Horoscope Today May 12, 2024: ದಿನಭವಿಷ್ಯ, ಆತುರ, ಅತಿಯಾದ ಆತ್ಮವಿಶ್ವಾಸ ಎರಡೂ ನಿಮಗೆ ಅಪಾಯಕಾರಿ

2024 ಮೇ 12ರ ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಶನಿವಾರದ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today May 12, 2024: ದಿನಭವಿಷ್ಯ, ಆತುರ, ಅತಿಯಾದ ಆತ್ಮವಿಶ್ವಾಸ ಎರಡೂ ನಿಮಗೆ ಅಪಾಯಕಾರಿ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: May 11, 2024 | 9:39 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಸುಕರ್ಮಾ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಸಂಜೆ 05:16 ರಿಂದ 08:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:29 ರಿಂದ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ.

ಮೇಷ ರಾಶಿ: ಇಂದು ಪಾಲುದಾರಿಕೆಗೆ ಅವಕಾಶ ಸಿಕ್ಕರೆ ಒಪ್ಪುಕೊಳ್ಳಿ, ಹೊಸ ದಾರಿಗಳೂ ಸಿಗುತ್ತವೆ. ವಿದ್ಯಾರ್ಥಿಗಳು ಶಿಕ್ಷಕರಿಂದ ಪ್ರಶಂಸೆಗೆ ಪಾತ್ರರಾಗಬಹುದು. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಸಹೋದರರು ನಿಮ್ಮನ್ನು ವಿಚಾರಿಸಿಕೊಂಡಾರು. ಮಾತನ್ನು ತಪ್ಪಿದ ಅಪವಾದವು ನಿಮಗೆ ಬರಬಹುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ಅನಿರೀಕ್ಷಿತ ಘಟನೆಯಿಂದ‌ ಸ್ತಬ್ಧವಾಗುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ಸಮಯ ಸಂದರ್ಭ ನೋಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಸಿಟ್ಟಾಗುವ ಸಂದರ್ಭದಲ್ಲಿ ನೀವು ತಾಳ್ಮೆ ಬಿಡಬಾರದು.

ವೃಷಭ ರಾಶಿ: ಗೊತ್ತಿಲ್ಲದ ಕಾರ್ಯವನ್ನು ಒಪ್ಪಿಕೊಂಡು ಅನಂತರ ಕಳವಳಗೊಳ್ಳುವಿರಿ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕೆ ಕಷ್ಟಪಡುವರು. ಬಂಧುಗಳು ನಿಮ್ಮನ್ನು ನಿರ್ಲಕ್ಷ್ಯ ಮಾಡಬಹುದು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲು ಸಾಧ್ಯವಾಗದೇ ಹೋಗಬಹುದು. ನಿಮ್ಮದೇ ಆದ ಸ್ವಂತ ಆಲೋಚನೆ ಇರಲಿ. ಎಲ್ಲದಕ್ಕೂ ಯಾರನ್ನೋ ಆಶ್ರಯಿಸುವುದು ಬೇಡ. ಮಾತಿಗೆ ಉದ್ಯೋಗಕ್ಕೆ ಸೇರಿಕೊಳ್ಳುವುದು ಬೇಡ. ನಿಮ್ಮಿಂದ ಆಗದ್ದನ್ನು ಇತರರೂ ಮಾಡಲಾರರು. ಇಂದು ಹೊಂದಾಣಿಕೆ ಕೆಲವು ಕಡೆ ಅನಿವಾರ್ಯವಾಗಬಹುದು.

ಮಿಥುನ ರಾಶಿ: ಉದ್ಯೋಗಿಗಳಲ್ಲಿ ಉತ್ಸಾಹ ಹೆಚ್ಚಿರುತ್ತದೆ. ಎಂತಹ ಕೆಲಸವನ್ನೂ ಮಾಡಲು ಹಿಂದೇಟು ಹಾಕುವುದಿಲ್ಲ. ವೃತ್ತಿಜೀವನದಲ್ಲಿ ಕೆಲವು ದೊಡ್ಡ ಬದಲಾವಣೆಗಳು ನಿಮ್ಮ ಪರವಾಗಿರಲಿದೆ. ಸಾಮಾಜಿಕ ಮತ್ತು ರಾಜಕೀಯ ಮಟ್ಟದಲ್ಲಿ ಯಾವುದೇ ರೀತಿಯ ವೇದಿಕೆಯನ್ನು ಹಂಚಿಕೊಳ್ಳುವಾಗ, ನಿಮ್ಮ ಮಾತುಗಳ ಬಗ್ಗೆ ವಿಶೇಷ ಗಮನವಿರುವುದು ಅಗತ್ಯ. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಯಾರ ಪ್ರಶಂಸೆಗೂ ಕಾಯದೇ ಚೆನ್ನಾಗಿ ಕರ್ತವ್ಯವನ್ನು ಮಾಡುವಿರಿ. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಕಲಾವಿದರು ಅವಕಾಶದ ನಿರೀಕ್ಷೆಯಲ್ಲಿ ಇರುವರು.

ಕಟಕ ರಾಶಿ: ಇಂದು ಮೇಲಧಿಕಾರಿಗಳ ಜೊತೆ ಪ್ರಯಾಣ ಮಾಡುವ ಸಂಭವವಿದೆ. ಸಾಮಾಜಿಕವಾಗಿ ಯಾವುದೇ ಕೆಲಸವನ್ನು ಮಾಡಲು ಅದರ ಬಗ್ಗೆ ಮಾಹಿತಿ ತಿಳಿದಿರಲಿ. ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರೆ ನಿಮಗೆ ಇನ್ನೂ ಹೆಚ್ಚಿನ ತಯಾರಿ ಬೇಕೆನಿಸಬಹುದು. ಹಣಕಾಸಿನ ಹರಿವು ಸರಿಯಾದ ಮಾರ್ಗದಲ್ಲಿ ಬರವಂತೆ ನೋಡಿಕೊಳ್ಳಿ. ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಉದ್ಯಮದಲ್ಲಿ ನಿಮ್ಮ ದಾರಿಯನ್ನು ಯಾರಾದರೂ ತಪ್ಪಿಸಿಯಾರು. ಸಂಗಾತಿಯಿಂದ ಅವಮಾನವಾಗುವುದು. ಭೂಮಿಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹೋಗುವುದು ಬೇಡ. ಸಹೋದರನಿಂದ ಉಡುಗೊರೆಯು ಸಿಗಬಹುದು.‌ ನಿಮ್ಮ ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು.

ಸಿಂಹ ರಾಶಿ: ನೌಕರರು ಇಂದು ದುಡುಕಿ ಸಿಕ್ಕ ಕೆಲಸವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಪ್ರತಿಯೊಬ್ಬರೂ ನಿಮ್ಮ ಕೆಲಸವನ್ನು ಪ್ರಶಂಸಿಸಲು ಎಂದಿಗೂ ಆಯಾಸಗೊಳ್ಳುವುದಿಲ್ಲ. ಸಾಮಾಜಿಕ ಮತ್ತು ರಾಜಕೀಯ ಮಟ್ಟದಲ್ಲಿ ನಿಮ್ಮ ಕೆಲಸವು ನಿಮ್ಮನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ನಿಯಮಿತ ಆಹಾರದಿಂದ ನಿಮಗೆ ಸೌಖ್ಯವು ಸಿಗಬಹುದು. ನೂತನ ವಾಹನದಿಂದ ಅಹ್ಲಾದಕರವಾಗಿ ಇರುವಿರಿ. ಸಂಗಾತಿಯ ಸಣ್ಣ ಮಾತೂ ನಿಮಗೆ ದೋಷವಾಗಿ ಕಾಣಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಎರಡು ದೋಣಿಯ ಮೇಲೆ ಕಾಲಿಟ್ಟು ಅತಂತ್ರವಾಗುವುದು ಬೇಡ. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ಕೃತಜ್ಞತೆಯನ್ನು ಇಟ್ಟುಕೊಳ್ಳುವುದು ಕಷ್ಟವಾದೀತು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ.

ಕನ್ಯಾ ರಾಶಿ: ವ್ಯಾಪಾರಕ್ಕೆ ಸಂಬಂಧಿಸಿದ ಹೂಡಿಕೆಯನ್ನು ಹೆಚ್ಚು ಮಾಡುವಿರಿ. ಉದ್ಯೋಗಸ್ಥರಿಗೆ ಆತುರ ಮತ್ತು ಅತಿಯಾದ ಆತ್ಮವಿಶ್ವಾಸ ಎರಡೂ ನಿಮಗೆ ಅಪಾಯಕಾರಿ. ನಿಮ್ಮ ಅಹಂಕಾರವೇ ಸೋಲಿಗೆ ಕಾರಣವಾಗುವುದು. ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯ ನಿರ್ಮಾಣಕ್ಕೆ ತಡೆ ಬಂದೀತು. ನಿಮ್ಮ ಮಾತುಗಳು ಪಾಲನೆಯಗದೇ ಇರಬಹುದು. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳುವುದು ಕಷ್ಟವಾಗಬಹುದು. ಸಮೀಪದಲ್ಲಿ ಇರುವವರನ್ನು ನಿಮ್ಮ ಕೆಲಸಕ್ಕೆ ಬಳಸಿಕೊಳ್ಳುವಿರಿ.

ತುಲಾ ರಾಶಿ: ಹಲವು ರೀತಿಯ ಒತ್ತಡದಿಂದ ನೀವು ಕೆಲಸದ ಬದಲಾವಣೆಯನ್ನು ಬಯಸುವಿರಿ. ನಿಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರಿ. ಕುಟುಂಬ ಮತ್ತು ಸ್ನೇಹಿತರ ಜೊತೆ ಸಮಯ ಕಳೆಯಿರಿ. ಪ್ರೀತಿ ಮತ್ತು ನಗುವಿನ ಕ್ಷಣಗಳು ಹಿಂದಿನ ತೊಂದರೆಗಳನ್ನು ಮರೆಯಲು ಸಹಾಯ ಮಾಡುತ್ತದೆ. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವ್ಯಾಪಾರದಲ್ಲಿ ನಿಮ್ಮ ಮಾರ್ಗವು ಭಿನ್ನವಾಗಿರುವುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ನಿಮ್ಮ ಎಲ್ಲ‌ ಕಾರ್ಯಗಳನ್ನೂ ಮುಂದೂಡಿ ಮನೆಯಲ್ಲಿಯೇ ಇರುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ಆತಂಕದಿಂದ ನೀವು ಮುಕ್ತರಾಗಲು ಬಯಸುವಿರಿ. ಯಾರ ಜೊತೆಗೂ ಮಾತನಾಡುವ ಮನಃಸ್ಥಿತಿ ಇರದು.

ವೃಶ್ಚಿಕ ರಾಶಿ: ಕಠಿಣ ಪರಿಶ್ರಮವು ಕೆಲಸಕ್ಕೆ ಬಾರದು.‌ ಯುಕ್ತಿಯಿಂದ ಕಾರ್ಯವನ್ನು ನಿರ್ವಹಿಸಬೇಕಾಗವುದು. ಕೆಲಸದ ಸ್ಥಳದಲ್ಲಿ ಕೆಲವು ಬದಲಾವಣೆಗಳು ನಿಮ್ಮ ಕೆಲಸವನ್ನು ನಿಧಾನಗೊಳಿಸಬಹುದು. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಯಾರನ್ನೋ ಮೆಚ್ಚಿಸಲು ನೀವು ಸೋಲಬೇಕಾಗುವುದು. ಶತ್ರುಗಳಿಗೆ ನಿಮ್ಮ ಬಗ್ಗೆ ಸಹಾನುಭೂತಿ ಇರುವುದು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಅಸ್ವಾಭಾವಿಕ ಬೆಳವಣಿಗೆಯು ನಿಮಗೆ ಬೇಸರವನ್ನು ತರಿಸೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಪಕ್ಷಪಾತವನ್ನು ಬಿಟ್ಟು ಕಾರ್ಯವನ್ನು ಮಾಡಿ.

ಧನು ರಾಶಿ: ಮನೆಯ ದುರಸ್ತಿಯನ್ನು ಮಾಡುವ ಅನಿವಾರ್ಯತೆ ಬರುವುದು. ಮತ್ತೊಂದೆಡೆ, ವ್ಯಾಪಾರ ಸಂಬಂಧಗಳು ಬಲಗೊಳ್ಳುತ್ತವೆ. ಕೆಲಸದ ಸ್ಥಳದಲ್ಲಿ ಕೆಲವು ಉತ್ತಮ ಅವಕಾಶಗಳು ಲಭಿಸುತ್ತವೆ. ಸಾಲಗಾರದಿಂದ ವಂಚನೆ ಆಗುವ ಸಾಧ್ಯತೆ ಇದೆ. ಕೌಟುಂಬಕವಾಗಿ ಕೆಲವು ತೊಡಕುಗಳು ಬರುವುದು. ಸಿಟ್ಟನ್ನು ವೃತ್ತಿಯಲ್ಲಿ ತೋರಿಸುವುದು ಬೇಡ. ಹೂಡಿಕೆಯ ವಿಚಾರದಲ್ಲಿ ಪೂರ್ಣ ನಂಬಿಕೆ ಇರದು. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಸಂಶೋಧನಾ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗುವುದು. ಕೆಲವರ ಸಹವಾಸವು ನಿಮಗೆ ಇಷ್ಟವಾಗದೇ ಇರಬಹುದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಬಂಗಾರದ ಹೂಡಿಕೆಯಲ್ಲಿ ಆಸಕ್ತಿ ಇರುವುದು.

ಮಕರ ರಾಶಿ: ನಿಮ್ಮ ಪ್ರಮುಖ ದಾಖಲೆಗಳನ್ನು ಮೂರನೇ ವ್ಯಕ್ತಿಗೆ ಹಸ್ತಾಂತರಿಸುವುದು ಬೇಡ. ಉದ್ಯಮಿಗಳು ಕಾನೂನು ತೊಡಕಿಗೆ ನೇರವಾಗಿ ಪ್ರವೇಶಿಸುವುದು ಬೇಡ. ಕೆಲಸದ ಸ್ಥಳದಲ್ಲಿ ವಿರೋಧಿಗಳು ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ‌ ಮೇಲೆ‌ ನಂಬಿಕೆಯನ್ನು ಕಳೆದುಕೊಳ್ಳುವ ಮೊದಲು ಕಾರ್ಯವನ್ನು ಪೂರೈಸಿ. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಮಾತಿಗೆ ಮಾತು ಬೆಳೆಸಿಕೊಳ್ಳುವುದು ಬೇಡ. ಚರಾಸ್ತಿಯ ಬಗ್ಗೆ ಪೂರ್ಣ ಮಾಹಿತಿ ಇರದು. ಪ್ರತಿ ಹಣವೂ ನಿಮಗೆ ಬಹಳ ಮುಖ್ಯವಾಗಿರುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ನಿಮ್ಮ ವೈವಾಹಿಕ ಸಂಬಂಧವು ಹೊಂದಾಣಿಕೆಯನ್ನು ಆಶ್ರಯಿಸಿರುವುದು.

ಕುಂಭ ರಾಶಿ: ಅನಿವಾರ್ಯವಾಗಿ ಇಂದು ಉದ್ಯೋಗವನ್ನು ಮಾಡಬೇಕಾಗಿ ಬರಬಹುದು. ಯಾವುದನ್ನೂ ಅತಿಯಾಗಿ ಹಚ್ಚಿಕೊಳ್ಳದೇ ಕಾರ್ಯತತ್ಪರರಾಗುವಿರಿ. ಕುಟುಂಬದ ಜೊತೆ ಸಂಬಂಧಗಳನ್ನು ಇಂದು ಸುಧಾರಿಸಿಕೊಳ್ಳುವುದು ಉತ್ತಮ. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಸ್ನೇಹಿತರ ಸಹಾಯಕ್ಕೆ ಹಿಂದೇಟು ಹಾಕುವುದು ಸರಿಯಾಗದು. ನಿಮ್ಮನ್ನು ನೀವೇ ರೂಪಿಸಿಕೊಳ್ಳುವ ಅನಿವಾರ್ಯತೆ ಬರಬಹುದು. ಅತಿಥಿಗಳ ಆಗಮನವಾಗಲಿದೆ. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ.

ಮೀನ ರಾಶಿ: ಇಂದು ಉದ್ಯಮಿಗಳು ಹೊಸ ಯೋಜನೆಯನ್ನು ಪಡೆಯುವ ತವಕದಲ್ಲಿ ಇರುವಿರಿ. ದೈಹಿಕ ವಿಶ್ರಾಂತಿಯ ಅನಗತ್ಯ ಹೆಚ್ಚಿರುವುದು. ಹೊಸ ಕೆಲಸವನ್ನು ಮಾಡಲು ಬಯಸಿದರೆ ಸಮಯವು ನಿಮಗೆ ಉತ್ತಮವಾಗಿರುತ್ತದೆ. ದೀರ್ಘ ಸಮಯದಿಂದ ಕಾಡುತ್ತಿರುವ ಕಾಯಿಲೆಯಿಂದ ಪರಿಹಾರ ದೊರೆಯಲಿದೆ. ವ್ಯಾಪಾರಸ್ಥರು ಅಧಿಕ ಖರ್ಚಿನ‌ ಕಾರಣ ಯಾವುದೇ ಕೆಲಸಕ್ಕೂ ಮುಂದಾಗಲಾರರು. ಬೋಧನ ಕಲೆಯನ್ನು ಸಿದ್ಧಿಸಿಕೊಳ್ಳುವಿರಿ. ಮಕ್ಕಳ‌ ಜೊತೆ ಸಾಮರಸ್ಯದ ಮಾತನಾಡಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಯಾರ ಜೊತೆಗಾದರೂ ವಾಗ್ವಾದಕ್ಕೆ ಇಳಿಯುವಿರಿ. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಇಂದು ನಿಮಗೆ ಗೊತ್ತಿಲ್ಲದೇ ದುಷ್ಟರ ಸಹವಾಸ ಸಿಗಬಹುದು. ವೈಷಮ್ಯವನ್ನು ಎಲ್ಲರೆದುರು ಪ್ರದರ್ಶಿಸುವುದು ಬೇಡ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವಿರಿ.

ಲೋಹಿತ ಹೆಬ್ಬಾರ್ – 8762924271 (what’s app only)

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ