Horoscope Today June 10, 2024: ಸೋಮವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ತಿಳಿಯಿರಿ

2024 ಜೂನ್ 10 ದಿನ ಭವಿಷ್ಯ: ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today June 10, 2024: ಸೋಮವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ತಿಳಿಯಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 09, 2024 | 9:25 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಜೂನ್ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ:ವೃದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:41 ರಿಂದ 09:18ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:55 ರಿಂದ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:09 ರಿಂದ 03:46ರ ವರೆಗೆ.

ಮೇಷ ರಾಶಿ: ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಅಧ್ಯಾತ್ಮದ ಕಡೆ ಮನಸ್ಸು ಒಲಿಯಲಿದೆ. ಹಾಗಾಗಿ ಬೇಸರದ ಸಂಗತಿಗಳು ಇದ್ದರೂ ಸುಖದಿಂದ ಖುಷಿಯಿಂದ ಇರುವಿರಿ. ಪರಾವಲಂಬನೆಯಿಂದ ದೂರ ಉಳಿಯುವಿರಿ. ಇಂದು ನಿಮ್ಮ ಜೀವನಕ್ಕೆ ಅವಶ್ಯಕವಾದ ವಸ್ತುವನ್ನು ಪಡೆಯಲು ಅನ್ಯಮಾರ್ಗವನ್ನು ಬಳಸಿಕೊಳ್ಳುವಿರಿ. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ಇಂದೇ ಒಂದಕ್ಕಿಂತ ಹೆಚ್ಷು ಕಾರ್ಯಗಳನ್ನು ಒಟ್ಟಿಗೆ ಮಾಡಬೇಕಾಗುವುದು.

ವೃಷಭ ರಾಶಿ: ಇಂದು ಇನ್ನೊಬ್ಬರ ಬಗ್ಗೆ ನಿಮಗೆ ಸಹಜವಾದ ಕರುಣೆ ಇರುವುದು. ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಸರ್ಕಾರಿ ಉದ್ಯೋಗವರಿಗೆ ಬರಬೇಕಾದ ಹಣವು ಬರಲಿದೆ. ನಿಮ್ಮ ಆಲೋಚನೆಗಳನ್ನು ಅಚಲವಾಗಿ ಇಟ್ಟುಕೊಳ್ಳಿ. ಸಮಾಜದ ಮುಖಂಡರ ಭೇಟಿಯಾಗಲಿದೆ. ದೈವಭಕ್ತಿಯನ್ನು ಬೆಳೆಸಿಕೊಳ್ಳುವುದು ಉತ್ತಮ. ಪುರುಷ ಪ್ರಯತ್ನವೇ ಶ್ರೇಷ್ಠ ಎಂದು ನಂಬುವವರು ಇಂದು ನೀವಾಗುವಿರಿ. ಈ ದಿನವನ್ನು ಅನಾಯಾಸವಾಗಿ ಕಳೆಯುವಿರಿ. ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ತೊಡಗಿಸಲು ಪ್ರಯತ್ನಶೀಲರಾಗುವಿರಿ. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂದು ನಂಬುವಿರಿ.

ಮಿಥುನ ರಾಶಿ: ಯಾರಾದರೂ ಆಮಿಷವನ್ನು ತೋರಿಸಿ ಕೆಲಸವನ್ನು ಮಾಡಿಸಿಕೊಳ್ಳಬಹುದು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಟ್ಟಾರು.‌ ನಿಮ್ಮವರಿಗೆ ಸಹಾಯ ಮಾಡದೇ ಅವರು ನಿಮ್ಮ ಮೇಲೆ ದ್ವೇಷ ಸಾಧಿಸುವರು. ವಾಗ್ಮಿಗಳಾಗಿದ್ದರೆ ನಿಮಗೆ ಸಭೆಗಳಿಗೆ ಆಹ್ವಾನವಯ ಬರಲಿದೆ‌. ಎಲ್ಲರ ಜೊತೆ ಪ್ರೀತಿಯಿಂದ ಇರುವ, ವರ್ತಿಸುವ ಗುಣ ನಿಮ್ಮದು. ನಿಮ್ಮನ್ನು ಇಷ್ಟಪಡುವವರ ಸಂಖ್ಯೆ ಹೆಚ್ಚಾಗಲಿದೆ. ಮಂದಗತಿಯಲ್ಲಿ ಸಾಗುವ ಜೀವನಕ್ಕೆ ವೇಗ ಬೇಕು ಎನ್ನಿಸಬಹುದು. ಬರಬೇಕಾದ ಹಣದ ಬಗ್ಗೆ ತಿಳಿದಿರಲಿ. ಹಣವನ್ನು ನೀವೇ ಕೇಳಿ ಒಡೆಯುವುದು ಉತ್ತಮ. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ.

ಕರ್ಕಾಟಕ ರಾಶಿ: ನಿಮ್ಮ ವರ್ತನೆಯಿಂದ ಅಧಿಕಾರವು ತಪ್ಪಬಹುದು. ಆಸ್ತಿಯ ಬಗ್ಗೆ ಸರಿಯಾದ ದಾಖಲೆಗಳು ಇರಲಿ. ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಇಷ್ಟು ದಿನ ಮಕ್ಕಳ ಜೊತೆಗಿದ್ದ ನಿಮಗೆ ಇಂದು ಮಕ್ಕಳಿಲ್ಲದೇ ಬೇಸರವೆನಿಸೀತು. ಹಿತಶತ್ರುಗಳ ತೊಂದರೆಯು ಅಧಿಕವಾಗಿ ಇರಲಿದೆ. ಅಧಿಕ ಪ್ರಯಾಣದ ಆಯಾಸದಿಂದ ಬಳಲಿ ಬೆಂಡಾಗುವಿರಿ. ಮಕ್ಕಳ ಆರೋಗ್ಯದ ಬಗ್ಗೆ ಗಮನವಿರಲಿ. ನಿದ್ರೆಯು ಚೆನ್ನಾಗಿ ಆಗದೇ ಸಂಕಟಪಡುವಿರಿ. ಸಂಗಾತಿಯ ಜೊತೆ ಇಂದು ಸಂತೋಷದಿಂದ ಕಳೆಯುವಿರಿ. ಕುಟುಂಬವು ನಿಮ್ಮ ಬೆಂಬಲಕ್ಕೆ ಇರಲಿದೆ. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು. ಬದ್ಧತೆಯನ್ನು ರೂಢಿಸಿಕೊಳ್ಳುವುದು ನಿಮಗೆ ಸುಲಭವಾಗದು.

ಸಿಂಹ ರಾಶಿ: ಸಂಬಂಧದಿಂದ ಭೂಮಿಯ ಲಾಭವು ಆಗುವುದಾದರೂ ಅದನ್ನು ಪರಿಶೀಲಿಸಿ ಒಪ್ಪಿಕೊಳ್ಳಿ. ಹಿತಶತ್ರುಗಳಿಂದ ನೀವು ಹತಾಶರಾದಂತೆ ತೋರುವುದು. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು. ನೀವು ಇಷ್ಟ ಪಟ್ಟಿದ್ದು ಆಗಿಲ್ಲವೆಂಬ ಆಲೋಚನೆ ಬಲವಾಗಿರುವುದು. ಕಛೇರಿಯಲ್ಲಿ ಇಂದು ನಿಮ್ಮ ಜವಾಬ್ದಾರಿಗಳನ್ನು ಪೂರೈಸಿಕೊಂಡು ನಿಶ್ಚಿಂತರಾಗಿರುವಿರಿ. ಬಹಳ ದಿನದ ಭೂಮಿಯ ವ್ಯವಹಾರದ ಕಲಹದಿಂದ ನಿಮಗೆ ಜಯವಾಗುವ ಸಾಧ್ಯತೆ ಇದೆ. ನಿಮ್ಮ ಮಕ್ಕಳ ಮೇಲೆ ಗಮನವಿರಲಿ. ಅನಿರೀಕ್ಷಿತ ಹಣದ ವ್ಯಯದಿಂದ ಸ್ವಲ್ಪ ಚಂಚಲರಾಗುವಿರಿ. ಮೊದಲ ವೇತನವನ್ನು ಪಡೆದು ಖುಷಿ ಪಡುವಿರಿ. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ಯಾರ‌ನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ.

ಕನ್ಯಾ ರಾಶಿ: ಇಂದು ನಿಮಗೆ ಯಾರಿಂದಲಾದರೂ ಯೋಗ್ಯ ಸಂಗಾತಿಯ ಮಾಹಿತಿಗಳು ಸಿಗುವುದು. ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವುದನ್ನು ತಪ್ಪಿಸಿ. ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಗೆಲುವನ್ನು ಕಾಣಲು ಸೂಕ್ತ ಮಾಹಿತಿಯ ಕೊರತೆ ಕಾಣಿಸುವುದು. ವಾಹನದಿಂದ ಭಯಗೊಂಡ ನೀವು ಸಂಚಾರವನ್ನು ನಿಲ್ಲಿಸುವಿರಿ. ಸ್ನೇಹಿತರ ಜೊತೆ ಪುಣ್ಯಕ್ಷೇತ್ರಗಳಿಗೆ ಹೋಗಬಹುದು. ಮನೆಯಲ್ಲಿ ಗೊತ್ತಿಲ್ಲ ಕೆಲಸವನ್ನು ಮಾಡಲು ಹೋಗಿ ಅಪಮಾನವಾಗಲಿದೆ. ಸಂಗಾತಿಯ ಮುನಿಸನ್ನು ತಣ್ಣಗಾಗಿಸಿ. ಕಾರಣವನ್ನು ತಿಳಿದು ಸಮಾಧಾನ ಮಾಡಿ. ಈ ಸಂದರ್ಭದಲ್ಲಿ ಮರುಮಾತನಾಡದೇ ಇರುವುದು ಒಳ್ಳೆಯದು. ವಿದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಮನೆಯ ನೆನಪಾಗಬಹುದು. ಪಿತ್ತ ಮತ್ತು ಕಫಗಳ ಸಂಬಂಧದಿಂದ ರೋಗಗಳು ಬರಬಹುದು. ಆಹಾರವನ್ನು ಸರಿಯಾಗಿ ಸ್ವೀಕರಿಸಿ ಅದನ್ನು ಸರಿಮಾಡಿಕೊಳ್ಳಿ. ಹೊಸತನ್ನು ಏನನ್ನಾದರೂ ಮಾಡಬೇಕೆಂಬ ಬಯಕೆ ಬರುವುದು.

ತುಲಾ ರಾಶಿ: ಇಂದು ಮಾಡುವ ಕಾರ್ಯವನ್ನು ನೀವು ಬಹಳ ಅಲಕ್ಷ್ಯದಿಂದ ಮಾಡುವಿರಿ.‌ ಎಲ್ಲದೂ ಗೊತ್ತು ಎಂಬ ಗತ್ತು ಎದ್ದು ಕಾಣಿಸುವುದು. ಆಲಂಕಾರಿಕ ವಸ್ತುಗಳನ್ನು ಹೆಚ್ಚು ಖರೀದಿಸುವಿರಿ. ಬಟ್ಟೆ ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ಔಷಧೋಪಚಾರಗಳು ನಿಮ್ಮ ಆರೋಗ್ಯವನ್ನು ಕಾಪಾಡದೇ ದೇವರ ಮೊರೆ ಹೋಗುವಿರಿ. ನಿಮ್ಮ ಸೌಂದರ್ಯದ ಬಗ್ಗೆ ನಿಮಗಿರುವ ಕಾಳಜಿಗೆ ಇಂದು ಹೆಚ್ಚು ಸಮಯವನ್ನು ಅದಕ್ಕಾಗಿ ಮೀಸಲಿಡುವಿರಿ. ಕಾಳಜಿ ಮಾಡಿದಷ್ಟೂ ಕಳೆದುಕೊಳ್ಳುವ ಸಾಧ್ಯತೆ ಇದೆ. ಸಂಗಾತಿಯನ್ನು ಸ್ವತಂತ್ರವಾಗಿ ಬಿಡಿ. ಅವರ ಭಾವನೆಗಳಿಗೆ ನೋವನ್ನು ತರಲಬೇಡಿ. ಹಣ ಸಂಪಾದನೆಗೆ ಉತ್ತಮವಾದ ಮಾರ್ಗವು ನಿಮಗೆ ಗೊತ್ತಾಗಲಿದೆ. ದೇವಾಲಯಕ್ಕೆ ಹೋಗಿ ಸ್ವಲ್ಪ ಸಕಾರಾತ್ಮಕ ಅಂಶಗಳನ್ನು ಪಡೆದುಕೊಳ್ಳಿ. ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಎಲ್ಲರದ್ದೂ ಒಂದಾದರೆ ನಿಮ್ಮದೇ ಒಂದು ದಾರಿಯಾಗಲಿದೆ.

ವೃಶ್ಚಿಕ ರಾಶಿ: ನಿಮ್ಮ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ಬಗ್ಗೆ ಆಪ್ತರ ಸಲಹೆ ಅವಶ್ಯಕ. ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಹಂಬಲವಿರಲಿದೆ‌. ಆರೋಗ್ಯವು ಹದ ತಪ್ಪಿ ಬಹಳ ಹಿಂಸೆಯನ್ನು ಅನುಭವಿಸುವಿರಿ. ಆಪ್ತರಿಂದ ನೀವು ದೂರಾಗುವಿರಿ. ನಿಮ್ಮ ಮೇಲೆ ಆಪಾದನೆಗಳು ಬರಬಹುದು. ಅತಿಯಾದ ಹಠದ ಸ್ವಭಾವದಿಂದ ನೀವು ಒಂಟಿಯಾಗುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಉನ್ನತ ಪದವಿಗೆ ಅವಕಾಶಗಳು ಸಿಗಲಿದೆ. ನಿಮ್ಮ ಯಶಸ್ಸಿನ ಗುಟ್ಟನ್ನು ಬಿಟ್ಟುಕೊಡಬೇಡಿ. ನಿಮ್ಮನ್ನು ನೋಡುವ ದೃಷ್ಟಿಯೇ ಬದಲಾದೀತು. ನೀವೇ ನಿಮ್ಮ ಶತ್ರುಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು.

ಧನು ರಾಶಿ: ನೀವು ಪರರ ತಪ್ಪಿನಿಂದ ಕಲಿಯುವುದು ಉತ್ತಮ. ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ನಿಮಗಿಂದು ಅದೃಷ್ಟದ ದಿನವೆಂದೇ ಹೇಳಬಹುದು. ನಿಮಗೆ ಒಳ್ಳೆಯ ಉದ್ಯೋಗದ ಕಂಪೆನಿಗೆ ಸೇರುವ ಅವಕಾಶವಿದೆ. ಗೊತ್ತಿಲ್ಲದೇ ನಿಮ್ಮ ಸಮಯವು ವ್ಯರ್ಥವಾಗಬಹುದು. ಅಪರಿಚಿತರನ್ನು ಎದುರುಹಾಕಿಕೊಳ್ಳಬೇಡಿ. ಹಳೆಯ ಪ್ರೇಮಪ್ರಕರಣವು ಮುನ್ನೆಲೆಗೆ ಬರಬಹುದು. ಕಳೆದುಕೊಂಡಿದ್ದರೆ ಬಗ್ಗೆ ಆಲೋಚಿಸುತ್ತ ಸಮಯವನ್ನು ವ್ಯರ್ಥಮಾಡಬೇಡಿ. ಮುಂದೆ ಆಗುವುದರ ಬಗ್ಗೆಯೂ ಯೋಚನೆ ಇರಲಿ. ಇಂದು ಸ್ತ್ರೀಯರ ತಾಳ್ಮೆಗೆ ಪರೀಕ್ಷೆಯಾಗಬಹುದು. ಸಾಮಾಜಿಕ ವಲಯದಲ್ಲಿ ಯಶಸ್ವಿಯಾಗಿ ಮುನ್ನಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಪೂರ್ವ ತಯಾರಿ ಇಲ್ಲದೇ ಯಾವ ಕಾರ್ಯವನ್ನೂ ಮಾಡಬೇಡಿ.

ಮಕರ ರಾಶಿ: ಇಂದು ನಿಮ್ಮ ಹಳೆಯ ದಾಯಾದಿ ಕಲಹವು ಪುನಃ ಆರಂಭವಾಗಬಹುದು. ಆಕಸ್ಮಿಕ ಧನಲಾಭ ಹಾಗೂ ಖರ್ಚುಗಳು ಒಟ್ಟಿಗೇ ಆಗಲಿವೆ. ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ. ನಿಮ್ಮ ತಂದೆ-ತಾಯಿಯರು ನಿಮಗೆ ಜೀವನದ ಬಗ್ಗೆ ಸಂಗಾತಿಯ ಸಲಹೆಯನ್ನು ತೆಗೆದುಕೊಳ್ಳುವಿರಿ. ನಿಮ್ಮ ದೇಹವು ನಿಮಗೆ ದುರ್ಬಲವಾಗಿದೆ. ನೀವು ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಪ್ರೀತಿಸಿ ಮೋಸಹೋಗುವ ಸಾಧ್ಯತೆ ಇದೆ. ಪ್ರೀತಿಸುವಾಗ ಪೂರ್ವಾಪರ ಯೋಚನೆ ಇರಲಿ. ಸಾಲವನ್ನು ಮಾಡಿ ವಾಹನವನ್ನು, ಖರೀದಿಸುದು ಬೇಡ. ಸಮಯಸ್ಫೂರ್ತಿಯಿಂದ ನೀವು ನಿಮ್ಮವರನ್ನು ಸಂತೋಷವಾಗಿರಿಸುವಿರಿ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು.

ಕುಂಭ ರಾಶಿ: ನೀವು ಇಂದು ಅಧಿಕಾರಗಳ ಜೊತೆ ವಾಗ್ವಾದ ಮಾಡುವಿರಿ. ಇಂದಿನ ಹಣಕಾಸಿನ‌ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ನಿಮಗೆ ನಿಮ್ಮ ಸಹೋದರನು ಧನಸಹಾಯ ಮಾಡುವನು. ಇದರಿಂದ ಕೊಂಚ ಸುಧಾರಿಸಿಕೊಳ್ಳುವಿರಿ. ಮನಸ್ಸನ್ನು ಆರೋಗ್ಯವಾಗಿ ಇಟ್ಟುಕೊಳ್ಳುವ ಕಡೆಗೆ ಗಮನವಿರಲಿ. ಕಲಹದ ವಿಚಾರದಲ್ಲಿ ರಾಜಿಯಾಗುವ ಸನ್ನಿವೇಶಗಳು ಬರಬಹುದು. ಹಿರಿಯರ ಸಮ್ಮುಖದಲ್ಲಿ ಮನೆಯ ಕಾರ್ಯವು ಮುನ್ನಡೆದರೆ ಸೊಗಸು. ನೂತನ ವಾಹನ ಖರೀದಿಯನ್ನು ಮಾಡುವಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ. ತಂದೆಯ ಜೊತೆ ಸಂಬಂಧವು ಚೆನ್ನಾಗಿ ಇರುವವಂತೆ ನೋಡಿಕೊಳ್ಳಿ.

ಮೀನ ರಾಶಿ: ಇಂದು ನೀವೊಬ್ಬರೇ ಯತ್ನಿಸಿದರೂ ಕಾರ್ಯದಲ್ಲಿ ಜಯವು ಸಿಗುವುದು. ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಒಪ್ಪಿಕೊಳ್ಳಬೇಕಾಗುವುದು. ಇಂದು ನಿಮ್ಮ ಜವಾಬ್ದಾರಿಗಳು ಹೆಚ್ಚಾಗಬಹುದು. ಸಂಗಾತಿಗಳ ನಡುವೆ ಕಲಹವಿರಲಿದೆ. ಆರ್ಥಿಕಸ್ಥಿತಿಯ ಸುಧಾರಣೆಯಾಗುವುದು. ಗೊತ್ತಿಲ್ಲ ವಿಚಾರಗಳನ್ನು ಅನುಭವಿಗಳಿಂದ, ಹಿರಿಯರಿಂದ ತಿಳಿದುಕೊಳ್ಳುವಿರಿ. ಸ್ನೇಹಿತರೊಂದಿಗೆ ಸುತ್ತಾಡಲು ಎಲ್ಲೋ ಹೋಗಬಹುದು. ಬೆನ್ನು ನೋವಿನ ಸಮಸ್ಯೆಯು ಕಾಣಿಸಿಕೊಳ್ಬಹುದು. ನೀವಿಂದು ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದೀರಿ. ನಿಮ್ಮ ಮಾತಿಗೆ ಮನ್ನಣೆ ಸಿಗಲಿಲಿದೆ. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು. ಬಂಧುಗಳ ಒಡನಾಟದಿಂದ ನೋವನ್ನು ಕಳೆಯುವಿರಿ.

ಲೋಹಿತ ಹೆಬ್ಬಾರ್-8762924271 (what’s app only)

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್