಮಾತುಗಳಿಂದ ದೂರವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 29, 2024 | 6:08 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ (ಜೂನ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಶೋಭನ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 05:28 ರಿಂದ 07:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:13ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ ಸಂಜೆ 05:28ರ ವರೆಗೆ.

ಮೇಷ ರಾಶಿ: ಕೆಲವು ಸಂಗತಿಗಳ ವಿಚಾರದಲ್ಲಿ ನೀವು ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಇಂದು ನಿಮ್ಮ ಪರೀಕ್ಷೆಯ ಕಾಲ. ಅದಕ್ಕೆ ಯೋಗ್ಯವಾದ ಉತ್ತರವನ್ನು ಕೊಡುವ ಭರದಲ್ಲಿ ಅವಘಡಗಳು ಆಗಬಹುದು. ಇಂದು ನೀವು ಧೈರ್ಯದಿಂದ, ಹೆದರದೇ ಕೆಲಸ ಮಾಡುವಿರಿ. ನಿಮ್ಮ ವಿರುದ್ಧ ಮಾತನಾಡುವವರಿಗೆ ಯೋಗ್ಯವಾದ ಉತ್ತರವನ್ನು ಕೊಡುವಿರಿ. ಉದ್ಯೋಗದಲ್ಲಿ ವಿಶ್ವಾಸಾರ್ಹವಾಗಿ ಕೆಲಸವನ್ನು ನಿರ್ವಹಿಸಿ. ಪರರ ಹಣದ ವಿಚಾರದಲ್ಲಿ ಪಾದರ್ಶಕತೆ ಇರಲಿ. ಶಾಂತಚಿತ್ತರಾಗಿ ಯೋಚಿಸಿ. ಅನುಕರಣೆಗಿಂತ ಅನುಸರಣೆ ಬಹಳ ಮುಖ್ಯವಾದ ಸಂಗತಿ. ಕಲಾವಿದರಿಗೆ ಉತ್ತಮ‌ ಅವಕಾಶಗಳು ಸಿಗಲಿವೆ. ದ್ವೇಷವನ್ನು ಬೆಳೆಸಿಕೊಳ್ಳಬೇಡಿ. ಜ್ವರದಂಥ ಆರೋಗ್ಯ ಸಮಸ್ಯೆಗಳು ಬರಬಹುದು. ಯಾರ ಬಗ್ಗೆಯೂ ಪೂರ್ವಾಗ್ರಹಬುದ್ಧಿಯನ್ನು ಬಿಡುವುದು ಒಳ್ಳೆಯದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಅಸೂಯೆಯಿಂದ ನಿಮ್ಮ ನೆಮ್ಮದಿ ಹಾಳಾಗಬಹುದು.

ವೃಷಭ ರಾಶಿ: ನಿಮಲ್ಲಿ ಎಲ್ಲವೂ ಇದ್ದರೂ ಕೊರತೆ ಎಂಬಂತೆ ಇರುವಿರಿ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಕ್ಕಳ ವಿಚಾರವಾಗಿ ಬ್ಯಾಂಕ್ ನಲ್ಲಿ ಸಾಲಮಾಡಬೇಕಾಗಿಬರಬಹುದು. ಮಾಡಬೇಕಾಗಬಹುದು. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ಆರ್ಥಿಕವಾಗಿ ಸಬಲರಾಗಲು ಸಂಗಾತಿ ಜತೆ ಚರ್ಚೆ ನಡೆಸಲಿದ್ದೀರಿ. ಇಂದು ಹೆಚ್ಚಿನ ಕೆಲಸವನ್ನು ಭಯದಲ್ಲಿಯೇ ಮಾಡುವಿರಿ. ದಾಂಪತ್ಯದಲ್ಲಿ ಅನ್ಯೋನ್ಯತೆ ಇರಲಿದೆ. ಸರಳತೆಯನ್ನು ರೂಢಿಸಿಕೊಳ್ಳುವಿರಿ. ಎಲ್ಲವನ್ನೂ ಅನುಮಾನ ಕನ್ನಡಕವನ್ನು ಹಾಕೊಕೊಂಡು ನೋಡಬೇಡಿ. ಬರಲಿರುವ ಜವಾಬ್ದಾರಿಯನ್ನು ಜಾಣತನದಿಂದ ತಪ್ಪಿಸಿಕೊಳ್ಳುವಿರಿ. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ಅನ್ಯರ ಜೊತೆ ಸಮಾನಸ್ಥಾನವನ್ನು ಗಳಿಸುವುದು ಕಷ್ಟವಾಗುವುದು.

ಮಿಥುನ ರಾಶಿ: ಇಂದು ನಿಮ್ಮ ಮಕ್ಕಳ ವಿಚಾರದಲ್ಲಿ ನಿಮಗೆ ಬೇಸರವಾಗಲಿದೆ. ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಇಂದು ನಿಮ್ಮ ಸಂಸಾರದ ಬಗ್ಗೆ ಯಾರ ಬಳಿಯಾದರೂ ಹಂಚಿಕೊಳ್ಳಬಯಸುವಿರಿ. ಬದಲಾವಣೆಯನ್ನು ಇಷ್ಟಪಡಲಿದ್ದೀರಿ ನೀವಿಂದು. ಮನೆಯಲ್ಲಿ ಅಗತ್ಯ ಇರುವ ಕೆಲಸಗಳನ್ನು ಮಾಡಿ ಮುಗಿಸುವಿರಿ. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ಧಾರ್ಮಿಕ ಕಾರ್ಯಗಳಲ್ಲಿ ಇಂದು ನೀವು ಭಾಗವಹಿಸುವಿರಿ. ಪುಣ್ಯಸ್ಥಳಗಳಿಗೆ ಹೋದರೆ ಮನಸ್ಸಿಗೆ ಸಂತೋಷವಾಗಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯದ ಸೂಚನೆ ಸಿಗಬಹುದು. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಸತ್ಯವನ್ನು ಮುಚ್ಚಿಡಲು ಹೋಗಬೇಡಿ. ಸಹಾಯಕ್ಕೆ ಕೃತಜ್ಞತೆ ಇರಲಿ. ನೀವು ಪ್ರೇಮಿಗಳಿಗೆ ದೂರವಾಗುವ ಸಾಧ್ಯತೆ ಇದೆ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ. ಏಕಕಾಲಕ್ಕೆ ಎಲ್ಲವೂ ನಿಮ್ಮದಾಗದು.

ಕಟಕ ರಾಶಿ: ನಿಮಗೆ ಅವಶ್ಯಕ ವಸ್ತುಗಳ ಬಗ್ಗೆ ಅತಿಯಾದ ಇಚ್ಛೆ ಇರಲಿದೆ. ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೇರವಾದ ಮಾತುಗಳಿಂದ ಬೇರೆಯವರಿಗೆ ನೋವುಂಟಾಗಬಹುದು. ಹೇಳಬೇಕಾದುದನ್ನು ಹೇಳುವರೀತಿಯಲ್ಲಿಯೇ ಹೇಳಿ ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳಬಹುದು. ಓರ್ವ ಅಪರಿಚಿತನನ್ನು ನೀವಿಂದು ಪ್ರೀತಿಸಲು ಆರಂಭಿಸುವಿರಿ. ಅನಗತ್ಯ ಚರ್ಚೆಗಳಿಗೆ ಅವಕಾಶವನ್ನು ನೀಡಿ ವೈಮನಸ್ಯವನ್ನು ತಂದುಕೊಳ್ಳಬೇಡಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಅನವಶ್ಯಕ ಸಲಹೆಗಳನ್ನು ಕೊಡಲು ಬರಬಹುದು. ಪ್ರತ್ಯುತ್ತರಗಳನ್ನು ನೀಡುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದುವ ಮನಸ್ಸು ಮಾಡುವರು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ಎಲ್ಲ ಸಮಯಕ್ಕೂ ನಿಮಗೆ ಸಹಕಾರ ಸಿಗುತ್ತದೆ ಎಂಬ ಯೋಚನೆ ಬೇಡ. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಇಂದು ಬಹಳ ಆಯಾಸವನ್ನು ಕೊಡಬಹುದು.

ಸಿಂಹ ರಾಶಿ: ಇಂದು ನಿಮ್ಮ ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ನಿಮ್ಮ ವಿವಾಹದ ಪ್ರಸ್ತಾಪವು ನಿಮಗೆ ಖುಷಿ ಕೊಡುವುದು. ಇಂದು ಏಕಾಗ್ರತೆಯ ಕೊರತೆ ಕಾಣಿಸಲಿದೆ. ವಿವಾಹಕ್ಕೆ ಸಂಬಂಧಿಸಿದಂತೆ ಬೇಸರವಾಗಿ ಮನೆಯಲ್ಲಿ ಕಲಹವು ಆಗಬಹುದು. ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಬಹುದು. ನಿಮಗೆ ಸಂಬಂಧಿಸಿದ ವಿಚಾರಗಳಿಗೆ ಮಾತ್ರ ನಿಮ್ಮ ವ್ಯವಹಾರಗಳಿರಲಿ. ಹತಾಶೆಯ ಮನೋಭಾವ ಬೇಡ. ಇಲ್ಲವಾದರೆ ಅಪಮಾನಕ್ಕೆ ಒಳಗಾಗಬೇಕಾದೀತು. ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಬೇಡಿ. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಯೋಗ್ಯವಾದ ಮಾತುಗಳಿಂದ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಮಿತ್ರರಿಂದ ಆಪತ್ಕಾಲದಲ್ಲಿ ಸಹಕಾರ ಸಿಗಲಿದೆ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು. ಮಾತಿಗೆ ಮರುಳಾಗಿ ನಿಮ್ಮ ಜವಾಬ್ದಾರಿಯನ್ನು ಮರೆಯುವಿರಿ.

ಕನ್ಯಾ ರಾಶಿ: ನಿಮ್ಮ ಮೇಲೆ ಕಳ್ಳತನದ ಮಾತುಗಳು ಕೇಳಿಬರಬಹುದು. ನಿಮ್ಮ ಮೇಲಧಿಕಾರಿಗಳನ್ನು ನಿಮ್ಮ ಕಡೆಗೆ ಇರುವಂತೆ ನೋಡಿಕೊಳ್ಳುವಿರಿ. ಯಾವುದಕ್ಕೂ ಪ್ರಯಾಣದಲ್ಲಿ ಜಾಗರೂಕರಾಗಿ. ನಡೆದಾಡುವಾಗಲೂ ಸುತ್ತ ನೋಡಿಕೊಂಡು ಹೆಜ್ಜೆ ಇಡಿ. ಪ್ರಭಾವೀ ವ್ಯಕ್ತಿಗಳು ನಿಮ್ಮ ಜೊತೆ ಸಲಹೆಗೆ ಬರಬಹುದು. ನಿರಪರಾಧಿಯಾಗಲು ಸಮಯವನ್ನೂ ತೆಗದೆಕೊಳ್ಳಬೇಕಾದೀತು. ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ತಾಳ್ಮೆಯಿಂದ ಕಾರ್ಯದಲ್ಲಿ ತೊಡಗಿದರೆ ಕೆಲಸವು ಮುಕ್ತಾಯವಾದಂತೆ. ಇಂದು ನಿಮಗೆ ಜನರಿಂದ ಪ್ರಶಂಸೆ ಸಿಗಬಹುದು. ವಸ್ತ್ರಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ನಿಮ್ಮ ಸ್ಥಾನವನ್ನು ಕಳೆದುಕೊಳ್ಳುವುದು ಬೇಡ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ.

ತುಲಾ ರಾಶಿ: ನೀವು ಪಾಲುದಾರಿಕೆಯನ್ನು ಬಿಡುವ ಬಗ್ಗೆ ಯೋಚಿಸುವಿರಿ. ನಿಮ್ಮೊಳಗೆ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಹೊಸ ಕೆಲಸದಲ್ಲಿ ಗೊಂದಲಗಳು ಇರಬಹುದು. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಕಾರ್ಯಗಳನ್ನು ಹಿಂಜರಿಕೆ ಇಲ್ಲದೇ ಮಾಡುವಿರಿ. ಪ್ರದರ್ಶನ. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಪಡೆಯಿರಿ. ದೂರದ ಮಿತ್ರರು ನಿಮಗೆ ಅಗತ್ಯವಿರುವ ಸಹಕಾರವನ್ನು ನೀಡುವರು. ಶ್ರಮದ ಕೆಲಸವು ಆಯಾಸವನ್ನು ತರಲಿದೆ‌. ಸಾಧ್ಯವಾದಷ್ಟು ಶಿಸ್ತನ್ನು ಬೆಳೆಸಿಕೊಳ್ಳಿ. ನಿಮಗೆ ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗಿ ಬರಬಹುದು. ತಪ್ಪಿಸಿಕೊಳ್ಳಲೂ ಕಷ್ಟವಾದೀತು. ಹೆಚ್ಚಿನ ಆದಾಯವು ಅನಿವಾರ್ಯವಾಗಿದ್ದು, ಆದಾಯದ ಮೂಲವನ್ನು ಹುಡುಕುವಿರಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಉದ್ವೇಗದಲ್ಲಿ ಇರುವಂತೆ ಕಾಣಿಸುವುದು. ಆಂತರಿಕ ಕಲಹವು ಬಹಿರಂಗವಾಗಬಹುದು.

ವೃಶ್ಚಿಕ ರಾಶಿ: ಇಂದು ನಿಮ್ಮ ಪರಿಶ್ರಮದ ಬಗ್ಗೆ ಹೆಚ್ಚು ವಿಶ್ವಾಸವಿರಲಿದೆ. ಸ್ವಾವಲಂಬಿಯಾಗಲು ಎಲ್ಲ ರೀತಿಯಿಂದ ಪ್ರಯತ್ನಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ನಿಮ್ಮ ಉದ್ದೇಶಗಳನ್ನು ಬಿಟ್ಟುಕೊಡಬೇಡಿ. ಅದಕ್ಕೆ ಅಡ್ಡಗಾಲು ಹಾಕಿಯಾರು. ನೀವು ಏನನ್ನಾದರೂ ಪಡೆಯಲು ಪ್ರಯತ್ನಿಸಲೇ ಬೇಕು. ನಿಂತ ನೀರಾದರೆ ಕ್ರಿಮಿಗಳು ಏಳಬಹುದು. ನಿಮ್ಮ ಮೇಲಧಿಕಾರಿಗಳು ನಿಮಗೆ ಏನನ್ನೋ ಹೇಳಲಿದ್ದಾರೆ ಎಂದು ಅನ್ನಿಸಬಹುದು. ಮಕ್ಕಳ ಜೊತೆ ಕಾಲವನ್ನು ಕಳೆದು ಸಂತೋಷಪಡುವಿರಿ. ಸಮಯವನ್ನು ವ್ಯರ್ಥಮಾಡದೇ ಸದುಪಯೋಗದ ಬಗ್ಗೆ ಗಮನಹರಿಸಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶಿಸ್ತಿನ ಹಾಗೂ ವೇಗದ ಕೆಲಸವನ್ನು ಕಂಡು ಪ್ರಶಂಸಿಸುವರು. ಅಗ್ಗದ ಬೆಲೆಗೆ ವಸ್ತುವನ್ನು ಕೊಂಡು ಹಾಳು ಮಾಡಿಕೊಳ್ಳುವಿರಿ. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ.

ಧನು ರಾಶಿ: ಇಂದು ನೀವು ಮನೆಯನ್ನು ಸುಂದರವಾಗಿಡಲು ತೊಡಗುವಿರಿ. ಮಕ್ಕಳಿಂದ ನಿಮಗೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಉದ್ಯೋಗದ ಸ್ಥಾನದಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳನ್ನು ನಿಮಗಾಗದವರು ಹರಡುವರು. ಮಕ್ಕಳಿಂದ ನಿಮಗೆ ವಿದ್ಯಾಭಾಸದ ಕಾರಣಕ್ಕೆ ಸಂತೋಷಕರವಾದ ವಾರ್ತೆಯು ಸಿಗಲಿದೆ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ಪ್ರಯಾಣದಲ್ಲಿ ಆದ ಪರಿಚಯವು ಮುಂದುವರಿಯುವುದು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಆಲಸ್ಯವನ್ನು ಬಿಟ್ಟು ಮುನ್ನಡೆಯುವ ತೀರ್ಮಾನವನ್ನು ಮಾಡಲಿದ್ದೀರಿ. ಕೋಪವನ್ನು ನಿಯಂತ್ರಿಸಿಕೊಂಡು, ನಿಮ್ಮ ಮಾತಿನಲ್ಲಿ ಎಂದಿನ ಮಾರ್ದವವನ್ನು ಇಟ್ಟುಕೊಳ್ಳಿ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಬಹುದು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಮಾತನಾಡುವಾಗ ಜಾಗರೂಕತೆ ಅವಶ್ಯಕ.

ಮಕರ ರಾಶಿ: ಇಂದು ನೀವು ಮಾನಸಿಕವಾಗಿ ಹಿಂಸೆಯನ್ನು ಅನುಭವಿಸಲು ಕಷ್ಟವಾಗುವುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ. ನೀವು ಇಂದು ಸಾಲವನ್ನು ಪಡೆಯಲು ಮಾಡಿದ ಪ್ರಯತ್ನವು ಯಶಸ್ವಿಯಾಗುವುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡುವುದು ಒಳ್ಳೆಯದು. ಭೂಮಿಯ ವ್ಯವಹಾರದಲ್ಲಿ ನಷ್ಟವಾಗಬಹುದು. ವಿದ್ಯೆಗೆ ಸಮಾನವಾದ ಉದ್ಯೋಗವನ್ನು ಮಾಡುವುದು ಒಳ್ಳೆಯದು. ಮನಸ್ಸು ದುರ್ಬಲವಾದ ಕಾರಣ ಅದನ್ನು ಸಬಲವಾಗಿಸಿಕೊಳ್ಳುವುದು. ಮಾಡಿದ ಕೆಲಸಕ್ಕೆ ಕೂಡಲೆ ಫಲ ಸಿಗಬೇಕು ಎನ್ನುವ ವೇಗದಿಂದ ಹೊರಬರುವುದು ಉತ್ತಮ. ಯಾರಾದರೂ ಚುಚ್ಚಿ ಮಾತನಾಡಬಹುದು. ನಿಮ್ಮ ಬಗ್ಗೆ ನಿಮಗೆ ಹೆಮ್ಮೆ ಬರುವುದು. ಕೊನೆಗೆ ಅನುಭವಿಸುವವರು ತಾವೇ ಆಗಿರುತ್ತೀರಿ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಉದ್ಯಮಿಗಳ ಜೊತೆ ಇಂದು ಕಾಲ ಕಳೆಯುವಿರಿ.

ಕುಂಭ ರಾಶಿ: ಇಂದು ನೀವು ಎಲ್ಲವನ್ನೂ ಶಕ್ತಿಮೀರಿ ಕಾರ್ಯದಲ್ಲಿ ಪ್ರಯತ್ನಶೀಲರಾಗುವಿರಿ. ಆಲಸ್ಯವು ಒಳ್ಳೆಯದಲ್ಲ‌. ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ಯಾವುದು ಎಷ್ಟು ಪ್ರಾಮುಖ್ಯ ಎಂಬ ಆಲೋಚನೆ ಇರಲಿ. ಕೊಟ್ಟ ಜವಾಬ್ದಾರಿಯನ್ನು ಶಕ್ತಿಮೀರಿ ಪ್ರಯತ್ನಿಸುವಿರಿ. ಆಲಸ್ಯವವನ್ನು ಕಡಿಮೆ ಮಾಡಿಕೊಳ್ಳುತ್ತ ಬನ್ನಿ. ಇಲ್ಲವಾದರೆ ನಿಮ್ಮ ಗುರಿಯ ಸಾಧನೆಗೆ ಅದೇ ಅಡ್ಡಿಯಾಗಬಹುದು. ಎಲ್ಲರನ್ನೂ ಬಿಟ್ಟು ದೂರದಲ್ಲಿ ಇರುವುದುವನಿಮಗೆ ಇಷ್ಟವಾಗದು. ಕಚೇರಿಯಲ್ಲಿ ಆಗುವ ಸಣ್ಣ ತಪ್ಪೂ ಬೇರೆಯವರ ಕಿಬಿಗೆ ಬಿದ್ದು ದೊಡ್ಡದಾಗಬಹುದು. ಯಾರ ಮಾರ್ಗದರ್ಶನವನ್ನೂ ಕೇಳಲು ಇಷ್ಟಪಡಲಾರಿರಿ. ಹಣಕಾಸಿನಲ್ಲಿ ಸುಧಾರಣೆಯನ್ನು ಮಾಡಿಕೊಳ್ಳಲು ಮಾರ್ಗಗಳನ್ನು ಹುಡುಕುವಿರಿ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳಿಂದ ಬಾಧೆಯ ಆಗುವುದು ಗೊತ್ತಾಗುವುದು.

ಮೀನ ರಾಶಿ: ಇಂದು ನೀವು ಇನ್ನೊಬ್ಬರ ಬಗ್ಗೆ ಸಲ್ಲದ ಮಾತುಗಳನ್ನು ಆಡುವಿರಿ. ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆ ಇಲ್ಲ. ನಿಮ್ಮವರಿಂದ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಸಲಹೆಗಳು ಬರಬಹುದು. ಇತರರು ನಿಮ್ಮ ಕುರಿತು ಸಲ್ಲದ ಮಾತುಗಳನ್ನು ಆಡಬಹುದು. ಪ್ರತ್ಯುತ್ತರವನ್ನು ಕೊಡುವ ಅವಶ್ಯಕತೆಯಿಲ್ಲ. ನಿಮ್ಮ ನಿತ್ಯದ ಕೆಲಸದ ವಿಧಾನವನ್ನು ಮತ್ತಷ್ಟು ಸರಳಮಾಡಿಕೊಳ್ಳಲು ಬಯಸುವಿರಿ. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಆಪ್ತರ ಭೇಟಿಯಾಗಬಹುದು. ಉದ್ಯಮದಲ್ಲಿ ನಿಮಗೆ ಪ್ರತಿಸ್ಪರ್ಧಿ ಹುಟ್ಟಿಕೊಂಡಿದ್ದರಿಂದ ಸಣ್ಣ ಕಿರಿಕಿರಿ ಆರಂಭವಾಗಬಹುದು. ದಾಕ್ಷಿಣ್ಯದಿಂದ ಪಡೆದುಕೊಳ್ಳಬೇಕಾದುದನ್ನು ಪಡೆದುಕೊಳ್ಳಲಾರಿರಿ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಹಣದ ವಿಚಾರದಲ್ಲಿ ನಿಮಗೆ ಲೋಭವು ಇರದು. ನೀವು ಇಂದು ಯಾರ ಮಾತನಲ್ಲಿ ನಂಬಿಕೆ ಇಡಲಾರಿರಿ.

ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ