Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿ ಭವಿಷ್ಯ; ಸಣ್ಣ ವಿಚಾರಗಳನ್ನು ದೊಡ್ಡ ಮಾಡಿಕೊಳ್ಳುವಿರಿ

ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 13 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ಸಣ್ಣ ವಿಚಾರಗಳನ್ನು ದೊಡ್ಡ ಮಾಡಿಕೊಳ್ಳುವಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: May 13, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:42 ರಿಂದ 09:18ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:29ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:40ರ ವರೆಗೆ.

ಸಿಂಹ ರಾಶಿ: ಇಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಯೋಜನೆಯನ್ನು ರೂಪಗೊಳಿಸಲಾಗದು. ಸಾಹಸ ಪ್ರವೃತ್ತಿಯುಳ್ಳವರಿಗೆ ಕಾಡುಗಳನ್ನು ಸುತ್ತುವ ಆಸೆಯಾಗಬಹುದು. ಆಪ್ತರಿಂದ ವಂಚನೆಗೆ ಆಗುವ ಸಂಭವವಿದೆ. ನಿದ್ರಾಹೀನತೆಯಿಂದ ಆಲಸ್ಯ ಉಂಟಾಗಬಹುದು. ದಿನದ ಆರಂಭದಲ್ಲಿರುವ ಅನಾರೋಗ್ಯವು ದಿನಾಂತ್ಯದಲ್ಲಿ ಕಡಿಮೆಯಾಗಲಿದೆ. ತಂದೆಯಿಂದ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದೆ ಲಾಭವಾಗಲಿದೆ. ನಿಮ್ಮ ಉತ್ಪಾದನೆಯು ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ಸ್ವಂತ ವಿಚಾರಗಳನ್ನು ಚಿಂತಿಸುವುದು ನಿಮಗೆ ಕಷ್ಟವಾಗುವುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಎಲ್ಲರಿಂದ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಯಾರ ಮೇಲೇ ರೇಗದೇ ಇರುವುದು ನಿಮಗೆ ಇಷ್ಟವಾದೀತು. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು.

ಕನ್ಯಾ ರಾಶಿ: ನಿಮ್ಮ ಅಂತರಂಗವನ್ನು ನೀವೇ ನೋಡಿಕೊಳ್ಳುವುದು ಉತ್ತಮ. ಅನ್ಯರು ಹೇಳಿದರೆ ಸಿಟ್ಟಾಗಬಹುದು. ವಿದ್ಯಾರ್ಥಿಗಳಿಗೆ ಗೊಂದಲವಿರಲಿದೆ. ಹೊಸ ಉದ್ಯೋಗಕ್ಕೆ ಸೇರುವವರಿಗೆ ಅವಕಾಶಗಳು ಸಿಗಲಿವೆ. ಬಂಧುಗಳು ನಿಮ್ಮನ್ನು ಬೇಸರಿಸುವರು. ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ನಿಮ್ಮ ಯೋಜನೆಯಿಂದ ಪ್ರಶಂಸಯು ಬರಲಿದೆ. ಭೂಮಿಯ ವ್ಯವಹಾರದಿಂದ ನಿಮಗೆ ನಷ್ಟವಾಗಲಿದೆ. ಪ್ರಭಾವಿ ವ್ಯಕ್ತಿಗಳ ಸಹಾಯಕರಾಗಿ ಹೋಗುವ ಅವಕಾಶಗಳು ಸಿಗಬಹುದು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಮಕ್ಕಳ ಅನಾರೋಗ್ಯದಿಂದ ನೀವು ಆತಂಕಕ್ಕೆ ಒಳಗಾಗುವಿರಿ. ವಿದೇಶೀ ವ್ಯಾಪಾರದಲ್ಲಿ ಅನಿಶ್ಚಿತತೆ ನಿಮ್ಮನ್ನು ಕಾಡಬಹುದು. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಗೊತ್ತಿದ್ದರೂ ಗೊತ್ತಿಲ್ಲದಂತೆ ಇರುವಿರಿ. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು.

ತುಲಾ ರಾಶಿ: ಇಂದು ಕೋಪವನ್ನು ಎಷ್ಟೇ ಕಡಿಮೆ ಮಾಡಬೇಕು ಎಂದರೂ ಒಂದಲ್ಲ ಒಂದು ರೀತಿಯಲ್ಲಿ ಅದು ಬರುತ್ತದೆ. ಪಾಲುದಾರಿಕೆಯಲ್ಲಿ ಉಂಟಾಗುವ ಕಲಹವನ್ನು ಆರಂಭದಲ್ಲಿಯೇ ನಿಲ್ಲಿಸಿ. ಯಾರನ್ನೋ ಮೆಚ್ಚಿಸಲು ಹೋಗಿ ಸಿಕ್ಕಿಹಾಕಿಕೊಳ್ಳಬಹುದು. ತಂದೆಯಿಂದ ನಿಮಗೆ ಧನಸಹಾಯವಾಗಲಿದೆ. ಸಾಮಾಜಿಕ ಕಾರ್ಯಗಳಿಂದ ಸಮ್ಮಾನಗಳು ಸಿಗಲಿವೆ. ಮಾತುಗಳನ್ನು ಅಳೆದು ತೂಗಿ ಆಡುವುದು ಒಳ್ಳೆಯದು. ಸಜ್ಜನರ ಸಹವಾಸ ಇಂದು ನಿಮಗೆ ಸಿಗಲಿದೆ. ಆಪತ್ಕಾಲಕ್ಕೆ ಬೇಕಾದ ಹಣವನ್ನು ತೆಗೆದಿರಿಸುವಿರಿ. ಸ್ತ್ರೀಯರು ಆಭರಣಗಳನ್ನು ಜತನದಿಂದ ಕಾಪಾಡಿಕೊಳ್ಳಿ. ಚರಾಸ್ತಿಯು ಬೇಜವಾಬ್ದಾರಿಯಿಂದ ಅನ್ಯರ ಪಾಲಾಗಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ. ಇನ್ನೊಬ್ಬರನ್ನು ನೋಡಿ ಕಲಿಯುವ ವಿಚಾರವು ಸಾಕಷ್ಟಿರಬಹುದು. ಸಾಲ ಪಡೆದರವರ ಹುಡುಕಾಟವನ್ನು ಮಾಡುವಿರಿ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯು ಇರಲಿದೆ.

ವೃಶ್ಚಿಕ ರಾಶಿ: ಇಂದು ಮನಸ್ಸಿನಲ್ಲಿಯೇ ಸಂಕಟವನ್ನು ಅನುಭವಿಸುತ್ತ ಕಳೆಯುವಿರಿ. ನೂತನ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಯಂತ್ರಗಳಿಂದ ನಿಮಗೆ ನೋವಾಗುವ ಸಾಧ್ಯತೆ ಇದೆ. ದೂರದ ಪ್ರದೇಶಗಳಿಗೆ ಹೋಗಿ ನಿರಾಸೆ ಆಗಬಹುದು. ಮಿತ್ರರ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಸಣ್ಣ ವಿಚಾರಗಳನ್ನು ದೊಡ್ಡ ಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಹೆಚ್ಚಿನ ಸ್ಥಾನವನ್ನು ಪಡೆಯಲು ಅವಕಾಶವಿದೆ. ನಿಮ್ಮ ಸಂಗಾತಿಯ ಮೇಲೆ ಕಛೇರಿಯಲ್ಲಿ ಆದ ವೈಮನಸ್ಯದಿಂದ ಮುನಿಸಿಕೊಳ್ಳಬಹುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆದುಕೊಳ್ಳಿ. ಪ್ರತಿಫಲದ ನಿರೀಕ್ಷೆ ಇಲ್ಲದೇ ನೀವು ಸ್ನೇಹಿತನಿಗೆ ಸಹಾಯವನ್ನು ಮಾಡುವಿರಿ. ನಿರ್ದಿಷ್ಟ ಕ್ರಮವನ್ನು ಅಳವಡಿಸಿಕೊಂಡು ಉದ್ಯಮವನ್ನು ಕ್ರಮಬದ್ಧವಾಗಿಸಿ. ಆರೋಗ್ಯದ ಸಮಸ್ಯೆಯಿರುವ ಕಾರಣ ಸಹೋದ್ಯೋಗಿಗಳ ಸಹಕಾರವು ನಿಮಗೆ ಸಿಗಲಿದೆ. ಮಾತಿನಿಂದ ಇನ್ನೊಬ್ಬರು ನಿಮ್ಮನ್ನು ದ್ವೇಷಿಸುವರು.

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ